Saturday, July 12, 2025

ಫೆ.22 ರಿಂದ ಫೆ.28 ವರೆಗೆ ಚಟ್ಟೆಕಲ್ ಜುಮಾ ಮಸೀದಿ ವಠಾರದಲ್ಲಿ 7 ನೇ ಬ್ರಹತ್ ಜಲಾಲಿಯ್ಯ ವಾರ್ಷಿಕ ಕಾರ್ಯಕ್ರಮ

ಬಂಟ್ವಾಳ: ಜಲಾಲಿಯ್ಯ ಜುಮಾ ಮಸ್ಜಿದ್ ಚಟ್ಟೆಕಲ್ ಸಜಿಪ ಇವರ ಆಶ್ರಯದಲ್ಲಿ ಯನಪೋಯ ಆಸ್ಪತ್ರೆ, ದಂತ ಕಾಲೇಜು ಮತ್ತು ಮೆಡಿಕಲ್ ಕಾಲೇಜು ದೇರಳಕಟ್ಟೆ ಮಂಗಳೂರು ಇವರ ಸಹಭಾಗಿತ್ವದಲ್ಲಿ ಉಚಿತ ವೈದ್ಯಕೀಯ ತಪಾಸಣಾ ಶಿಬಿರ ಕ್ಯಾನ್ಸರ್ ಬಗ್ಗೆ ಮಾಹಿತಿ ಶಿಬಿರ ಹಾಗೂ 7 ನೇ ಬ್ರಹತ್ ಜಲಾಲಿಯ್ಯ ವಾರ್ಷಿಕ ಕಾರ್ಯಕ್ರಮ ಫೆ.22 ರಿಂದ ಫೆ.28 ವರೆಗೆ ಚಟ್ಟೆಕಲ್ ಜುಮಾ ಮಸೀದಿ ವಠಾರದಲ್ಲಿ ನಡೆಯಲಿದೆ.

ಫೆ.22ರಂದು ಸ್ವಲಾತ್ ವಾರ್ಷಿಕ ನಡೆಯಲಿದ್ದು, ಅಸ್ಸೈಯದ್ ಕೂರತ್ ತಂಙಳ್ ನೇತೃತ್ವ ನೀಡಲಿದ್ದಾರೆ. ಫೆ.23ರಂದು ಕುತುಬಿಯ್ಯತ್ ಜಿಸ್ತಿಯಾ ಕಾರ್ಯಕ್ರಮ ಜರುಗಲಿದ್ದು, ಸೈಯದ್ ಯು.ಪಿ.ಎಸ್.ಕಾಸಿಂ ತಂಙಳ್ ಹಾಗೂ ಮುಹಮ್ಮದ್ ಆಲಿ ಮದನಿ ಕೀಯಿಕ್ಕೋಡ್ ಪಾಲ್ಗೊಂಳ್ಳಲಿದ್ದಾರೆ. ಫೆ.24ರಂದು ಬೆಳಿಗ್ಗೆ ಮೆಡಿಕಲ್ ಕ್ಯಾಂಪ್ ಹಾಗೂ ಫೆ.25ರಂದು ಸೈಯದ್ ಆದೂರು ತಂಙಳ್ ದುಆ ನೇತೃತ್ವದೊಂದಿಗೆ ಅಬ್ದುಲ್ಲತೀಫ್ ಸಖಾಫಿ ಕಾಂತಪುರಂ ಪ್ರವಚನ ನೀಡಲಿದ್ದಾರೆ.
ಫೆ.26ರಂದು ಸೈಯದ್ ತ್ವಾಹ ತಂಙಳ್ ನೇತೃತ್ವದಲ್ಲಿ ಬುರ್ದಾ ಮಜ್ಲಿಸ್ ಜರುಗಲಿದೆ. ಫೆ.27ರಂದು ಉಮರ್‍ ಮುಸ್ಲಿಯಾರ್‍ ಮರ್ಧಾಳ ಪ್ರವಚನ ನೀಡಲಿದ್ದು, ಸೈಯದ್ ಶಹೀರ್‍ ತಂಙಳ್ ಮಳ್ಹರ್‍ ದುಆಗೆ ನೇತೃತ್ವ ನೀಡಲಿದ್ದಾರೆ. ಸಮಾರೋಪ ದಿನವಾದ ಫೆ. 28ರಂದು ಸೈಯದ್ ಚಟ್ಟೆಕ್ಕಲ್ ತಂಙಳ್ ನೇತೃತ್ವದಲ್ಲಿ ಜಲಾಲಿಯ್ಯ ಮಜ್ಲಿಸ್ ನಡೆಯಲಿದೆ. ಬಳಿಕ ಪೇರೋಡ್ ಮಹಮ್ಮದ್ ಅಝ್ಹರಿ ಪ್ರವಚನ ನೀಡಲಿದ್ದು, ಸೈಯದ್ ಸುಹೈಲ್ ತಂಙಳ್ ಕಣ್ಣೂರು ದುಆಗೆ ನೇತೃತ್ವ ನೀಡಲಿದ್ದಾರೆ ಎಂದು ಪ್ರಕಟನೆ ತಿಳಿಸಿದೆ.

More from the blog

ಕುಂಜರ್ಕಳದ ತಡೆಗೋಡೆ, ಬಸ್ಸು ತಂಗುದಾಣ, ಹೈಮಾಸ್ಟ್ ದೀಪ ಉದ್ಘಾಟಿಸಿದ ಯು.ಟಿ.ಖಾದರ್..

ಬಂಟ್ವಾಳ: ಶಾಸಕರ ಅನುದಾನದಿಂದ ನಿರ್ಮಾಣಗೊಂಡ ಪುದು ಗ್ರಾಮದ ಕುಂಜರ್ಕಳದ ತಡೆಗೋಡೆ, ೧೦ನೇ ಮೈಲುಕಲ್ಲು ಬಳಿ ಬಸ್ಸು ತಂಗುದಾಣ ಹಾಗೂ ತ್ವಾಹಾ ಜುಮಾ ಮಸೀದಿ ಬಳಿ ಅನುಷ್ಠಾನಗೊಂಡ ಹೈಮಾಸ್ಟ್ ದೀಪವನ್ನು ಸ್ಪೀಕರ್ ಯು.ಟಿ.ಖಾದರ್ ಅವರು...

ಗುರು ಪೂರ್ಣಿಮೆಯ ಪ್ರಯುಕ್ತ ನಿವೃತ ಶಿಕ್ಷಕಿ ಲಕ್ಷ್ಮೀ ಅವರಿಗೆ ಗೌರವರ್ಪಣೆ 

ಬಂಟ್ವಾಳ : ಗುರು ಪೂರ್ಣಿಮೆಯ ಪ್ರಯುಕ್ತ ಸಜೀಪ ಮುನ್ನೂರು ಬಿಜೆಪಿ ಗ್ರಾಮ ಸಮಿತಿಯ 4ನೇ ವಾರ್ಡಿನ ಬೊಕ್ಕಸ ನಿವಾಸಿಯಾದ ನಿವೃತ ಶಿಕ್ಷಕಿಯಾದ ಮಾತೃ ವಾತ್ಸಲ್ಯದ ಲಕ್ಷ್ಮೀ ಟೀಚರ್ ಇವರಿಗೆ ಬಿಜೆಪಿ ಮುಖಂಡರು ಮಾಜಿ...

ಕೆಂಪುಕಲ್ಲು, ಮರಳು ಸಮಸ್ಯೆ : ಜು.14ಕ್ಕೆ ಬಂಟ್ವಾಳ ತಾಲೂಕು ಕೇಂದ್ರದಲ್ಲಿ ಪ್ರತಿಭಟನೆ..

ಬಂಟ್ವಾಳ :ಕಾಂಗ್ರೆಸ್ ನೇತೃತ್ವದ ಕರ್ನಾಟಕ ರಾಜ್ಯ ಸರ್ಕಾರದ ದುರಡಳಿತ ನೀತಿಯಿಂದಾಗಿ ದಕ್ಷಿಣ ಕನ್ನಡ ಜೆಲ್ಲೆಯಲ್ಲಿ ಕೆಂಪು ಕಲ್ಲು ಮತ್ತು ಮರಳು ಕ್ರತಕ ಅಭಾವ ಸ್ರಷ್ಟಿಸಿರುವುದರಿಂದ ತೀವ್ರ ಸಮಸ್ಯೆಯಿಂದ ಬಡವರು ನಿರ್ಮಿಸುತ್ತಿರುವ ಸಾವಿರಾರು ಮನೆಗಳು...

ಬ್ರಹ್ಮ ಶ್ರೀ ನಾರಾಯಣ ಗುರು ವಸತಿ ಶಾಲೆ : ನೂತನ ಕಟ್ಟಡಕ್ಕೆ ವಿದ್ಯಾರ್ಥಿಗಳನ್ನು ಸ್ಥಳಾಂತರಿಸಲು ಶಾಸಕ ರಾಜೇಶ್ ನಾಯ್ಕ್ ನಿರ್ದೇಶನ..

ಬಂಟ್ವಾಳ: ದ.ಕ.ಜಿಲ್ಲೆಗೆ ಮಂಜೂರಾಗಿರುವ ಏಕೈಕ ಬ್ರಹ್ಮ ಶ್ರೀ ನಾರಾಯಣ ಗುರು ವಸತಿ ಶಾಲೆಗೆ ನೂತನ ಸುಸಜ್ಜಿತ ‌ಕಟ್ಟಡ ನಿರ್ಮಾಣ ಕಾಮಗಾರಿ ಬಹುತೇಕ ಪೂರ್ಣಗೊಂಡಿದ್ದು,ವಿದ್ಯಾರ್ಥಿಗಳ ಅನುಕೂಲತೆಯ ದೃಷ್ಟಿಯಿಂದ ಶೀಘ್ರ ಹೊಸ ಕಟ್ಟಡಕ್ಕೆ ಸ್ಥಳಾಂತರಿಸುವಂತೆ ಬಂಟ್ವಾಳ...