Monday, January 26, 2026

ಬಾಲ್ಯವಿವಾಹ ತಡೆ ಹಿಡಿದ ಅಧಿಕಾರಿಗಳು

ಬಂಟ್ವಾಳ: ಬಾಲ್ಯ ವಿವಾಹ ನಡೆಯಲು ಸಿದ್ಧತೆ ನಡೆಸುತ್ತಿದ್ದಂತೆ ಮಾಹಿತಿ ಪಡೆದ ಅಧಿಕಾರಿಗಳು ಮಧ್ಯಪ್ರವೇಶಿಸಿ ಮದುವೆಗೆ ಬ್ರೇಕ್ ಹಾಕಿದ ಘಟನೆ ಬಂಟ್ವಾಳ ತಾಲೂಕಿನ ನಾವೂರು ಗ್ರಾಮದಲ್ಲಿ ತಡವಾಗಿ ಬೆಳಕಿಗೆ ಬಂದಿದೆ.

ಅಗಸ್ಟ್ 19 ರಂದು ಸೋಮವಾರ ನಾವೂರದ ಬಾಲಕಿ ಜೊತೆ ಮೂಡಬಿದಿರೆಯ ಯುವಕನ ಜೊತೆ ಮದುವೆಯ ಬಗ್ಗೆ ಪೂರ್ವತಯಾರಿ ನಡೆದಿತ್ತು.

ನಾವೂರ ಗ್ರಾಮದ ಪರ್ಲ ಶಾಲಾ ಬಳಿಯ ಮನೆಯೊಂದರಲ್ಲಿ ಅಗಸ್ಟ್ 17 ರಂದು ಶನಿವಾರ ನಾವೂರದ ಅಪ್ರಾಪ್ತ ವಯಸ್ಸಿನ ಬಾಲಕಿಗೆ ನಿಶ್ಚಿತಾರ್ಥ ನಡೆಯುತ್ತಿತ್ತು.
ಅ ವೇಳೆ ಖಚಿತ ಮಾಹಿತಿ ಯ ಮೇಲೆ ಬಂಟ್ವಾಳ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖಾ ಅಧಿಕಾರಿ ಗಾಯತ್ರಿ ಕಂಬಳಿ, ಮಕ್ಕಳ ರಕ್ಷಣಾಧಿಕಾರಿ ಕುಮಾರ್, ಸ್ಥಳೀಯ ಗ್ರಾ.ಪಂ.ಪಿ.ಡಿ.ಒ.ರಚನ್ ಕುಮಾರ್, ಗ್ರಾಮ ಕರಣೀಕ ಕುಮಾರ್, ಹಾಗೂ ಬಂಟ್ವಾಳ ಗ್ರಾಮಾಂತರ ಠಾಣಾ ಪೋಲೀಸರು ಮನೆಗೆ ಬೇಟಿ ನೀಡಿದ ವೇಳೆ ನಿಶ್ಚಿತಾರ್ಥ ನಡೆಯುತ್ತಿತ್ತು.
ಬಾಲಕಿಗೆ ಜನವರಿ 2020 ಕ್ಕೆ 18 ವರ್ಷ ತುಂಬುತ್ತದೆ.
ಹಾಗಾಗಿ ಅಪ್ರಾಪ್ತ ಬಾಲಕಿಗೆ ಮದುವೆ ಮಾಡಲು ಕಾನೂನಿನಲ್ಲಿ ಅವಕಾಶ ಇಲ್ಲ. ಈ ಬಗ್ಗೆ ಮನೆಯವರಿಗೆ ವಿಷಯ ತಿಳಿಸುತ್ತಿದ್ದಂತೆ ಸಕಾರಾತ್ಮಕ ವಾಗಿ ಸ್ಪಂದಿಸಿ ದ್ದಾರೆ.
ಬಳಿಕ ಬಾಲಕಿಗೆ 18 ವರ್ಷ ತುಂಬುವವರೆಗೆ ಮದುವೆ ಮಾಡದಂತೆ ಮುಚ್ಚಳಿಕೆ ಮಾಡಿಕೊಂಡ ಬಗ್ಗೆ ಪಿ.ಡಿ.ಒ. ರಚನ್ ಕುಮಾರ್ ತಿಳಿಸಿದ್ದಾರೆ.

More from the blog

ಗೋಳ್ತಮಜಲು ಮಂಡಲದ ಹಿಂದು ಸಂಗಮ ಕಾರ್ಯಕ್ರಮ..

ಬಂಟ್ವಾಳ : ಗೋಳ್ತಮಜಲು, ಬಾಳ್ತಿಲ, ಅಮ್ಟೂರು ಗ್ರಾಮಗಳನ್ನೊಳಗೊಂಡ ಗೋಳ್ತಮಜಲು ಮಂಡಲದ ಹಿಂದು ಸಂಗಮ ಕಾರ್ಯಕ್ರಮ ಗೋಪೂಜೆಯ ಮೂಲಕ ಭವ್ಯ ಶೋಭಾಯಾತ್ರೆಗೆ ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ. ಪ್ರಭಾಕರ ಭಟ್ ಚಾಲನೆ...

ಯುವಶಕ್ತಿಗೆ ವೇದಿಕೆಯಾದ ಕೋಟಿ ಚೆನ್ನಯ ಕ್ರೀಡೋತ್ಸವ : ಬಿ. ಜನಾರ್ದನ ಪೂಜಾರಿ

ಬಂಟ್ವಾಳ : ಕೋಟಿ ಚೆನ್ನಯ ಕ್ರೀಡೋತ್ಸವವು ಯುವಜನತೆಯಲ್ಲಿ ಶಿಸ್ತು, ಆರೋಗ್ಯ ಹಾಗೂ ಸಹಭಾವನೆಯನ್ನು ಬೆಳೆಸುವ ಅತ್ಯುತ್ತಮ ವೇದಿಕೆಯಾಗಿದೆ. ಇಂತಹ ಕ್ರೀಡೋತ್ಸವಗಳ ಮೂಲಕ ಯುವಶಕ್ತಿ ಒಗ್ಗೂಡಿ ಸಮಾಜದ ಅಭಿವೃದ್ಧಿಗೆ ಸ್ಪೂರ್ತಿದಾಯಕ ದಿಕ್ಕು ನೀಡುತ್ತದೆ” ಎಂದು...

ಭಾರತದ ಸಂಸ್ಕೃತಿ ಉಳಿಸಿ ಬೆಳೆಸುವ ಜವಾಬ್ದಾರಿ ಯುವಪೀಳಿಗೆಗಿದೆ : ಭಕ್ತಿಭೂಷಣ್ ದಾಸ್ ಸ್ವಾಮೀಜಿ

ಬಂಟ್ವಾಳ: ಬಂಟ್ವಾಳ ತಾಲೂಕು ಹಿಂದು ಸಂಗಮ ಆಯೋಜನಾ ಸಮಿತಿಯ ಸಂಗಬೆಟ್ಟು , ಕರ್ಪೆ, ಕುಕ್ಕಿಪಾಡಿ, ಎಲಿಯನಡುಗೋಡು ಗ್ರಾಮಗಳನ್ನೊಳಗೊಂಡ ಸಂಗಬೆಟ್ಟು ಮಂಡಲದ ವತಿಯಿಂದ ಹಿಂದು ಸಂಗಮ ಕಾರ್ಯಕ್ರಮ ಸಿದ್ದಕಟ್ಟೆ ಕೇಂದ್ರ ಮೈದಾನದಲ್ಲಿ ರವಿವಾರ ನಡೆಯಿತು. ಗೋ...

ವಿಟ್ಲ : ಜಾತ್ರೆಯ ಪ್ರಯುಕ್ತ ನೇಮೋತ್ಸವ..

ವಿಟ್ಲ : ಮಹತೋಭಾರ ಶ್ರೀ ಪಂಚಲಿಂಗೇಶ್ವರ ದೇವಸ್ಥಾನ ವಿಟ್ಲ ಇದರ ವರ್ಷಂಪ್ರತಿ ನಡೆಯುವ ಕಾಲಾವಧಿ ಜಾತ್ರೆಯ ಪ್ರಯುಕ್ತ ಅರಸು ಮುಂಡಾಲತ್ತಾಯ, ಮಲರಾಯ ದೈವ, ಕೊಡಮಣಿತ್ತಾಯ ಹಾಗೂ ಪಿಲಿಚಾಮುಂಡಿ ದೈವಕ್ಕೆ ದೇವಸ್ಥಾನದ ಎದುರು ನೇಮೋತ್ಸವ...