Saturday, July 12, 2025

ಮೂರ್ಜೆ ಪರಿಸರದಲ್ಲಿ ಚಿರತೆ ಭಯ

ಬಂಟ್ವಾಳ: ಕೊರೊನಾ ಭೀತಿಯ ಜೊತೆಯಲ್ಲಿ ಮೂರ್ಜೆಯ ಜನರಿಗೆ ಕಳೆದ ಎರಡು ದಿನಗಳಿಂದ ಚಿರತೆಯ ಭಯ ಶುರುವಾಗಿದೆ. ಮೂರ್ಜೆಯ ಹೆದ್ದಾರಿಯ ಮೂಲಕ ಚಿರತೆ ರಾತ್ರಿ 8.30ರ ವೇಳೆ ರಾಜರೋಷವಾಗಿ ನಡೆದುಕೊಂಡು ಬರುವ ದೃಶ್ಯವನ್ನು ಕಣ್ಣಾರೆ ಕಂಡ ಜನ ಭಯ ಬೀತರಾಗಿದ್ದಾರೆ. ಚಿರತೆಯ ಮೂರ್ಜೆ ರಸ್ತೆಯ ಮೂಲಕ ಬಂದು ಬಳಿಕ ಪೆಟ್ರೋಲ್ ಪಂಪ್ ನ ಸನಿಹ ಗುಡ್ಡೆಕ್ಕೆ ಹತ್ತಿ ಹೋಗಿರುವ ದೃಶ್ಯ ಸ್ಥಳೀಯ ಸಂತೋಷ್ ಮೂರ್ಜೆಯ ವರ ಮನೆಯ ಸಿ.ಸಿ.ಕ್ಯಾಮರಾದಲ್ಲೂ ರೆಕಾರ್ಡ್ ಅಗಿದೆ. ಅ ಬಳಿಕ ಸ್ಥಳೀಯ ಗ್ರಾ.ಪಂ.ಸದಸ್ಯೆ ವಸಂತಿ ಎಂಬವರ ಮನೆಯಂಗಳದಲ್ಲಿ ಅವರಿಗೆ ಕಾಣಸಿಕ್ಕಿದೆ ಎಂದು ಅವರು ತಿಳಿಸಿದ್ದಾರೆ. ಬಳಿಕ ಮೂರು ಗಂಟೆಯ ವೇಳೆಗೆ ಅಲ್ಲೇ ಸಮೀಪದ ಇನ್ನೊಂದು ಮನೆಯ ಬಳಿಯಿರುವ ಬಾವಿಯಲ್ಲಿ ನೀರು ಕುಡಿದು ವಾಪಾಸು ಹೋಗಿರುವುದನ್ನು ಕಂಡಿದ್ದಾರೆ ಎಂದು ಹೇಳಲಾಗಿದೆ.
ಮೂರ್ಜೆ ಭಾಗದ ವ್ಯಕ್ತಿಯೋರ್ವರ ನಾಯಿ ನಾಪತ್ತೆಯಾಗಿದ್ದು ಚಿರತೆ ಕೊಂಡುಹೋಗಿರುವ ಬಗ್ಗೆ ಶಂಕೆ ವ್ಯಕ್ತಪಡಿಸಿದ್ದಾರೆ. ಅದಕ್ಕೂ ಮುಂಚಿನ ದಿನ ಶನಿವಾರ ಮುಂಜಾನೆ ವೇಳೆ ಮೂರ್ಜೆಯ ನೆಕ್ಕಿದರವು ಎಂಬಲ್ಲಿ ರಬ್ಬರ್ ಟ್ಯಾಪಿಂಗ್ ಮಾಡುವ ಕಾರ್ಮಿಕ ನನ್ನು ಅಟ್ಟಿಸಿಕೊಂಡು ಬಂದಿದೆ ಎಂದು ಹೇಳುತ್ತಾರೆ.

 

ಅಧಿಕಾರಿಗಳು ಭೇಟಿ: 
ಮೂರ್ಜೆಯ ರಸ್ತೆಯ ಮೂಲಕ ಸಂಚಾರ ಮಾಡುತ್ತಿದ್ದ ಚಿರತೆಯನ್ನು ನೋಡಿದ ಸ್ಥಳೀಯರು ವೇಣೂರು ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದಾರೆ. ಕೂಡಲೇ ಸ್ಥಳಕ್ಕೆ ಆಗಮಿಸಿದ ವೇಣೂರು ಅರಣ್ಯಾಧಿಕಾರಿ ಸುನಿಲ್ ಕುಮಾರ್ ಹಾಗೂ ಅವರ ತಂಡ ತಡ ರಾತ್ರಿವರೆಗೂ ಕಾರ್ಯಚರಣೆ ನಡೆಸಿದ್ದರು. ಆದರೂ ಚಿರತೆಯ ಸುಳಿವು ಸಿಕ್ಕಿಲ್ಲ. ಕಳೆದ ಎರಡು ದಿನಗಳಿಂದ ರಾಜರೋಷವಾಗಿ ತಿರುಗುತ್ತಿರುವ ಚಿರತೆ ಜನರಿಗೆ ದಾಳಿ ನಡೆಸಬಹುದೇ ಎಂಬ ಭಯ ಶುರುವಾಗಿದೆ.

More from the blog

ಕುಂಜರ್ಕಳದ ತಡೆಗೋಡೆ, ಬಸ್ಸು ತಂಗುದಾಣ, ಹೈಮಾಸ್ಟ್ ದೀಪ ಉದ್ಘಾಟಿಸಿದ ಯು.ಟಿ.ಖಾದರ್..

ಬಂಟ್ವಾಳ: ಶಾಸಕರ ಅನುದಾನದಿಂದ ನಿರ್ಮಾಣಗೊಂಡ ಪುದು ಗ್ರಾಮದ ಕುಂಜರ್ಕಳದ ತಡೆಗೋಡೆ, ೧೦ನೇ ಮೈಲುಕಲ್ಲು ಬಳಿ ಬಸ್ಸು ತಂಗುದಾಣ ಹಾಗೂ ತ್ವಾಹಾ ಜುಮಾ ಮಸೀದಿ ಬಳಿ ಅನುಷ್ಠಾನಗೊಂಡ ಹೈಮಾಸ್ಟ್ ದೀಪವನ್ನು ಸ್ಪೀಕರ್ ಯು.ಟಿ.ಖಾದರ್ ಅವರು...

ಗುರು ಪೂರ್ಣಿಮೆಯ ಪ್ರಯುಕ್ತ ನಿವೃತ ಶಿಕ್ಷಕಿ ಲಕ್ಷ್ಮೀ ಅವರಿಗೆ ಗೌರವರ್ಪಣೆ 

ಬಂಟ್ವಾಳ : ಗುರು ಪೂರ್ಣಿಮೆಯ ಪ್ರಯುಕ್ತ ಸಜೀಪ ಮುನ್ನೂರು ಬಿಜೆಪಿ ಗ್ರಾಮ ಸಮಿತಿಯ 4ನೇ ವಾರ್ಡಿನ ಬೊಕ್ಕಸ ನಿವಾಸಿಯಾದ ನಿವೃತ ಶಿಕ್ಷಕಿಯಾದ ಮಾತೃ ವಾತ್ಸಲ್ಯದ ಲಕ್ಷ್ಮೀ ಟೀಚರ್ ಇವರಿಗೆ ಬಿಜೆಪಿ ಮುಖಂಡರು ಮಾಜಿ...

ಕೆಂಪುಕಲ್ಲು, ಮರಳು ಸಮಸ್ಯೆ : ಜು.14ಕ್ಕೆ ಬಂಟ್ವಾಳ ತಾಲೂಕು ಕೇಂದ್ರದಲ್ಲಿ ಪ್ರತಿಭಟನೆ..

ಬಂಟ್ವಾಳ :ಕಾಂಗ್ರೆಸ್ ನೇತೃತ್ವದ ಕರ್ನಾಟಕ ರಾಜ್ಯ ಸರ್ಕಾರದ ದುರಡಳಿತ ನೀತಿಯಿಂದಾಗಿ ದಕ್ಷಿಣ ಕನ್ನಡ ಜೆಲ್ಲೆಯಲ್ಲಿ ಕೆಂಪು ಕಲ್ಲು ಮತ್ತು ಮರಳು ಕ್ರತಕ ಅಭಾವ ಸ್ರಷ್ಟಿಸಿರುವುದರಿಂದ ತೀವ್ರ ಸಮಸ್ಯೆಯಿಂದ ಬಡವರು ನಿರ್ಮಿಸುತ್ತಿರುವ ಸಾವಿರಾರು ಮನೆಗಳು...

ಬ್ರಹ್ಮ ಶ್ರೀ ನಾರಾಯಣ ಗುರು ವಸತಿ ಶಾಲೆ : ನೂತನ ಕಟ್ಟಡಕ್ಕೆ ವಿದ್ಯಾರ್ಥಿಗಳನ್ನು ಸ್ಥಳಾಂತರಿಸಲು ಶಾಸಕ ರಾಜೇಶ್ ನಾಯ್ಕ್ ನಿರ್ದೇಶನ..

ಬಂಟ್ವಾಳ: ದ.ಕ.ಜಿಲ್ಲೆಗೆ ಮಂಜೂರಾಗಿರುವ ಏಕೈಕ ಬ್ರಹ್ಮ ಶ್ರೀ ನಾರಾಯಣ ಗುರು ವಸತಿ ಶಾಲೆಗೆ ನೂತನ ಸುಸಜ್ಜಿತ ‌ಕಟ್ಟಡ ನಿರ್ಮಾಣ ಕಾಮಗಾರಿ ಬಹುತೇಕ ಪೂರ್ಣಗೊಂಡಿದ್ದು,ವಿದ್ಯಾರ್ಥಿಗಳ ಅನುಕೂಲತೆಯ ದೃಷ್ಟಿಯಿಂದ ಶೀಘ್ರ ಹೊಸ ಕಟ್ಟಡಕ್ಕೆ ಸ್ಥಳಾಂತರಿಸುವಂತೆ ಬಂಟ್ವಾಳ...