Thursday, February 13, 2025

ವ್ಯಕ್ತಿತ್ವ ಎಂಬ ಚಿತ್ತಾರ ಕ್ಕೆ ಶಿಬಿರಗಳಿಂದ ಆತ್ಮಶಕ್ತಿ: ಹಿರಿಯ ಪತ್ರಕರ್ತ ಪುಷ್ಪರಾಜ್

ಮಂಗಳೂರು: ಚಿಂತನ ಸಾಂಸ್ಕೃತಿಕ ಬಳಗ (ರಿ) ಆಕಾಶಭವನ ಮಂಗಳೂರು ಇದರ ಆಶ್ರಯದಲ್ಲಿ *ಚಿತ್ತಾರ2019* ಮಕ್ಕಳ ಬೇಸಿಗೆ ಶಿಬಿರ, ಆಕಾಶಭವನದ ಪರಪಾದೆ ಶಾಲೆಯಲ್ಲಿ ಉದ್ಘಾಟನೆಗೊಂಡಿತು.
ಹಿರಿಯ ಪತ್ರಕರ್ತ, ವಾರ್ತಾಭಾರತಿ ಮಂಗಳೂರು ವಿಭಾಗದ ಮುಖ್ಯಸ್ಥ ಪುಷ್ಪರಾಜ್ ಶಿಬಿರವನ್ನು ಉದ್ಘಾಟಿಸಿದರು.
ಶಿಬಿರದಿಂದ ವ್ಯಕ್ತಿತ್ವ ವಿಕಸನವಾಗುತ್ತದೆ. ಪ್ರವಾಹದಲ್ಲಿ ಮುಳುಗುವವರಿಗೆ ಹುಲ್ಲು ಕಡ್ಡಿ ಆಸರೆ. ಅದರಿಂದಲೇ ಬದುಕಬಹುದು ಎಂದಲ್ಲ. ಆ ಕ್ಷಣದಲ್ಲಿ ಅದು ಮಾನಸಿಕ ಧೈರ್ಯ ಸಿಗುತ್ತದೆ. ಅದೇ ರೀತಿ, ಇಂತಹ ಶಿಬಿರಗಳು ಮಕ್ಕಳ ಭವಿಷ್ಯದಲ್ಲಿ ಆತ್ಮಶಕ್ತಿ ಹೆಚ್ಚಿಸುತ್ತದೆ ಎಂದು ಪುಷ್ಪರಾಜ್ ಹೇಳಿದರು.


ಕಾರ್ಯಕ್ರಮದ ಅಧ್ಯಕ್ಷತೆಯನ್ನು ಖ್ಯಾತ ಕಲಾವಿರಾದ ಮೈಮ್ ರಾಮದಾಸ್ ವಹಿಸಿದ್ದರು ಮುಖ್ಯ ಅತಿಥಿ ಗಳಾಗಿ ರಂಗ ಸ್ವರೂಪ ದ ಅಧ್ಯಕ್ಷ ರೆಹಮಾನ್ ಖಾನ್ ಕುಂಜತ್ತ್ ಬೈಲ್, ವಕೀಲರಾದ ಕೆ. ಶ್ರೀಪತಿ ಪ್ರಭು, ಚಿಂತನ ಬಳಗದ ಅಧ್ಯಕ್ಷ ಇಸ್ಮಾಯಿಲ್ ಮುಂತಾದವರು ಉಪಸ್ಥಿತರಿದ್ದರು, ಶಿಬಿರ ಸಂಯೋಜಕ ಸುಕೇಶ್ ಶೆಟ್ಟಿ ಸ್ವಾಗತಿಸಿದರು, ಶಿಬಿರದ ನಿರ್ದೇಶಕರಾದ ಪ್ರೇಂನಾಥ್ ಮರ್ಣೆ ಪ್ರಸ್ತಾಪಿಸಿದರು, ದಯಾನಂದ ವಂದಿಸಿದರು.
ಕಮಲಾಕ್ಷ ಶೆಟ್ಟಿ, ರೇಖಾ ಕುಂದರ್, ಚಿತ್ರ ಲೇಖಾ, ಯಕ್ಷಿತ್, ಸುಜನ್, ವಿನೀತ್ ಮೊದಲಾದವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

More from the blog

ಗ್ರಾಮ ಆಡಳಿತ ಅಧಿಕಾರಿಗಳ ಮುಷ್ಕರಕ್ಕೆ ಶಾಸಕ ರಾಜೇಶ್ ನಾಯ್ಕ್ ಬೆಂಬಲ

ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಅವರು ಗ್ರಾಮ ಆಡಳಿತ ಅಧಿಕಾರಿಗಳು ಸತತ ಮೂರನೇ ದಿನ ನಡೆಸುತ್ತಿರುವ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಬೆಂಬಲ ಸೂಚಿಸಿದ್ದಾರೆ. ಬಂಟ್ವಾಳ ತಾಲೂಕು ಆಡಳಿತ ಸೌಧದ ಮುಂಭಾಗ ಮುಷ್ಕರದ ಸ್ಥಳಕ್ಕೆ ಭೇಟಿ ನೀಡಿದ...

ಫೆ.15 ರಂದು ಕಮಲಾಶ್ರಯ ಮನೆಯ ಹಸ್ತಾಂತರ ಹಾಗೂ ಗೃಹಪ್ರವೇಶ

ಬಂಟ್ವಾಳ: ಬಿಜೆಪಿ ಮಹಾಶಕ್ತಿ ಕೇಂದ್ರ ಮಾಣಿ ಮತ್ತು ಬಿಜೆಪಿ ಶಕ್ತಿ ಕೇಂದ್ರ ಅನಂತಾಡಿ ಇದರ ಸಹಕಾರದಿಂದ ಅನಂತಾಡಿ ಗ್ರಾಮದ ಬಾಬನಕಟ್ಟೆ ಎಂಬಲ್ಲಿ ಬಲ್ಲು ಕೊರಗ ಇವರ ಕುಟುಂಬಕ್ಕೆ ನಿರ್ಮಿಸಲಾದ ನೂತನ ಮನೆಯನ್ನು ಫೆ.15...

ಬೇಲಿ ವಿವಾದ : ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಶಾಸಕ ರಾಜೇಶ್ ನಾಯ್ಕ್

ಬಂಟ್ವಾಳ: ತಾ.ಪಂ.ಅಧಿಕಾರಿ ವರ್ಗ ಕಚೇರಿ ಮುಂಭಾಗದ ಜಾಗಕ್ಕೆ ಕಬ್ಬಿಣದ ರಾಡ್ ಅಳವಡಿಸಿ ಬೇಲಿ ಹಾಕಿದ ವಿಚಾರಕ್ಕೆ ಸಂಬಂಧಿಸಿದಂತೆ ಸಾರ್ವಜನಿಕ ದೂರಿನ ಹಿನ್ನೆಲೆಯಲ್ಲಿ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ತಾ.ಪಂ.ಗೆ ಹಠಾತ್...

ವಿಟ್ಲ ಪಿಎಂ ಶ್ರೀ ಸರಕಾರಿ ಪ್ರೌಢ ಶಾಲೆಯಲ್ಲಿ ಮೆಟ್ರಿಕ್ ಮೇಳ

ವಿಟ್ಲ: ವಿಟ್ಲ ಪಿ ಎಂ ಶ್ರೀ ಸರಕಾರಿ ಪ್ರೌಢ ಶಾಲೆ (ಆರ್ ಎಂ ಎಸ್ ಎಂ)ವಿಟ್ಲ ಇದರ ಪ್ರಾಥಮಿಕ ಶಾಲಾ ವಿಭಾಗದಲ್ಲಿ ಬುಧವಾರ ಮೆಟ್ರಿಕ್ ಮೇಳ ಕಾರ್ಯಕ್ರಮ ನಡೆಯಿತು. ಮೆಟ್ರಿಕ್ ಮೇಳವನ್ನು ವಿಟ್ಲ ಪಟ್ಟಣ...