Thursday, February 13, 2025

ಪವಾಡ ಪುರುಷ ಸಂತ ಅಂತೋನಿ ಚರ್ಚ್‌ಗೆ ಮಿಥುನ್ ರೈ ಭೇಟಿ ಗುರುಗಳಿಂದ ವಿಶೇಷ ಪೂಜೆ

ಬಂಟ್ವಾಳ: ಮಾಜಿ ಸಚಿವ ರಮಾನಾಥ ರೈ ಜೊತೆ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಮಿಥುನ್ ರೈ ಗುರುವಾರ ಬಂಟ್ವಾಳ ಸುತ್ತಮುತ್ತ ಪ್ರಚಾರವನ್ನು ನಡೆಸಿದ ಅವರು ತಾಲೂಕಿನ ಸುತ್ತಮುತ್ತವಿರುವ ಹಲವು ದೇವಸ್ಥಾನ, ದೈವಸ್ಥಾನ ,ಚರ್ಚ್‌ಗಳಿಗೆ ಭೇಟಿ ನೀಡಿ ದೇವರ ಆಶೀರ್ವಾದವನ್ನು ಪಡೆದಿದ್ದಾರೆ. ಜೊತೆಗೆ ಇಲ್ಲಿಯ ಜನ ಮಿಥುನ್ ರೈಗೆ ಮಣೆ ಹಾಕುವ ಲಕ್ಷಗಳು ಎದ್ದು ಕಾಣುತ್ತಿದೆ.. ಇನ್ನು ಗುರುಬಲವೊಂದಿದ್ದರೆ ಎಂಥಹ ಯುದ್ದವನ್ನು ಗೆದ್ದು ಬರುವ ಶಕ್ತಿ ಮನುಷ್ಯನಿಗಿದೆ ಈ ನಿಟ್ಟಿನಲ್ಲಿ ಲೋಕಸಭಾ ಚುನಾವಣೆಯಲ್ಲಿ ಮಿಥುನ್ ರೈ ಗೆದ್ದು ಬರಲಿ ಎಂಬ ನಿಟ್ಟಿನಲ್ಲಿ ಹಲವು ಚರ್ಚ್‌ಗಳ ಫಾದರ್ ಆಶೀರ್ವಾದ ನೀಡಿದ್ದಾರೆ.

ಬಂಟ್ವಾಳದಲ್ಲಿಯೇ ಇರುವ ಪವಾಡ ಪುರುಷ ಸಂತ ಅಂತೋನಿ ಚರ್ಚ್‌ನ ಗುರುಗಳಾದ ಫೆಡ್ರಿಕ್ ಮೊಂತೆರೋ ಮತ್ತು ವಂದನೀಯ ಸ್ಟೇನಿ ಫೆರ್ನಾಂಡೀಸ್ ಮಿಥುನ್ ರೈ ಹೆಸರಲ್ಲಿ ವಿಶೇಷ ಪೂಜೆ ಸಲ್ಲಿಸಿದ್ರು. ಈ ಸಂದರ್ಭದಲ್ಲಿ ಚರ್ಚ್‌ನ ಪಾಲನಾ ಮಂಡಳಿಯ ಫೆರ್ನಾಡೀಸ್ ಮಾಡ್ತೀನಿಸಿಕ್ವೇರ, ವಿನ್ಸೆಂಟ್ ಪಿಂಟೋ ರಿಚರ್ಡ್ ಡಿಸೋಜಾ , ಕಿರಣ್ ನೊರೊನ್ನಾ, ಡೆಂಜಿಲ್ ನೊರೊನ್ನಾ ಮಿಥುನ್ ಸಿಕ್ವೇರಾ ಉಪಸ್ಥಿತರಿದ್ದರು.. ಇದೇ ಸಂದರ್ಭದಲ್ಲಿ ಮಾಜಿ ಸಚಿವ ರಮಾನಾಥ ರೈ ಕೂಡ ಆರ್ಶಿರ್ವಾದವನ್ನು ಪಡೆದರು .

More from the blog

ಗ್ರಾಮ ಆಡಳಿತ ಅಧಿಕಾರಿಗಳ ಮುಷ್ಕರಕ್ಕೆ ಶಾಸಕ ರಾಜೇಶ್ ನಾಯ್ಕ್ ಬೆಂಬಲ

ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಅವರು ಗ್ರಾಮ ಆಡಳಿತ ಅಧಿಕಾರಿಗಳು ಸತತ ಮೂರನೇ ದಿನ ನಡೆಸುತ್ತಿರುವ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಬೆಂಬಲ ಸೂಚಿಸಿದ್ದಾರೆ. ಬಂಟ್ವಾಳ ತಾಲೂಕು ಆಡಳಿತ ಸೌಧದ ಮುಂಭಾಗ ಮುಷ್ಕರದ ಸ್ಥಳಕ್ಕೆ ಭೇಟಿ ನೀಡಿದ...

ಫೆ.15 ರಂದು ಕಮಲಾಶ್ರಯ ಮನೆಯ ಹಸ್ತಾಂತರ ಹಾಗೂ ಗೃಹಪ್ರವೇಶ

ಬಂಟ್ವಾಳ: ಬಿಜೆಪಿ ಮಹಾಶಕ್ತಿ ಕೇಂದ್ರ ಮಾಣಿ ಮತ್ತು ಬಿಜೆಪಿ ಶಕ್ತಿ ಕೇಂದ್ರ ಅನಂತಾಡಿ ಇದರ ಸಹಕಾರದಿಂದ ಅನಂತಾಡಿ ಗ್ರಾಮದ ಬಾಬನಕಟ್ಟೆ ಎಂಬಲ್ಲಿ ಬಲ್ಲು ಕೊರಗ ಇವರ ಕುಟುಂಬಕ್ಕೆ ನಿರ್ಮಿಸಲಾದ ನೂತನ ಮನೆಯನ್ನು ಫೆ.15...

ಬೇಲಿ ವಿವಾದ : ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಶಾಸಕ ರಾಜೇಶ್ ನಾಯ್ಕ್

ಬಂಟ್ವಾಳ: ತಾ.ಪಂ.ಅಧಿಕಾರಿ ವರ್ಗ ಕಚೇರಿ ಮುಂಭಾಗದ ಜಾಗಕ್ಕೆ ಕಬ್ಬಿಣದ ರಾಡ್ ಅಳವಡಿಸಿ ಬೇಲಿ ಹಾಕಿದ ವಿಚಾರಕ್ಕೆ ಸಂಬಂಧಿಸಿದಂತೆ ಸಾರ್ವಜನಿಕ ದೂರಿನ ಹಿನ್ನೆಲೆಯಲ್ಲಿ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ತಾ.ಪಂ.ಗೆ ಹಠಾತ್...

ವಿಟ್ಲ ಪಿಎಂ ಶ್ರೀ ಸರಕಾರಿ ಪ್ರೌಢ ಶಾಲೆಯಲ್ಲಿ ಮೆಟ್ರಿಕ್ ಮೇಳ

ವಿಟ್ಲ: ವಿಟ್ಲ ಪಿ ಎಂ ಶ್ರೀ ಸರಕಾರಿ ಪ್ರೌಢ ಶಾಲೆ (ಆರ್ ಎಂ ಎಸ್ ಎಂ)ವಿಟ್ಲ ಇದರ ಪ್ರಾಥಮಿಕ ಶಾಲಾ ವಿಭಾಗದಲ್ಲಿ ಬುಧವಾರ ಮೆಟ್ರಿಕ್ ಮೇಳ ಕಾರ್ಯಕ್ರಮ ನಡೆಯಿತು. ಮೆಟ್ರಿಕ್ ಮೇಳವನ್ನು ವಿಟ್ಲ ಪಟ್ಟಣ...