Monday, June 30, 2025

ಭಾರತದಲ್ಲಿ ತನ್ನ ಎಲ್ಲಾ ಶಾಖೆಯನ್ನು ಮುಚ್ಚಲಿದೆ ಈ ಬ್ಯಾಂಕ್! 20 ಸಾವಿರ ಉದ್ಯೋಗಿಗಳ ಭವಿಷ್ಯದ ಮೇಲೆ ಕಾರ್ಮೋಡ

ದೆಹಲಿ: ಭಾರತದ ಹಳೆಯ ಬ್ಯಾಂಕುಗಳಲ್ಲಿ ಒಂದಾಗಿರುವ ಅಮೆರಿಕಾ ಮೂಲದ ಸಿಟಿ ಬ್ಯಾಂಕ್ ಭಾರತದಲ್ಲಿನ ತನ್ನ ಎಲ್ಲಾ ಶಾಖೆಗಳನ್ನು ಮುಚ್ಚುವುದಾಗಿ ಘೋಷಿಸಿದೆ.

ದೇಶದಲ್ಲಿ ತನ್ನ ಎಲ್ಲಾ ಶಾಖೆಗಳನ್ನು ಮುಚ್ಚುವುದಕ್ಕಾಗಿ ಸಿಟಿ ಬ್ಯಾಂಕ್ ಆರ್‌ಬಿಐನ ಅಂತಿಮ ಅನುಮೋದನೆಗಾಗಿ ಕಾಯುತ್ತಿದೆ.

ದೇಶದಲ್ಲಿ ಹಂತ ಹಂತವಾಗಿ ಸೇವೆಗಳನ್ನು ಸ್ಥಗಿತಗೊಳಿಸಲು ಬ್ಯಾಂಕ್ ಉದ್ದೇಶಿಸಿದೆ. ಸದ್ಯ ಗ್ರಾಹಕ ಸೇವೆಗಳು ಮುಂದುವರೆಯಲಿದೆ. ಇದರಿಂದಾಗಿ ಭಾರತದಲ್ಲಿನ ಬ್ಯಾಂಕ್ ಉದ್ಯೋಗಿಗಳು ಮತ್ತು ಗ್ರಾಹಕರ ಮೇಲೆ ಯಾವುದೇ ಪರಿಣಾಮ ತಕ್ಷಣಕ್ಕೆ ಇರುವುದಿಲ್ಲ ಎಂದು ಬ್ಯಾಂಕ್ ಅಧಿಕಾರಿಗಳು ತಿಳಿಸಿದ್ದಾರೆ. ಆದರೆ ಭಾರತದಲ್ಲಿ ಸದ್ಯಕ್ಕೆ 20,000 ಉದ್ಯೋಗಿಗಳು ಸಿಟಿ ಬ್ಯಾಂಕ್‌ನಲ್ಲಿ ಕೆಲಸ ನಿರ್ವಹಿಸುತ್ತಿದ್ದು ಅವರ ಭವಿಷ್ಯದ ಮೇಲೆ ಕಾರ್ಮೋಡ ಕವಿಯಲಿದೆ ಎಂದೇ ಹೇಳಲಾಗುತ್ತಿದೆ.

More from the blog

Strike : ಜು. 9ರ ಕಾರ್ಮಿಕರ ಅಖಿಲ ಭಾರತ ಮುಷ್ಕರ ಯಶಸ್ವಿಗೊಳಿಸಲು ಕಾಮ್ರೇಡ್ ಪಿ.ಪಿ ಅಪ್ಪಣ್ಣ ಕರೆ

ಬಂಟ್ವಾಳ : ಜುಲೈ 9 ರಂದು ಕಾರ್ಮಿಕ ಕಾಯ್ದೆಗಳ ತಿದ್ದುಪಡಿ ವಿರೋಧಿಸಿ ಹಾಗೂ ಕೇಂದ್ರ ಸರಕಾರದ ಕಾರ್ಮಿಕ ವಿರೋಧಿ ನೀತಿಗಳನ್ನು ವಿರೋಧಿಸಿ ಕಾರ್ಮಿಕ ಸಂಘಟನೆಗಳಿಂದ ಅಖಿಲ ಭಾರತ ಮುಷ್ಕರಕ್ಕೆ ಕರೆ ನೀಡಿದ್ದು ಈ...

ನಿರ್ಧಿಷ್ಟ ಗುರಿಯೊಂದಿಗೆ ಯುವವಾಹಿನಿಯ ಸಂಘಟಿತ ಪಯಣ : ಭುವನೇಶ್ ಪಚ್ಚಿನಡ್ಕ..

ಬಂಟ್ವಾಳ : ನಿರ್ದಿಷ್ಟ ಗುರಿಯೊಂದಿಗೆ ಸಾಧನಾ ಪಥದಲ್ಲಿ ಯುವವಾಹಿನಿ ಸಂಘಟಿತವಾಗಿ ಪಯಣಿಸುತ್ತಿದೆ ಎಂದು ಯುವವಾಹಿನಿ ಬಂಟ್ವಾಳ ಘಟಕದ ರಜತವರ್ಷದ ಅಧ್ಯಕ್ಷ ಭುವನೇಶ್ ಪಚ್ಚಿನಡ್ಕ ತಿಳಿಸಿದರು. ಅವರು ರವಿವಾರ ಬಿ ಸಿ ರೋಡ್ ಯುವವಾಹಿನಿ ಭವನದಲ್ಲಿ...

ಮಕ್ಕಳಲ್ಲಿ ಹೃದಯಾಘಾತಕ್ಕೆ ಮೊಬೈಲ್‌ ಬಳಕೆ ಕಾರಣ – ಆಘಾತಕಾರಿ ವರದಿ ಬೆಳಕಿಗೆ..

ಇತ್ತೀಚೆಗೆ ವಯಸ್ಕರು ಮಾತ್ರವಲ್ಲದೆ ಯುವ ಜನತೆ, ಮಕ್ಕಳಲ್ಲಿ ಕೂಡಾ ಹೃದಯಾಘಾತ ಹೆಚ್ಚಿನ ಪ್ರಮಾಣದಲ್ಲಿ ಕಂಡುಬರುತ್ತಿದೆ. ಸಣ್ಣ ವಯಸ್ಸಿನಲ್ಲಿಯೇ ಆನೇಕರು ಹೃದಯಾಘಾತದಿಂದ ಇಹಲೋಕ ತ್ಯಜಿಸುತ್ತಿದ್ದಾರೆ. ಅದರಲ್ಲೂ ಮಕ್ಕಳಲ್ಲಿ ಹೃದಯಾಘಾತ ಹೆಚ್ಚಳ ಎಲ್ಲರ ಆತಂಕಕ್ಕೆ ಕಾರಣವಾಗಿದೆ. ಇದೀಗ...

ತುಂಬೆ ಕಾಲೇಜಿನಲ್ಲಿ ಸಂಸ್ಥಾಪಕರ ದಿನಾಚರಣೆ ಮತ್ತು ಕಂಪ್ಯೂಟರ್ ಲ್ಯಾಬ್ ಉದ್ಘಾಟನೆ..

ಬಂಟ್ವಾಳ : ಡಾ.ಬಿ.ಅಹಮದ್ ಹಾಜಿ ಅವರ ಸಾಧನಾ ಗಾಥೆಯನ್ನು ಹಾಗೂ ಅವರ ಜೀವನದ ಬಗ್ಗೆ ಕೇಳಿದಾಗ ಅವರು ಎಷ್ಟೊಂದು ಉದಾತ್ತ ವ್ಯಕ್ತಿತ್ವದವರು ಮತ್ತು ಶಿಸ್ತು ಮತ್ತು ಬದ್ಧತೆಯಲ್ಲಿ ಬಾಳಿದವರು ಎನ್ನುವುದು ಅರ್ಥವಾಗುತ್ತದೆ. ಅಂಥವರನ್ನು...