Thursday, February 13, 2025

ಕಾರ್ಮಿಕ ಚಳುವಳಿ ಬಲಿಷ್ಟಗೊಳ್ಳಬೇಕು- ಜೆ.ಬಾಲಕೃಷ್ಣ ಶೆಟ್ಟಿ.

ಬಂಟ್ವಾಳ: ಸಿ.ಐ.ಟಿ.ಯು ಬಂಟ್ವಾಳ ತಾಲೂಕು ಸಮ್ಮೇಳನವು ಇಂದು ಬಿ.ಸಿ.ರೋಡಿನ ಲಯನ್ಸ್ ಭವನದಲ್ಲಿ ಹಿರಿಯ ಕಾರ್ಮಿಕ ಮುಖಂಡರಾದ ಸಂಜೀವ ಬಂಗೇರರ ಅದ್ಯಕ್ಷತೆಯಲ್ಲಿ ನಡೆಯಿತು. ಸಮ್ಮೇಳನವನ್ನು ಉದ್ಘಾಟಿಸಿ ಸಿ.ಐ.ಟಿ.ಯು ಜಿಲ್ಲಾ ಅದ್ಯಕ್ಷರಾದ ಜೆ.ಬಾಲಕೃಷ್ಣ ಶೆಟ್ಟಿ ಮಾತನಾಡಿ ಇಂದು ನಮ್ಮನ್ನಾಳುವ ಕೇಂದ್ರ ಮತ್ತು ರಾಜ್ಯ ಸರಕಾರದ ನೀತಿಗಳು ಕಾರ್ಮಿಕ ವಿರೋಧಿಯಾಗಿದ್ದು ಕಾರ್ಮಿಕರು ಹೋರಾಟಗಳಿಂದ ಪಡೆದ ಹಕ್ಕುಗಳನ್ನು ಕಸಿಯುವ ಮೂಲಕ ಸರಕಾರವು ಮಾಲಕರ ಪರವಾಗಿ ಕಾನೂನುಗಳನ್ನು ಜಾರಿಗೊಳಿಸುತ್ತಿದ್ದು ಇದರಿಂದಾಗಿ ಇಂದು ಕಾರ್ಮಿಕ ವರ್ಗ ಸಂಕಷ್ಟಗಳನ್ನು ಎದುರಿಸುತ್ತಿದ್ದು, ಕಾರ್ಮಿಕರು ತಮ್ಮ ಹಕ್ಕುಗಳನ್ನು ಉಳಿಸಿಕೊಳ್ಳಲು ಚಳುವಳಿಯನ್ನು ಬಲಿಷ್ಟಗೊಳಿಸಬೇಕೆಂದು ಕರೆ ನೀಡಿದರು.

ಸಮ್ಮೇಳನದ ಸಮಾರೋಪದಲ್ಲಿ ಸಿ.ಐ.ಟಿ.ಯು ಜಿಲ್ಲಾ ಕಾರ್ಯದರ್ಶಿ ಸುನೀಲ್ ಕುಮಾರ್ ಬಜಾಲ್ ಮಾತನಾಡಿ ಕಾರ್ಮಿಕರು ಇಂದು ಬಹಳ ಸಂದಿಗ್ದ ಪರಿಸ್ಥಿತಿಯಲ್ಲಿ ಇದ್ದು ಕೇಂದ್ರ ಸರಕಾರವು ಕಾರ್ಮಿಕರ ಪರವಾಗಿ ಇರುವ ಕಾನೂನುಗಳನ್ನು ತಿದ್ದುಪಡಿಗೊಳಿಸಿ ಅದನ್ನು ಕಾರ್ಮಿಕ ಸಂಹಿತೆಯಾಗಿ ಮಾರ್ಪಡಿಸಲು ಪ್ರಯತ್ನಿಸುತ್ತಿದ್ದು, ಹಾಗೂ ಈಗಾಗಲೇ ಕಟ್ಟಡ ಕಾರ್ಮಿಕರ ಕಲ್ಯಾಣ ಮಂಡಳಿಯನ್ನು ರದ್ದು ಮಾಡಲು ಸಂಸತ್ತಿನಲ್ಲಿ ಅನುಮೋದನೆ ಸಿಕ್ಕಿದ್ದು ,ಮುಂದೆ ಇ.ಎಸ್.ಐ ಮತ್ತು ಪಿ.ಎಫ್ ಸೌಲಭ್ಯ ಗಳನ್ನು ಕಾರ್ಮಿಕರಿಂದ ಕಸಿದುಕೊಳ್ಳಲು ಪ್ರಯತ್ನ ನಡೆಸಲಾಗುತ್ತಿದ್ದು ಕಾರ್ಮಿಕರು ಈ ಬಗ್ಗೆ ಜಾಗೃತಗೊಂಡು ರಾಜಕೀಯ ಪ್ರಜ್ಞೆ ಬೆಳೆಸಿಕೊಂಡು ಚಳುವಳಿಯನ್ನು ಮುನ್ನಡೆಸಬೇಕೆಂದು ಕರೆ ನೀಡಿದರು. ಸಮ್ಮೇಳನದಲ್ಲಿ ಟೂರಿಸ್ಟ್ ಕಾರು ಚಾಲಕರ ಸಂಘದ ಅದ್ಯಕ್ಷರಾದ ಪ್ರಭಾಕರ ದೈವಗುಡ್ಡೆ ಶುಭಕೋರಿ ಮಾತನಾಡಿದರು, ಸಾಮಾಜಿಕ ಕಾರ್ಯಕರ್ತರಾದ ರಾಜ ಚೆಂಡ್ತಿಮಾರ್, ಹಿರಿಯ ಕಾರ್ಮಿಕ ಮುಖಂಡರಾದ ಬಿ.ವಾಸುಗಟ್ಟಿ, ಅಕ್ಷರ ದಾಸೋಹ ನೌಕರರ ಸಂಘದ ಮುಖಂಡರಾದ ವಿನಯ ನಡುಮುಗೇರು, ವೇದಿಕೆಯಲ್ಲಿದ್ದರು. ಸಿ.ಐ.ಟಿ.ಯು ಬಂಟ್ವಾಳ ತಾಲೂಕು ಕಾರ್ಯದರ್ಶಿ ರಾಮಣ್ಣ ವಿಟ್ಲ ಆರಂಭದಲ್ಲಿ ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು, ಉದಯ ಕುಮಾರ್ ಬಂಟ್ವಾಳ ಕೊನೆಯಲ್ಲಿ ವಂದಿಸಿದರು. ಇದೇ ಬರುವ ದಿನಾಂಕ 18 ಮತ್ತು 19 ರಂದು ಸಿ.ಐ.ಟಿ.ಯು ಜಿಲ್ಲಾ ಸಮ್ಮೇಳನ ಮಂಗಳೂರಿನಲ್ಲಿ ಜರುಗಲಿದ್ದು ಇದಕ್ಕೆ ಬಂಟ್ವಾಳ ತಾಲೂಕಿನಿಂದ 21 ಜನ ಪ್ರತಿನಿದಿಗಳನ್ನು ಆಯ್ಕೆ ಮಾಡಲಾಯಿತು ಹಾಗೂ ಸಮ್ಮೇಳನದಲ್ಲಿ ನೂತನ 15 ಜನರ ಕಾರ್ಯಕಾರಿ ಸಮಿತಿ ರಚಿಸಲಾಯಿತು.

More from the blog

ಗ್ರಾಮ ಆಡಳಿತ ಅಧಿಕಾರಿಗಳ ಮುಷ್ಕರಕ್ಕೆ ಶಾಸಕ ರಾಜೇಶ್ ನಾಯ್ಕ್ ಬೆಂಬಲ

ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಅವರು ಗ್ರಾಮ ಆಡಳಿತ ಅಧಿಕಾರಿಗಳು ಸತತ ಮೂರನೇ ದಿನ ನಡೆಸುತ್ತಿರುವ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಬೆಂಬಲ ಸೂಚಿಸಿದ್ದಾರೆ. ಬಂಟ್ವಾಳ ತಾಲೂಕು ಆಡಳಿತ ಸೌಧದ ಮುಂಭಾಗ ಮುಷ್ಕರದ ಸ್ಥಳಕ್ಕೆ ಭೇಟಿ ನೀಡಿದ...

ಫೆ.15 ರಂದು ಕಮಲಾಶ್ರಯ ಮನೆಯ ಹಸ್ತಾಂತರ ಹಾಗೂ ಗೃಹಪ್ರವೇಶ

ಬಂಟ್ವಾಳ: ಬಿಜೆಪಿ ಮಹಾಶಕ್ತಿ ಕೇಂದ್ರ ಮಾಣಿ ಮತ್ತು ಬಿಜೆಪಿ ಶಕ್ತಿ ಕೇಂದ್ರ ಅನಂತಾಡಿ ಇದರ ಸಹಕಾರದಿಂದ ಅನಂತಾಡಿ ಗ್ರಾಮದ ಬಾಬನಕಟ್ಟೆ ಎಂಬಲ್ಲಿ ಬಲ್ಲು ಕೊರಗ ಇವರ ಕುಟುಂಬಕ್ಕೆ ನಿರ್ಮಿಸಲಾದ ನೂತನ ಮನೆಯನ್ನು ಫೆ.15...

ಬೇಲಿ ವಿವಾದ : ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಶಾಸಕ ರಾಜೇಶ್ ನಾಯ್ಕ್

ಬಂಟ್ವಾಳ: ತಾ.ಪಂ.ಅಧಿಕಾರಿ ವರ್ಗ ಕಚೇರಿ ಮುಂಭಾಗದ ಜಾಗಕ್ಕೆ ಕಬ್ಬಿಣದ ರಾಡ್ ಅಳವಡಿಸಿ ಬೇಲಿ ಹಾಕಿದ ವಿಚಾರಕ್ಕೆ ಸಂಬಂಧಿಸಿದಂತೆ ಸಾರ್ವಜನಿಕ ದೂರಿನ ಹಿನ್ನೆಲೆಯಲ್ಲಿ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ತಾ.ಪಂ.ಗೆ ಹಠಾತ್...

ವಿಟ್ಲ ಪಿಎಂ ಶ್ರೀ ಸರಕಾರಿ ಪ್ರೌಢ ಶಾಲೆಯಲ್ಲಿ ಮೆಟ್ರಿಕ್ ಮೇಳ

ವಿಟ್ಲ: ವಿಟ್ಲ ಪಿ ಎಂ ಶ್ರೀ ಸರಕಾರಿ ಪ್ರೌಢ ಶಾಲೆ (ಆರ್ ಎಂ ಎಸ್ ಎಂ)ವಿಟ್ಲ ಇದರ ಪ್ರಾಥಮಿಕ ಶಾಲಾ ವಿಭಾಗದಲ್ಲಿ ಬುಧವಾರ ಮೆಟ್ರಿಕ್ ಮೇಳ ಕಾರ್ಯಕ್ರಮ ನಡೆಯಿತು. ಮೆಟ್ರಿಕ್ ಮೇಳವನ್ನು ವಿಟ್ಲ ಪಟ್ಟಣ...