Sunday, January 25, 2026

ಎರಡು ಕ್ಲಬ್ ಗೆ ದಾಳಿ: 148 ಅಧಿಕ ಮಂದಿ ವಶಕ್ಕೆ

ಬಂಟ್ವಾಳ: ಬಿ.ಸಿ.ರೋಡಿನ ಹೃದಯಭಾಗದಲ್ಲಿರುವ ಎರಡು ರಿಕ್ರಿಯೇಷನ್ ಕ್ಲಬ್ ಗೆ ಬಂಟ್ವಾಳ ನಗರ ಪೊಲೀಸರು ದಾಳಿ ನಡೆಸಿ 148ಕ್ಕೂ ಅಧಿಕ ಮಂದಿಯನ್ನು ವಶ ಪಡಿಸಿರುವ ಘಟನೆ ಭಾನುವಾರ ಸಂಜೆ ನಡೆದಿದೆ.   ಜುಗಾರಿ ಹಾಗೂ ಇನ್ನಿತರ ಪರವಾನಗಿರಹಿತ ವಿಡೀಯೊ ಗೇಮಾಗಳನ್ನು ಆಡುತ್ತಿರುವ ಶಂಕೆ ಯ ಹಿನ್ನಲೆಯಲ್ಲಿ ಈ ದಾಳಿ ಕಾರ್ಯಾಚರಣೆ ನಡೆಸಲಾಗಿದೆ ಎಂದು ತಿಳಿದುಬಂದಿದೆ.

  ಬಂಟ್ವಾಳ ಎಎಸ್ಪಿ ಸೈದುಲ್ ಅದಾವತ್ ಅವರ ನೇತೃತ್ವದಲ್ಲಿ ನಗರ ಠಾಣೆಯ ಎಸ್ ಐ ಚಂದ್ರ ಶೇಖರ್ ಮತ್ತವರ ತಂಡ ಪೊಲೀಸರು ಎರಡು ವಾಣಿಜ್ಯ ಸಂಕೀರ್ಣಗಳಿಗೆ ಏಕಕಾಲದಲ್ಲಿ ದಾಳಿ ನಡೆಸಿದ್ದಾರೆ. ಈ ಸಂದರ್ಭ ಎರಡು ಕ್ಲಬ್ ನಲ್ಲಿದ್ದ ಒಟ್ಟುಸುಮಾರು 148ಕ್ಕೂ ಅಧಿಕ ಮಂದಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.ಅಲ್ಲದೆ ನಗದು, ಮೊಬೈಲ್, ಇಸ್ಪೀಟ್ ಎಲೆ ಮತ್ತಿತರ ಸೊತ್ತುಗಳನ್ನು ವಶ ಪಡಿಸಿದ್ದಾರೆ.

ಪೊಲೀಸ್ ಠಾಣೆಯ ಅನತಿದೂರದಲ್ಲಿಯೇ ಈ ವಾಣಿಜ್ಯ ಸಂಕೀರ್ಣಗಳಿವೆ ಈ ಎರಡರಲ್ಲಿ ಒಂದು ಅನಧಿಕೃತವಾಗಿ ನಡೆಯುತ್ತಿದೆ ಎಂದು ಹೇಳಲಾಗಿದೆ.  ದಾಳಿಯ ವೇಳೆ ಕ್ಲಬ್ ನಲ್ಲಿದ್ದ ಕೆಲವರು ತಮ್ಮ ಬಳಿಯಲ್ಲಿದ್ದ ನಗದು, ಚಿನ್ನಾಭರಣ, ಮೊಬೈಲ್ ಗಳನ್ನು ಮಹಡಿಯಿಂದ ಕೆಳಕ್ಕೆ ಎಸೆದಿದ್ದು, ಕೆಳ ಭಾಗದಲ್ಲಿ ಇದ್ದವರು ಇದನ್ನು ಹೆಕ್ಕಿ ಕೊಂಡ ಪ್ರಸಂಗವು ನಡೆಯಿತು.   ಈ ಸಂದರ್ಭ ವಾಣಿಜ್ಯ ಸಂಕೀರ್ಣದ ಹೊರಗೆ ಜನ ಜಮಾಯಿಸತೊಡಗಿದ್ದು, ಪೊಲೀಸ್ ಕಾರ್ಯಾಚರಣೆಯನ್ನು ಕುತೂಹಲದಿಂದ ವೀಕ್ಷಿಸುತ್ತಿರುವುದು ಕಂಡು ಬಂತು. ರಾತ್ರಿವರೆಗೂ ಕಾರ್ಯಾಚರಣೆ ನಡೆದಿದ್ದು, ವಿಚಾರಣೆಯ ಬಳಿಕವಷ್ಟೇ ಸ್ಪಷ್ಟ ಮಾಹಿತಿ ನೀಡಲಾಗುತ್ತದೆ ಎಂದು ಪೊಲೀಸ್ ಠಾಣಾ ಮಾಹಿತಿ ತಿಳಿಸಿದೆ.

More from the blog

ಗೋಳ್ತಮಜಲು ಮಂಡಲದ ಹಿಂದು ಸಂಗಮ ಕಾರ್ಯಕ್ರಮ..

ಬಂಟ್ವಾಳ : ಗೋಳ್ತಮಜಲು, ಬಾಳ್ತಿಲ, ಅಮ್ಟೂರು ಗ್ರಾಮಗಳನ್ನೊಳಗೊಂಡ ಗೋಳ್ತಮಜಲು ಮಂಡಲದ ಹಿಂದು ಸಂಗಮ ಕಾರ್ಯಕ್ರಮ ಗೋಪೂಜೆಯ ಮೂಲಕ ಭವ್ಯ ಶೋಭಾಯಾತ್ರೆಗೆ ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ. ಪ್ರಭಾಕರ ಭಟ್ ಚಾಲನೆ...

ಯುವಶಕ್ತಿಗೆ ವೇದಿಕೆಯಾದ ಕೋಟಿ ಚೆನ್ನಯ ಕ್ರೀಡೋತ್ಸವ : ಬಿ. ಜನಾರ್ದನ ಪೂಜಾರಿ

ಬಂಟ್ವಾಳ : ಕೋಟಿ ಚೆನ್ನಯ ಕ್ರೀಡೋತ್ಸವವು ಯುವಜನತೆಯಲ್ಲಿ ಶಿಸ್ತು, ಆರೋಗ್ಯ ಹಾಗೂ ಸಹಭಾವನೆಯನ್ನು ಬೆಳೆಸುವ ಅತ್ಯುತ್ತಮ ವೇದಿಕೆಯಾಗಿದೆ. ಇಂತಹ ಕ್ರೀಡೋತ್ಸವಗಳ ಮೂಲಕ ಯುವಶಕ್ತಿ ಒಗ್ಗೂಡಿ ಸಮಾಜದ ಅಭಿವೃದ್ಧಿಗೆ ಸ್ಪೂರ್ತಿದಾಯಕ ದಿಕ್ಕು ನೀಡುತ್ತದೆ” ಎಂದು...

ಭಾರತದ ಸಂಸ್ಕೃತಿ ಉಳಿಸಿ ಬೆಳೆಸುವ ಜವಾಬ್ದಾರಿ ಯುವಪೀಳಿಗೆಗಿದೆ : ಭಕ್ತಿಭೂಷಣ್ ದಾಸ್ ಸ್ವಾಮೀಜಿ

ಬಂಟ್ವಾಳ: ಬಂಟ್ವಾಳ ತಾಲೂಕು ಹಿಂದು ಸಂಗಮ ಆಯೋಜನಾ ಸಮಿತಿಯ ಸಂಗಬೆಟ್ಟು , ಕರ್ಪೆ, ಕುಕ್ಕಿಪಾಡಿ, ಎಲಿಯನಡುಗೋಡು ಗ್ರಾಮಗಳನ್ನೊಳಗೊಂಡ ಸಂಗಬೆಟ್ಟು ಮಂಡಲದ ವತಿಯಿಂದ ಹಿಂದು ಸಂಗಮ ಕಾರ್ಯಕ್ರಮ ಸಿದ್ದಕಟ್ಟೆ ಕೇಂದ್ರ ಮೈದಾನದಲ್ಲಿ ರವಿವಾರ ನಡೆಯಿತು. ಗೋ...

ವಿಟ್ಲ : ಜಾತ್ರೆಯ ಪ್ರಯುಕ್ತ ನೇಮೋತ್ಸವ..

ವಿಟ್ಲ : ಮಹತೋಭಾರ ಶ್ರೀ ಪಂಚಲಿಂಗೇಶ್ವರ ದೇವಸ್ಥಾನ ವಿಟ್ಲ ಇದರ ವರ್ಷಂಪ್ರತಿ ನಡೆಯುವ ಕಾಲಾವಧಿ ಜಾತ್ರೆಯ ಪ್ರಯುಕ್ತ ಅರಸು ಮುಂಡಾಲತ್ತಾಯ, ಮಲರಾಯ ದೈವ, ಕೊಡಮಣಿತ್ತಾಯ ಹಾಗೂ ಪಿಲಿಚಾಮುಂಡಿ ದೈವಕ್ಕೆ ದೇವಸ್ಥಾನದ ಎದುರು ನೇಮೋತ್ಸವ...