Friday, January 30, 2026

ರಿಕೃಷೇಯನ್ ಕ್ಲಬ್ ಗೆ ಪೊಲೀಸ್ ದಾಳಿ : ಮೆನೇಜರ್ ಸಹಿತ 70 ಮಂದಿ ವಶಕ್ಕೆ

ಬಂಟ್ವಾಳ: ಪಾಣೆಮಂಗಳೂರು ಸಮೀಪದ ಮೆಲ್ಕಾರ್ ನಲ್ಲಿರುವ ಪ್ರಸನ್ನ ಕಾಂಪ್ಲೆಕ್ಸ್ ನಲ್ಲಿರುವ ರೀಕೃಷಿಯೇಷನ್ ಕ್ಲಬ್ ಗೆ ಬಂಟ್ವಾಳ ನಗರ ಠಾಣೆಯ ಪೊಲೀಸರು ಶನಿವಾರ ಸಂಜೆ ದಾಳಿ ನಡೆಸಿ ಅನಧಿಕೃತವಾಗಿ ಹಣವನ್ನು ಪಣ ವಾಗಿಟ್ಟು ಜೂಜಾಟದಲ್ಲಿ ನಿರತರಾಗಿದ್ದ 70 ಮಂದಿಯನ್ನು ವಶಕ್ಕೆ ಪಡೆದು,   ನಗದು ಸಹಿತ  ಲಕ್ಷಾಂತರ ರೂ.ಮೌಲ್ಯದ ಸೊತ್ತನ್ನು ಮುಟ್ಟುಗೋಲು ಹಾಕಿದ್ದಾರೆ.
                 ಖಚಿತ ಮಾಹಿತಿಯನ್ನಾಧರಿಸಿ  ಬಂಟ್ವಾಳ ನ್ಯಾಯಾಲಯದ ನ್ಯಾಯಾಧೀಶರ  ಅನುಮತಿಯೊಂದಿಗೆ ಬಂಟ್ವಾಳ ಎಎಸ್ಪಿ ಸೈದುಲ್ ಅಡಾವತ್, ನಗರ ಠಾಣೆಯೆ ಎಸ್. ಐ.ಗಳಾದ ಚಂದ್ರಶೇಖರ್,ಸುಧಾಕರ ತೋನ್ಸೆ ಹಾಗೂ ಸಂಚಾರಿಠಾಣೆಯ ಎಸ್ .ಐ. ಮಂಜುನಾಥ್ ಮತ್ತು ಸಿಬಂದಿಗಳು ಮಿಂಚಿನ ದಾಳಿ  ಕಾರ್ಯಾಚರಣೆ  ನಡೆಸಿ ತಪಾಸಣೆ ನಡೆಸಿದಾಗ  ಕ್ಲಬ್ ಗೆ ಯಾವುದೇ ಪರವಾನಿಗೆ ಇಲ್ಲದಿರುವುದು ಮತ್ತು ಉಚ್ಚ ನ್ಯಾಯಾಲಯದ ನಿಯಮವನ್ನು ಉಲ್ಲಂಘಿಸಿ ಜೂಜಾಡುತ್ತಿರುವುದು ಕಂಡು ಬಂದಿದೆ.                   ತಕ್ಷಣ   ಕ್ಲಬ್ ನ ಮ್ಯಾನೇಜರ್ ಸಾಯಿ ಕಿರಣ್( 37) ಮಂಜೇಶ್ವರ ಈತನ ಸಹಿತ ಜೂಜಾಟದಲ್ಲಿ ನಿರತರಾಗಿದ್ದ 70 ಮಂದಿಯನ್ನು ವಶಕ್ಕೆ ಪಡೆದುಕೊಂಡಿದ್ದಾರೆ ಹಾಗೆಯೇ  ಜೂಜಾಟಕ್ಕೆ  ಪಣವಾಗಿಟ್ಟಿದ್ದ  72,100 ರೂ. ಮತ್ತು 1 ಲಕ್ಷ ರೂ ಮೌಲ್ಯದ  ವಿವಿಧ ಕಂಪನಿಯ 51  ಮೊಬೈಲುಗಳು  , ಒಂದು ಪೆನ್ನು, 52 ಇಸ್ಪೀಟು ಎಲೆಗಳು, 2 ಡಿವಿಆರ್ ಗಳು, ಒಂದು ರೌಂಡ್ ಟೇಬಲ್, 7 ಕುರ್ಚಿಗಳನ್ನು ಮುಟ್ಟುಗೋಲು ಹಾಕಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಬಗ್ಗೆ ಬಂಟ್ವಾಳ ನಗರ  ಠಾಣೆಯಲ್ಲಿ  ಪ್ರಕರಣ ದಾಖಲಾಗಿ,ಮುಂದಿನ ತನಿಖೆ ನಡೆಯುತ್ತಿದೆ.

More from the blog

ಕಟೀಲು 7 ಮೇಳಗಳ ಜ.30ರ ಸೇವೆಯಾಟಗಳ ವಿವರ ಇಲ್ಲಿದೆ..

ಮಂಗಳೂರು: ಕಟೀಲು ಶ್ರೀ ದುರ್ಗಾಪರಮೇಶ್ವರೀ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿ ಇದರ 7 ಮೇಳಗಳ ಜ.30ರ ಸೇವೆಯಾಟಗಳ ವಿವರ ಈ ಕೆಳಗಿನಂತಿವೆ.. ಜ.30ರ ಸೇವೆಯಾಟಗಳ ವಿವರ : ವಾಸು ಶೆಟ್ಟಿ, 'ಶ್ರೀದೇವಿ ಕೃಪಾ, 7ನೇ...

ಮಾಣಿ ಶ್ರೀ ಉಳ್ಳಾಲ್ತಿ ಅಮ್ಮನವರ ಕಾಲಾವಧಿ ಮೆಚ್ಚಿ ಜಾತ್ರೆ ಪ್ರಯುಕ್ತ ಗೊನೆ ಮುಹೂರ್ತ

ಬಂಟ್ವಾಳ : ಮಾಣಿ ಶ್ರೀ ಉಳ್ಳಾಲ್ತಿ ಅಮ್ಮನವರ ಕಾಲಾವಧಿ ಮೆಚ್ಚಿ ಜಾತ್ರೆಯು ಫೆ.5 ಗುರುವಾರ ರಾತ್ರಿ ಭಂಡಾರಯೇರಿ, ಮರುದಿನ ಫೆ.6 ಶುಕ್ರವಾರ ಬೆಳಿಗ್ಗೆ ಗಂಟೆ 10ರಿಂದ ಜರುಗಲಿದೆ. ಆ ಪ್ರಯುಕ್ತ ಗೊನೆಮುಹೂರ್ತವು ಗ್ರಾಮದ...

ಕರಾವಳಿ ಜಿಲ್ಲೆಗಳ ಬೆಳೆ ವಿಮೆ ಬಾಕಿ ಮೊತ್ತ ಬಿಡುಗಡೆ ಎಂ.ಎಲ್.ಸಿ ಕಿಶೋರ್ ಕುಮಾರ್ ಪುತ್ತೂರು ಆಗ್ರಹ

ಮಂಗಳೂರು: ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಸಾವಿರಾರು ರೈತರಿಗೆ ಬೆಳೆ ವಿಮೆಯ ದೊಡ್ಡ ಮೊತ್ತ ಇನ್ನೂ ಪಾವತಿಯಾಗದೆ ಬಾಕಿ ಇರುವುದು ಸಾಬೀತಾಗಿದೆ. ರಾಜ್ಯಾದ್ಯಂತ ಕೃಷಿಕರು ಸಂಕಷ್ಟದಲ್ಲಿದ್ದರೂ ಸಹ, ವಿಮಾ ಕಂಪನಿಗಳು ಮತ್ತು...

ಮಹಿಳಾ ನೌಕರರಿಗೆ ಋತುಚಕ್ರ ರಜೆ ನೀಡಲು ಶಿಕ್ಷಣ ಇಲಾಖೆ ಆದೇಶ : ಷರತ್ತುಗಳೇನು?

ಬೆಂಗಳೂರು: ರಾಜ್ಯದಲ್ಲಿನ ಸರ್ಕಾರಿ ಶಾಲೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಮಹಿಳಾ ಶಿಕ್ಷಕಿಯರಿಗೆ ಋತುಚಕ್ರ ರಜೆ ನೀಡಲು ಶಾಲಾ ಶಿಕ್ಷಣ ಇಲಾಖೆ ಅಧಿಕೃತ ಆದೇಶ ಹೊರಡಿಸಿದೆ. ಋತುಚಕ್ರ ರಜೆ ಪಡೆಯಲು ಮಹಿಳಾ ನೌಕರರಿಗೆ ಕೆಲವೊಂದು ಷರತ್ತುಗಳನ್ನು ಸಹ ವಿಧಿಸಲಾಗಿದೆ. ...