Friday, June 27, 2025

ರಿಕೃಷೇಯನ್ ಕ್ಲಬ್ ಗೆ ಪೊಲೀಸ್ ದಾಳಿ : ಮೆನೇಜರ್ ಸಹಿತ 70 ಮಂದಿ ವಶಕ್ಕೆ

ಬಂಟ್ವಾಳ: ಪಾಣೆಮಂಗಳೂರು ಸಮೀಪದ ಮೆಲ್ಕಾರ್ ನಲ್ಲಿರುವ ಪ್ರಸನ್ನ ಕಾಂಪ್ಲೆಕ್ಸ್ ನಲ್ಲಿರುವ ರೀಕೃಷಿಯೇಷನ್ ಕ್ಲಬ್ ಗೆ ಬಂಟ್ವಾಳ ನಗರ ಠಾಣೆಯ ಪೊಲೀಸರು ಶನಿವಾರ ಸಂಜೆ ದಾಳಿ ನಡೆಸಿ ಅನಧಿಕೃತವಾಗಿ ಹಣವನ್ನು ಪಣ ವಾಗಿಟ್ಟು ಜೂಜಾಟದಲ್ಲಿ ನಿರತರಾಗಿದ್ದ 70 ಮಂದಿಯನ್ನು ವಶಕ್ಕೆ ಪಡೆದು,   ನಗದು ಸಹಿತ  ಲಕ್ಷಾಂತರ ರೂ.ಮೌಲ್ಯದ ಸೊತ್ತನ್ನು ಮುಟ್ಟುಗೋಲು ಹಾಕಿದ್ದಾರೆ.
                 ಖಚಿತ ಮಾಹಿತಿಯನ್ನಾಧರಿಸಿ  ಬಂಟ್ವಾಳ ನ್ಯಾಯಾಲಯದ ನ್ಯಾಯಾಧೀಶರ  ಅನುಮತಿಯೊಂದಿಗೆ ಬಂಟ್ವಾಳ ಎಎಸ್ಪಿ ಸೈದುಲ್ ಅಡಾವತ್, ನಗರ ಠಾಣೆಯೆ ಎಸ್. ಐ.ಗಳಾದ ಚಂದ್ರಶೇಖರ್,ಸುಧಾಕರ ತೋನ್ಸೆ ಹಾಗೂ ಸಂಚಾರಿಠಾಣೆಯ ಎಸ್ .ಐ. ಮಂಜುನಾಥ್ ಮತ್ತು ಸಿಬಂದಿಗಳು ಮಿಂಚಿನ ದಾಳಿ  ಕಾರ್ಯಾಚರಣೆ  ನಡೆಸಿ ತಪಾಸಣೆ ನಡೆಸಿದಾಗ  ಕ್ಲಬ್ ಗೆ ಯಾವುದೇ ಪರವಾನಿಗೆ ಇಲ್ಲದಿರುವುದು ಮತ್ತು ಉಚ್ಚ ನ್ಯಾಯಾಲಯದ ನಿಯಮವನ್ನು ಉಲ್ಲಂಘಿಸಿ ಜೂಜಾಡುತ್ತಿರುವುದು ಕಂಡು ಬಂದಿದೆ.                   ತಕ್ಷಣ   ಕ್ಲಬ್ ನ ಮ್ಯಾನೇಜರ್ ಸಾಯಿ ಕಿರಣ್( 37) ಮಂಜೇಶ್ವರ ಈತನ ಸಹಿತ ಜೂಜಾಟದಲ್ಲಿ ನಿರತರಾಗಿದ್ದ 70 ಮಂದಿಯನ್ನು ವಶಕ್ಕೆ ಪಡೆದುಕೊಂಡಿದ್ದಾರೆ ಹಾಗೆಯೇ  ಜೂಜಾಟಕ್ಕೆ  ಪಣವಾಗಿಟ್ಟಿದ್ದ  72,100 ರೂ. ಮತ್ತು 1 ಲಕ್ಷ ರೂ ಮೌಲ್ಯದ  ವಿವಿಧ ಕಂಪನಿಯ 51  ಮೊಬೈಲುಗಳು  , ಒಂದು ಪೆನ್ನು, 52 ಇಸ್ಪೀಟು ಎಲೆಗಳು, 2 ಡಿವಿಆರ್ ಗಳು, ಒಂದು ರೌಂಡ್ ಟೇಬಲ್, 7 ಕುರ್ಚಿಗಳನ್ನು ಮುಟ್ಟುಗೋಲು ಹಾಕಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಬಗ್ಗೆ ಬಂಟ್ವಾಳ ನಗರ  ಠಾಣೆಯಲ್ಲಿ  ಪ್ರಕರಣ ದಾಖಲಾಗಿ,ಮುಂದಿನ ತನಿಖೆ ನಡೆಯುತ್ತಿದೆ.

More from the blog

5 ವರ್ಷದ ಮಗುವಿನ ಚಿಕಿತ್ಸೆಗೆ ಸಂಗಬೆಟ್ಟು ಗ್ರಾ. ಪಂ ವತಿಯಿಂದ ಸಹಾಯಧನದ ಚೆಕ್ ಹಸ್ತಾಂತರ.. 

ಬಂಟ್ವಾಳ : ತಾಲೂಕಿನ ಕರ್ಪೆ ಗ್ರಾಮದ ಕುಟ್ಟಿಕಳ ನಿವಾಸಿ ಹಿರಣ್ಯಾಕ್ಷ ಶಾಂತಿ ಹಾಗೂ ಸೌಮ್ಯ ದಂಪತಿಗಳ 5 ವರ್ಷದ ಪುಟ್ಟ ಹೆಣ್ಣು ಮಗು ಮನಸ್ವಿಳಿಗೆ ಅರೋಗ್ಯದಲ್ಲಿ ರಕ್ತದ ಕ್ಯಾನ್ಸರ್ ಇರುವುದರಿಂದ ಅರೋಗ್ಯದ ವೆಚ್ಚಕ್ಕಾಗಿ...

Old Bridge : ಮಂಗಳೂರು ಎನ್.ಐ.ಟಿ.ಕೆ ಸಂಸ್ಥೆ ಅಧಿಕಾರಿಗಳಿಂದ ಪಾಣೆಮಂಗಳೂರು ಹಳೆ ಸೇತುವೆಯ ಸಾಮರ್ಥ್ಯ ಪರೀಕ್ಷೆ

ಬಂಟ್ವಾಳ: ಬ್ರಿಟಿಷ್ ಕಾಲದ ಪಾಣೆಮಂಗಳೂರು ಸೇತುವೆಯ ಸಾಮರ್ಥ್ಯ ಪರೀಕ್ಷೆ ನಡೆಸುವ ಉದ್ದೇಶದಿಂದ ಮಂಗಳೂರು ಎನ್.ಐ.ಟಿ.ಕೆ ಸಂಸ್ಥೆಯಿಂದ ಇಬ್ಬರು ಅಧಿಕಾರಿಗಳು ಆಗಮಿಸಿ, ಜಿಲ್ಲಾಧಿಕಾರಿ ಅವರಿಗೆ ವರದಿ ನೀಡಿದ್ದಾರೆ. ಹಳೆ ಸೇತುವೆ ಬಗ್ಗೆ ಸ್ಥಳ ವೀಕ್ಷಣೆಗೆ ಏನ್...

ಕುದ್ರೋಳಿಯಲ್ಲಿ ವಿಶ್ವಶಾಂತಿಗಾಗಿ ಶತ ಸೀಯಾಳಾಭಿಷೇಕ..

ಮಂಗಳೂರು: ಜಗತ್ತಿನಾದ್ಯಂತ ಯುದ್ಧದ ಕಾರ್ಮೋಡ ಆವರಿಸಿರುವುದರಿಂದ ವಿಶ್ವ ಶಾಂತಿಗಾಗಿ ಶ್ರೀ ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನ ಆಡಳಿತ ಮತ್ತು ಅಭಿವೃದ್ಧಿ ಸಮಿತಿ ನೇತೃತ್ವದಲ್ಲಿ ಗುರುವಾರ ಬೆಳಗ್ಗೆ ಶತ ಸೀಯಾಳಾಭಿಷೇಕ, ಮಹಾರುದ್ರಾಭಿಷೇಕ ಮತ್ತು ವಿಶೇಷ...

Bantwal : ಮಾದಕ ದ್ರವ್ಯ ಮುಕ್ತ ಸಮಾಜಕ್ಕಾಗಿ” ಅಭಿಯಾನ – 2025 ಕಾರ್ಯಕ್ರಮ..

ಬಂಟ್ವಾಳ: ದ.ಕ.ಜಿಲ್ಲಾ ಪೋಲೀಸ್ ಇಲಾಖೆ, ಬಂಟ್ವಾಳ ವೃತ್ತದ ಪೋಲೀಸ್ ಠಾಣೆಯ ಹಾಗೂ ಶಿಕ್ಷಣ ಇಲಾಖೆ, ರೋಟರಿ ಕ್ಲಬ್ ಬಂಟ್ವಾಳ ಲೊರೆಟ್ಟೊ ಹಿಲ್ಸ್, ಬಂಟ್ವಾಳ ಟೌನ್ ಮೊಡಂಕಾಪು ಇವರ ಸಂಯುಕ್ತ ಆಶ್ರಯದಲ್ಲಿ " ಮಾದಕ...