Monday, February 10, 2025

ರಿಕೃಷೇಯನ್ ಕ್ಲಬ್ ಗೆ ಪೊಲೀಸ್ ದಾಳಿ : ಮೆನೇಜರ್ ಸಹಿತ 70 ಮಂದಿ ವಶಕ್ಕೆ

ಬಂಟ್ವಾಳ: ಪಾಣೆಮಂಗಳೂರು ಸಮೀಪದ ಮೆಲ್ಕಾರ್ ನಲ್ಲಿರುವ ಪ್ರಸನ್ನ ಕಾಂಪ್ಲೆಕ್ಸ್ ನಲ್ಲಿರುವ ರೀಕೃಷಿಯೇಷನ್ ಕ್ಲಬ್ ಗೆ ಬಂಟ್ವಾಳ ನಗರ ಠಾಣೆಯ ಪೊಲೀಸರು ಶನಿವಾರ ಸಂಜೆ ದಾಳಿ ನಡೆಸಿ ಅನಧಿಕೃತವಾಗಿ ಹಣವನ್ನು ಪಣ ವಾಗಿಟ್ಟು ಜೂಜಾಟದಲ್ಲಿ ನಿರತರಾಗಿದ್ದ 70 ಮಂದಿಯನ್ನು ವಶಕ್ಕೆ ಪಡೆದು,   ನಗದು ಸಹಿತ  ಲಕ್ಷಾಂತರ ರೂ.ಮೌಲ್ಯದ ಸೊತ್ತನ್ನು ಮುಟ್ಟುಗೋಲು ಹಾಕಿದ್ದಾರೆ.
                 ಖಚಿತ ಮಾಹಿತಿಯನ್ನಾಧರಿಸಿ  ಬಂಟ್ವಾಳ ನ್ಯಾಯಾಲಯದ ನ್ಯಾಯಾಧೀಶರ  ಅನುಮತಿಯೊಂದಿಗೆ ಬಂಟ್ವಾಳ ಎಎಸ್ಪಿ ಸೈದುಲ್ ಅಡಾವತ್, ನಗರ ಠಾಣೆಯೆ ಎಸ್. ಐ.ಗಳಾದ ಚಂದ್ರಶೇಖರ್,ಸುಧಾಕರ ತೋನ್ಸೆ ಹಾಗೂ ಸಂಚಾರಿಠಾಣೆಯ ಎಸ್ .ಐ. ಮಂಜುನಾಥ್ ಮತ್ತು ಸಿಬಂದಿಗಳು ಮಿಂಚಿನ ದಾಳಿ  ಕಾರ್ಯಾಚರಣೆ  ನಡೆಸಿ ತಪಾಸಣೆ ನಡೆಸಿದಾಗ  ಕ್ಲಬ್ ಗೆ ಯಾವುದೇ ಪರವಾನಿಗೆ ಇಲ್ಲದಿರುವುದು ಮತ್ತು ಉಚ್ಚ ನ್ಯಾಯಾಲಯದ ನಿಯಮವನ್ನು ಉಲ್ಲಂಘಿಸಿ ಜೂಜಾಡುತ್ತಿರುವುದು ಕಂಡು ಬಂದಿದೆ.                   ತಕ್ಷಣ   ಕ್ಲಬ್ ನ ಮ್ಯಾನೇಜರ್ ಸಾಯಿ ಕಿರಣ್( 37) ಮಂಜೇಶ್ವರ ಈತನ ಸಹಿತ ಜೂಜಾಟದಲ್ಲಿ ನಿರತರಾಗಿದ್ದ 70 ಮಂದಿಯನ್ನು ವಶಕ್ಕೆ ಪಡೆದುಕೊಂಡಿದ್ದಾರೆ ಹಾಗೆಯೇ  ಜೂಜಾಟಕ್ಕೆ  ಪಣವಾಗಿಟ್ಟಿದ್ದ  72,100 ರೂ. ಮತ್ತು 1 ಲಕ್ಷ ರೂ ಮೌಲ್ಯದ  ವಿವಿಧ ಕಂಪನಿಯ 51  ಮೊಬೈಲುಗಳು  , ಒಂದು ಪೆನ್ನು, 52 ಇಸ್ಪೀಟು ಎಲೆಗಳು, 2 ಡಿವಿಆರ್ ಗಳು, ಒಂದು ರೌಂಡ್ ಟೇಬಲ್, 7 ಕುರ್ಚಿಗಳನ್ನು ಮುಟ್ಟುಗೋಲು ಹಾಕಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಬಗ್ಗೆ ಬಂಟ್ವಾಳ ನಗರ  ಠಾಣೆಯಲ್ಲಿ  ಪ್ರಕರಣ ದಾಖಲಾಗಿ,ಮುಂದಿನ ತನಿಖೆ ನಡೆಯುತ್ತಿದೆ.

More from the blog

ಬೆಳ್ತಂಗಡಿ : ಗ್ರಾಮ ಆಡಳಿತಾಧಿಕಾರಿಗಳಿಂದ 2 ನೇ ಹಂತದ ಅನಿರ್ದಿಷ್ಟಾವಧಿ ಮುಷ್ಕರ

ಬೆಳ್ತಂಗಡಿ : ಕರ್ನಾಟಕ ರಾಜ್ಯ ಗ್ರಾಮ ಆಡಳಿತ ಅಧಿಕಾರಿಗಳ ಸಮಸ್ಯೆಗಳು ಮತ್ತು ಬೇಡಿಕೆಗಳ ಈಡೇರಿಕೆಗಾಗಿ ಆಗ್ರಹಿಸಿ ಕರ್ನಾಟಕ ರಾಜ್ಯ ಗ್ರಾಮ ಆಡಳಿತ ಅಧಿಕಾರಿಗಳ ಕೇಂದ್ರ ಸಂಘದ ಮೇರೆಗೆ ಫೆ. 10 ರಿಂದ ಬೆಳ್ತಂಗಡಿಯಲ್ಲಿ...

ಶಾಸಕ ರಾಜೇಶ್ ನಾಯ್ಕ್ ನೇತೃತ್ವದಲ್ಲಿ ನಡೆಯಿತು ಪೂರ್ವಭಾವಿ ಸಭೆ

ಬಂಟ್ವಾಳ:  ಶ್ರೀ ರಾಜರಾಜೇಶ್ವರಿ ದೇವಸ್ಥಾನ ಪೊಳಲಿ ಇಲ್ಲಿ ನಡೆಯುವ ಶತಚಂಡಿಕಯಾಗದ ಹಾಗೂ ಕುಪ್ಪೆಟ್ಟು ಬರ್ಕೆ ಕರ್ಪೆ ಪ್ರತಿಷ್ಠಾ ಮಹೋತ್ಸವದ ಬಗ್ಗೆ ಪೂರ್ವಭಾವಿ ಸಭೆಯು ಕಡೆಗುಂಡ್ಯ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್...

ಯುವ ಸಂಗೀತೋತ್ಸವಕ್ಕೆ ಚಾಲನೆ

ಮಂಗಳೂರು: ಸಾಮಾಜಿಕ ಸ್ವಾಸ್ಥ್ಯ ಕ್ಕಾಗಿ ಮಾನಸಿಕ ನೆಮ್ಮದಿ ನೀಡುವಂತಹ ಸಂಗೀತ ಸಾಂಸ್ಕೃತಿಕ ಕಾರ್ಯಕ್ರಮಗಳು ಅಗತ್ಯವಿದೆ ಎಂದು ಕ್ಯಾ.ಬ್ರಿಜೇಶ್ ಚೌಟ ತಿಳಿಸಿದ್ದಾರೆ. ಅವರು ಮಂಗಳೂರಿನ ಕಲಾ ಸಾಧನ ಸಂಸ್ಥೆ ವತಿಯಿಂದ ನಗರದ ಟಿಎಂಎ ಪೈ ಇಂಟರ್‌ನ್ಯಾಶನಲ್...

ದೆಹಲಿಯಲ್ಲಿ ಬಿಜೆಪಿ ಭರ್ಜರಿ ಜಯಭೇರಿ…. ಸಿದ್ದಕಟ್ಟೆ ಪೇಟೆಯಲ್ಲಿ ಬಿಜೆಪಿ ಕಾರ್ಯಕರ್ತರಿಂದ ಪಟಾಕಿ ಸಿಡಿಸಿ ಸಂಭ್ರಮಾಚರಣೆ*

  ದೆಹಲಿ ವಿಧಾನ ಸಭೆಗೆ ನಡೆದ ಚುನಾವಣೆ ಯಲ್ಲಿ ಭಾರತೀಯ ಜನತಾ ಪಕ್ಷ 70 ಸ್ಥಾನ ಗಳಲ್ಲಿ ಬರೋಬ್ಬರಿ 48 ಸ್ಥಾನ ಗಳನ್ನು ಗೆಲ್ಲುವ ಮೂಲಕ ಭರ್ಜರಿ ಜಯಭೇರಿ ಗಳಿಸುವುದರೊಂದಿಗೆ ಪ್ರಧಾನಿ ನರೇಂದ್ರ ಮೋದಿಯವರ...