Thursday, February 13, 2025

ಅಧಿಕಾರಿಗಳು ಉತ್ತಮ ಸೇವೆ ನೀಡಿದ್ದಾರೆ: ಶಾಸಕ ರಾಜೇಶ್ ನಾಯ್ಕ್

ಬಂಟ್ವಾಳ, ಆ. ೧೨: ಬಂಟ್ವಾಳದ ಹಾನಿಯ ಕುರಿತಂತೆ ಸಂಪೂರ್ಣ ದಾಖಲೆಗಳನ್ನೊಳಗೊಂಡು ೩೦ ಕೋ.ರೂ.ಪರಿಹಾರ ಮೊತ್ತದ ಬೇಡಿಕೆಯನ್ನು ಸಿಎಂಗೆ ಸಲ್ಲಿಸಲಾಗಿದ್ದು, ಜತೆಗೆ ನೆರೆಯಿಂದ ಹಾನಿಯಾದ ಸಣ್ಣಪುಟ್ಟ ಅಂಗಡಿಯವರಿಗೂ ಪರಿಹಾರ ನೀಡಲು ಮನವಿಯಲ್ಲಿ ತಿಳಿಸಲಾಗಿದೆ ಎಂದು ಬಂಟ್ವಾಳ ಶಾಸಕ ರಾಜೇಶ್ ನಾಕ್ ಉಳಿಪ್ಪಾಡಿ ತಿಳಿಸಿದರು.
ಬಂಟ್ವಾಳ ಬಪಾಸ್‌ನಲ್ಲಿ ರಾಜ್ಯದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಮನವಿ ನೀಡಿದ ಬಳಿಕ ಪತ್ರಕರ್ತರ ಜತೆ ಮಾತನಾಡಿದ ಅವರು, ಮನೆಯಲ್ಲಿದ್ದ ಎಲೆಕ್ಟ್ರಾನಿಕ್ಸ್ ವಸ್ತುಗಳು ಹಾನಿಯಾಗಿದ್ದರೆ ಅದಕ್ಕೂ ಪರಿಹಾರ ನೀಡಲು ಜಿಲ್ಲಾಧಿಕಾರಿಗಳ ಬಳಿ ಸರ್ವೆ ಮಾಡಲು ತಿಳಿಸಿದ್ದಾರೆ. ಈ ಮೂಲಕ ದೊಡ್ಡ ಮೊತ್ತದ ಪರಿಹಾರವನ್ನು ಸಿಎಂ ನೀಡುವ ಭರವಸೆ ನೀಡಿದ್ದಾರೆ. ಹೀಗಾಗಿ ಅವರಿಗೆ ವಂದನೆಯನ್ನು ತಿಳಿಸುತ್ತಾ, ಬಂಟ್ವಾಳ ನೆರೆ ಸಂತ್ರಸ್ಥರ ಪರಿಹಾರಕ್ಕೆ ಇಲ್ಲಿನ ಅಧಿಕಾರಿಗಳು ಉತ್ತಮ ರೀತಿಯಲ್ಲಿ ಕೆಲಸ ನಿರ್ವಹಿಸಿದ್ದು, ಮುಂದೆಯೂ ಅವರು ಇದೇ ರೀತಿ ಕೆಲಸ ನಿರ್ವಹಿಸಬೇಕಿದೆ ಎಂದರು.

More from the blog

ಗ್ರಾಮ ಆಡಳಿತ ಅಧಿಕಾರಿಗಳ ಮುಷ್ಕರಕ್ಕೆ ಶಾಸಕ ರಾಜೇಶ್ ನಾಯ್ಕ್ ಬೆಂಬಲ

ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಅವರು ಗ್ರಾಮ ಆಡಳಿತ ಅಧಿಕಾರಿಗಳು ಸತತ ಮೂರನೇ ದಿನ ನಡೆಸುತ್ತಿರುವ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಬೆಂಬಲ ಸೂಚಿಸಿದ್ದಾರೆ. ಬಂಟ್ವಾಳ ತಾಲೂಕು ಆಡಳಿತ ಸೌಧದ ಮುಂಭಾಗ ಮುಷ್ಕರದ ಸ್ಥಳಕ್ಕೆ ಭೇಟಿ ನೀಡಿದ...

ಫೆ.15 ರಂದು ಕಮಲಾಶ್ರಯ ಮನೆಯ ಹಸ್ತಾಂತರ ಹಾಗೂ ಗೃಹಪ್ರವೇಶ

ಬಂಟ್ವಾಳ: ಬಿಜೆಪಿ ಮಹಾಶಕ್ತಿ ಕೇಂದ್ರ ಮಾಣಿ ಮತ್ತು ಬಿಜೆಪಿ ಶಕ್ತಿ ಕೇಂದ್ರ ಅನಂತಾಡಿ ಇದರ ಸಹಕಾರದಿಂದ ಅನಂತಾಡಿ ಗ್ರಾಮದ ಬಾಬನಕಟ್ಟೆ ಎಂಬಲ್ಲಿ ಬಲ್ಲು ಕೊರಗ ಇವರ ಕುಟುಂಬಕ್ಕೆ ನಿರ್ಮಿಸಲಾದ ನೂತನ ಮನೆಯನ್ನು ಫೆ.15...

ಬೇಲಿ ವಿವಾದ : ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಶಾಸಕ ರಾಜೇಶ್ ನಾಯ್ಕ್

ಬಂಟ್ವಾಳ: ತಾ.ಪಂ.ಅಧಿಕಾರಿ ವರ್ಗ ಕಚೇರಿ ಮುಂಭಾಗದ ಜಾಗಕ್ಕೆ ಕಬ್ಬಿಣದ ರಾಡ್ ಅಳವಡಿಸಿ ಬೇಲಿ ಹಾಕಿದ ವಿಚಾರಕ್ಕೆ ಸಂಬಂಧಿಸಿದಂತೆ ಸಾರ್ವಜನಿಕ ದೂರಿನ ಹಿನ್ನೆಲೆಯಲ್ಲಿ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ತಾ.ಪಂ.ಗೆ ಹಠಾತ್...

ವಿಟ್ಲ ಪಿಎಂ ಶ್ರೀ ಸರಕಾರಿ ಪ್ರೌಢ ಶಾಲೆಯಲ್ಲಿ ಮೆಟ್ರಿಕ್ ಮೇಳ

ವಿಟ್ಲ: ವಿಟ್ಲ ಪಿ ಎಂ ಶ್ರೀ ಸರಕಾರಿ ಪ್ರೌಢ ಶಾಲೆ (ಆರ್ ಎಂ ಎಸ್ ಎಂ)ವಿಟ್ಲ ಇದರ ಪ್ರಾಥಮಿಕ ಶಾಲಾ ವಿಭಾಗದಲ್ಲಿ ಬುಧವಾರ ಮೆಟ್ರಿಕ್ ಮೇಳ ಕಾರ್ಯಕ್ರಮ ನಡೆಯಿತು. ಮೆಟ್ರಿಕ್ ಮೇಳವನ್ನು ವಿಟ್ಲ ಪಟ್ಟಣ...