Thursday, February 13, 2025

ಕಾಂಗ್ರೆಸ್‌ ಕಾರ್ಯಕರ್ತರ ರಾಜ್ಯಮಟ್ಟದ ಸಮಾವೇಶ : ವಾಹನ ಸಂಚಾರ ಬದಲಾವಣೆ  

ಮಂಗಳೂರು: ಮಂಗಳೂರಿನ ಅಡ್ಯಾರ್‌ ಸಹ್ಯಾದ್ರಿ ಕಾಲೇಜು ಮೈದಾನದಲ್ಲಿ ಇಂದು ನಡೆಯಲಿರುವ ಕಾಂಗ್ರೆಸ್‌ ಕಾರ್ಯಕರ್ತರ ರಾಜ್ಯಮಟ್ಟದ ಸಮಾವೇಶದ ಹಿನ್ನೆಲೆಯಲ್ಲಿ ಘನ ವಾಹನಗಳ ಸಂಚಾರದ ಮಾರ್ಗ ಬದಲಾವಣೆ ಮಾಡಲಾಗಿದೆ.

ಉಡುಪಿ ಕಡೆಯಿಂದ ಮಂಗಳೂರು ನಗರದ ಮೂಲಕ ಬಿ.ಸಿ.ರೋಡ್‌/ಬೆಂಗಳೂರು ಕಡೆಗೆ ಸಂಚರಿಸುವ ಘನ ವಾಹನಗಳು ನಂತೂರು-ಪಂಪ್‌ವೆಲ್‌-ತೊಕ್ಕೊಟ್ಟು-ಮುಡಿಪು-ಮೆಲ್ಕಾರ್‌ ಮೂಲಕ ಸಂಚರಿಸಬೇಕು.

ಬೆಂಗಳೂರು / ಬಿ.ಸಿ.ರೋಡ್‌ ಕಡೆಯಿಂದ ಮಂಗಳೂರು ಕಡೆಗೆ ಸಂಚರಿಸುವ ಘನ ವಾಹನಗಳು ಮೆಲ್ಕಾರ್‌-ಮುಡಿಪು-ತೊಕ್ಕೊಟ್ಟು-ಪಂಪ್‌ವೆಲ್‌ ಮೂಲಕ ಸಂಚರಿಸಬೇಕು. ಈ ಸಂಚಾರ ಮಾರ್ಪಾಡು ಫೆ.17ರಂದು ಬೆಳಗ್ಗೆ 9ರಿಂದ ಕಾರ್ಯಕ್ರಮ ಮುಗಿಯುವವರೆಗೆ ಇರುತ್ತದೆ.

ವಾಹನ ಪಾರ್ಕಿಂಗ್‌
ಕಾರ್ಯಕ್ರಮಕ್ಕೆ ಬಂಟ್ವಾಳ ಕಡೆಯಿಂದ ಬರುವ ಗಣ್ಯರ ಕಾರುಗಳು ಹಾಗೂ ಸಾರ್ವಜನಿಕರ ದ್ವಿಚಕ್ರ ವಾಹನಗಳನ್ನು ಕಾಮತ್‌ ಮೈದಾನದಲ್ಲಿ, ಬಂಟ್ವಾಳ ಕಡೆಯಿಂದ ಬರುವ ಸಾರ್ವಜನಿಕರ ಕಾರುಗಳನ್ನು ಅಡ್ಯಾರ್‌ನ ಕರ್ಮಾರ್‌ ಮೈದಾನದಲ್ಲಿ ಪಾರ್ಕಿಂಗ್‌ ಮಾಡಬೇಕು. ಬಂಟ್ವಾಳ ಕಡೆಯಿಂದ ಬರುವ ಬಸ್‌ಗಳು ಕಾರ್ಯಕರ್ತರನ್ನು ಕಾಮತ್‌ ಪಾರ್ಕಿಂಗ್‌ ಬಳಿ ಇಳಿಸಿ ಅಲ್ಲಿಂದ ಮುಂದುವರಿದು ಕಣ್ಣೂರಿನಲ್ಲಿ ಯೂ ಟರ್ನ್ ಮಾಡಿ ಮೋತಿಶ್ಯಾಮ್‌/ಷಾ ಮೈದಾನದಲ್ಲಿ ನಿಲುಗಡೆಯಾಗಬೇಕು.

ಮಂಗಳೂರು ಕಡೆಯಿಂದ ಬರುವ ಗಣ್ಯರ ಕಾರುಗಳನ್ನು ಅಡ್ಯಾರ್‌ ಗಾರ್ಡನ್‌ನಲ್ಲಿ ಪಾರ್ಕಿಂಗ್‌ ಮಾಡಬೇಕು. ಮಂಗಳೂರು ಕಡೆಯಿಂದ ಬರುವ ಬಸ್‌ಗಳು ಕಾರ್ಯಕರ್ತರನ್ನು ಅಡ್ಯಾರ್‌ ಗಾರ್ಡನ್‌ ಮುಂಭಾಗ ಇಳಿಸಿ ಸೋಮನಾಥಕಟ್ಟೆಯಲ್ಲಿ ಯೂ ಟರ್ನ್ ಆಗಿ ಕಣ್ಣೂರು ಮಸೀದಿ ಬಳಿ ಇರುವ ಷಾ ಮೈದಾನದಲ್ಲಿ ನಿಲುಗಡೆಯಾಬೇಕು.

ಮಂಗಳೂರು ಕಡೆಯಿಂದ ಬರುವ ದ್ವಿಚಕ್ರ ವಾಹನಗಳನ್ನು ಅಡ್ಯಾರ್‌ ಗಾರ್ಡನ್‌ ಮೈದಾನದಲ್ಲಿ ಪಾರ್ಕಿಂಗ್‌ ಮಾಡಬೇಕು. ಅಡ್ಯಾರ್‌ ಕಟ್ಟೆಯಲ್ಲಿರುವ ಜಯಶೀಲ ಅವರ ಮೈದಾನದಲ್ಲಿ ಕೂಡ ಪಾರ್ಕಿಂಗ್‌ ಮಾಡಲು ಅವಕಾಶ ಮಾಡಿಕೊಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

More from the blog

ಗ್ರಾಮ ಆಡಳಿತ ಅಧಿಕಾರಿಗಳ ಮುಷ್ಕರಕ್ಕೆ ಶಾಸಕ ರಾಜೇಶ್ ನಾಯ್ಕ್ ಬೆಂಬಲ

ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಅವರು ಗ್ರಾಮ ಆಡಳಿತ ಅಧಿಕಾರಿಗಳು ಸತತ ಮೂರನೇ ದಿನ ನಡೆಸುತ್ತಿರುವ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಬೆಂಬಲ ಸೂಚಿಸಿದ್ದಾರೆ. ಬಂಟ್ವಾಳ ತಾಲೂಕು ಆಡಳಿತ ಸೌಧದ ಮುಂಭಾಗ ಮುಷ್ಕರದ ಸ್ಥಳಕ್ಕೆ ಭೇಟಿ ನೀಡಿದ...

ಅಕ್ರಮ ಮಸೀದಿ ನಿರ್ಮಾಣ ಆರೋಪ: ಕರಿಯಂಗಳ ಗ್ರಾ.ಪಂ.ಗೆ ಮುತ್ತಿಗೆ

ಬಂಟ್ವಾಳ: ಗ್ರಾಮ ಪಂಚಾಯತ್ ಅನುಮತಿ ಇಲ್ಲದೆ ಅಕ್ರಮವಾಗಿ ಸರಕಾರಿ ಜಾಗದಲ್ಲಿ ಕಟ್ಟಡ ನಿರ್ಮಿಸಿ ಅದರಲ್ಲಿ ಮದರಸ ಮಾಡಲು ಮುಂದಾಗಿದ್ದರೆ ಎಂದು ಆರೋಪಿಸಿದ ಗ್ರಾಮಸ್ಥರು ಇದನ್ನು ತಡೆಯುವಂತೆ ಗ್ರಾಮ ಪಂಚಾಯತ್ ಗೆ ಮುತ್ತಿಗೆ ಹಾಕಿದ...

ಪುರಸಭೆ ಎಡವಿದೆಲ್ಲಿ? ಬ್ಯಾನರ್ ವಿವಾದ!

ಬಂಟ್ವಾಳ: ಬಂಟ್ವಾಳ ಪುರಸಭೆ ನಿಯಮ ಉಲ್ಲಂಘಿಸಿ ಹಾಕಲಾದ ಫ್ಲೆಕ್ಸ್ ತೆರವು ಕಾರ್ಯಾಚರಣೆಯನ್ನು ತಡವಾಗಿ ಪ್ರಾರಂಭಿಸಿದೆ. ಜನವರಿ 29ರಂದು ಪುರಸಭೆಯ ಸಾಮಾನ್ಯ ಸಭೆಯಲ್ಲಿ ಈ ಕುರಿತು ಪುರಸಭೆಯ ಮುಖ್ಯಾಧಿಕಾರಿ ತೆರವು ಕಾರ್ಯಾಚರಣೆ ನಡೆಸುವುದಾಗಿ ಘೋಷಿಸಿ,...

ಸರಕಾರಿಯೋ, ತಾ.ಪಂ.ಗೆ ಸೇರಿದ ಜಾಗವೋ? ಇದೊಂದು ಬೇಲಿಯ ಕಥೆ!

ಬಂಟ್ವಾಳ: ತಾ.ಪಂ.ಅಧಿಕಾರಿ ವರ್ಗ ಕಚೇರಿ ಮುಂಭಾಗದ ಜಾಗಕ್ಕೆ ಕಬ್ಬಿಣದ ರಾಡ್ ಗಳ ಮೂಲಕ ಬೇಲಿ ಹಾಕಿದ್ದು, ಇದಿಗ ಈ ಜಾಗವು ಸರಕಾರಿ ಯೋ, ಅಥವಾ ತಾಲೂಕು ಪಂಚಾಯತ್ ಗೆ ಸೇರಿದ್ದೊ ಎಂಬ ಚರ್ಚೆಗೆ...