Wednesday, February 4, 2026

*ಬ್ರಾಹ್ಮಣ ಪರಿಷತ್ತಿನಿಂದ ನಟ ಚೇತನ್ ವಿರುದ್ಧ ಬಂಟ್ವಾಳ ನಗರ ಠಾಣೆಗೆ ದೂರು*

ಬಂಟ್ವಾಳ: ಜಾಲತಾಣಗಳಲ್ಲಿ ಬ್ರಾಹ್ಮಣ ಸಮಾಜದ ವಿರುದ್ಧ ಅವಹೇಳನಕಾರಿ ಮಾತುಗಳನ್ನುಜ ಪ್ರಚುರಪಡಿಸಿ, ಸಾಮಾಜಿಕ ಅಶಾಂತಿಯನ್ನು ನಟ ಚೇತನ್ ಮಾಡುತ್ತಿದ್ದಾರೆ ಎಂದು ಆರೋಪಿಸಿ ಬಂಟ್ವಾಳ ತಾಲೂಕು ಬ್ರಾಹ್ಮಣ ಪರಿಷತ್ತು ಬಂಟ್ವಾಳ ನಗರ ಪೊಲೀಸ್ ಆರಕ್ಷಕ ಉಪನಿರೀಕ್ಷಕರಿಗೆ ಶುಕ್ರವಾರ ದೂರು ಸಲ್ಲಿಸಿದೆ.

ಪರಿಷತ್ತಿನ ಅಧ್ಯಕ್ಷ ರಮೇಶ್ ಉಪಾಧ್ಯಾಯ, ಪ್ರಧಾನ ಕಾರ್ಯದರ್ಶಿ ಪ್ರಕಾಶ ನಾರಾಯಣ ಜೆಡ್ಡು, ಗಿರೀಶ್ ಮುಳಿಯಾಲ, ಕುಂಜಾರು ಪ್ರಸನ್ನ ಮಯ್ಯ ಈ ಸಂದರ್ಭ ಉಪಸ್ಥಿತರಿದ್ದರು. ಇತ್ತೀಚೆಗೆ ಚೇತನ್ ಹಿಂದು ಸಮಾಜದ ಅವಿಭಾಜ್ಯ ಅಂಗವಾಗಿರುವ ಬ್ರಾಹ್ಮಣರ ವಿರುದ್ಧ ದ್ವೇಷಭರಿತ ಮಾತುಗಳನ್ನಾಡಿದ್ದು, ಆಧ್ಯಾತ್ಮಿಕ ಭಯೋತ್ಪಾದನೆ ಎಂದು ಬ್ರಾಹ್ಮಣ ಚಟುವಟಿಕೆಗಳಿಗೆ ಹೆಸರು ನೀಡಿ, ಬ್ರಾಹ್ಮಣರನ್ನು ಭಯೋತ್ಪಾದಕರು ಎಂಬಂತೆ ಬಿಂಬಿಸಿದ್ದಾರೆ ಎಂದು ಆರೋಪಿಸಿರುವ ಪರಿಷತ್ತು, ಈ ಮೂಲಕ ಬ್ರಾಹ್ಮಣ ಸಮಾಜಕ್ಕೆ ಸೇರಿದ ನಮ್ಮ ಭಾವನೆಗಳಿಗೆ ಧಕ್ಕೆಯನ್ನುಂಟುಮಾಡಿದ್ದು, ಸಮಾಜದ ಉಳಿದವರು ಬ್ರಾಹ್ಮಣರನ್ನು ದ್ವೇಷಿಸುವಂತೆ ಮಾಡುವ ಉದ್ದೇಶ ಇದರ ಹಿಂದಡಗಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ಈಗಾಗಲೇ ರಾಷ್ಟ್ರೀಯ ಮುಸ್ಲಿಂ ಮೋರ್ಚಾ ಎಂಬ ಸಂಘಟನೆ ಆರೋಪಿ ಪರವಾಗಿ ಹೇಳಿಕೆ ನೀಡಿ, ನಮ್ಮ ದೇಶವನ್ನು ಬ್ರಾಹ್ಮಣಮುಕ್ತ ದೇಶವನ್ನಾಗಿ ಮಾಡುವುದಾಗಿ ದ್ವೇಷಭರಿತ ಹೇಳಿಕೆಗಳನ್ನು ನೀಡಿ, ಸಮಾಜದಲ್ಲಿ ಅಶಾಂತಿಯನ್ನು ಪ್ರಚೋದಿಸುವ ಕೆಲಸವನ್ನು ಮಾಡುತ್ತಿರುವುದು ಆರೋಪಿಯ ಪ್ರಚೋದನಾತ್ಮಕ ಕೃತ್ಯಕ್ಕೆ ಉದಾಹರಣೆಯಾಗಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

More from the blog

ಅಪರಾಧಿಗಳ ಪತ್ತೆ ಮಾಡಲು ಅಶಕ್ತವಾದ ಪೊಲೀಸ್ ಇಲಾಖೆ ಬೆಳ್ತಂಗಡಿಗೆ ಅಗತ್ಯ ಇಲ್ಲ – ಸಿಪಿಐಎಂ

ಬೆಳ್ತಂಗಡಿ : ತಾಲೂಕಲ್ಲಿ ಅತ್ಯಾಚಾರ, ಕೊಲೆ, ಅಪಹರಣ, ದರೋಡೆ ಏನೇ ಆದರೂ ಪತ್ತೆಯಾಗದ ಪ್ರಕರಣಗಳಾಗುತ್ತಿರುವುದು ಸರಕಾರಕ್ಕೆ ಒಂದು ಕಪ್ಪು ಚುಕ್ಕೆಯಾಗಿದೆ ಮತ್ತು ಅಪರಾಧಿಗಳ ಪತ್ತೆ ಮಾಡಲು ಅಶಕ್ತವಾದ ಪೋಲೀಸ್ ಇಲಾಖೆ ಬೆಳ್ತಂಗಡಿಗೆ ಅಗತ್ಯ...

ಕುದ್ರೆಬೆಟ್ಟು : ರಿಕ್ಷಾ ಹಾಗೂ ಸ್ಕೂಟರ್ ನಡುವೆ ಅಪಘಾತ – ನಾಲ್ವರಿಗೆ ಗಾಯ

ಬಂಟ್ವಾಳ: ಕಲ್ಲಡ್ಕ ಸಮೀಪದ ಕುದ್ರೆಬೆಟ್ಟು ಮೇಲತ್ಸುವೆಯ ಕೊನೆಯ ಭಾಗದಲ್ಲಿ ರಿಕ್ಷಾ ಹಾಗೂ ಸ್ಕೂಟರ್ ನಡುವೆ ಅಪಘಾತ ಸಂಭವಿಸಿದ್ದು, ನಾಲ್ವರು ಗಾಯಗೊಂಡ ಘಟನೆ ನಡೆದಿದೆ. ರಿಕ್ಷಾದಲ್ಲಿ ಪ್ರಯಾಣಿಕರಾಗಿದ್ದ ಅಳಕೆಮಜಿಲು ನಿವಾಸಿ ಅವ್ವಮ್ಮ ಹಾಗೂ ಸುಹೈಲ್ ರಿಕ್ಷಾ...

ಕಟೀಲು 7 ಮೇಳಗಳ ಫೆ.04ರ ಸೇವೆಯಾಟಗಳ ವಿವರ ಇಲ್ಲಿದೆ..

ಮಂಗಳೂರು: ಕಟೀಲು ಶ್ರೀ ದುರ್ಗಾಪರಮೇಶ್ವರೀ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿ ಇದರ  7 ಮೇಳಗಳ ಫೆ.04ರ ಸೇವೆಯಾಟಗಳ ವಿವರ ಈ ಕೆಳಗಿನಂತಿವೆ.. ಫೆ.04ರ ಸೇವೆಯಾಟಗಳ ವಿವರ : ದೀಪಕ್ ಶೆಟ್ಟಿ, ಬೈಲುತೇಂಜ ಹೌಸ್, ಕಂದಾವರ,...

ಗೋಳ್ತಮಜಲು : ಮಲ ತ್ಯಾಜ್ಯ ನಿರ್ವಹಣಾ ಘಟಕದ ನಿರ್ವಹಣೆಯಲ್ಲಿ ಎಡವಿತಾ ಸ್ಥಳೀಯಾಡಳಿತ?

ಬಂಟ್ವಾಳ: ತಾಲೂಕಿನ ಗೋಳ್ತಮಜಲು ಗ್ರಾಮದ ಕಲ್ಲಡ್ಕ ಸಮೀಪದ ಚಿಮಿಣಿಗುರಿಯಲ್ಲಿ ನಿರ್ಮಾಣಗೊಂಡಿರುವ ಬಹುಗ್ರಾಮ ಮಲ ತ್ಯಾಜ್ಯ ನಿರ್ವಹಣಾ ಘಟಕಕ್ಕೆ ನಿರೀಕ್ಷಿತ ಪ್ರಮಾಣದಲ್ಲಿ ಸಾಮರ್ಥ್ಯದಷ್ಟು ತ್ಯಾಜ್ಯದ ಲೋಡ್ ಬಾರದೇ ಇದ್ದು, ಘಟಕದ ವ್ಯಾಪ್ತಿಗೆ ಬರುವ ಸ್ಥಳೀಯಾಡಳಿತಗಳು...