ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ವತಿಯಿಂದ ಮಣಿನಾಲ್ಕೂರು ಗ್ರಾಮ ಪಂಚಾಯತ್ಗೆ ಒಳಪಟ್ಟ ಬೂತ್ ಅಧ್ಯಕ್ಷರುಗಳ ಮನೆ ಭೇಟಿ ನಮ್ಮ ನಡೆ ಬೂತ್ ಕಡೆ ಕಾರ್ಯಕ್ರಮವು ಮಾಜಿ ಸಚಿವ ಶ್ರೀ ಬಿ ರಮಾನಾಥ ರೈಯವರ ಮಾರ್ಗದರ್ಶನದಲ್ಲಿ ನಡೆಯಿತು. ಬೂತ್ ಅಧ್ಯಕ್ಷರ ನಿವಾಸದಲ್ಲಿ ತೆಂಗಿನ ಸಸಿ ನೆಟ್ಟು ಕಾಂಗ್ರೆಸ್ ಪಕ್ಷ ಕಲ್ಪವೃಕ್ಷ ಎಂಬ ಘೋಷಣೆಯೊಂದಿಗೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಕಾಂಗ್ರೆಸ್ ಪಕ್ಷವು ಎಲ್ಲಾ ವರ್ಗದ ಜನರ ಸರ್ವತೋಮಖ ಅಭಿವೃದ್ಧಿಗೆ ಕಾರಣಿಭೂತರಾಗಿ ಬಲಿಷ್ಠ ಭಾರತವನ್ನು ಕಟ್ಟುವಲ್ಲಿ ಕಾಂಗ್ರೆಸ್ ಪಕ್ಷದ ನಾಯಕರ ಪಾತ್ರ ಬಹಳ ಪ್ರಾಮುಖ್ಯವಾಗಿತ್ತು ಎಂದರು. ನನ್ನನ್ನು ಬಂಟ್ವಾಳ ಕ್ಷೇತ್ರದ ಶಾಸಕನನ್ನಾಗಿ ಮಾಡಿದ ಪಕ್ಷದ ಕಾರ್ಯಕರ್ತರ ಋಣವನ್ನು ಜನ್ಮಜನ್ಮಾಂತರದಲ್ಲಿ ಮರೆಯಲು ಸಾಧ್ಯವಿಲ್ಲ ಎಂದು ತಿಳಿಸುತ್ತಾ ಗದ್ಗರಿತರಾದರು. ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಬೇಬಿ ಕುಂದರ್ ಮಾತನಾಡಿ ಭವಿಷತ್ತಿನಲ್ಲಿ ಪಕ್ಷದ ಕಾರ್ಯಕರ್ತರ ಕಾರ್ಯವೈಖರಿಯನ್ನು ಪರಿಗಣಿಸಿ ಹಾಗೂ ಗುರುತಿಸಿ ಗೌರವಿಸುವ ಕಾರ್ಯಕ್ಕೆ ಒತ್ತು ಕೊಡಲಾಗುವುದು ಎಂದರು. ಈ ಸಂದರ್ಭದಲ್ಲಿ ವಲಯ ಅಧ್ಯಕ್ಷರಾದ ಎನ್ ಆದಂ ಕುಂಞ, ಬೂತ್ ಅಧ್ಯಕ್ಷರಾದ ಪೂವಪ್ಪ ಪೂಜಾರಿ ಅಗ್ಯೆಚಾರು, ಅಜಯ್ ಮೋರಸ್, ವಿಶ್ವನಾಥ ಪೂಜಾರಿ ನೇಲ್ಯಪಲ್ಕೆ, ನವೀನ್ ಪೂಜಾರಿ ಕೊಡಂಗೆ, ಮಾಜಿ ಜಿಲ್ಲಾ ಪಂಚಾಯತ್ ಸದಸ್ಯರಾದ ಪದ್ಮಶೇಖರ್ ಜೈನ್, ಯುವ ಕಾಂಗ್ರೆಸ್ ಅಧ್ಯಕ್ಷರಾದ ಸುರೇಶ್ ಪೂಜಾರಿ ಜೋರಾ, ಮಾಜಿ ತಾಲೂಕು ಪಂಚಾಯತ್ ಸದಸ್ಯರಾದ ಸಂಪತ್ ಕುಮಾರ್ ಶೆಟ್ಟಿ, ಪಂಚಾಯತ್ ಉಪಾಧ್ಯಕ್ಷರಾದ ಗೀತಾ ಅರಿಪಾಡಿ, ಪಂಚಾಯತ್ ಸದಸ್ಯರಾದ ಕಂಚಲಾಕ್ಷಿ, ಪ್ರೆಸಿಲ್ಲಾ, ಯೋಗೀಶ್ ಶೆಟ್ಟಿ, ಪ್ರೇಮ, ವಿಮಲ, ಫಾರೂಕ್ ಜಿ, ಶಿವಪ್ಪ ಪೂಜಾರಿ, ಮುಖಂಡರಾದ ವಿಶ್ವನಾಥ ಶೆಟ್ಟಿ ಕೊಳಂಬೆ, ಡೆನ್ನಿಸ್ ಮೋರಸ್, ಬಾಲಕೃಷ್ಣ ಪೂಜಾರಿ ಕೊಟ್ಟಿಂಜ, ಶ್ರೀಧರ ಪೂಜಾರಿ, ಶಿವರಾಮ ಶೆಟ್ಟಿ ದೋಟ, ಅಬ್ಬಾಸ್ ಅಂತರ, ಮೋಹನ್ ಕೊಲ್ಯ, ತಿಮ್ಮಪ್ಪ ಪೂಜಾರಿ ಕೊಡಂಗೆ, ನಿಖಿಲ್ ಶೆಟ್ಟಿ, ಸಾಹುಲ್ ಹಮೀದ್, ಅಬ್ದುಲ್ ಹಮೀದ್, ದಾವೂದ್, ಇಬ್ರಾಹಿಮ್ ಅಬ್ಬಾಸ್ ಕುಂಡೇವು ಮತ್ತಿತರರು ಉಪಸ್ಥಿತರಿದ್ದರು.


