Wednesday, February 12, 2025

ಬ್ಲಾಕ್ ಕಾಂಗ್ರೆಸ್ ವತಿಯಿಂದ ಸ್ವಾತಂತ್ರ್ಯ ಆಚರಣೆ

ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ವತಿಯಿಂದ 73 ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಲಾಯಿತು.
ಮಾಜಿ ಜಿಲ್ಲಾ ಉಸ್ತುವಾರಿ ಸಚಿವರಾದ ರಮಾನಾಥ ರೈ ಯವರು ದ್ವಜಾರೋಹಣ ಕಾರ್ಯಕ್ರಮವನ್ನು ನೆರವೇರಿಸಿ 72 ವರ್ಷಗಳ
ಹಿಂದೆ ನಮ್ಮ ದೇಶದ ಸ್ವಾತಂತ್ರ್ಯದ ಚಳುವಳಿಯಲ್ಲಿ ಭಾಗವಹಿಸಿದ ಮಹಣಿಯರ ತ್ಯಾಗ ಬಲಿದಾನವನ್ನು ಸ್ಮರಿಸಿದರು.
ಸ್ವಾತಂತ್ರ್ಯ ಹೋರಾಟದಲ್ಲಿ ಬಾಗಿಯಾದ ಮಹಾಣಿಯರ ಬಗ್ಗೆ ಅವಹೇಳನ ಮಾಡುವುದನ್ನು ಸಹಿಸಲು ಸಾದ್ಯವಿಲ್ಲ ನಾವೆಲ್ಲರೂ
ಒಗ್ಗಟ್ಟಾಗಿ ಬಲಿಷ್ಠ ಬಾರತವನ್ನು ಕಟ್ಟಲು ಪಣತೊಡೋಣ ಎಂದರು. ಸಾರ್ವಜನಿಕರಿಗೆ ಸಿಹಿ ತಿಂಡಿ ಹಂಚುವ ಮೂಲಕ
ಸಂಭ್ರಮಿಸಲಾಯಿತು. ಈ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ಅದ್ಯಕ್ಷರಾದ ಬೇಬಿ ಕುಂದರ್, ಪಾಣೆಮಂಗಳೂರು ಬ್ಲಾಕ್
ಅದ್ಯಕ್ಷರಾದ ಸುದೀಪ್ ಕುಮಾರ್ ಶೆಟ್ಟಿ, ಎ.ಪಿ.ಎಂ.ಸಿ ಅದ್ಯಕ್ಷರಾದ ಪದ್ಮನಾಭ ರೈ, ಪುರಸಭೆ ಸದಸ್ಯರಾದ ಗಂಗಾಧರ ಪೂಜಾರಿ,
ಮುಖಂಡರಾದ ಮೋಹನ್ ಗೌಡ ಕಲ್ಮಂಜ, ಚಿತ್ತರಾಂಜನ್ ಶೆಟ್ಟಿ, ವಿಶ್ವನಾಥ ಪೂಜಾರಿ ದೆಚ್ಚಾರು, ಪ್ರವೀಣ್ ಕಿಣಿ, ವೆಂಕಪ್ಪ
ಪೂಜಾರಿ, ಅಮ್ಮು ಅರಬ್ಬಿ ಗುಡ್ಡೆ, ಮಹಾಬಲ ಬಂಗೇರಾ, ಪ್ರಕಾಶ್ ಅರಬ್ಬಿ ಗುಡ್ಡೆ, ಡೆನ್ಜಿಲ್ ಹರ್ಮನ್ ನೊರೊನ್ನಾ, ಚಿಕ್ಕ ಅರಬ್ಬಿ
ಗುಡ್ಡೆ ಉಪಸ್ಥಿತರಿದ್ದರು.

More from the blog

ಗ್ರಾಮ ಆಡಳಿತ ಅಧಿಕಾರಿಗಳ ಮುಷ್ಕರಕ್ಕೆ ಶಾಸಕ ರಾಜೇಶ್ ನಾಯ್ಕ್ ಬೆಂಬಲ

ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಅವರು ಗ್ರಾಮ ಆಡಳಿತ ಅಧಿಕಾರಿಗಳು ಸತತ ಮೂರನೇ ದಿನ ನಡೆಸುತ್ತಿರುವ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಬೆಂಬಲ ಸೂಚಿಸಿದ್ದಾರೆ. ಬಂಟ್ವಾಳ ತಾಲೂಕು ಆಡಳಿತ ಸೌಧದ ಮುಂಭಾಗ ಮುಷ್ಕರದ ಸ್ಥಳಕ್ಕೆ ಭೇಟಿ ನೀಡಿದ...

ಫೆ.15 ರಂದು ಕಮಲಾಶ್ರಯ ಮನೆಯ ಹಸ್ತಾಂತರ ಹಾಗೂ ಗೃಹಪ್ರವೇಶ

ಬಂಟ್ವಾಳ: ಬಿಜೆಪಿ ಮಹಾಶಕ್ತಿ ಕೇಂದ್ರ ಮಾಣಿ ಮತ್ತು ಬಿಜೆಪಿ ಶಕ್ತಿ ಕೇಂದ್ರ ಅನಂತಾಡಿ ಇದರ ಸಹಕಾರದಿಂದ ಅನಂತಾಡಿ ಗ್ರಾಮದ ಬಾಬನಕಟ್ಟೆ ಎಂಬಲ್ಲಿ ಬಲ್ಲು ಕೊರಗ ಇವರ ಕುಟುಂಬಕ್ಕೆ ನಿರ್ಮಿಸಲಾದ ನೂತನ ಮನೆಯನ್ನು ಫೆ.15...

ಬೇಲಿ ವಿವಾದ : ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಶಾಸಕ ರಾಜೇಶ್ ನಾಯ್ಕ್

ಬಂಟ್ವಾಳ: ತಾ.ಪಂ.ಅಧಿಕಾರಿ ವರ್ಗ ಕಚೇರಿ ಮುಂಭಾಗದ ಜಾಗಕ್ಕೆ ಕಬ್ಬಿಣದ ರಾಡ್ ಅಳವಡಿಸಿ ಬೇಲಿ ಹಾಕಿದ ವಿಚಾರಕ್ಕೆ ಸಂಬಂಧಿಸಿದಂತೆ ಸಾರ್ವಜನಿಕ ದೂರಿನ ಹಿನ್ನೆಲೆಯಲ್ಲಿ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ತಾ.ಪಂ.ಗೆ ಹಠಾತ್...

ವಿಟ್ಲ ಪಿಎಂ ಶ್ರೀ ಸರಕಾರಿ ಪ್ರೌಢ ಶಾಲೆಯಲ್ಲಿ ಮೆಟ್ರಿಕ್ ಮೇಳ

ವಿಟ್ಲ: ವಿಟ್ಲ ಪಿ ಎಂ ಶ್ರೀ ಸರಕಾರಿ ಪ್ರೌಢ ಶಾಲೆ (ಆರ್ ಎಂ ಎಸ್ ಎಂ)ವಿಟ್ಲ ಇದರ ಪ್ರಾಥಮಿಕ ಶಾಲಾ ವಿಭಾಗದಲ್ಲಿ ಬುಧವಾರ ಮೆಟ್ರಿಕ್ ಮೇಳ ಕಾರ್ಯಕ್ರಮ ನಡೆಯಿತು. ಮೆಟ್ರಿಕ್ ಮೇಳವನ್ನು ವಿಟ್ಲ ಪಟ್ಟಣ...