Wednesday, July 9, 2025

ಬಡಕಬೈಲು ಆರೋಪಿಗಳಿಗೆ ಕಠಿಣ ಕಾನೂನು ಕ್ರಮ ಕೈಗೊಳ್ಳದಂತೆ ಚುನಾಯಿತ ಪ್ರತಿನಿಧಿಗಳ ಒತ್ತಡ: ರಮಾನಾಥ ರೈ ಆರೋಪ

ಬಂಟ್ವಾಳ: ಜಿಲ್ಲೆಯಲ್ಲಿ ಅಪರಾಧ ಪ್ರಕರಣಗಳು ನಡೆದ ಸಂದರ್ಭದಲ್ಲಿ ಚುನಾಯಿತ ಪ್ರತಿನಿಧಿಗಳ ಯಾವುದೇ ಒತ್ತಡಕ್ಕೆ ಮಣಿಯದೆ ಪೋಲೀಸರು ನಿಪಕ್ಷಪಾತವಾಗಿ ಕಾನೂನು ರೀತಿಯಲ್ಲಿ ಕೆಲಸ ಮಾಡಬೇಕು ಎಂದು ಮಾಜಿ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ಹೇಳಿದರು.

ಅವರು ಬಿಸಿರೋಡಿನ ಪಕ್ಷದ ಕಚೇರಿಯಲ್ಲಿ ಕರೆದ ತಿಳಿಸಿದರು. ‌ಮಿಥುನ್ ರೈ ಮೇಲೆ ಅವ್ಯಾಚ್ಚ ಶಬ್ದಗಳಿಂದ ಘೋಷಣೆ ಕೂಗಿರುವ ಪ್ರಕರಣವನ್ನು ಕಾಂಗ್ರೇಸ್ ಪಕ್ಷ ಖಂಡಿಸುತ್ತೇವೆ.

ಲೋಕಸಭಾ ಚುನಾವಣಾ ಬಳಿಕ ವಿಜಯೋತ್ಸವ ಸಂದರ್ಭದಲ್ಲಿ ಪ್ರಚೋದನಾಕಾರಿ ರೀತಿಯಲ್ಲಿ ಘೋಷಣೆ ಮಾಡಿರುವುದು ಅಕ್ಷಮ್ಯ ಅಪರಾಧ ಹಾಗೂ ಪೋಲೀಸರು ಈ ಬಗ್ಗೆ ಕಠಿನ ಕಾನೂನು ಕ್ರಮ ಕೈಗೊಂಡಿದ್ದಾರೆ ಅವರಿಗೆ ಅಭಿನಂದನೆ.
ಪೋಲೀಸರಿಗೆ ಕಾನೂನು ಕ್ರಮ ಕೈಗೊಳ್ಳದಂತೆ ಚುನಾಯಿತ ಪ್ರತಿನಿಧಿಗಳಿಂದ ಒತ್ತಡಗಳು ಹಾಕಿದ್ದಾರೆ ಎಂಬ ಖಚಿತವಾದ ಮಾಹಿತಿ ಇದೆ.‌
ಇಂತಹ ಯಾವುದೇ ಒತ್ತಡ ಕ್ಕೆ ಮಣಿಯದೆ ಪೋಲೀಸರು ಕೆಲಸ ಮಾಡುವಂತೆ ಮನವಿ ಮಾಡಿದರು.
ಈ ಪ್ರಕರಣದ ಆರೋಪಿಗಳು ಕೇರಳದ ಕೊಲೆ ಪ್ರಕರಣದ ಆರೋಪಿಗಳು. ಹಾಗಾಗಿ ಚುನಾಯಿತ ಜನಪ್ರತಿನಿಧಿಗಳು ಇವರ ಪರ ನಿಂತು ಸಹಾಯ ಮಾಡಬಾರದು ಎಂದು ಅವರು ಹೇಳಿದರು.

ಜಿಲ್ಲೆಯಲ್ಲಿ ಈ ಹಿಂದೆ ನಡೆದ ಕೊಲೆಗಳ ಆರೋಪಿಗಳು ಯಾರು. ಕಲ್ಲು ತೂರಾಟಗಳು ಮಾಡಿದ್ದು ಯಾರೂ ? ಅದು ಎರಡು ಮತೀಯ ಸಂಘಟನೆಗಳು, ರಾಷ್ಟ್ರೀಯ ಪಕ್ಷಗಳ ಅಂಗ ಪಕ್ಷಗಳು ಎಂದು ಅವರು ಹೇಳಿದರು.
ಕೊಲೆ ಆರೋಪದಲ್ಲಿ ಕಾಂಗ್ರೇಸ್ ಪಕ್ಷದ ಯಾವ ಕಾರ್ಯಕರ್ತನು ಇಲ್ಲ ಎಂಬುದು ಸತ್ಯವಿಚಾರ ಎಂದರು. ಚುನಾವಣಾ ಸಂದರ್ಭದಲ್ಲಿ ನನ್ನ ಬಗ್ಗೆ ಅಪಪ್ರಚಾರಗಳು ನಡದಿವೆ. ಅಕ್ಕಿ ಬರುವುದನ್ನು ನಿಲ್ಲಿಸಿಲ್ಲ, ಅದಕ್ಕೆ ಬರುವ ಹಣವನ್ನು ನಿಲ್ಲಿಸಿದ್ದೇನೆ , ದೇವರ ದುಡ್ಡು ದುರುಪಯೋಗ ಆಗಬಾರದು ಎಂಬುದೇ ನನ್ನ ಯೋಚನೆಯಾಗಿತ್ತು.

ಈ ಸಂದರ್ಭದಲ್ಲಿ ಬಂಟ್ವಾಳ ಬ್ಲಾಕ್ ಕಾಂಗ್ರೇಸ್ ಅಧ್ಯಕ್ಷ ಬೇಬಿ ಕುಂದರ್, ಹಾಗೂ ಪಾಣೆಮಂಗಳೂರು ಬ್ಲಾಕ್ ಕಾಂಗ್ರೇಸ್ ಅಧ್ಯಕ್ಷ ಸುದೀರ್ ಕುಮಾರ್ ಶೆಟ್ಟಿ  ಉಪಸ್ಥಿತರಿದ್ದರು.

More from the blog

ಭಾರೀ ಮಳೆ ಮುನ್ಸೂಚನೆ : ಒಂದು ವಾರ ಕರ್ನಾಟಕದ ಕರಾವಳಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್..

ಮಂಗಳೂರು : ರಾಜ್ಯದ ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ಇಂದಿನಿಂದ ಜುಲೈ 14ರವರೆಗೆ ಭಾರಿ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ, ಚಿಕ್ಕಮಗಳೂರು,...

ಕುಡ್ತಮುಗೇರು: ಬಸ್ಸಿನಿಂದ ರಸ್ತೆಗೆ ಬಿದ್ದ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೆ ಸಾವು 

ವಿಟ್ಲ: ಖಾಸಗಿ ಬಸ್ಸಿನಿಂದ ಬಿದ್ದ ವ್ಯಕ್ತಿಯೋರ್ವರು ಚಿಕಿತ್ಸೆಗೆ ಸ್ಪಂಧಿಸದೆ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ಕುಡ್ತಮುಗೇರು ಎಂಬಲ್ಲಿ ನಡೆದಿದೆ. ಬಂಟ್ವಾಳ ತಾಲೂಕು ಕೊಳ್ನಾಡು ಗ್ರಾಮದ ಕೊಡಂಗೆ ನಿವಾಸಿ ಚಿದಾನಂದ ರೈ (43 ವ.) ಮೃತಪಟ್ಟವರು. ಜು.7ರಂದು ಬೆಳಗ್ಗೆ...

ನಾಯಕತ್ವ ಬೆಳವಣಿಗೆಗೆ ಶ್ರಮದೊಂದಿಗೆ ನಿಷ್ಠೆ, ತಾಳ್ಮೆ ರೂಡಿಸಿಕೊಂಡಾಗ ಯಶಸ್ಸು ಸಾಧ್ಯ : ರೋ. ರಾಘವೇಂದ್ರ ಭಟ್

ಬಂಟ್ವಾಳ : ನಾಯಕತ್ವದ ಬೆಳವಣಿಗೆಗೆ ಶ್ರಮದೊಂದಿಗೆ ನಿಷ್ಠೆ ಮತ್ತು ತಾಳ್ಮೆ ರೂಡಿಸಿಕೊಳ್ಳಬೇಕು ಈ ನಿಟ್ಟಿನಲ್ಲಿ ಅವಕಾಶ ಗಳನ್ನು ಹುಡುಕಿಕೊಂಡು, ದೇಶದ ಇತಿಹಾಸದಲ್ಲಿ ಕಾಣುವ ವಿವಿಧ ಕ್ಷೆತ್ರದಲ್ಲಿ ಗಣನೀಯ ಸೇವೆ ಗೈದರವರ ಆದರ್ಶ ಗಳನ್ನು...

ಜು.10ರಂದು ಹಿಂದೂ ಜನಜಾಗೃತಿ ಸಮಿತಿಯಿಂದ ಗುರುಪೂರ್ಣಿಮಾ ಮಹೋತ್ಸವ ಆಯೋಜನೆ

ಬಿ.ಸಿ. ರೋಡ್ : ಸಮಸ್ತ ಜಗತ್ತು ಯುದ್ಧದತ್ತ ಸಾಗುತ್ತಿದೆ. ಭಾರತದಲ್ಲಿಯೂ ಜಿಹಾದಿ ಭಯೋತ್ಪಾದಕರು ಹಿಂದೂಗಳನ್ನು ಹತ್ಯೆ ಮಾಡಿ, ಭಾರತವನ್ನು ಯುದ್ಧಕ್ಕೆ ಪ್ರೇರೇಪಿಸುತ್ತಿದ್ದಾರೆ. ಶ್ರೀರಾಮ, ಶ್ರೀಕೃಷ್ಣನಂತಹ ಅವತಾರಗಳಿಂದ ಹಿಡಿದು ಛತ್ರಪತಿ ಶಿವಾಜಿ ಮಹಾರಾಜ, ಮಹಾರಾಣಾ...