Wednesday, January 28, 2026

ಅಕ್ರಮ ಸಮುದ್ರದ ಹವಳಗಳ ಪತ್ತೆ, ಓರ್ವನ ಬಂಧನ

ಬಂಟ್ವಾಳ: ಅಕ್ರಮವಾಗಿ ಹವಳ ಮಾರಟಕ್ಕೆ ಯತ್ನಿಸುತ್ತಿದ್ದ ಆರೋಪಿಯನ್ನು ಬಂಧಿಸಿ ಸುಮಾರು ಐದು ಲಕ್ಷ ಮೌಲ್ಯದ ಹವಳಗಳನ್ನು ಮಂಗಳೂರು ವಿಶೇಷ ಪೋಲೀಸ್ ಅರಣ್ಯ ಸಂಚಾರಿ ದಳದ ಪೋಲೀಸರು ಸ್ವಾಧೀನಪಡಿಸಿದ ಘಟನೆ ನಡೆದಿದೆ.
ಬಳ್ಳಾರಿ ಜಿಲ್ಲೆಯ ಹರಪ್ಪನ ತಾಲೂಕಿನ ಕಡತಿ ಹೋಬಳಿ ಖಂಡಕೇರಿ ತಾಂಡ ನಿವಾಸಿ ದಿ.ರಾಮ ನಾಯ್ಕ ಅವರ ಮಗ ಜಯಸಿಂಗ್ ಇ. (29) ಬಂಧಿತ ಆರೋಪಿ. ‌

ಮಂಗಳೂರು ವಿಶೇಷ ಪೊಲೀಸ್ ಅರಣ್ಯ ಸಂಚಾರಿ ದಳದ ಪೊಲೀಸರಿಗೆ ದೊರೆತ ಖಚಿತ ಮಾಹಿತಿಯಂತೆ ಚಿಕ್ಕಮಂಗಳೂರು ಜಿಲ್ಲೆಯ ಇಂದಿರಾ ಗಾಂಧಿ ರಸ್ತೆಯ ಬೋಳರಾಮೇಶ್ವರ ದೇವಸ್ಥಾನದ ಹತ್ತಿರದ ಬ್ಲೂ ಪರ್ಲ್ ಹೋಟೆಲ್‌ನ 5 ನೇ ಅಂತಸ್ತಿನ ದಾಲ್ಚಿನ್ನಿ ರೆಸ್ಟೋರೆಂಟ್‌ನ ಅಕ್ರಮವಾಗಿ ಸಮುದ್ರದ ತಳ ಭಾಗದಲ್ಲಿರುವ ವನ್ಯ ಜೀವಿ ಸಮುದ್ರದ ಹವಳಗಳನ್ನು ಇಟ್ಟಿರುವುದನ್ನು ಪತ್ತೆ ಮಾಡಿ ಸುಮಾರು ಐದು ಲಕ್ಷ ಮೌಲ್ಯದ ಸಮುದ್ರದ ಹವಳಗಳನ್ನು ಸ್ವಾಧೀನಪಡಿಸಿಕೊಂಡು ಆರೋಪಿ ಜಯಸಿಂಗ್ ಯನ್ನು ಬಂಧಿಸಿದ್ದಾರೆ.
ಆರೋಪಿ ಮತ್ತು ಸೊತ್ತುಗಳನ್ನು ಮುಂದಿನ ತನಿಖೆಯ ಬಗ್ಗೆ ಆರ್.ಎಫ್.ಒ. ಚಿಕ್ಕಮಂಗಳೂರು ವಲಯ ರವರಿಗೆ ಹಸ್ತಾಂತರಿಸಲಾಗಿದೆ.
ಈ ಕಾರ್ಯಾಚರಣೆಯಲ್ಲಿ ಮಡಿಕೇರಿ ಅರಣ್ಯ ಘಟಕದ ಪೊಲೀಸ್ ಅಧೀಕ್ಷಕರಾದ ಪ್ರಭಾಕರ ಬಾರ್ಕಿರವರ ಆದೇಶದಂತೆ ಮಂಗಳೂರು ವಿಶೇಷ ಪೊಲೀಸ್ ಅರಣ್ಯ ಸಂಚಾರಿ ದಳದ ಪೊಲೀಸು ಉಪ ನಿರೀಕ್ಷಕರಾದ ಮಾಧವ ಕೂಡ್ಲು ಹಾಗು ಸಿಬ್ಬಂದಿಗಳಾದ ಜಗನ್ನಾಥ ಶೆಟ್ಟಿ, ಪ್ರವೀಣ, ಉದಯ ನಾಯ್ಕ ಎನ್, ಮಹೇಶ, ದೇವರಾಜ್ ಹಾಗೂ ಸುಂದರ ಶೆಟ್ಟಿ ರವರು ಪಾಲ್ಗೊಂಡಿರುತ್ತಾರೆ.

More from the blog

B.C. Road : ಮಾಜಿ ಸಚಿವ ಬಿ.ರಮಾನಾಥ ರೈ ನೇತೃತ್ವದಲ್ಲಿ ನರೇಗಾ ಬಚಾವೋ ಸಂಗ್ರಾಮ ಕಾರ್ಯಕ್ರಮ

ಬಂಟ್ವಾಳ: ಬಂಟ್ವಾಳ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಪಾಣೆಮಂಗಳೂರು ಹಾಗೂ ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ಮಾಜಿ ಸಚಿವ ಬಿ.ರಮಾನಾಥ ರೈ ನೇತೃತ್ವದಲ್ಲಿ ನರೇಗಾ ಬಚಾವೋ ಸಂಗ್ರಾಮ ಕಾರ್ಯಕ್ರಮ ಬಿಸಿರೋಡಿನ ರಕ್ತೇಶ್ವರಿ...

ಕಟೀಲು 7 ಮೇಳಗಳ ಜ.28ರ ಸೇವೆಯಾಟಗಳ ವಿವರ ಇಲ್ಲಿದೆ..

ಮಂಗಳೂರು: ಕಟೀಲು ಶ್ರೀ ದುರ್ಗಾಪರಮೇಶ್ವರೀ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿ ಇದರ 7 ಮೇಳಗಳ ಜ.28ರ ಸೇವೆಯಾಟಗಳ ವಿವರ ಈ ಕೆಳಗಿನಂತಿವೆ.. ಜ.28ರ ಸೇವೆಯಾಟಗಳ ವಿವರ : ಆನಂದ ಎಂ. ಶೆಟ್ಟಿ, ಏಳಿಂಜೆ ಅಂಗಡಿಗುತ್ತು,...

ಸಜೀಪ : ಜ.28, 29,30ರಂದು ಬೃಹತ್ 14ನೇ ವಾರ್ಷಿಕ ಜಲಾಲಿಯ್ಯಾ ರಾತೀಬ್

ಬಂಟ್ವಾಳ : ಜಲಾಲಿಯ್ಯಾ ಜುಮಾ ಮಸ್ಜಿದ್, ಚಟ್ಟೆಕ್ಕಲ್, ಸಜಿಪ ಇದರ ಆಶ್ರಯದಲ್ಲಿ ಬೃಹತ್ 14ನೇ ವಾರ್ಷಿಕ ಜಲಾಲಿಯ್ಯಾ ರಾತೀಬ್ ಬುರ್ದಾ ಮಜ್ಲಿಸ್ ಜಿಸ್ತಿಯಾ ಖುತ್‌ಬಿಯತ್ ಜ.28, 29,30 ರಂದು ಜಲಾಲಿಯ್ಯ ಜುಮಾ ಮಸೀದಿ...

ಯೋಧರನ್ನು ಗೌರವಿಸುವುದು ನಮ್ಮೆಲ್ಲರ ಕರ್ತವ್ಯ – ಒಡಿಯೂರುಶ್ರೀ

ವಿಟ್ಲ: ಸದೃಢ ದೇಶ ನಿರ್ಮಾಣದಲ್ಲಿ ಸೈನಿಕರ ಪರಿಶ್ರಮ, ತ್ಯಾಗ ಅತ್ಯಂತ ಪ್ರಾಮುಖ್ಯತೆಯನ್ನು ಪಡೆದಿದೆ. ಯೋಧರನ್ನು ಗೌರವಿಸುವುದು ನಮ್ಮೆಲ್ಲರ ಕರ್ತವ್ಯವಾಗಿದೆ ಎಂದು ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನದ ಶ್ರೀಗುರುದೇವಾನಂದ ಸ್ವಾಮೀಜಿ ನುಡಿದರು. ಅವರು ಒಡಿಯೂರು ರಾಜಾಂಗಣದಲ್ಲಿ...