Thursday, June 26, 2025

ಕೊರೊನಾ ಮಹಾಮಾರಿಯ ಕುರಿತು ಊಹಾಪೋಹಗಳಿಗೆ ಕಿವಿಕೊಡಬೇಡಿ ಸರಕಾರದ ನಿಯಮಗಳು ಪಾಲಿಸಿ: ಶಾಸಕ ರಾಜೇಶ್ ನಾಯ್ಕ್

ಬಂಟ್ವಾಳ: ಕೊರೊನಾ ಮಹಾಮಾರಿಯ ಕುರಿತು ಏನೇ ಊಹಾಪೋಹಗಳು ಹಬ್ಬಿದರೂ, ಸರಕಾರದ ನಿಯಮಗಳನ್ನು ನಾವು ಸಮರ್ಪಕವಾಗಿ ಪಾಲಿಸಿದೇ ಆದಲ್ಲಿ ಕೊರೊನಾದಿಂದ ಮುಕ್ತಿ ಹೊಂದಲು ಸಾಧ್ಯ ಎಂದು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಹೇಳಿದರು.

ಅವರು ನೆಟ್ಲಮುಡ್ನೂರು ಗ್ರಾ.ಪಂ.ನಲ್ಲಿ ಕೊರೊನಾ ಟಾಸ್ಕ್ ಫೋರ್ಸ್ ಸಭೆ ನಡೆಸಿ ಮಾತನಾಡಿದರು.

ಬೆಡ್ ಸೌಕರ್ಯ, ಆಕ್ಸಿಜನ್ ಲಭ್ಯತೆ, ಐಸಿಯು ಎಲ್ಲಾ ಸೌಲಭ್ಯಗಳನ್ನೂ ಬಂಟ್ವಾಳ ಸರಕಾರಿ ಆಸ್ಪತ್ರೆ ಸುಸಜ್ಜಿತವಾಗಿದ್ದು, ಯಾವುದೇ ಆತಂಕ ಪಡಬೇಕಿಲ್ಲ‌. ಹಾಗೆಂದು ಮುನ್ನೆಚ್ಚರಿಕಾ ಕ್ರಮಗಳನ್ನು ಮರೆಯುವಂತಿಲ್ಲ ಎಂದರು.

ಸಂಪರ್ಕಿತರ ಪರೀಕ್ಷಾ ಕಾರ್ಯದ ಕುರಿತು ಮಾಹಿತಿ ಪಡೆದರು. ಗ್ರಾ.ಪಂ.ಸೀಲ್ ಡೌನ್ ಆಗಿರುವುದರಿಂದ ಲಸಿಕಾ ಅಭಿಯಾನ ಕೊಂಚ ವಿಳಂಬವಾಗಿತ್ತು ಎಂದು ಮಾಹಿತಿ ನೀಡಲಾಯಿತು. ಸದಸ್ಯರನ್ನೂ ಪ್ರಂಟ್ ಲೈನ್ ವಾರಿಯರ್ಸ್‌ ಆಗಿ ಗುರುತಿಸಲಾಗಿದ್ದು, ಲಸಿಕೆ ಪಡೆಯುವ ಕಾರ್ಯವಾಗಬೇಕು ಎಂದು ಶಾಸಕರು ಸೂಚಿಸಿದರು.

ತಹಶೀಲ್ದಾರ್ ರಶ್ಮಿ ಎಸ್. ಆರ್.ಮಾತನಾಡಿ, ಆದ್ಯತೆ ಗುಂಪುಗಳನ್ನಾಗಿ ೧೮ ರಿಂದ ೪೪ ವರ್ಷದವರನ್ನು‌ ಮಾತ್ರ ಗುರುತಿಸುತ್ತಿದ್ದೇವೆ. ಉಳಿದವರಿಗೆ ಸಾಮಾನ್ಯ ಪ್ರಕ್ರಿಯೆಯಲ್ಲಿ ಲಸಿಕೆ ಲಭ್ಯವಾಗುತ್ತಿದೆ. ವೈದ್ಯರ ನಡೆ ಹಳ್ಳಿಯ ಕಡೆ ಕಾರ್ಯಕ್ರಮ ನಡೆಯುತ್ತಿದ್ದು, ಯಾರಿಗಾದರೂ ಲಕ್ಷಣ ಇದ್ದರೆ ಮನೆಗೇ ವೈದ್ಯರು ಬಂದು ಪರೀಕ್ಷೆ ನಡೆಸುವ ಕಾರ್ಯ ಮಾಡುತ್ತಾರೆ ಎಂದರು.

ತಾ.ಪಂ.ಇಒ ರಾಜಣ್ಣ ಮಾತನಾಡಿ, ಸೋಂಕಿತರ ಮನೆಯವರು ಓಡಾಡದಂತೆ ಎಚ್ಚರಿಕೆ ವಹಿಸಲು ವಾರ್ಡ್ ಸದಸ್ಯರು ಜವಾಬ್ದಾರಿ ತೆಗೆದುಕೊಳ್ಳಬೇಕು.

ಈ ಸಂದರ್ಭದಲ್ಲಿ ಶಾಸಕರು ಆಶಾ ಕಾರ್ಯಕರ್ತೆಯರಿಗೆ ಕಿಟ್ ವಿತರಿಸಿದರು.

ವಿಟ್ಲ ಕಂದಾಯ ನಿರೀಕ್ಷಕ ದಿವಾಕರ ಮುಗುಳಿಯ, ಗ್ರಾ.ಪಂ.ಅಧ್ಯಕ್ಷ ಸತೀಶ್ ಕೊಪ್ಪರಿಗೆ, ಉಪಾಧ್ಯಕ್ಷೆ ಶಕೀಲಾ ಕೃಷ್ಣಪ್ಪ ಪೂಜಾರಿ, ಅಭಿವೃದ್ಧಿ ಅಧಿಕಾರಿ ಎ.ಬಿ.ಅಜಿತ್ ಕುಮಾರ್, ಗ್ರಾಮಕರಣಿಕ ಮಂಜುನಾಥ್ ಕೆ.ಎಚ್., ಗ್ರಾ.ಪಂ.ಸದಸ್ಯರು, ಟಾಸ್ಕ್ ಫೋರ್ಸ್ ಸದಸ್ಯರು ಉಪಸ್ಥಿತರಿದ್ದರು.

More from the blog

Bantwal : ಮಾದಕ ದ್ರವ್ಯ ಮುಕ್ತ ಸಮಾಜಕ್ಕಾಗಿ” ಅಭಿಯಾನ – 2025 ಕಾರ್ಯಕ್ರಮ..

ಬಂಟ್ವಾಳ: ದ.ಕ.ಜಿಲ್ಲಾ ಪೋಲೀಸ್ ಇಲಾಖೆ, ಬಂಟ್ವಾಳ ವೃತ್ತದ ಪೋಲೀಸ್ ಠಾಣೆಯ ಹಾಗೂ ಶಿಕ್ಷಣ ಇಲಾಖೆ, ರೋಟರಿ ಕ್ಲಬ್ ಬಂಟ್ವಾಳ ಲೊರೆಟ್ಟೊ ಹಿಲ್ಸ್, ಬಂಟ್ವಾಳ ಟೌನ್ ಮೊಡಂಕಾಪು ಇವರ ಸಂಯುಕ್ತ ಆಶ್ರಯದಲ್ಲಿ " ಮಾದಕ...

Netravathi River : ನೇತ್ರಾವತಿ ನದಿ‌ ನೀರಿನ ಮಟ್ಟ ಏಕಾಏಕಿ ಏರಿಕೆ – ಎಚ್ಚರಿಕೆ ವಹಿಸಲು ಸೂಚನೆ..

ಬಂಟ್ವಾಳ: ನೇತ್ರಾವತಿ ನದಿ‌ ನೀರಿನ ಮಟ್ಟ ಏಕಾಏಕಿ ಏರಿಕೆಯಾಗಿದ್ದು 7.4 ಆಗಿದೆ. ಬೆಳಿಗ್ಗೆ 6 ಗಂಟೆಯ ವೇಳೆಗೆ 6.7 ರಲ್ಲಿ ಹರಿಯುತ್ತಿದ್ದ ನದಿ ನೀರು ಸುಮರು 8.30 ಗಂಟೆಗೆ 7.5 ಕ್ಕೆ ಏರಿಕೆಯಾಗಿದೆ. ಅಪಾಯದ...

School Holiday : ಭಾರೀ ಮಳೆ ಮುನ್ಸೂಚನೆ : ನಾಳೆ ಬೆಳ್ತಂಗಡಿ ತಾಲೂಕಿನ ಶಾಲೆಗಳಿಗೆ ರಜೆ..

ಬೆಳ್ತಂಗಡಿ: ತಾಲೂಕಿನಾದ್ಯಂತ ಸುರಿಯುತ್ತಿರುವ ಧಾರಾಕಾರ ಮಳೆಯ ಹಿನ್ನಲೆ ಬೆಳ್ತಂಗಡಿ ತಾಲೂಕಿನ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ, ಖಾಸಗಿ ವಿದ್ಯಾಸಂಸ್ಥೆಗಳಿಗೆ ಜೂನ್ 26ರಂದು ರಜೆ ಘೋಷಣೆ ಮಾಡಲಾಗಿದೆ. ಮುಂಜಾಗೃತ ಕ್ರಮವಾಗಿ ತಹಶೀಲ್ದಾರ್ ರವರ ತಾಲೂಕು ವಿಪತ್ತು...

Bantwal Police :ಜೂನ್ 26 ರಂದು ” ಮಾದಕ ದ್ರವ್ಯ ಮುಕ್ತ ಸಮಾಜಕ್ಕಾಗಿ ” ಅಭಿಯಾನ 2025 ಕಾರ್ಯಕ್ರಮ

ಬಂಟ್ವಾಳ: ದ.ಕ.ಜಿಲ್ಲಾ ಪೋಲೀಸ್ ಇಲಾಖೆ ಹಾಗೂ ಬಂಟ್ವಾಳ ವೃತ್ತದ ಪೋಲೀಸ್ ಇಲಾಖೆಯ ವತಿಯಿಂದ ಬಿಸಿರೋಡಿನಲ್ಲಿ ಜೂನ್ 26 ರಂದು " ಮಾದಕ ದ್ರವ್ಯ ಮುಕ್ತ ಸಮಾಜಕ್ಕಾಗಿ " ಅಭಿಯಾನ 2025 ಕಾರ್ಯಕ್ರಮ ನಡೆಯಲಿದೆ...