ಬೆಂಗಳೂರು : ರಾಜ್ಯದ 5 ಸಚಿವರಿಗೆ ಕೊರೊನಾ ಸೋಂಕಿತ ವ್ಯಕ್ತಿ ಸಂಪರ್ಕಕ್ಕೆ ಬಂದಿರುವ ಹಿನ್ನೆಲೆ ಕೊರೊನಾ ಟೆಸ್ಟ್ ಗೆ ಒಳಪಡಿಸಲಾಗಿದೆ. ಡಿಸಿಎಂ ಅಶ್ವಥ್ ನಾರಾಯಣ್, ಸಚಿವರಾದ ಸಿ.ಟಿ. ರವಿ, ಬಸವರಾಜ ಬೊಮ್ಮಾಯಿ, ಡಾ.ಕೆ. ಸುಧಾಕರ್ ಕೊರೊನಾ ಟೆಸ್ಟ್ ಗೆ ಒಳಗಾಗಿದ್ದು, ಇದೀಗ ಮೂವರ ವರದಿ ನೆಗೆಟಿವ್ ಬಂದಿದೆ. ಆದರೂ ಮೂವರು ಸಚಿವರು ಹೋಮ್ ಕ್ಯಾರಂಟೈನ್ ನಲ್ಲಿರಲು ಸೂಚಿಸಲಾಗಿದೆ.

ಬೆಂಗಳೂರಿನಲ್ಲಿ ಕೊರೊನಾ ದೃಢಪಟ್ಟಿರುವ ಖಾಸಗಿ ವಾಹಿನ ಕ್ಯಾಮೆರಾಮನ್ ಸಂಪರ್ಕಕ್ಕೆ ಬಂದಿದ್ದ ಹಿನ್ನೆಲೆಯಲ್ಲಿ ಐವರು ಸಚಿವರಿಗೆ ಕೊರೊನಾ ಭೀತಿ ಆವರಿಸಿದ್ದು, ಹೀಗಾಗಿ ಅವರನ್ನು ಪರೀಕ್ಷೆಗೆ ಒಳಪಡಿಸಲಾಗಿತ್ತು. ಈ ಕುರಿತು ಟ್ವೀಟ್ ಮಾಡಿರುವ ಅಶ್ವತ್ಥ್ ನಾರಾಯಣ್, ಕೋವಿಡ್-19 ಸೋಂಕಿತ ವ್ಯಕ್ತಿಯ ಸಂಪರ್ಕಕ್ಕೆ ಬಂದಿರಬಹುದೆಂಬ ಮಾಹಿತಿ ಪಡೆದಿದ್ದು, ನಾನು ಹೋಂ ಕ್ವಾರಂಟೈನ್ ಆಗಿರುತ್ತೇನೆ. ನನ್ನ ಟೆಸ್ಟ್ ನೆಗೆಟಿವ್ ಬಂದಿದ್ದು, ಜಾಗರೂಕತೆಗಾಗಿ ಅಗತ್ಯವಿರುವ ಎಲ್ಲ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುತ್ತೇನೆಂದು ಎಂದು ಹೇಳಿದ್ದಾರೆ.
ಇನ್ನು ಈ ಕುರಿತು ಸಚಿವರಾದ ಬಸವರಾಜ ಬೊಮ್ಮಾಯಿ, ಸಿ.ಟಿ. ರವಿ, ಡಾ.ಕೆ.ಸುಧಾಕರ್ ಅವರು ಕೂಡಾ ಮಾಹಿತಿ ನೀಡಿದ್ದು, ಹೋಂ ಕ್ವಾರಂಟೈನ್ ನಲ್ಲಿರುವುದಾಗಿ ಟ್ವೀಟರ್ ನಲ್ಲಿ ಮಾಹಿತಿ ನೀಡಿದ್ದಾರೆ.

