Friday, January 30, 2026

ಕೊರೊನಾ ವೈರಸ್ ಭೀತಿಯ ಹಿನ್ನೆಲೆ ಬಯೋಮೆಟ್ರಿಕ್ ವ್ಯವಸ್ಥೆ ಕೈ ಬಿಡಲು ಒತ್ತಾಯ

ಬಂಟ್ವಾಳ: ಕೊರೊನಾ ವೈರಸ್ ಭೀತಿಯ ಹಿನ್ನೆಲೆಯಲ್ಲಿ ಸರಕಾರಿ ಹಾಗೂ ಖಾಸಗಿ ಸಂಸ್ಥೆಗಳ ಕಚೇರಿಯಲ್ಲಿನ ಬಯೋ ಮೆಟ್ರಿಕ್ ಸಿಸ್ಟಮ್ ಅನ್ನು ತೆಗೆದು ಹಾಕಲು ಸರಕಾರ ಆದೇಶ ಮಾಡಿದೆ.
ಅದರೆ ಬಡವರಿಗೆ ಸರಕಾರದಿಂದ ಸಿಗುವ ರೇಷನ್ ಪಡೆಯಬೇಕಾದರೆ ರೇಷನ್ ಅಂಗಡಿಗಳಲ್ಲಿ ಬಯೋಮೆಟ್ರಿಕ್ ಮೂಲಕ ಮಾತ್ರ ಸಾಧ್ಯ.
ಪ್ರಸ್ತುತ ಎಲ್ಲೆಡೆ ಮಾರಣಾಂತಿಕ ಸಾಂಕ್ರಮಿಕ ಕೊರೊನಾ ವೈರಸ್ ಭೀತಿಯಿಂದ ನಲುಗುತ್ತಿರುವ ಸಂದರ್ಭದಲ್ಲಿ ಸರಕಾರ ರೇಷನ್ ಅಂಗಡಿಗಳಲ್ಲಿನ ಬಯೋಮೆಟ್ರಿಕ್ ವ್ಯವಸ್ಥೆಯನ್ನು ತಾತ್ಕಾಲಿಕವಾಗಿ ತೆಗೆದುಹಾಕುವಂತೆ ಒತ್ತಾಯಗಳು ಕೇಳಿ ಬರುತ್ತಿದೆ.

ಆಧಾರ್ ನೊಂದಣಿಗೂ ಬಯೋಮೆಟ್ರಿಕ್:
ಆಧಾರ್ ಕಾರ್ಡ್ ನೊಂದಣಿ ಮಾಡಬೇಕಾದರೆ ಅಲ್ಲೂ ಬಯೋಮೆಟ್ರಿಕ್ ವ್ಯವಸ್ಥೆ ಇರುವುದರಿಂದ ಸದ್ಯದ ಪರಿಸ್ಥಿತಿಯಲ್ಲಿ ಅಲ್ಲಿಯೂ ಕೊರೊನೊ ಭೀತಿ ಎದುರಾಗಿದೆ. ಹಾಗಾಗಿ ತಾತ್ಕಾಲಿಕವಾಗಿ ಎರಡು ವ್ಯವಸ್ಥೆಯನ್ನು ಸ್ಥಗಿತಗೊಳಿಸುವಂತೆ ಒತ್ತಾಯಗಳು ಕೇಳುತ್ತಿದೆ.
ಜಿಲ್ಲಾಧಿಕಾರಿಯ ಗಮನ ಸೆಳೆದ ತಹಶೀಲ್ದಾರ್ ರಶ್ಮಿ ಎಸ್. ಆರ್.
ರೇಷನ್ ಅಂಗಡಿಯಲ್ಲಿನ ಬಯೋಮೆಟ್ರಿಕ್ ಹಾಗೂ ಆಧಾರ್ ಕಾರ್ಡ್ ಸಂಬಂಧ ಬಯೋಮೆಟ್ರಿಕ್ ವಿಚಾರವನ್ನು ಬಂಟ್ವಾಳ ತಹಶೀಲ್ದಾರ್ ರಶ್ಮಿ ಎಸ್.ಆರ್. ಅವರು ಜಿಲ್ಲಾಧಿಕಾರಿ ಸಿಂದೂ ರೂಪೇಶ್ ಅವರ ಗಮನಕ್ಕೆ ತಂದಿದ್ದು, ಅವರು ಸರಕಾರದ ಗಮನಕ್ಕೆ ತರುವುದಾಗಿ ತಿಳಿಸಿದ್ದಾರೆ.

More from the blog

ಕರಾವಳಿ ಜಿಲ್ಲೆಗಳ ಬೆಳೆ ವಿಮೆ ಬಾಕಿ ಮೊತ್ತ ಬಿಡುಗಡೆ ಎಂ.ಎಲ್.ಸಿ ಕಿಶೋರ್ ಕುಮಾರ್ ಪುತ್ತೂರು ಆಗ್ರಹ

ಮಂಗಳೂರು: ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಸಾವಿರಾರು ರೈತರಿಗೆ ಬೆಳೆ ವಿಮೆಯ ದೊಡ್ಡ ಮೊತ್ತ ಇನ್ನೂ ಪಾವತಿಯಾಗದೆ ಬಾಕಿ ಇರುವುದು ಸಾಬೀತಾಗಿದೆ. ರಾಜ್ಯಾದ್ಯಂತ ಕೃಷಿಕರು ಸಂಕಷ್ಟದಲ್ಲಿದ್ದರೂ ಸಹ, ವಿಮಾ ಕಂಪನಿಗಳು ಮತ್ತು...

ಮಹಿಳಾ ನೌಕರರಿಗೆ ಋತುಚಕ್ರ ರಜೆ ನೀಡಲು ಶಿಕ್ಷಣ ಇಲಾಖೆ ಆದೇಶ : ಷರತ್ತುಗಳೇನು?

ಬೆಂಗಳೂರು: ರಾಜ್ಯದಲ್ಲಿನ ಸರ್ಕಾರಿ ಶಾಲೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಮಹಿಳಾ ಶಿಕ್ಷಕಿಯರಿಗೆ ಋತುಚಕ್ರ ರಜೆ ನೀಡಲು ಶಾಲಾ ಶಿಕ್ಷಣ ಇಲಾಖೆ ಅಧಿಕೃತ ಆದೇಶ ಹೊರಡಿಸಿದೆ. ಋತುಚಕ್ರ ರಜೆ ಪಡೆಯಲು ಮಹಿಳಾ ನೌಕರರಿಗೆ ಕೆಲವೊಂದು ಷರತ್ತುಗಳನ್ನು ಸಹ ವಿಧಿಸಲಾಗಿದೆ. ...

9 &11 ಖಾತೆ ಅರ್ಜಿಗಳನ್ನು ಹಳೆಯ ತಂತ್ರಾಂಶದಲ್ಲಿ ವಿಲೇವಾರಿಗೆ ಪ್ರಭಾಕರ ಪ್ರಭು ಮನವಿ 

ಬಂಟ್ವಾಳ : ನೆನೆಗುದಿಗೆ ಬಿದ್ದಿರುವ 9 &11 ಖಾತೆ ಅರ್ಜಿಗಳನ್ನು ಹಳೆಯ ತಂತ್ರಾಂಶದಲ್ಲಿ ವಿಲೇವಾರಿ ಮಾಡಲು ತಾಲೂಕು ಪಂಚಾಯತ್ ಮಾಜಿ ಸದಸ್ಯ ಪ್ರಭಾಕರ ಪ್ರಭು ಕರ್ನಾಟಕ ಸರಕಾರದ ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್ ರಾಜ್...

ವಿಟ್ಲ ಜಾತ್ರೆ ಅಂಗಡಿ ಏಲಂನಲ್ಲಿ ಭಾರೀ ಅವ್ಯವಹಾರದ ದೂರು..

ವಿಟ್ಲ: ವಿಟ್ಲ ಮಹತೋಭಾರ ಶ್ರೀ ಪಂಚಲಿಂಗೇಶ್ವರ ದೇವರ ಜಾತ್ರೆಯ ಅಂಗಡಿ ಏಲಂನ ವಿಚಾರದಲ್ಲಿ ಭಾರೀ ಅವ್ಯವಹಾರ ನಡೆದಿರುವ ಬಗ್ಗೆ ಕುತ್ಯಾಡಿ ನಿವಾಸಿ ಲಕ್ಷ್ಮೀಶ ಕೆ. ಎಂಬವರು ಪಟ್ಟಣ ಪಂಚಾಯಿತಿಗೆ ದೂರು ನೀಡಿದ್ದಾರೆ. ಜಾತ್ರೆಗೆ ಸಂತೆ...