Wednesday, January 28, 2026

ಕೊರೊನಾ ಸೋಂಕಿನ ‌ಬಗ್ಗೆ ಯಾರೂ ಭಯ-ಭೀತರಾಗುವುದು ಬೇಡ- ಆರೋಗ್ಯ ಸಚಿವ ಶ್ರೀರಾಮುಲು‌

ಮಂಗಳೂರು: ಕೊವಿಡ್-೧೯ ಆತಂಕ ಸೃಷ್ಟಿಸಿರುವ ಹಿನ್ನೆಲೆಯಲ್ಲಿ ಇಂದು ಆರೋಗ್ಯ ಸಚಿವ ಶ್ರೀರಾಮುಲು‌ ಜಿಲ್ಲಾ ವೆನ್ಲಾಕ್ ಆಸ್ಪತ್ರೆಗೆ ಭೇಟಿ ನೀಡಿ (ಐಸೋಲೇಷನ್ ವಾರ್ಡ್) ಪ್ರತ್ಯೇಕ ನಿಗಾ ಘಟಕದ ಪರಿಶೀಲನೆ ನಡೆಸಿ, ಆಸ್ಪತ್ರೆಯ ವೈದ್ಯಾಧಿಕಾರಿಗಳೊಂದಿಗೆ ಚರ್ಚಿಸಿದರು.
ನಂತರ ಸುದ್ದಿಗಾರರೊಂದಿಗೆ ಮಾತನಾಡಿ, ಕೊರೊನಾ ಸೋಂಕಿನ ‌ಬಗ್ಗೆ ಯಾರೂ ಭಯ-ಭೀತರಾಗುವುದು ಬೇಡ. ರಾಜ್ಯದ ಮುಖ್ಯಮಂತ್ರಿ ಅವರ ಆದೇಶದ ಮೇರೆಗೆ ಎಲ್ಲ ಜಿಲ್ಲೆಗಳಿಗೆ ಭೇಟಿ ನೀಡುತ್ತಿದ್ದೇವೆ. ಸರ್ಕಾರ ಮುನ್ನೆಚ್ಚರಿಕೆ ದೃಷ್ಟಿಯಿಂದ ರಜೆ ಘೋಷಣೆ ಮಾಡಲಾಗಿದೆ. ಈ ಸಂದರ್ಭ ಎಲ್ಲೂ ಹೊರಗಡೆ ತೆರಳದೆ ಮನೆಯಲ್ಲಿದ್ದೇ ಎಲ್ಲರೂ ಸುರಕ್ಷಿತವಾಗಿರಿ. ಸದ್ಯಕ್ಕೆ ಸಿಎಂ ಸೂಚನೆಯಂತೆ‌ ರಜೆ ಒಂದು ವಾರಗಳ ಕಾಲ ಮುಂದುವರಿಯಲಿದೆ. ಮುಂದೆ ಮತ್ತೊಂದು ಸಭೆ ನಡೆಯಲಿದ್ದು, ರಜೆ ಮುಂದುವರಿಯುವ ಬಗ್ಗೆ ಆ ಬಳಿಕ ನಿರ್ಧಾರ ಕೈಗೊಳ್ಳಲಾಗುವುದು ಎಂದರು.
ಕೊರೊನಾ ಬಂದ ತಕ್ಷಣ ಸಾವು ಬರುತ್ತದೆ ಎಂಬ ಭಯ ಎಲ್ಲರಲ್ಲಿದೆ. ನೂರು ಮಂದಿ ಸೋಂಕಿತರಲ್ಲಿ ಇಬ್ಬರಿಗೆ ತೊಂದರೆ ಆಗಬಹುದು. ಅವರಿಗೂ ಏನೂ ಆಗೋಲ್ಲ. ಅಂಕಿ ಅಂಶಗಳ ಪ್ರಕಾರ 10 ಮಂದಿಗೆ ಕೊರೊನಾ ಪಾಸಿಟಿವ್ ಇದ್ದರೂ, ಅವರೂ ರೋಗದಿಂದ ಗುಣಮುಖರಾಗುತ್ತಿದ್ದಾರೆ. ವಿದೇಶಕ್ಕೆ ಹೋಗಿ ಭಾರತಕ್ಕೆ ಬಂದವರಲ್ಲಿ ಕೊರೊನಾ ಸೋಂಕು ಇದ್ದವರ ಸಂಪರ್ಕ ಹೊಂದಿದವರಿಗೆ ಈ ರೋಗ ಬಂದಿದೆಯೇ ಹೊರತು. ರೋಗ ಇಲ್ಲಿಯೇ ಉಲ್ಬಣವಾದದ್ದಲ್ಲ. ಬಿಸಿಲೂ ಅಧಿಕವಾಗಿರೋದರಿಂದ ಕೊರೊನಾ ವೈರಸ್ ಹರಡುವ ಸಾಧ್ಯತೆ ಕಡಿಮೆ ಇರುತ್ತದೆ ಎಂದರು‌.ಮುನ್ನೆಚ್ಚರಿಕೆ ದೃಷ್ಟಿಯಿಂದ ಆರೋಗ್ಯ ಇಲಾಖೆಯ ಸೂಚನೆಯಂತೆ ಕೈತೊಳೆಯೋದು, ವ್ಯಕ್ತಿಯಿಂದ ವ್ಯಕ್ತಿಗೆ ಅಂತರ ಇಡೋದು, ಕಫ, ಜ್ವರ, ನೆಗಡಿ ಬಂದವರು ತಕ್ಷಣ ವೈದ್ಯರನ್ನು ಕಾಣುವುದು, ಸೋಂಕಿನ ಲಕ್ಷಣ ಇದ್ದಲ್ಲಿ ಮಾತ್ರ ಮಾಸ್ಕ್ ಧರಿಸೋದು ಒಳಿತು. ಕಾಸರಗೋಡು ವ್ಯಕ್ತಿಗೆ ಕೊರೊನಾ ಸೋಂಕಿನ ಲಕ್ಷಣ ಕಂಡು ಬಂದಿದ್ದು, ಆತ ಮಂಗಳೂರು ಸುತ್ತಮುತ್ತ ಅಡ್ಡಾಡಿರುವ ಬಗ್ಗೆಯೂ ಮಾಹಿತಿ ಲಭ್ಯವಾಗಿದೆ. ಆದಷ್ಟು ಬೇಗ ಆ ವ್ಯಕ್ತಿಯನ್ನು ಪತ್ತೆ ಹಚ್ಚುವ ಕೆಲಸ ಮಾಡಿ, ಆತನನ್ನು ಹಾಗೂ ಆತ ಯಾರನ್ನೆಲ್ಲಾ ಸಂಪರ್ಕಿಸಿದ್ದಾನೋ ಅವರನ್ನೆಲ್ಲಾ ಐಸೋಲೇಟೆಡ್ ವಾರ್ಡ್​ನಲ್ಲಿರಿಸಿ ಚಿಕಿತ್ಸೆ ಕೊಡಿಸಲಾಗುವುದು ಎಂದು‌ ಶ್ರೀರಾಮುಲು ತಿಳಿಸಿದರು.

More from the blog

ವಿದ್ಯುತ್ ಸಮಸ್ಯೆಗೆ ಸ್ಪಂದಿಸಿದ ಗ್ರಾ.ಪಂ.ಸದಸ್ಯ ಹಾಶೀರ್ ಪೆರಿಮಾರ್ ಅವರಿಗೆ ಗ್ರಾಮಸ್ಥರಿಂದ ಅಭಿನಂದನೆ

ಬಂಟ್ವಾಳ: ವಿದ್ಯುತ್ ಸಮಸ್ಯೆಯಿಂದ ಬೇಸೆತ್ತ ಗ್ರಾಮಸ್ಥರ ಸಮಸ್ಯೆಗೆ ಸಕಾಲದಲ್ಲಿ ಸ್ಪಂದಿಸಿದ ಪುದು ಗ್ರಾಮಪಂಚಾಯತ್ ಸದಸ್ಯನಿಗೆ ಗ್ರಾಮಸ್ಥರು ಅಭಿನಂದನೆ ಸಲ್ಲಿಸಿದ್ದಾರೆ. ಪುದು ಗ್ರಾಮದ ಪೇರಿಮಾರ್ ವಾರ್ಡಿನ ರಾಷ್ಟ್ರೀಯ ಹೆದ್ದಾರಿ ಬದಿಯಿಂದ ದೇವಸ್ಯ, ಜಲಾಲಿಯ ನಗರ, ಮಾರಿಪಳ್ಳ...

Bantwal : ಸೌತ್ ಕೆನರಾ ಫೋಟೋ ಗ್ರಾಫರ್ಸ್ ಅಸೋಸಿಯೇಷನ್ – ಪದಾಧಿಕಾರಿಗಳ ಪದಾಪ್ರಧಾನ, ರಜತ ಸಂಭ್ರಮ ಸಮಾರೋಪ

ಬಂಟ್ವಾಳ :ಸೌತ್ ಕೆನರಾ ಫೋಟೋ ಗ್ರಾಫರ್ಸ್ ಅಸೋಸಿಯೇಷನ್ ರಿ, ಬಂಟ್ವಾಳ ವಲಯದ ನೂತನ ಪದಾಧಿಕಾರಿಗಳ ಪದಾಪ್ರಧಾನ ಸಮಾರಂಭ ಹಾಗು ರಜತ ಸಂಭ್ರಮದ ಸಮಾರೋಪ ಸಮಾರಂಭ ವು ಬಿಸಿ ರೋಡ್ ನ ಲಯನ್ಸ್ ಸೇವಾ...

B.C. Road : ಮಾಜಿ ಸಚಿವ ಬಿ.ರಮಾನಾಥ ರೈ ನೇತೃತ್ವದಲ್ಲಿ ನರೇಗಾ ಬಚಾವೋ ಸಂಗ್ರಾಮ ಕಾರ್ಯಕ್ರಮ

ಬಂಟ್ವಾಳ: ಬಂಟ್ವಾಳ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಪಾಣೆಮಂಗಳೂರು ಹಾಗೂ ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ಮಾಜಿ ಸಚಿವ ಬಿ.ರಮಾನಾಥ ರೈ ನೇತೃತ್ವದಲ್ಲಿ ನರೇಗಾ ಬಚಾವೋ ಸಂಗ್ರಾಮ ಕಾರ್ಯಕ್ರಮ ಬಿಸಿರೋಡಿನ ರಕ್ತೇಶ್ವರಿ...

ಕಟೀಲು 7 ಮೇಳಗಳ ಜ.28ರ ಸೇವೆಯಾಟಗಳ ವಿವರ ಇಲ್ಲಿದೆ..

ಮಂಗಳೂರು: ಕಟೀಲು ಶ್ರೀ ದುರ್ಗಾಪರಮೇಶ್ವರೀ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿ ಇದರ 7 ಮೇಳಗಳ ಜ.28ರ ಸೇವೆಯಾಟಗಳ ವಿವರ ಈ ಕೆಳಗಿನಂತಿವೆ.. ಜ.28ರ ಸೇವೆಯಾಟಗಳ ವಿವರ : ಆನಂದ ಎಂ. ಶೆಟ್ಟಿ, ಏಳಿಂಜೆ ಅಂಗಡಿಗುತ್ತು,...