Saturday, January 31, 2026

ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 195ಕ್ಕೆ ಏರಿಕೆ

ನವದೆಹಲಿ: ಭಾರತದಲ್ಲಿ ಕೊರೊನಾ ವೈರಸ್ ಸೋಂಕಿತರ ಸಂಖ್ಯೆ 195ಕ್ಕೆ ಏರಿಕೆಯಾಗಿದೆ. ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಶುಕ್ರವಾರ ನೀಡಿದ ಮಾಹಿತಿ ಪ್ರಕಾರ 163 ಮಂದಿ ಭಾರತೀಯರು ಹಾಗೂ 32 ಮಂದಿ ವಿದೇಶಿಯರಿದ್ದಾರೆ.
ಇಲಾಖೆ ನೀಡಿದ ಮಾಹಿತಿ ಪ್ರಕಾರ 20 ಮಂದಿ ಚೇತರಿಸಿಕೊಳ್ಳುತ್ತಿದ್ದು, ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದೆ. ಹಾಗೂ ನಾಲ್ವರು ಮೃತಪಟ್ಟಿದ್ದಾರೆ.
ಚೀನಾದ ವುಹಾನ್ ನಲ್ಲಿ ಹುಟ್ಟಿಕೊಂಡಿರುವ ಈ ಕೊರೊನಾ ವೈರಸ್‌ 100ಕ್ಕಿಂತಲೂ ಹೆಚ್ಚು ದೇಶವನ್ನು ಆವರಿಸಿಕೊಂಡಿದೆ. 6 ಸಾವಿರಕ್ಕೂ ಹೆಚ್ಚು ಮಂದಿಯನ್ನು ಬಲಿಪಡೆದಿದೆ.
ದೇಶದಲ್ಲಿ ವಿವಿಧ ರಾಜ್ಯಗಳಿಗೆ ಆವರಿಸಿದ ಮಾರಕ ಸೋಂಕು ಆಂಧ್ರಪ್ರದೇಶ-2, ಚಂಡೀಗಢ-1, 16 ಪ್ರಕರಣಗಳು,1 ವಿದೇಶಿ, ಮೂವರು ಡಿಸ್ಚಾರ್ಜ್, 1 ಸಾವು, ಗುಜರಾತ್-2, ಹರ್ಯಾಣದಲ್ಲಿ-14 ವಿದೇಶಿಯರು, ಕರ್ನಾಟಕದಲ್ಲಿ-15 ಪ್ರಕರಣ, 1 ಸಾವು, ಕೇರಳ-26 ಪ್ರಕರಣ-1 ವಿದೇಶಿ, 1 ಡಿಸ್ಚಾರ್ಜ್, ಮಹಾರಾಷ್ಟ್ರ 44 ಪ್ರಕರಣ 1 ಸಾವು, ಒಡಿಶಾ-1 ಪ್ರಕರಣ, ಪುಚುಚೆರಿ-1, ಪಂಜಾಬ್ -2, 1 ಸಾವು, ರಾಜಸ್ಥಾನ-6, ತಮಿಳುನಾಡು-3, ತೆಲಂಗಾಣ-7, ಚಂಡೀಗಢ ಕೇಂದ್ರಾಡಳಿತ ಪ್ರದೇಶ-1, ಲಡಾಖ್-10, ಉತ್ತರ ಪ್ರದೇಶ 18, ಉತ್ತರಾಖಂಡ್-1, ಪಶ್ಚಿಮ ಬಂಗಾಳ-1 ಎಂಬ ಮಾಹಿತಿ ಸಿಕ್ಕಿದೆ.

More from the blog

ಸಾರಿಗೆ ಬಸ್‌ಗಳ ಮೇಲೆ, ನಿಲ್ದಾಣದಲ್ಲಿ ತಂಬಾಕು ಜಾಹೀರಾತು ತೆರವಿಗೆ ಸಚಿವ ರಾಮಲಿಂಗಾರೆಡ್ಡಿ ಸೂಚನೆ

ಬೆಂಗಳೂರು: ಸಾರಿಗೆ ಬಸ್, ಬಸ್ ನಿಲ್ದಾಣಗಳಲ್ಲಿ ತಂಬಾಕು ಉತ್ಪನ್ನಗಳ ಜಾಹೀರಾತುಗಳನ್ನು ಪ್ರದರ್ಶಿಸುವುದನ್ನು ಸಂಪೂರ್ಣವಾಗಿ ನಿಷೇಧಿಸಿ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಮಹತ್ವದ ಆದೇಶ ಹೊರಡಿಸಿದ್ದಾರೆ. ಸಾರ್ವಜನಿಕರ ಹಿತದೃಷ್ಟಿಯಿಂದ ಈ ಕೂಡಲೇ ಜಾರಿಗೆ ಬರುವಂತೆ ಸಾರಿಗೆ...

ವಿಕಾಸ್ ಪುತ್ತೂರು ಅವರಿಗೆ ನೀಡಿದ ನೋಟಿಸ್ ಇಲಾಖೆಯ ಕಣ್ಣು ತಪ್ಪಿನಿಂದ ಆಗಿದ್ದಂತೆ!!!!

ಬಂಟ್ವಾಳ: ದ.ಕ.ಜಿಲ್ಲೆಯ ಬಂಟ್ವಾಳ ತಾಲೂಕಿನ ಬಿಜೆಪಿ ಯುವ ನಾಯಕ ವಿಕಾಸ್ ಪುತ್ತೂರು ಅವರಿಗೆ ದ್ವೇಷ ಭಾಷಣದ ಆರೋಪದ ಮೇಲೆ ಪೋಲೀಸ್ ಇಲಾಖೆ ನೀಡಿದ ನೋಟಿಸ್ ನ ವಿರುದ್ದ ಅಧಿವೇಶನದಲ್ಲಿ ವಿಧಾನ ಪರಿಷತ್ತು ಸದಸ್ಯ...

ಮಂಗಳೂರು : ಸ್ಟ್ರೀಟ್ ಫುಡ್ ಫೆಸ್ಟ್ ಗೆ ಚಾಲನೆ

ಮಂಗಳೂರು : ಕರಾವಳಿ ಉತ್ಸವದ ಅಂಗವಾಗಿ 3 ದಿನಗಳ ಸ್ಟ್ರೀಟ್ ಫುಡ್ ಫೆಸ್ಟ್ ಗೆ ಶುಕ್ರವಾರ ಚಾಲನೆ ನೀಡಲಾಯಿತು. ನಗರದ ಕದ್ರಿ ಪಾರ್ಕ್ ಮುಖ್ಯ ರಸ್ತೆಯಲ್ಲಿ ನಡೆಯುತ್ತಿರುವ ಕಾರ್ಯಕ್ರಮಕ್ಕೆ ಖ್ಯಾತ ಚೆಫ್ ಶ್ರೀಯಾ...

Bantwal : ಫೆ.1ರಂದು ರಾಜ್ಯ ಸರಕಾರಿ ನೌಕರರ ಸಂಘದ ವಾರ್ಷಿಕ ಮಹಾಸಭೆ

ಬಂಟ್ವಾಳ : ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ವಾರ್ಷಿಕ ಮಹಾಸಭೆ ಹಾಗೂ ವಿಶ್ರಾಂತ ಸರಕಾರಿ ನೌಕರರು ಮತ್ತು ಸಾಧಕರಿಗೆ ಅಭಿನಂದನಾ ಸಮಾರಂಭ ಬಿ.ಸಿ.ರೋಡಿನ ಸರಕಾರಿ ನೌಕರರ ಸಭಾಭವನದಲ್ಲಿ ಫೆ.1ರಂದು ಭಾನುವಾರ ನಡೆಯಲಿದೆ. 2023-24...