Thursday, July 10, 2025

ಕೊರೊನೊ ಜಾಗೃತಿಗಾಗಿ ಮನೆಗೆ ಬೇಟಿ ನೀಡಿದ ಅಧಿಕಾರಿಗಳ ಕರ್ತವ್ಯಕ್ಕೆ ಅಡ್ಡಿ

ಬಂಟ್ವಾಳ: ಬಂಟ್ವಾಳ ತಾಲೂಕಿನ
ಸಂಗಬೆಟ್ಟು ಗ್ರಾಮದ ಕಲ್ಕುರಿ ಎಂಬಲ್ಲಿ ವಿದೇಶದಿಂದ ಬಂದ ಮಹಿಳೆ ಮನೆಗೆ ಅಶಾ ಕಾರ್ಯಕರ್ತೆ ಮತ್ತು ಆರೋಗ್ಯ ಸಹಾಯಕಿ ಬೇಟಿ ನೀಡಿದ ಸಂದರ್ಭದಲ್ಲಿ ಅಲ್ಲಿ ಇವರಿಗೆಲ್ಲಾ ಸರಕಾರಿ ಕರ್ತವ್ಯ ಕ್ಕೆ ಅಡ್ಡಿಪಡಿಸಿ ಮೊಬೈಲ್ ಕಿತ್ತುಕೊಂಡು.
ಅವಚ್ಯ ಶಬ್ದಗಳಿಂದ ಬೈದು ಕಳಿಸಿದ್ದಾರೆ ಎಂದು ಸ್ಥಳೀಯರು ಮಾಹಿತಿ ನೀಡಿದ್ದಾರೆ.
ಈ ಘಟನೆಯಿಂದ ಸ್ಥಳೀಯರು ಆತಂಕಗೊಂಡಿದ್ದು ಈ ಬಗ್ಗೆ ಇಲಾಖೆ ಸೂಕ್ತವಾದ ಕ್ರಮಕೈಗೊಳ್ಳಬೇಕು ಎಂದು ಒತ್ತಾಯ ಮಾಡಿದೆ.
ಆರೋಗ್ಯ ಇಲಾಖೆ ಹಾಗೂ ತಾಲೂಕು ಆಡಳಿತ ಮುಂಜಾಗ್ರತಾ ಕ್ರಮಕ್ಕೆ ಮತ್ತು ಇಂತಹ ಸನ್ನಿವೇಶದಲ್ಲಿ ಸಂಶಯಿತರ ಪತ್ತೆ ಹಚ್ಚಿ ಚಿಕಿತ್ಸೆ ನೀಡುವ ನಿಟ್ಟಿನಲ್ಲಿ ಹಗಲಿರುಳು ಶ್ರಮಿಸುತ್ತಿದೆ.
ಇವರ ಕಾರ್ಯಕ್ಕೆ ಸಾರ್ವಜನಿಕರ ಸಹಕಾರ ಅತೀ ಅಗತ್ಯ ವಿದೆ.

ಆರೋಗ್ಯ ಇಲಾಖೆಯ ಸಿಬ್ವಂದಿಗಳಿಗೆ ಈ ರೀತಿಯಲ್ಲಿ ಬೆದರಿಕೆ ಬಂದರೆ ಜಿಲ್ಲಾಡಳಿತ
ತಾಲೂಕು ಆಡಳಿತ ಯಾರ ಆದೇಶ ವಿಲ್ಲ ದೆ ಕಾನೂನು ಕ್ರಮ ಕೈಗೊಳ್ಳಲು ಸರಕಾರ ಸೂಚನೆ ನೀಡಿದೆ.
ಘಟನೆ ನಡೆದ ತಕ್ಷಣ ಇಲಾಖೆ ಯ ಸಿಬ್ಬಂದಿ ಗಳು ಸ್ಥಳೀಯ ಪೋಲೀಸ್ ಇಲಾಖೆಗೆ ಮಾಹಿತಿ ನೀಡಲಾಗಿದೆ.
ಕೊರೊನೊ ವೈರಸ್ ನ ಬಗ್ಗೆ ಸಾರ್ವಜನಿಕರಲ್ಲಿ ಗೊಂದಲಗಳಿದ್ದು ಇದರ ತಡೆಗೆ ಇಲಾಖೆ ಸಾಹಸ ಮಾಡುತ್ತಿದೆ.
ಆದರೆ ಇಲಾಖೆ ಯ ಜೊತೆ ಕೊರೊನೊ ಜಾಗೃತಿಗಾಗಿ ಎಲ್ಲರ ಸಹಕಾರ ಅತೀ ಅಗತ್ಯ ವಾಗಿ ಬೇಕಾಗಿದೆ.

More from the blog

B. C Road : ಹೃದಯಾಘಾತದಿಂದ ಅವಿವಾಹಿತ ಯುವಕ ಸಾವು..

ಬಂಟ್ವಾಳ: ಹೃದಯಾಘಾತದಿಂದ ಸಾವನ್ನಪ್ಪುವ ಘಟನೆಗಳು ಇತ್ತೀಚಿನ ದಿನಗಳಲ್ಲಿ ಕಂಡು ಬರುತ್ತಿದ್ದು, ಒಂದಷ್ಟು ಸುದ್ದಿಯಾಗುತ್ತಿರುವಾಗಲೇ ಅವಿವಾಹಿತ ಯುವಕನೋರ್ವ ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ಬಿಸಿರೋಡಿನಲ್ಲಿ ನಡೆದಿದೆ. ರಾಜಸ್ಥಾನ ಮೂಲದ ನಟವರ್ ಸಿಂಗ್ (27) ಮೃತಪಟ್ಟ ಯುವಕ. ಬಿಸಿರೋಡಿನ ಹೃದಯಭಾಗದಲ್ಲಿ...

Guru Purnima : ಭಾರತೀಯ ಜನತಾ ಪಾರ್ಟಿ ವತಿಯಿಂದ ಗುರುವಂದನಾ ಕಾರ್ಯಕ್ರಮ..

ಬಂಟ್ವಾಳ : ಜುಲೈ 10 ಗುರುವಾರ ಗುರುಪೂರ್ಣಿಮೆಯಂದು, ಭಾರತೀಯ ಜನತಾ ಪಾರ್ಟಿ ವತಿಯಿಂದ 117ನೇ ಬೂತ್ ನಲ್ಲಿ ಗುರುಗಳನ್ನು ಗುರುತಿಸಿ ಅವರ ಮನೆಗೆ ಹೋಗಿ ಗೌರವಿಸುವ ಗುರುವಂದನಾ ಕಾರ್ಯಕ್ರಮ ನಡೆಯಿತು. ಎಲಬೆ ಪೂವಪ್ಪ ಪೂಜಾರಿಯವರ...

ಸುಳ್ಳು ಸುದ್ದಿ ನಿಯಂತ್ರಣಕ್ಕೆ ಮುಂದಿನ ಅಧಿವೇಶನದಲ್ಲೇ ಮಸೂದೆ : ಗೃಹ ಸಚಿವ ಜಿ. ಪರಮೇಶ್ವರ್..

ಮಂಗಳೂರು : ಸುಳ್ಳು ಸುದ್ದಿಗಳ ಹಾವಳಿ ಮತ್ತು ಊಹಾಪೋಹದ ಸುದ್ದಿಗಳ ಹಾವಳಿ ಮಿತಿ ಮೀರುತ್ತಿದೆ. ಈ ಹಿನ್ನಲೆಯಲ್ಲಿ ಸುಳ್ಳು ಸುದ್ದಿ ಹರಡುವುದು ಹಾಗೂ ದ್ವೇಷ ಭಾಷಣ ಮಾಡುವವರ ವಿರುದ್ಧ ಮುಂದಿನ ಅಧಿವೇಶನದಲ್ಲಿ ಮಸೂದೆ...

ರಾಜ್ಯದ ಜಿಲ್ಲಾ ಆಸ್ಪತ್ರೆಗಳಲ್ಲಿ ಗ್ರಂಥಾಲಯ ಸ್ಥಾಪನೆಗೆ ಸೂಕ್ತ ಕ್ರಮ – ದಿನೇಶ್ ಗುಂಡೂರಾವ್.. 

ಮಂಗಳೂರು : ರಾಜ್ಯದ ಜಿಲ್ಲಾ ಆಸ್ಪತ್ರೆಗಳಲ್ಲಿ ಗ್ರಂಥಾಲಯ ಸ್ಥಾಪನೆಗೆ ಸೂಕ್ತ ಕ್ರಮ ಕೈ ಗೊಳ್ಳಲಾಗುವುದುಎಂದು ಅರೋಗ್ಯ ಹಾಗೂ ಕುಟುಂಬ ಕಲ್ಯಾಣ ಇಲಾಖೆ ಸಚಿವ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ. ಅವರು...