ನವದೆಹಲಿ: ದಿನದಿಂದ ದಿನಕ್ಕೆ ಕೊರೊನಾ ಅಟ್ಟಹಾಸ ಮೆರೆಯುತ್ತಿದೆ. ಇಡೀ ದೇಶ ಲಾಕ್ ಡೌನ್ ಮಾಡಿಯೂ ಕಂಟ್ರೋಲ್ ಗೆ ಸಿಗದ ರೀತಿಯಲ್ಲಿ ವೈರಸ್ ಹರಡುತ್ತಿದೆ. ಕರ್ನಾಟಕದಲ್ಲಿಯೂ ಪಾಸಿಟಿವ್ ಪ್ರಕರಣಗಳು ಹೆಚ್ಚಾಗುತ್ತಲೆ ಇವೆ.

ಭಾರತದಲ್ಲಿ ನಾವು ನೋಡ ನೋಡುತ್ತಿದ್ದಂತೆ ಕರೊನಾ ವೈರಸ್ ಹರಡುವಿಕೆ ಪ್ರಮಾಣ ಹೆಚ್ಚಾಗುತ್ತಲೆ ಇದೆ. ಪ್ರಸ್ತುತ ಕರೊನಾ ಸೋಂಕಿತರ ಸಂಖ್ಯೆ 14,378ಕ್ಕೆ ಏರಿದ್ದು, 480 ಜನರು ಮೃತಪಟ್ಟಿದ್ದಾರೆ. 1992 ರೋಗಿಗಳು ಕರೊನಾದಿಂದ ಚೇತರಿಸಿಕೊಂಡಿದ್ದಾರೆ ಎಂದು ಇಂದು ಬೆಳಗ್ಗೆ ಆರೋಗ್ಯ ಇಲಾಖೆ ನೀಡಿದ ಮಹತ್ವದ ಮಾಹಿತಿ.
ಎ.18 ಶುಕ್ರವಾರದವರೆಗೆ ಕರೊನಾ ಸೋಂಕಿತರ ಸಂಖ್ಯೆ 13,387 ಇದ್ದು 437 ಮಂದಿ ಕೊರೊನಾ ಪಾಸಿಟಿವ್ ಪ್ರಕರಣದಲ್ಲಿ ಸಾವನ್ನಪ್ಪಿದ್ದರು. 1749 ಮಂದಿ ಡಿಸ್ಚಾರ್ಜ್ ಆಗಿದ್ದರು. ಕಳೆದ 24ಗಂಟೆಯಲ್ಲಿ ಎಲ್ಲ ಸಂಖ್ಯೆಯಲ್ಲೂ ಗಣನೀಯವಾಗಿ ಹೆಚ್ಚಾಗಿದೆ ಎಂಬ ಆತಂಕ ದ ಸಂಗತಿ ಬೆಳಕಿಗೆ ಬಂದಿದೆ.
ದೇಶದ್ಯಾದಂತ ಮಹಾರಾಷ್ಟ್ರ, ದೆಹಲಿ, ತಮಿಳುನಾಡು, ಮಧ್ಯಪ್ರದೇಶ, ರಾಜಸ್ಥಾನಗಳಲ್ಲಿ ಕರೊನಾ ವಿಪರೀತವಾಗಿ ಬಾಧಿಸುತ್ತಿದೆ ಎಂಬ ಆತಂಕಕಾರಿ ಬೆಳವಣಿಗೆ ಎಲ್ಲ ರನ್ನು ಬೆಚ್ಚಿಬೀಳಿಸಿದೆ. ಮಹಾರಾಷ್ಟ್ರದಲ್ಲಿ ಅತಿ ಹೆಚ್ಚು 3323 ಮಂದಿ ಸೋಂಕಿತರು ಇದ್ದಾರೆ. ದೆಹಲಿಯಲ್ಲಿ 1707, ತಮಿಳುನಾಡಿನಲ್ಲಿ 1323, ರಾಜಸ್ಥಾನದಲ್ಲಿ 1229 ಜನ ವೈರಸ್ ಪೀಡಿತರು ಇದ್ದಾರೆ. ಹಾಗೇ ಸಾವಿನ ಸಂಖ್ಯೆಯಲ್ಲೂ ಮಹಾರಾಷ್ಟ್ರವೇ ಮುಂದಿದೆ. ಅಲ್ಲಿ ಬರೋಬ್ಬರಿ 201ಮಂದಿ ಕೊವಿಡ್ನಿಂದ ಮೃತಪಟ್ಟಿದ್ದಾರೆ.
ಪ್ರಸ್ತುತ ದೇಶದ ಎಲ್ಲ ರಾಜ್ಯಗಳಲ್ಲೂ ಕರೊನಾ ವೈರಸ್ ದಿನದಿಂದ ದಿನಕ್ಕೆ ತನ್ನ ಅಟ್ಟಹಾಸ ತೋರಿಸುತ್ತಿದ್ದು, ಸದ್ಯ ಭಾರತದಲ್ಲಿ ಎರಡನೇ ಹಂತದ ಲಾಕ್ಡೌನ್ ಇದೆ. ಇದು ಮುಗಿಯುವ ಹೊತ್ತಿಗಾದರೂ ಕರೊನಾ ಪ್ರಮಾಣ ಕಡಿಮೆ ಆಗಲಿ ಎಂಬುದೇ ಎಲ್ಲರ ಹಾರೈಕೆ.

