Sunday, January 25, 2026

24 ಗಂಟೆಗಳಲ್ಲಿ 1336 ಮಂದಿಗೆ ಕೊರೊನಾ ಪಾಸಿಟಿವ್: ಆತಂಕಕಾರಿ ಬೆಳವಣಿಗೆ

ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 1336 ಮಂದಿಗೆ ಕೊರೊನಾ ಪಾಸಿಟಿವ್ ವೈರಸ್ ತಗಲಿರುವುದು ದೃಡಪಟ್ಟಿರುವುದು ಆತಂಕ ಕಾರಿ ಬೆಳವಣಿಗೆ ಯಾಗಿದೆ.

ದೇಶಾದ್ಯಂತ ಮಾರಣಾಂತಿಕ ಕೊರೊನಾ ವೈರಸ್ ಆತಂಕ ತಂದೊಡ್ಡಿದ್ದು, ದಿನೇ ದಿನೇ ಸೋಂಕು ಪೀಡಿತರ ಸಂಖ್ಯೆ ಏರಿಕೆಯಾಗುತ್ತಿದೆ. ಸೋಂಕು ನಿಯಂತ್ರಣಕ್ಕೆ ಕಠಿಣ ಹಾಗೂ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದ್ದರೂ ಪರಿಸ್ಥಿತಿ ನಿಯಂತ್ರಣ ಸರ್ಕಾರಗಳಿಗೆ ತಲೆನೋವಾಗಿ ಪರಿಣಮಿಸಿದೆ.

ದೇಶದಲ್ಲಿ ಸೋಂಕು ಪೀಡಿತರ ಸಂಖ್ಯೆ 18,601ಕ್ಕೆ ಏರಿಕೆಯಾಗಿದೆ. ಈ ಕುರಿತಂತೆ ಕೇಂದ್ರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದ್ದು, ದೇಶದಲ್ಲಿ ಕಳೆದ 24 ಗಂಟೆಯಲ್ಲಿ ಹೊಸದಾಗಿ 1336 ಮಂದಿಯಲ್ಲಿ ಕೊರೊನಾ ಸೋಂಕು ದೃಢಪಟ್ಟಿದ್ದು, ಕಿಲ್ಲರ್ ಕೊರೊನಾಗೆ 47 ಮಂದಿ ಬಲಿಯಾಗಿದ್ದಾರೆ. ಇನ್ನು 18,601 ಮಂದಿ ಸೋಂಕಿತರ ಪೈಕಿ 14,759 ಮಂದಿ ಸದ್ಯ ಚಿಕಿತ್ಸೆ ಪಡೆಯುತ್ತಿದ್ದಾರೆ. ಇನ್ನು 3252 ಮಂದಿ ಚಿಕಿತ್ಸೆ ಪಡೆದು ಗುಣಮುಖರಾಗಿ ಆಸ್ಪತ್ರೆಗಳಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದೇ ವೇಳೆ, ಈವರೆಗೆ ದೇಶದಲ್ಲಿ ಡೆಡ್ಲಿ ಕೊರೊನಾಗೆ 590 ಮಂದಿ ಬಲಿಯಾಗಿದ್ದಾರೆ. ರಾಜ್ಯದಲ್ಲಿಯೂ ಕೊರೊನಾ ಪಾಸಿಟಿವ್ ಪ್ರಕರಣಗಳು ಹೆಚ್ಚಾಗುತ್ತಲೆ ಇದೆ ವಿನಹ ಕಂಟ್ರೋಲ್ ಗೆ ಬರುತ್ತಿಲ್ಲ ಎಂಬುದು ಒಂದು ರೀತಿಯ ಭಯ ಹುಟ್ಟಿಸಿದೆ.
ದ.ಕ.ಜಿಲ್ಲೆಯಲ್ಲಿ ಕೂಡ ಇನ್ನೇನು ಕೋವಿಡ್ 19 ಪ್ರಕರಣಗಳ ಸಂಖ್ಯೆ ಇಳಿಮುಖವಾಗಿ ಕ್ಲೀಯರ್ ಸಿಟಿ ಅಗುತ್ತೆ ಅಂದುಕೊಂಡರೆ ಬಂಟ್ವಾಳ ದ ಸಾವನ್ನಪ್ಪಿದ ಮಹಿಳೆಗೆ ಸೊಂಕು ದೃಢಪಡಿಸಿತು. ಅ ಮೂಲಕ ಮತ್ತೆ ಜಿಲ್ಲೆಯ ಜನರು ಒಂದಷ್ಟು ಗೊಂದಲಕ್ಕೆ ಸಿಲುಕಿದ್ದಾರೆ.
ಜನ ಮುಂಜಾಗ್ರತೆ ವಹಸಿ ಕೋವಿಡ್ 19 ವಿರುದ್ಧ ಹೋರಾಡಬೇಕಾಗಿದೆ.

More from the blog

ವಿಟ್ಲ : ಜಾತ್ರೆಯ ಪ್ರಯುಕ್ತ ನೇಮೋತ್ಸವ..

ವಿಟ್ಲ : ಮಹತೋಭಾರ ಶ್ರೀ ಪಂಚಲಿಂಗೇಶ್ವರ ದೇವಸ್ಥಾನ ವಿಟ್ಲ ಇದರ ವರ್ಷಂಪ್ರತಿ ನಡೆಯುವ ಕಾಲಾವಧಿ ಜಾತ್ರೆಯ ಪ್ರಯುಕ್ತ ಅರಸು ಮುಂಡಾಲತ್ತಾಯ, ಮಲರಾಯ ದೈವ, ಕೊಡಮಣಿತ್ತಾಯ ಹಾಗೂ ಪಿಲಿಚಾಮುಂಡಿ ದೈವಕ್ಕೆ ದೇವಸ್ಥಾನದ ಎದುರು ನೇಮೋತ್ಸವ...

ಜಿಲ್ಲಾ ಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟ – ಅಶೋಕ ಕುಮಾರ್ ರಾಜ್ಯ ಮಟ್ಟಕ್ಕೆ ಆಯ್ಕೆ..

ಬಂಟ್ವಾಳ : ದಕ್ಷಿಣ ಕನ್ನಡ ಜಿಲ್ಲಾ ಆಡಳಿತ, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಮಂಗಳೂರು ಮಹಾನಗರ ಪಾಲಿಕೆ ಹಾಗೂ ಕರ್ನಾಟಕ ಸರಕಾರಿ ನೌಕರ ಸಂಘ, ದಕ್ಷಿಣ...

ಜಿಲ್ಲಾ ಸರ್ಕಾರಿ ನೌಕರರ ಕ್ರೀಡಾಕೂಟ – ಕೆ.ಪಿ.ಎಸ್ ಪ್ರೌಢಶಾಲೆ ದೈಹಿಕ ಶಿಕ್ಷಣ ಶಿಕ್ಷಕಿ ರಾಜ್ಯ ಮಟ್ಟಕ್ಕೆ ಆಯ್ಕೆ..

ಬಂಟ್ವಾಳ :ದಕ್ಷಿಣ ಕನ್ನಡ ಜಿಲ್ಲಾ ಆಡಳಿತ, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಮಂಗಳೂರು ಮಹಾನಗರ ಪಾಲಿಕೆ ಹಾಗೂ ಕರ್ನಾಟಕ ಸರಕಾರಿ ನೌಕರ ಸಂಘ ದಕ್ಷಿಣ ಕನ್ನಡ...

ಸರಪಾಡಿ ಶ್ರೀ ಶರಭೇಶ್ವರ ದೇವಸ್ಥಾನದಲ್ಲಿ ಪ್ರತಿಷ್ಠಾ ವರ್ಧಂತ್ಯುತ್ಸವ..

ಬಂಟ್ವಾಳ: ಸರಪಾಡಿ ಶ್ರೀ ಶರಭೇಶ್ವರ ದೇವಸ್ಥಾನದಲ್ಲಿ ಪ್ರತಿಷ್ಠಾ ವರ್ಧಂತ್ಯುತ್ಸವವು ಶತರುದ್ರಾಭಿಷೇಕ ಸಹಿತ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ತಂತ್ರಿಗಳಾದ ದಿನೇಶ್‌ಕೃಷ್ಣ ತಂತ್ರಿಗಳ ನೇತೃತ್ವದಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಪ್ರಾರ್ಥನೆ, ಪುಣ್ಯಾಹ, ಗಣಹೋಮ, ಶತರುದ್ರಾಭಿಷೇಕ, ನವಕ ಕಲಶಾಭಿಷೇಕ, ವೀರಾಂಜನೇಯ...