Tuesday, January 27, 2026

ಕರಾವಳಿ ಮರಳು ನೀತಿ ರೂಪಿಸಲು ಒತ್ತಾಯಿಸಿ AICCTU ವತಿಯಿಂದ ಜಿಲ್ಲಾಧಿಕಾರಿಗಳಿಗೆ ಮನವಿ.

ಬಂಟ್ವಾಳ : ದಕ್ಷಿಣ ಕನ್ನಡ ಜಿಲ್ಲೆಯ ವ್ಯಾಪ್ತಿಯಲ್ಲಿ ನಡೆಯುತ್ತಿದ್ದ ಅಕ್ರಮ ಮರಳು ಮತ್ತು ಕೆಂಪು ಕಲ್ಲು ಗಣಿಗಾರಿಕೆಯನ್ನು ಪೂರ್ತಿಯಾಗಿ ನಿಷೇಧ ಮಾಡಿರುವುದನ್ನು ಪ್ರಗತಿಪರ ದ.ಕ ಜಿಲ್ಲಾ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಸಂಘವು ಸ್ವಾಗತಿಸುತ್ತದೆ.

ಆದರೆ ಅದರ ಜೊತೆ ಜೊತೆಯಾಗಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಧಿಕೃತವಾಗಿ ಮರಳು ಕೆಂಪು ಕಲ್ಲು ತೆಗೆಯಲು ಅವಕಾಶ ಮಾಡಿಕೊಡಬೇಕಾದ ಆಡಳಿತ ತನ್ನ ಜವಾಬ್ದಾರಿಯಿಂದ ನಯಣುಚಿಕೊಳ್ಳುವುದನ್ನು ತೀವ್ರವಾಗಿ ವಿರೋಧಿಸುತ್ತದೆ. ನಿಷೇಧದಿಂದ ಕಟ್ಟಡ, ಮನೆ ನಿರ್ಮಾಣ ಸೇರಿದಂತೆ ಎಲ್ಲಾ ರೀತಿಯ ನಿರ್ಮಾಣ ಕಾಮಗಾರಿಗಳು ಸ್ಥಗಿತವಾಗಿವೆ. ಈ ರೀತಿಯ ತೀರ್ಮಾಣಗಳನ್ನು ತೆಗೆದುಕೋಳ್ಳುವಾಗ ಅಧಿಕೃತ ಯೋಜನೆಗಳಿಗೆ ತೊಂದರೆಗಳು ಆಗದ ಹಾಗೆ ಕ್ರಮ ಕೈಗೊಳ್ಳಬೇಕು. ಪಂಚಾಯತ್ ವ್ಯಾಪ್ತಿಯಲ್ಲಿ ಪಂಚಾಯತ್ ಗಳಿಂದಲೇ ಅಧಿಕೃತವಾಗಿ ಮರಳು ದೊರೆಯಬೇಕು ಅಧಿಕೃತ ಮರಳು ಮತ್ತು ಕೆಂಪು ಕಲ್ಲು ಪೂರೈಕೆ ಆಗದೇ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರು ತೀವ್ರವಾದ ಸಮಸ್ಯೆಯನ್ನು ಎದುರಿಸಿದ್ದಾರೆ.ಆವರ ಜೀವನ ನಿರ್ವಹಣೆ ಕಷ್ಟವಾಗಿದೆ.

ಆದುದರಿಂದ ಸರಕಾರ ಶೀಘ್ರವಾಗಿ ಮಧ್ಯ ಪ್ರವೇಶಿಸಿ ದಕ್ಷಿಣ ಕನ್ನಡ ಜಿಲ್ಲೆಯ ವ್ಯಾಪ್ತಿಯಲಿ ಅಧಿಕೃತವಾಗಿ ಸಾಂಪ್ರದಾಯಿಕ ರೀತಿಯಲ್ಲಿ ಮರಳುಗಾರಿಗೆ ಮತ್ತು ಕಲ್ಲು ಗಣಿಗಾರಿಕೆಯನ್ನು ಸ್ಥಳೀಯ ಆಡಳಿತದಿಂದಲೇ ನಡೆಸಲು ಕ್ರಮ ಕೈಗೊಳ್ಳಬೇಕು. ಎಲ್ಲರಿಗೂ ಕಡಿಮೆ ದರದಲ್ಲಿ ಸರಳವಾಗಿ ಮತ್ತು ಸರಾಗವಾಗಿ ಮರಳು ಪೂರೈಕೆ ಆಗುವಂತೆ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರಿಗೆ ಉದ್ಯೋಗ ಅವಕಾಶಗಳು ಸಿಗುವಂತೆ ಶೀಘ್ರ ಕ್ರಮಗಳನ್ನು ಕೈಗೊಳ್ಳಬೇಕೆಂದು ಒತ್ತಾಯಿಸಿ

ಪ್ರಗತಿಪರ ದಕ್ಷಿಣ ಕನ್ನಡ ಜಿಲ್ಲಾ ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರ ಸಂಘ AICCTU ದ.ಕ ಜಿಲ್ಲಾ ಸಮಿತಿ ವತಿಯಿಂದ ಬಂಟ್ವಾಳ ತಹಶಿಲ್ದಾರರ ಮೂಲಕ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು.

ನಿಯೋಗದಲ್ಲಿ ಸಂಘದ ಆದ್ಯಕ್ಷರಾದ ರಾಮಣ್ಣ ವಿಟ್ಲ, ಕಾರ್ಯದರ್ಶಿ ಅಚ್ಯುತ ಕಟ್ಟೆ , ಮುಖಂಡರಾದ ರಾಜಾ ಚೆಂಡ್ತಿಮಾರ್, ರಘುರಾಮ ಪಳೇರಿ ಮುಂತಾದವರು ಇದ್ದರು.

More from the blog

ಉಸ್ತುವಾರಿ ಸಚಿವರು ಗಣರಾಜ್ಯೋತ್ಸವ ವೇದಿಕೆಯನ್ನು ಸುಳ್ಳು ಹರಡಲು ಬಳಸಿಕೊಂಡಿರುವುದು ಖೇದಕರ : ಸಂಸದ ಕ್ಯಾ.ಚೌಟ

ಮಂಗಳೂರು: ಸಂವಿಧಾನಿಕ ಹುದ್ದೆಯನ್ನು ದುರುಪಯೋಗಪಡಿಸಿ ಸುಳ್ಳಿನ ಕಾರ್ಖಾನೆಯನ್ನೇ ಸೃಷ್ಟಿಸುವ ಕಾಂಗ್ರೆಸ್‌ ಸರ್ಕಾರದ ಪ್ರಯತ್ನ ಸಂಪೂರ್ಣ ವಿಫಲಗೊಂಡಿರುವ ಕಾರಣ ಇದೀಗ ಸಚಿವ ದಿನೇಶ್‌ ಗುಂಡೂರಾವ್‌ ಅವರು ಘನವೆತ್ತ ರಾಜ್ಯಪಾಲರ ನಡೆಯನ್ನು ಟೀಕಿಸುತ್ತಿದ್ದಾರೆ ಎಂದು ದಕ್ಷಿಣ...

ಸಂಗಬೆಟ್ಟು ಗ್ರಾ.ಪಂ ವಿಶೇಷ ಗ್ರಾಮ ಸಭೆ : ವಿಬಿ-ಜಿ ರಾಮ್ ಜಿ ಯೋಜನೆ ಅನುಷ್ಠಾನಕ್ಕೆ ತೀರ್ಮಾನ 

ಬಂಟ್ವಾಳ : ಕೇಂದ್ರ ಸರಕಾರವು ಹೊಸದಾಗಿ ಜಾರಿಗೆ ತಂದಿರುವ ವಿಬಿ-ಜಿ ರಾಮ್ ಜಿ ("ವಿಕಸಿತ್ ಭಾರತ್ "ಗ್ಯಾರಂಟಿ ಯೋಜಗಾರ್ ಮತ್ತು ಆಜೀವಿಕಾ ಮಿಷನ್ (ಗ್ರಾಮೀಣ್) ಯೋಜನೆಯು ಒಂದು ಅತ್ಯುತ್ತಮ ಯೋಜನೆಯಾಗಿದ್ದು, ಇದರಲ್ಲಿನ ಕೆಲವೊಂದು...

ವೈಭವದಿಂದ ಜರುಗಿದ ಮಡಂತ್ಯಾರು ಮಂಡಲದ ಹಿಂದು ಸಂಗಮ ಕಾರ್ಯಕ್ರಮ..

ಮಡಂತ್ಯಾರು : ರಾಷ್ಟ್ರೀಯ ಸ್ವಯಂಸೇವಕ ಸಂಘದ ಶತಾಬ್ದಿ ವರ್ಷದ ಅಂಗವಾಗಿ, ಮಡಂತ್ಯಾರು ಮಂಡಲದ ಹಿಂದು ಸಂಗಮ ಕಾರ್ಯಕ್ರಮವು ಜ. 25 ಭಾನುವಾರದಂದು ಮಡಂತ್ಯಾರಿನಲ್ಲಿ ಅತ್ಯಂತ ವೈಭವ ಮತ್ತು ಶಿಸ್ತಿನೊಂದಿಗೆ ನಡೆಯಿತು. ಸಂಜೆ ನಾಲ್ಕು ಗಂಟೆಗೆ...

ತುಳುನಾಡ ಜಾತ್ರೆ – ಶ್ರೀ ಒಡಿಯೂರು ರಥೋತ್ಸವ, ಬ್ರಹ್ಮಕಲಶೋತ್ಸವ ಹೊರೆ ಕಾಣಿಕೆ, ಉಗ್ರಾಣ ಮುಹೂರ್ತ

ವಿಟ್ಲ: ಜ.27 ಮತ್ತು 28 ರಂದು ಒಡಿಯೂರು ಶ್ರೀ ಗುರುದೇವ ದತ್ತ ಸಂಸ್ಥಾನದಲ್ಲಿ ನಡೆಯಲಿರುವ ತುಳುನಾಡ ಜಾತ್ರೆ -ಶ್ರೀ ಒಡಿಯೂರು ರಥೋತ್ಸವ, ಬ್ರಹ್ಮಕಲಶೋತ್ಸವ, ವಂದೇ ಮಾತರಂ ತುಳು ಸಾಹಿತ್ಯ ಸಮ್ಮೇಳನದ ಅಂಗವಾಗಿ ಹಸಿರುವಾಣಿ...