Wednesday, July 9, 2025

ಕೋವಿಡ್ -19 ಹೆಸರಲ್ಲಿ ಹಣದ ದಂಧೆಗೆ ಇಳಿದ ಮಂಗಳೂರಿನ ಖಾಸಗಿ ಆಸ್ಪತ್ರೆಗಳ ವಿರುಧ್ಧ ಜಿಲ್ಲಾಧಿಕಾರಿ / ಜಿಲ್ಲಾ ಆರೋಗ್ಯಧಿಕಾರಿಗೆ ಮನವಿ

ಮಂಗಳೂರು : ಕೋವಿಡ್ ಪರೀಕ್ಷೆಯ ನೆಪದಲ್ಲಿ ಖಾಸಗಿ ಆಸ್ಪತ್ರೆಗಳ ದಂಧೆ ಶುರು ಮಾಡಿವೆ ಎಂಬ ಆರೋಪ ಸಾರ್ವಜನಿಕ ವಲಯದಿಂದ ಕೇಳಿ ಬಂದಿದೆ. ಸರ್ಕಾರದ ಆದೇಶಕ್ಕೂ ಖಾಸಗಿ ಆಸ್ಪತ್ರೆಗಳು ಕೇರ್ ಮಾಡುತ್ತಿಲ್ಲ. ಸರ್ಕಾರದ ಆದೇಶ ಕೇವಲ ಕಾಗದದ ಪತ್ರಕ್ಕೆ ಸೀಮಿತ ಆಗಿದೆಯಾ ? ಎಂಬ ಸಂಶಯ ಮೂಡವಂತಾಗಿದೆ. ಸರ್ಕಾರ ನಿಗದಿ ಪಡಿಸಿರುವ ಹಣಕ್ಕಿಂತ ಹೆಚ್ಚು ಹಣವನ್ನು ಶುಲ್ಕ ರೂಪದಲ್ಲಿ ಆಸ್ಪತ್ರೆಗಳು ಪೀಕಿಸುತ್ತಿವೆ. ಈ ಬಗ್ಗೆ ಜಿಲ್ಲಾಧಿಕಾರಿಗೆ ಪುದು ಗ್ರಾಮ ಪಂಚಾಯತ್ ಸದಸ್ಯ ಹಾಶೀರ್ ಪೇರಿಮಾರ್ ನೇತೃತ್ವದಲ್ಲಿ ಶುಕ್ರವಾರ ಮನವಿ ಸಲ್ಲಿಸಲಾಯಿತು.

ಮಂಗಳೂರಿನ ಖಾಸಗಿ ಆಸ್ಪತ್ರೆಯೊಂದರಲ್ಲಿ ಕುಟುಂಬವೊಂದರ ತಂದೆ ಮಗ ಇಬ್ಬರಿಗೂ ಕೊರೋನಾ ಪಾಸಿಟಿವ್ ಆಗಿ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿದ್ದರು. ಆ ದಿನ ಕಳೆದು ಮನೆಗೆ ಹೋಗಲು ತಿಳಿಸಿದ್ದರಿಂದ ಬಿಲ್ಲು ನೋಡುವಾಗ ಲಕ್ಷಗಟ್ಟಲೆ ಇದ್ದ ಕಾರಣ ಆಸ್ಪತ್ರೆ ಆಡಳಿತ ಸಮಿತಿ ಅವರಿಂದ ಸರಿಯಾದ ಉತ್ತರ ಸಿಗದ ಕಾರಣ ಜಿಲ್ಲಾ ಆರೋಗ್ಯಾಧಿಕಾರಿ ಡಾ.ರತ್ನಾಕರ್ ಅವರನ್ನು ಜಿಲ್ಲಾಧಿಕಾರಿ ಅವರೇ ಕಛೇರಿಗೆ ಕರೆಸಿ ಚರ್ಚೆ ನಡೆಸಿ ಖಾಸಗಿ ಆಸ್ಪತ್ರೆಯ ಆಡಳಿತ ಮಂಡಳಿ ಅವರೊಂದಿಗೆ ಮಾತುಕತೆ ನಡೆಸಿದರು.

ಜಿಲ್ಲಾ ಆರೋಗ್ಯಧಿಕಾರಿ ಡಾ.ರತ್ನಾಕರ್ ರವರ ನಿರ್ದೇಶನ ಪ್ರಕಾರ ಮಂಗಳೂರಿನ ಆಸ್ಪತ್ರೆಗೆ ತೆರಳಿದಾಗ ಅಲ್ಲಿನ ವೈದ್ಯರು ಭೇಟಿಯಾಗಲು ಅವಕಾಶ ನಿರಾಕರಿಸಿದ್ದು, ಇನ್ನೊಂದು ರೋಗಿಯ ಸಂಬಂಧಿಕರು ಕೂಡ ವಿಪರೀತ ಬಿಲ್ ನೀಡಿರುವ ಬಗ್ಗೆ ಆಸ್ಪತ್ರೆ ಸಿಬ್ಬಂದಿಯ ಜೊತೆ ಮಾತಿನ ಚಕಮಕಿ ನಡೆಸಿದ್ದರು.

ಆಸ್ಪತ್ರೆಯ ಮುಖ್ಯಸ್ಥರ ಸೂಚನೆಯಂತೆ ಕಂಕನಾಡಿ ಪೋಲಿಸರು ಆಗಮಿಸಿದ್ದು, ನಂತರ ಆಸ್ಪತ್ರೆಯ ಮುಖ್ಯಸ್ಥರಲ್ಲಿ ನಮಗೆ ಅಷ್ಟೊಂದು ಬಿಲ್ಲು ಪಾವತಿಸಲು ಸಾಧ್ಯವಿಲ್ಲ ಆದಕಾರಣ ಡಿಸೈಂಟ್ ನೀಡಬೇಕು ಎಂದು ಮನವರಿಕೆ ಮಾಡಿದ ನಂತರ ೧,೮೮,೮೩೬ ಬಿಲ್ ನಲ್ಲಿ ೩೮,೮೩೬ ಡಿಸೈಂಟ್ ಮಾಡಿ ಪಾವತಿಸಿದರು. ತದನಂತರ ಮೊದಲ ರೋಗಿಗೂ ೨,೩೦,೩೪೭ ರೂ ಬಿಲ್ ನಲ್ಲಿ ೮೦,000 ರೂ. ಬಿಲ್ ಡಿಸೈಂಟ್ ಮಾಡಿ ರೋಗಿಯನ್ನು ಡಿಸ್ಸಾರ್ಜ್ ಮಾಡಿದ ಘಟನೆ ಈ ಖಾಸಗಿ ಆಸ್ಪತ್ರೆಯಲ್ಲಿ ನಡೆದಿದೆ. ಆದರೆ ಆಸ್ಪತ್ರೆಯ ಇಂತಹ ದೌರ್ಜನ್ಯದ ವಿರುದ್ದ ಹಾಶೀರ್ ಪೇರಿಮಾರ್ ಮತ್ತಿತರು ಧ್ವನಿ ಎತ್ತಿದ್ದಾರೆ.

ಮನವಿ ಸಲ್ಲಿಕೆಯ ವೇಳೆ ನೌಶಾದ್ ಮಲಾರ್, ಎಂಎಸ್‌ಎಫ್ ಜಿಲ್ಲಾಧ್ಯಕ್ಷ ಇಶ್ರಾರ್‌ ಗೂಡಿನಬಳಿ, ಪ್ರಧಾನ ಕಾರ್ಯದರ್ಶಿ ಫಾಝಿಲ್ ಪೇರಿಮಾರ್, ಅಲ್ ಬಿರ್ ಕರ್ನಾಟಕ ಕೋ – ಆರ್ಡಿನೇಟರ್ ಅಕ್ಟರ್ ಅಲಿ ಅಡೂರು, ವಿಖಾಯ ಜಿಲ್ಲಾ ಉಪಾಧ್ಯಕ್ಷ ಇಬ್ರಾಹಿಂ ಕುಕ್ಕಟ್ಟೆ, ಎಸ್‌ಕೆಎಸ್‌ಎಸ್‌ಎಫ್ ಕೈಕಂಬ ವಲಯ ಮುಖಂಡ ಶರೀಫ್ ಮಳಲಿ, ಎಸ್‌ಕೆಎಸ್‌ಎಸ್‌ಎಫ್ ಜಿಲ್ಲಾ ಕೌಂನ್ಸಿಲರ್ ಮುಸ್ತಫಾ ಬಂಗ್ಲೆಗುಡ್ಡೆ ಮತ್ತಿತ್ತರರು ಉಪಸ್ಥಿತರಿದ್ದರು.

More from the blog

ಭಾರೀ ಮಳೆ ಮುನ್ಸೂಚನೆ : ಒಂದು ವಾರ ಕರ್ನಾಟಕದ ಕರಾವಳಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್..

ಮಂಗಳೂರು : ರಾಜ್ಯದ ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ಇಂದಿನಿಂದ ಜುಲೈ 14ರವರೆಗೆ ಭಾರಿ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ, ಚಿಕ್ಕಮಗಳೂರು,...

ಕುಡ್ತಮುಗೇರು: ಬಸ್ಸಿನಿಂದ ರಸ್ತೆಗೆ ಬಿದ್ದ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೆ ಸಾವು 

ವಿಟ್ಲ: ಖಾಸಗಿ ಬಸ್ಸಿನಿಂದ ಬಿದ್ದ ವ್ಯಕ್ತಿಯೋರ್ವರು ಚಿಕಿತ್ಸೆಗೆ ಸ್ಪಂಧಿಸದೆ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ಕುಡ್ತಮುಗೇರು ಎಂಬಲ್ಲಿ ನಡೆದಿದೆ. ಬಂಟ್ವಾಳ ತಾಲೂಕು ಕೊಳ್ನಾಡು ಗ್ರಾಮದ ಕೊಡಂಗೆ ನಿವಾಸಿ ಚಿದಾನಂದ ರೈ (43 ವ.) ಮೃತಪಟ್ಟವರು. ಜು.7ರಂದು ಬೆಳಗ್ಗೆ...

ನಾಯಕತ್ವ ಬೆಳವಣಿಗೆಗೆ ಶ್ರಮದೊಂದಿಗೆ ನಿಷ್ಠೆ, ತಾಳ್ಮೆ ರೂಡಿಸಿಕೊಂಡಾಗ ಯಶಸ್ಸು ಸಾಧ್ಯ : ರೋ. ರಾಘವೇಂದ್ರ ಭಟ್

ಬಂಟ್ವಾಳ : ನಾಯಕತ್ವದ ಬೆಳವಣಿಗೆಗೆ ಶ್ರಮದೊಂದಿಗೆ ನಿಷ್ಠೆ ಮತ್ತು ತಾಳ್ಮೆ ರೂಡಿಸಿಕೊಳ್ಳಬೇಕು ಈ ನಿಟ್ಟಿನಲ್ಲಿ ಅವಕಾಶ ಗಳನ್ನು ಹುಡುಕಿಕೊಂಡು, ದೇಶದ ಇತಿಹಾಸದಲ್ಲಿ ಕಾಣುವ ವಿವಿಧ ಕ್ಷೆತ್ರದಲ್ಲಿ ಗಣನೀಯ ಸೇವೆ ಗೈದರವರ ಆದರ್ಶ ಗಳನ್ನು...

ಜು.10ರಂದು ಹಿಂದೂ ಜನಜಾಗೃತಿ ಸಮಿತಿಯಿಂದ ಗುರುಪೂರ್ಣಿಮಾ ಮಹೋತ್ಸವ ಆಯೋಜನೆ

ಬಿ.ಸಿ. ರೋಡ್ : ಸಮಸ್ತ ಜಗತ್ತು ಯುದ್ಧದತ್ತ ಸಾಗುತ್ತಿದೆ. ಭಾರತದಲ್ಲಿಯೂ ಜಿಹಾದಿ ಭಯೋತ್ಪಾದಕರು ಹಿಂದೂಗಳನ್ನು ಹತ್ಯೆ ಮಾಡಿ, ಭಾರತವನ್ನು ಯುದ್ಧಕ್ಕೆ ಪ್ರೇರೇಪಿಸುತ್ತಿದ್ದಾರೆ. ಶ್ರೀರಾಮ, ಶ್ರೀಕೃಷ್ಣನಂತಹ ಅವತಾರಗಳಿಂದ ಹಿಡಿದು ಛತ್ರಪತಿ ಶಿವಾಜಿ ಮಹಾರಾಜ, ಮಹಾರಾಣಾ...