Saturday, January 31, 2026

ಕೊವೀಡ್-19 ಜಾಗೃತಿ ಕಾರ್ಯಕ್ರಮ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಗೃಹರಕ್ಷಕ ದಳ ಮತ್ತು ಪೌರರಕ್ಷಣಾ ಪಡೆ ಇದರ ವತಿಯಿಂದ ನಗರದ ಪಡೀಲಿನಲ್ಲಿ ನಿರ್ಮಾಣದ ಹಂತದಲ್ಲಿರುವ ಹೊಸ ಜಿಲ್ಲಾಧಿಕಾರಿ ಕಟ್ಟಡ ಸಂಕೀರ್ಣದಲ್ಲಿ ಕೆಲಸ ನಿರ್ವಹಿಸುತ್ತಿರುವ ಕಟ್ಟಡದ ಕೂಲಿ ಕಾರ್ಮಿಕರಿಗೆ ಮುಖಕವಚ, ಸ್ಯಾನಿಟೈಸರ್ ಹಾಗೂ ಕೋರೋನಾ ಮಾಹಿತಿ ಪತ್ರವನ್ನು ಹಂಚಲಾಯಿತು.

ದ.ಕ. ಜಿಲ್ಲಾ ಗೃಹರಕ್ಷಕ ದಳ ಇದರ ಸಮಾದೇಷ್ಟರು ಮತ್ತು ದ.ಕ.ಜಿಲ್ಲಾ ನಾಗರೀಕ ರಕ್ಷಣಾ ಪಡೆ ಇದರ ಚೀಫ್‌ವಾರ್ಡನ್ ಆದ ಡಾ|| ಮುರಲೀ ಮೋಹನ ಚೂಂತಾರು ಇವರು ಈ ಸಂದರ್ಭದಲ್ಲಿ ಮಾತನಾಡಿ, ಕೋರೋನಾ ವೈರಾಣುವಿನಿಂದ ಹರಡುವ ಕೋವಿಡ್-19 ರೋಗ ಸಮುದಾಯದಲ್ಲಿ ತೀವ್ರವಾಗುತ್ತಿದ್ದು, ಎಚ್ಚರಿಕೆ ಅಗತ್ಯ ಎಂದು ನುಡಿದರು.

ಈ ಕಾರ್ಯಕ್ರಮದಲ್ಲಿ ಎನ್‌ಡಿಆರ್‌ಎಫ್‌ನ 10ನೇ ಬೆಟಾಲಿಯನ್ ಕಮಾಂಡರ್ ಆದ ಗೋಪಾಲ್‌ಲಾಲ್ ಮೀನ ಹಾಗೂ ಪೌರರಕ್ಷಣಾ ಪಡೆಯ ಕಾರ್ಯಕರ್ತ ನಿತಿನ್ ಹಾಗೂ ಸುಮಾರು 50 ಮಂದಿ ಕೆಲಸಗಾರರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

More from the blog

ವಿಕಾಸ್ ಪುತ್ತೂರು ಅವರಿಗೆ ನೀಡಿದ ನೋಟಿಸ್ ಇಲಾಖೆಯ ಕಣ್ಣು ತಪ್ಪಿನಿಂದ ಆಗಿದ್ದಂತೆ!!!!

ಬಂಟ್ವಾಳ: ದ.ಕ.ಜಿಲ್ಲೆಯ ಬಂಟ್ವಾಳ ತಾಲೂಕಿನ ಬಿಜೆಪಿ ಯುವ ನಾಯಕ ವಿಕಾಸ್ ಪುತ್ತೂರು ಅವರಿಗೆ ದ್ವೇಷ ಭಾಷಣದ ಆರೋಪದ ಮೇಲೆ ಪೋಲೀಸ್ ಇಲಾಖೆ ನೀಡಿದ ನೋಟಿಸ್ ನ ವಿರುದ್ದ ಅಧಿವೇಶನದಲ್ಲಿ ವಿಧಾನ ಪರಿಷತ್ತು ಸದಸ್ಯ...

ಮಂಗಳೂರು : ಸ್ಟ್ರೀಟ್ ಫುಡ್ ಫೆಸ್ಟ್ ಗೆ ಚಾಲನೆ

ಮಂಗಳೂರು : ಕರಾವಳಿ ಉತ್ಸವದ ಅಂಗವಾಗಿ 3 ದಿನಗಳ ಸ್ಟ್ರೀಟ್ ಫುಡ್ ಫೆಸ್ಟ್ ಗೆ ಶುಕ್ರವಾರ ಚಾಲನೆ ನೀಡಲಾಯಿತು. ನಗರದ ಕದ್ರಿ ಪಾರ್ಕ್ ಮುಖ್ಯ ರಸ್ತೆಯಲ್ಲಿ ನಡೆಯುತ್ತಿರುವ ಕಾರ್ಯಕ್ರಮಕ್ಕೆ ಖ್ಯಾತ ಚೆಫ್ ಶ್ರೀಯಾ...

Bantwal : ಫೆ.1ರಂದು ರಾಜ್ಯ ಸರಕಾರಿ ನೌಕರರ ಸಂಘದ ವಾರ್ಷಿಕ ಮಹಾಸಭೆ

ಬಂಟ್ವಾಳ : ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ವಾರ್ಷಿಕ ಮಹಾಸಭೆ ಹಾಗೂ ವಿಶ್ರಾಂತ ಸರಕಾರಿ ನೌಕರರು ಮತ್ತು ಸಾಧಕರಿಗೆ ಅಭಿನಂದನಾ ಸಮಾರಂಭ ಬಿ.ಸಿ.ರೋಡಿನ ಸರಕಾರಿ ನೌಕರರ ಸಭಾಭವನದಲ್ಲಿ ಫೆ.1ರಂದು ಭಾನುವಾರ ನಡೆಯಲಿದೆ. 2023-24...

ಫೆ.3ರಿಂದ 07ರವರೆಗೆ ಕಶೆಕೋಡಿ ಶ್ರೀ ಲಕ್ಮೀವೆಂಕಟರಮಣ ದೇವಸ್ಥಾನದ ಜಾತ್ರೆ ಹಾಗೂ ಬ್ರಹ್ಮರಥೋತ್ಸವ

ಬಂಟ್ವಾಳ: ಕಶೆಕೋಡಿ ಶ್ರೀ ಲಕ್ಮೀವೆಂಕಟರಮಣ ದೇವಸ್ಥಾನದ ಜಾತ್ರಮಹೋತ್ಸವ ಹಾಗೂ ಬ್ರಹ್ಮರಥೋತ್ಸವ ಬ್ರಹ್ಮ ಶ್ರೀ ನೀಲೇಶ್ವರ ಉಚ್ಚಿಲತ್ತಾಯ ಪದ್ಮನಾಭ ತಂತ್ರಿಗಳ ನೇತ್ರತ್ವದಲ್ಲಿ ಫೆ.3 ರಿಂದ 07 ರವರೆಗೆ ನಡೆಯಲಿದೆ ಎಂದು ಸುಧಾಕರ ಶೆಣೈ ಮರೋಳಿ...