Wednesday, February 4, 2026

ಬಂಟ್ವಾಳದ ಮಹಿಳೆ ಕೋವಿಡ್ ಗೆ ಬಲಿ

ಬಂಟ್ವಾಳ: ಮಂಗಳೂರು ಕೋವಿಡ್ 19 ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಬಂಟ್ವಾಳದ ವೃದ್ದೆ ಇಂದು ಸಂಜೆ ವೇಳೆ ಮೃತಪಟ್ಟಿದ್ದಾರೆ ಎಂದು ಜಿಲ್ಲಾಡಳಿತ ಅಧಿಕೃತವಾಗಿ ತಿಳಿಸಿದೆ.
ಆ ಮೂಲಕ ಬಂಟ್ವಾಳ ಕೇವಲ ಪೇಟೆಯಲ್ಲಿ ಮೂರು ಮಹಿಳೆ ಸಾವನ್ನಪ್ಪಿದ್ದಾರೆ.

ಬಂಟ್ವಾಳ ಪೇಟೆಯಲ್ಲಿನ ವೃದ್ದೆ ಎ.18 ರಂದು
ಆಸ್ತಮಾ ಕಾಯಿಲೆಯಿಂದ ಬಳಲುತ್ತಿದ್ದು, ಅವರನ್ನು ಆರಂಭದಲ್ಲಿ ಬಂಟ್ವಾಳದ ಸರಕಾರಿ ಆಸ್ಪತ್ರೆಯಲ್ಲಿ ದಾಖಲಿಸಲಾಗಿತ್ತು. ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಅವರನ್ನು ಮಂಗಳೂರು ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಆದರೆ ಬಳಿಕ ಅವರ ಗಂಟಲು ದ್ರವ ಪರೀಕ್ಷೆ ನಡೆಸಿದ ವೇಳೆ ಅವರಿಗೆ ಕೊರೊನ ಪಾಸಿಟಿವ್ ದೃಡಪಟ್ಟಿತ್ತು.
ಆ ಬಳಿಕ ಅವರನ್ನು ತೀವ್ರ ನಿಗಾ ಘಟಕದಲ್ಲಿ ಇಡಲಾಗಿತ್ತು. ಆದರೆ ಅವರು ಇಂದು ಸಂಜೆ ವೇಳೆ ಜಿಲ್ಲಾಡಳಿತ ಮೃತಪಟ್ಟ ಬಗ್ಗೆ ದೃಡಪಡಿಸಿದೆ.
ಈಕೆ ಎ.19 ಆದಿತ್ಯವಾರ ಮೃತಪಟ್ಟ ಮಹಿಳೆಯ ನೆರೆಮನೆಯವರು. ಬಳಿಕ ಇಂದು ಮೃತಮಹಿಳೆಯ ಮಗಳಿಗೂ ಕೊರೊನ ಪಾಸಿಟಿವ್ ದೃಡವಾಗಿತ್ತು. ಅವರು ಕೂಡಾ ಮಂಗಳೂರು ಕೋವಿಡ್ ಆಸ್ಪತ್ರೆ ಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಆ ಮೂಲಕ ಬಂಟ್ವಾಳ ಪೇಟೆಯಲ್ಲಿ ಮತ್ತಷ್ಟು ಹೆಚ್ಚಿನ ನಿಗಾ ವಹಿಸಲಾಗಿದೆ.
ಕೋವಿಡ್ ಮಹಾಮಾರಿ ದ.ಕ. ಜಿಲ್ಲೆಯ ಬಂಟ್ವಾಳ ತಾಲೂಕಿನ ಬಂಟ್ವಾಳ ಪೇಟೆಯಲ್ಲಿ ಮೂವರು ಮಹಿಳೆಯರನ್ನು ಬಲಿ ತೆಗೆದುಕೊಂಡಿದೆ. ಬಂಟ್ವಾಳ ತಾಲ್ಲೂಕಿನ ಜನತೆ ಒಂದಷ್ಟು ಗಾಬರಿ ಪಡುವಂತೆ ಅಗಿದೆ.

ಬಂಟ್ವಾಳ ತಾಲೂಕಿನ ಬಂಟ್ವಾಳ ಪೇಟೆ ಹಾಗೂ ನರಿಕೊಂಬು ಗ್ರಾಮದ ನಾಯಿಲದ ಒಟ್ಟು ಇಬ್ಬರು ಮಹಿಳೆಯರು ಮಂಗಳೂರು ವೆನ್ಲಾಕ್ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

More from the blog

ಮೊಡಂಕಾಪು ಕಾರ್ಮೆಲ್ ಪ್ರೌಢಶಾಲೆ : ಕಾಗದ ಚೀಲ ತಯಾರಿಸಿದ ವಿದ್ಯಾರ್ಥಿಗಳು..

ಬಂಟ್ವಾಳ : ಬದಲಾವಣೆ ಎಂದರೆ ದೊಡ್ಡ ಕೆಲಸವಲ್ಲ. ಅದು ನಮ್ಮ ಮನೆಯಿಂದ, ನಮ್ಮ ಕೈಗಳಿಂದ ಆರಂಭವಾಗಬೇಕು.ಇಂದು ನಾವು ತೀರ್ಮಾನ ಮಾಡಿದರೆ –ಪ್ಲಾಸ್ಟಿಕ್ ಚೀಲಕ್ಕೆ “ಇಲ್ಲ” ಎಂದು ಹೇಳಿದರೆ, ಪೇಪರ್ ಅಥವಾ ಬಟ್ಟೆ ಚೀಲ...

B.C.Road : ಮಹಿಳಾ ಮತ್ತು ಮಕ್ಕಳ ಸಂಭ್ರಮೋತ್ಸವ..

ಬಂಟ್ವಾಳ : ಜೀವನದ ಪ್ರತೀ ಕ್ಷಣದಲ್ಲಿ ಮಹಿಳೆಯರು ಸಂತೋಷ-ಸಂತಸ‌ ಪಡೆಯುವ ಸನ್ನಿವೇಶಗಳು ಸಮಾಜದಲ್ಲಿ ನಿರ್ಮಾಣಗೊಳ್ಳಲಿ ಎಂದು ಹಿರಿಯ ವಕೀಲ ಅಶ್ವನಿ‌ ಕುಮಾರ್ ರೈ ಹೇಳಿದರು. ವಾತ್ಸಲ್ಯಮಯಿ ಮಹಿಳಾ ಅಭಿವೃದ್ಧಿ ಮತ್ತು ಸಂಶೋಧನಾ‌ ಸಂಸ್ಥೆ ಮತ್ತು...

ಮಡಂತ್ಯಾರು : ನಕಲಿ ಚಿನ್ನದ ಸರ ಅಡವಿಟ್ಟು ವಂಚನೆ – ಇಬ್ಬರ ಬಂಧನ

ಬಂಟ್ವಾಳ: ಲಕ್ಷಾಂತರ ರೂ ಸಾಲ ಪಡೆಯುವ ಉದ್ದೇಶದಿಂದ ನಕಲಿ ಚಿನ್ನದ ಸರವನ್ನು ಅಡವಿಡಲು ಸಹಕಾರಿ ಸಂಘವೊಂದಕ್ಕೆ ಬಂದ ಇಬ್ಬರು ಆರೋಪಿಗಳು ಪೋಲೀಸರ ಅತಿಥಿಯಾಗಿದ್ದಾರೆ. ಮಡಂತ್ಯಾರು ಎಂಬಲ್ಲಿರುವ ಒಡಿಯೂರು ಶ್ರೀ ವಿವಿದ್ದೋದೇಶ ಸೌಹಾರ್ದ ಸಹಕಾರಿ ಸಂಘಕ್ಕೆ...

ಮಾಣಿ : ಪೈಪ್ ಲೈನ್ ಕಾಮಗಾರಿಯಿಂದ ಹದಗೆಟ್ಟ ರಸ್ತೆ – ಪ್ರತಿಭಟನೆಗೆ ಮುಂದಾದ ನಾಗರಿಕರು 

ವಿಟ್ಲ: ಬಹುಗ್ರಾಮ ಕುಡಿಯುವ ನೀರಿನ ಯೋಜನೆಯ ಪೈಪ್ ಲೈನ್ ಕಾಮಗಾರಿ ನಡೆಸುವ ವೇಳೆ ಮಾಣಿ ಗ್ರಾಮದ ಅರ್ಬಿ ಪ್ರದೇಶದಲ್ಲಿ ರಸ್ತೆಯನ್ನು ಅಗೆದು ಅದರ ಮಧ್ಯ ಭಾಗದಲ್ಲಿ ಪೈಪ್ ಅಳವಡಿಕೆ ಮಾಡಿ ವ್ಯವಸ್ಥಿತವಾಗಿ ಅದನ್ನು...