Wednesday, January 28, 2026

ದೇಶದಲ್ಲಿ ಸುನಾಮಿಯಾಗಿ ಮಾರ್ಪಟ್ಟ ಕೊರೋನ ಅಲೆ! ಒಂದೇ ದಿನ ಪಾಸಿಟಿವ್ ಆದವರ ಸಂಖ್ಯೆ ಎಷ್ಟು ಗೊತ್ತೆ?

ದೆಹಲಿ: ದೇಶದಲ್ಲಿ ಕೊರೋನಾ ಎರಡನೇ ಅಲೆ ಸುನಾಮಿಯಾಗಿ ಆರ್ಭಟಿಸುತ್ತಿದ್ದು ಮಂಗಳವಾರ ಒಂದೇ ದಿನ 2.94 ಲಕ್ಷ ಮಂದಿಯಲ್ಲಿ ಸೋಂಕು ದೃಢಪಟ್ಟಿದೆ. ಅದೇ ರೀತಿ ದೇಶದಲ್ಲಿ ಮೊದಲ ಬಾರಿ ಕೊರೋನದಿಂದ ಸತ್ತವರ ಸಂಖ್ಯೆ ಎರಡು ಸಾವಿರಕ್ಕಿಂತ ಅಧಿಕವಾಗಿದೆ.

ಕಳೆದ 24 ಗಂಟೆಗಳ ಅವಧಿಯಲ್ಲಿ ಮಹಾರಾಷ್ಟ್ರದಲ್ಲಿ 62,097, ದೆಹಲಿಯಲ್ಲಿ 28,395, ಕರ್ನಾಟಕ 21,794, ಕೇರಳ 19,577, ಗುಜರಾತ್ 12,206, ರಾಜಸ್ಥಾನ್ 12,201, ತಮಿಳುನಾಡು 10,986, ಬಿಹಾರ 10,455, ಪಶ್ಚಿಮ ಬಂಗಾಳ 9,819, ಹರಿಯಾಣ 7,811, ತೆಲಂಗಾಣ 5,926, ಜಾರ್ಖಂಡ್ 4,969, ಒಡಿಶಾ 4,761, ಉತ್ತರಾಖಾಂಡ 3,012, ಜಮ್ಮು ಮತ್ತು ಕಾಶ್ಮೀರ 2,030 ಮತ್ತು ಗೋವಾದಲ್ಲಿ 1,160 ಕೊರೋನ ಪ್ರಕರಣಗಳು ದೃಢಪಟ್ಟಿದ್ದು ದೇಶದಲ್ಲಿ ಒಟ್ಟು 2,94,291 ಮಂದಿಗೆ ಕೊರೋನ ಪಾಸಿಟಿವ್ ಆಗಿದೆ.

ಕೊರೋನ ಸೋಂಕು ಬೆಳಕಿಗೆ ಬಂದ ಬಳಿಕ ಅಮೆರಿಕಾದಲ್ಲಿ ಒಂದೇ ದಿನ 3,07,570 ಮಂದಿಗೆ ಸೋಂಕು ಪಸಿಟಿವ್ ಆಗಿದ್ದು ಜಗತ್ತಿನಲ್ಲೇ ಅತ್ಯಧಿಕ ಎಂದು ಪರಿಗಣಿಸಲ್ಪಟ್ಟಿದೆ. ಅಮೆರಿಕಾದಲ್ಲಿ ಒಂದೇ ದಿನ ಪತ್ತೆಯಾದ ದಾಖಲೆಯ ಸಂಖ್ಯೆಯ ಸನಿಹಕ್ಕೆ ಭಾರತದಲ್ಲಿ ಕೊರೋನಾ ಸೋಂಕು ಪೀಡಿತರ ಸಂಖ್ಯೆ ಬರುತ್ತಿರುವುದು ದೇಶದ ಜನರಲ್ಲಿ ಆತಂಕವನ್ನು ಉಂಟುಮಾಡಿದೆ.

ಮಂಗಳವಾರದAದು ದೇಶದಲ್ಲಿ ಒಟ್ಟು 2,021 ಮಂದಿ ಕೊರೋನ ಸೋಂಕಿನಿAದ ಸಾವನ್ನಪ್ಪಿದ್ದು ಮಹಾರಾಷ್ಟ್ರ ಒಂದರಲ್ಲೇ 519 ಮಂದಿ ಬಲಿಯಾಗಿದ್ದಾರೆ. ದೆಹಲಿಯಲ್ಲಿ 277, ಛತ್ತೀಸ್ಘಡ 191, ಉತ್ತರ ಪ್ರದೇಶ 162, ಕರ್ನಾಟಕ 149 ಹಾಗೂ ಗುಜರಾತಿನಲ್ಲಿ 121 ಮಂದಿ ಸಾವಿಗೀಡಾಗಿದ್ದಾರೆ. ಎರಡನೇ ಅಲೆ ಆರಂಭವಾದಾಗ ಏಪ್ರಿಲ್ ತಿಂಗಳೊAದರಲ್ಲೇ ಒಟ್ಟು 34 ಲಕ್ಷ ಸೋಂಕಿನ ಪ್ರಕರಣಗಳು ವರದಿಯಾಗಿದ್ದು, ಕಳೆದ ಏಳು ದಿನಗಳ ಅವಧಿಯಲ್ಲಿ 17.40 ಲಕ್ಷ ಪ್ರಕರಣಗಳು ಪತ್ತೆಯಾಗಿರುವುದು ಆಘಾತಕಾರಿ ಅಂಶವಾಗಿದೆ.

More from the blog

ಒಡಿಯೂರಿನಲ್ಲಿ ವಂದೇ ಮಾತರಂ ತುಳು ಸಾಹಿತ್ಯ ಸಮ್ಮೇಳನ ಉದ್ಘಾಟನೆ

ವಿಟ್ಲ: ಭಾರತ ವಿಶ್ವದ ಉಸಿರಾಗಿದ್ದು, ಯಾವ ಸೆಳೆತಕ್ಕೂ ಒಳಗಾಗಿಲ್ಲ. ವಂದೇ ಮಾತರಂ ಗೀತೆಗೆ ರಾಷ್ಟ್ರಭಕ್ತಿ ಉದ್ದೀಪಿಸುವ ಶಕ್ತಿಯಿದೆ. ಭಾಷೆ ಸಂಸ್ಕೃತಿ ಬಹಳ ದೊಡ್ಡದಾಗಿದ್ದು, ಇದರ ಉಳಿವಿಗೆ ಒಗ್ಗಟ್ಟಾಗುವ ಅಗತ್ಯವಿದೆ. ವಿಶ್ವ ವಿದ್ಯಾಲಯಗಳಲ್ಲಿ ತುಳು...

ವಿದ್ಯಾರ್ಜನೆ ಪಡೆದ ಸಂಸ್ಥೆಗೆ ನೀಡುವ ಸಹಾಯಸ್ತ ದೇವತಾ ಕಾರ್ಯಕ್ಕೆ ಸಮಾನ : ಪ್ರಭಾಕರ ಪ್ರಭು

ಬಂಟ್ವಾಳ : ಬಾಲ್ಯದಲ್ಲಿ ಬಾಹ್ಯ ಪ್ರಪಂಚದಲ್ಲಿನ ಆಗುಹೋಗುಗಳ ಬಗ್ಗೆ ಪರಿಚಯಿಸಿ ಪ್ರಾಥಮಿಕ ಶಾಲಾ ಪೂರ್ವ ಶಿಕ್ಷನವನ್ನು ನೀಡುತ್ತಿರುವ ಅಂಗನವಾಡಿಗಳ ಮೂಲಭೂತ ಸೌಕರ್ಯಗಳಿಗೆ ನೀಡುವ ಸಹಾಯಸ್ತಾವು ದೇವತಾ ಕಾರ್ಯಕ್ಕೆ ಸಮಾನವಾಗಿರುತ್ತದೆ ಎಂದೂ ಸಿದ್ದಕಟ್ಟೆ ಪ್ರಾಥಮಿಕ...

ಮಣಿಹಳ್ಳ : ಹಿಂದೂ ಯುವಸೇನೆ ಏಕಲವ್ಯ ಶಾಖೆ ಆಶ್ರಯದಲ್ಲಿ ಎಳ್ಳು ಗಂಟು ದೀಪೋತ್ಸವ..

ಬಂಟ್ವಾಳ : ಹಿಂದೂ ಯುವಸೇನೆ ಏಕಲವ್ಯ ಶಾಖೆ ಮಣಿಹಳ್ಳ ಇದರ ಆಶ್ರಯದಲ್ಲಿ ವಿಶ್ವ ಶಾಂತಿಗಾಗಿ, ಲೋಕ ಕಲ್ಯಾಣಾರ್ಥವಾಗಿ, ಶನಿದೋಷ ಪರಿಹಾರಕ್ಕಾಗಿ ಸಕಲ ಇಷ್ಟಾರ್ಥ ಸಿದ್ಧಿಗಾಗಿ ಜ. 24ರಂದು ಶನಿವಾರ ನಡೆದ ಸತತ 14...

ಜಿಲ್ಲೆಯಲ್ಲಿ ಹೆಚ್ಚಿದ ಚಿರತೆ ಉಪಟಳ : ದಾಳಿಗೆ ನಾಯಿ, ಕಾಡುಹಂದಿ ಬಲಿ

ಬಂಟ್ವಾಳ : ಚಿರತೆಯೊಂದು ನಾಯಿಯನ್ನು ಕೊಂದು ಕುತ್ತಿಗೆಯ ಭಾಗದಿಂದ ಮಾಂಸವನ್ನು ತಿಂದು ಹೋದ ಘಟನೆ ಬೆಳ್ತಂಗಡಿ ತಾಲೂಕಿನ ಮಾಲಾಡಿಯ ಗ್ರಾಮದ ಪುರಿ ಎಂಬಲ್ಲಿ ನಡೆದಿದೆ. ಆನಂದ ನಾಯರ್ ಎಂಬವರ ಮನೆಯಲ್ಲಿ ಸಾಕಿದ ಕಪ್ಪು ಬಣ್ಣದ...