Saturday, July 12, 2025

ದೇಶದಲ್ಲಿ 24 ಗಂಟೆಗಳಲ್ಲಿ 14,821 ಮಂದಿಗೆ ಕೊವಿಡ್ ಪಾಸಿಟಿವ್

 

ನವದೆಹಲಿ: ಇಡೀ ವಿಶ್ವವನ್ನೇ ಕಾಡುತ್ತಿರುವ ಕೊರೊನಾ ವೈರಸ್ ಗೆ ಭಾರತದಲ್ಲಿ ಒಟ್ಟು 13,700 ಮಂದಿ ಮೃತಪಟ್ಟಿದ್ದು, ಸೋಂಕಿತರ ಸಂಖ್ಯೆ 4.25 ಲಕ್ಷ ದಾಟಿದ ಬಗ್ಗೆ ವರದಿಯಾಗಿದೆ. 24 ಗಂಟೆಗಳಲ್ಲಿ 14,800ಕ್ಕೂ ಹೆಚ್ಚು ಸೋಂಕು ಪ್ರಕರಣಗಳು ದಾಖಲಾಗಿದ್ದು, ಇದೇ ಅವಧಿಯಲ್ಲಿ 445 ಸೋಂಕಿತರು ಮೃತಪಟ್ಟಿದ್ದಾರೆ.
ನಿನ್ನೆ ಒಂದೇ ದಿನ ದೇಶದ ವಿವಿಧ ರಾಜ್ಯಗಳಲ್ಲಿ ಒಟ್ಟು 445 ಮಂದಿ ಸಾವಿಗೀಡಾಗಿದ್ದು, ಒಟ್ಟು ಮೃತಪಟ್ಟವರ ಸಂಖ್ಯೆ 13,700ಕ್ಕೇರಿದೆ ಹಾಗೂ ಸೋಂಕು ಪೀಡಿತರ ಸಂಖ್ಯೆ 4,25,282 ತಲುಪಿದೆ ಎಂಬ ಮಾಹಿತಿಯನ್ನು ಕೇಂದ್ರ ಆರೋಗ್ಯ ಸಚಿವಾಲಯ ನೀಡಿದೆ.
ಲಾಕ್‍ಡೌನ್ ಸಡಿಲಗೊಳಿಸಿದ ನಂತರ ದೇಶದಾದ್ಯಂತ ಸೋಂಕು ಮತ್ತು ಸಾವಿನ ಪ್ರಕರಣಗಳು ಹೆಚ್ಚಾಗುತ್ತಿದೆ. ಅದರಂತೆ 24 ತಾಸುಗಳಲ್ಲಿ 9,444 ರೋಗಿಗಳು ಗುಣಮುಖರಾಗಿದ್ದು, ಚೇತರಿಕೆ ಪ್ರಮಾಣದಲ್ಲಿ ಶೇ.55.77ರಷ್ಟು ಏರಿಕೆ ಕಂಡು ಬಂದಿರುವುದು ಸಮಾಧಾನಕಾರ ಸಂಗತಿ.
24 ಗಂಟೆಗಳಲ್ಲಿ ದೇಶದ ವಿವಿಧ ರಾಜ್ಯಗಳಲ್ಲಿ 445 ಸೊಂಕಿತರ ಸಾವಾಗಿದ್ದು, ಆ ಬಗ್ಗೆ ಸಂಪೂರ್ಣ ಮಾಹಿತಿ ಈ ಕೆಳಗಿನಂತಿವೆ:
ಮಹಾರಾಷ್ಟ್ರ 186, ದೆಹಲಿ 63, ತಮಿಳುನಾಡು 53, ಉತ್ತರಪ್ರದೇಶ 43, ಗುಜರಾತ್ 25, ಉತ್ತರಪ್ರದೇಶ 30, ಪಶ್ಚಿಮ ಬಂಗಾಳ 14, ಮಧ್ಯಪ್ರದೇಶ 14, ರಾಜಸ್ತಾನ 12, ಹರಿಯಾಣ 11, ತೆಲಂಗಾಣ 7, ಆಂಧ್ರಪ್ರದೇಶ ಮತ್ತು ಕರ್ನಾಟಕ ತಲಾ 5, ಒಡಿಶಾ 2 ಹಾಗೂ ಬಿಹಾರ, ಜಮ್ಮು-ಕಾಶ್ಮೀರ, ಪುದುಚೇರಿ ಮತ್ತು ಪಂಜಾಬ್ ರಾಜ್ಯಗಳಲ್ಲಿ ತಲಾ ೧ ಸಾವಾದ ಬಗ್ಗೆ ವರದಿಯಾಗಿದೆ.
ವಿಶ್ವದಲ್ಲಿ ಸೋಂಕು ಪ್ರಮಾಣದಲ್ಲಿ ಭಾರತವು ಬ್ರಿಟನ್‍ನನ್ನು ಹಿಂದಿಕ್ಕಿ ಈಗ ನಾಲ್ಕನೇ ಸ್ಥಾನಕ್ಕೇರಿದೆ. ಇದೇ ರೀತಿ ಸೊಂಕಿತರ ಸಂಖ್ಯೆ ಹೆಚ್ಚಾದಲ್ಲಿ ದೇಶ ಮೂರನೇ ಸ್ಥಾನಕ್ಕೆ ಏರುವುದು ಖಚಿತ.

More from the blog

ತುಂಬೆಯ ಕಾವ್ಯ ಕೆ. ನಾಯಕ್ ಗೆ ಪಿ.ಎಚ್.ಡಿ ಪದವಿ..

ಬಂಟ್ವಾಳ: ತುಂಬೆಯ ಕಾವ್ಯ. ಕೆ. ನಾಯಕ್ ಇವರು ಐಐಎಸ್‌ಸಿ‌ನ ಅಂತರ್‌ಶಿಸ್ತಿನ ವಿಜ್ಞಾನ ವಿಭಾಗದ ಡೀನ್ ಹಾಗೂ ನ್ಯಾನೋ ಸೈನ್ಸ್ ಮತ್ತು ಇಂಜಿನಿಯರಿಂಗ್ ಕೇಂದ್ರದ ಪ್ರಾಧ್ಯಾಪಕ ಪ್ರೊ. ನವಕಾಂತ್ ಭಟ್ ಅವರ ಮಾರ್ಗದರ್ಶನದಲ್ಲಿ “ಎಲೆಕ್ಟ್ರೋಕೆಮಿಕಲ್...

ಫರಂಗಿಪೇಟೆ: ಸಂಕಲ್ಪ ಸಿದ್ಧಿಗಾಗಿ ಶ್ರೀ ಆಂಜನೇಯ ದೇವಸ್ಥಾನಕ್ಕೆ ಶ್ರೀ ಶ್ರೀ ಸಾಯಿ ಈಶ್ವರ್ ಗುರೂಜಿ ಭೇಟಿ..

ಬಂಟ್ವಾಳ : ಸಂಕಲ್ಪ ಸಿದ್ಧಿಗಾಗಿ ಶ್ರೀ ಕ್ಷೇತ್ರ ಶಂಕರಪುರದ ಶ್ರೀ ಶ್ರೀ ಸಾಯಿ ಈಶ್ವರ್ ಗುರೂಜಿ ಯವರು ಜು.12ರಂದು ಫರಂಗಿಪೇಟೆಯ ಶ್ರೀ ಆಂಜನೇಯ ದೇವಸ್ಥಾನಕ್ಕೆ ಭೇಟಿ ನೀಡಿದರು. ಈ ಸಂದರ್ಭದಲ್ಲಿ ಆಡಳಿತ ಮಂಡಳಿಯಿಂದ...

ಶ್ರೀ ಕ್ಷೇ.ಧ.ಗ್ರಾ.ಯೋ.ಬಿ.ಸಿ ಟ್ರಸ್ಟ್ ಮಾಣಿ ವಲಯದ ವತಿಯಿಂದ ಪರಿಸರ ದಿನಾಚರಣೆ ಕಾರ್ಯಕ್ರಮ..

ಬಂಟ್ವಾಳ : ಬಂಟ್ವಾಳ ತಾಲೂಕಿನ ನೆಟ್ಲ ಮುಡ್ನೂರು ಗ್ರಾಮದ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಏಮಾಜೆಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ ಸಿ ಟ್ರಸ್ಟ್ (ರಿ.) ವಿಟ್ಲ ಇದರ ಮಾಣಿ...

ಕುಂಜರ್ಕಳದ ತಡೆಗೋಡೆ, ಬಸ್ಸು ತಂಗುದಾಣ, ಹೈಮಾಸ್ಟ್ ದೀಪ ಉದ್ಘಾಟಿಸಿದ ಯು.ಟಿ.ಖಾದರ್..

ಬಂಟ್ವಾಳ: ಶಾಸಕರ ಅನುದಾನದಿಂದ ನಿರ್ಮಾಣಗೊಂಡ ಪುದು ಗ್ರಾಮದ ಕುಂಜರ್ಕಳದ ತಡೆಗೋಡೆ, ೧೦ನೇ ಮೈಲುಕಲ್ಲು ಬಳಿ ಬಸ್ಸು ತಂಗುದಾಣ ಹಾಗೂ ತ್ವಾಹಾ ಜುಮಾ ಮಸೀದಿ ಬಳಿ ಅನುಷ್ಠಾನಗೊಂಡ ಹೈಮಾಸ್ಟ್ ದೀಪವನ್ನು ಸ್ಪೀಕರ್ ಯು.ಟಿ.ಖಾದರ್ ಅವರು...