Thursday, July 10, 2025

ದ. ಕ. ಜಿಲ್ಲೆಯಲ್ಲಿ ಇಂದು 8 ಹೊಸ ಕೊರೋನಾ ಕೇಸ್ ಪತ್ತೆ: ರಾಜ್ಯದಲ್ಲಿ 515 ಕೇಸ್ ಪತ್ತೆ

ಬಂಟ್ವಾಳ : ರಾಜ್ಯದಲ್ಲಿ ಇಂದು 515 ಹೊಸ ಕೊರೋನಾ ಸೋಂಕು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 4835ಕ್ಕೆ ಏರಿಕೆಯಾಗಿದೆ. ಉಡುಪಿ 204, ಯಾದಗಿರಿ 74, ವಿಜಯಪುರ 53, ಕಲಬುರಗಿ 42, ಬೀದರ್ 39, ಬೆಳಗಾವಿ 36, ಮಂಡ್ಯ 13, ಬೆಂಗಳೂರು ಗ್ರಾಮಾಂತರ 12,  ಬೆಂಗಳೂರು ನಗರ 10, ದ. ಕ. 8, ಉ.ಕ. 7, ಧಾರವಾಡ, ಚಿಕ್ಕಬಳ್ಳಾಪುರ ತಲಾ 3, ರಾಮನಗರ, ಹಾವೇರಿ ತಲಾ 2, ಕೋಲಾರ, ಬಳ್ಳಾರಿ, ಬಾಗಲಕೋಟೆ, ದಾವಣಗೆರೆ ತಲಾ 1 ಕೇಸ್ ಪತ್ತೆಯಾಗಿದೆ.

ಇಂದು ರಾಜ್ಯದಲ್ಲಿ 83 ಮಂದಿ ಕೋವಿಡ್ ಮುಕ್ತರಾಗಿ ಮನೆಗೆ ತೆರಳಿದ್ದಾರೆ. ರಾಜ್ಯದಲ್ಲಿ ಒಟ್ಟು 1638 ಮಂದಿ ಗುಣಮುಖರಾಗಿದ್ದಾರೆ ಎಂದು ವರದಿಯಾಗಿದೆ.

ಉಡುಪಿ ಜಿಲ್ಲೆಯ 204 ಮಂದಿಯು ಮಹಾರಾಷ್ಟ್ರದಿಂದ ಬಂದವರು ಎಂದು ತಿಳಿದುಬಂದಿದೆ.
ದ. ಕ. ಜಿಲ್ಲೆಯ ಸೋಂಕಿತರ ವಿವರ:
ದ. ಕ. ಜಿಲ್ಲೆಯ 8 ಪ್ರಕರಣದಲ್ಲಿ 7 ಮಂದಿ ಮಹಾರಾಷ್ಟ್ರ ದಿಂದ ಬಂದವರಾಗಿದ್ದು, ಇನ್ನೊಂದು ಪ್ರಕರಣಕ್ಕೆ ಟ್ರಾವೆಲ್ ಹಿಸ್ಟರಿ ಇಲ್ಲದೆ ಇರುವುದು ಆತಂಕಕ್ಕೆ ಕಾರಣವಾಗಿದೆ.

More from the blog

ಸುಳ್ಳು ಸುದ್ದಿ ನಿಯಂತ್ರಣಕ್ಕೆ ಮುಂದಿನ ಅಧಿವೇಶನದಲ್ಲೇ ಮಸೂದೆ : ಗೃಹ ಸಚಿವ ಜಿ. ಪರಮೇಶ್ವರ್..

ಮಂಗಳೂರು : ಸುಳ್ಳು ಸುದ್ದಿಗಳ ಹಾವಳಿ ಮತ್ತು ಊಹಾಪೋಹದ ಸುದ್ದಿಗಳ ಹಾವಳಿ ಮಿತಿ ಮೀರುತ್ತಿದೆ. ಈ ಹಿನ್ನಲೆಯಲ್ಲಿ ಸುಳ್ಳು ಸುದ್ದಿ ಹರಡುವುದು ಹಾಗೂ ದ್ವೇಷ ಭಾಷಣ ಮಾಡುವವರ ವಿರುದ್ಧ ಮುಂದಿನ ಅಧಿವೇಶನದಲ್ಲಿ ಮಸೂದೆ...

ರಾಜ್ಯದ ಜಿಲ್ಲಾ ಆಸ್ಪತ್ರೆಗಳಲ್ಲಿ ಗ್ರಂಥಾಲಯ ಸ್ಥಾಪನೆಗೆ ಸೂಕ್ತ ಕ್ರಮ – ದಿನೇಶ್ ಗುಂಡೂರಾವ್.. 

ಮಂಗಳೂರು : ರಾಜ್ಯದ ಜಿಲ್ಲಾ ಆಸ್ಪತ್ರೆಗಳಲ್ಲಿ ಗ್ರಂಥಾಲಯ ಸ್ಥಾಪನೆಗೆ ಸೂಕ್ತ ಕ್ರಮ ಕೈ ಗೊಳ್ಳಲಾಗುವುದುಎಂದು ಅರೋಗ್ಯ ಹಾಗೂ ಕುಟುಂಬ ಕಲ್ಯಾಣ ಇಲಾಖೆ ಸಚಿವ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ. ಅವರು...

ಕಾರ್ಮಿಕರ ಅಖಿಲ ಭಾರತ ಮುಷ್ಕರದ ಅಂಗವಾಗಿ ಕಾರ್ಮಿಕರ ಪ್ರತಿಭಟನೆ..

ಬಂಟ್ವಾಳ : ಕಾರ್ಮಿಕ ಕಾಯ್ದೆಗಳ ತಿದ್ದುಪಡಿ ವಿರೋಧಿಸಿ ಹಾಗೂ ಕೇಂದ್ರ ಸರಕಾರದ ಕಾರ್ಮಿಕ ವಿರೋಧಿ ನೀತಿಗಳನ್ನು ವಿರೋಧಿಸಿ ಕಾರ್ಮಿಕ ಸಂಘಟನೆಗಳಿಂದ ಅಖಿಲ ಭಾರತ ಮುಷ್ಕರದ ದ ಅಂಗವಾಗಿ ಜೆ.ಸಿ.ಟಿ.ಯು ಮತ್ತು ಸಂಯುಕ್ತ ಹೋರಾಟ...

ಭಾರೀ ಮಳೆ ಮುನ್ಸೂಚನೆ : ಒಂದು ವಾರ ಕರ್ನಾಟಕದ ಕರಾವಳಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್..

ಮಂಗಳೂರು : ರಾಜ್ಯದ ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ಇಂದಿನಿಂದ ಜುಲೈ 14ರವರೆಗೆ ಭಾರಿ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ, ಚಿಕ್ಕಮಗಳೂರು,...