ಬಂಟ್ವಾಳ: ರಾಜ್ಯದಲ್ಲಿ ಇಂದು 378 ಹೊಸ ಕೊರೋನಾ ಕೇಸ್ ದೃಢಪಟ್ಟಿದ್ದು, ಒಟ್ಟು ಸೋಂಕಿತರ ಸಂಖ್ಯೆ 5213ಕ್ಕೆ ಏರಿಕೆಯಾಗಿದೆ.

ಉಡುಪಿ 121, ಯಾದಗಿರಿ 103, ಕಲಬುರಗಿ 69, ದ.ಕ. 24, ಬೆಂಗಳೂರು ನಗರ 18, ದಾವಣಗೆರೆ, ವಿಜಯಪುರ ತಲಾ 6, ಬೆಳಗಾವಿ 5, ಗದಗ 4, ಹಾಸನ, ಮಂಡ್ಯ, ಹಾವೇರಿ, ಧಾರವಾಡ ತಲಾ 3, ಚಿಕ್ಕಬಳ್ಳಾಪುರ, ರಾಯಚೂರು ತಲಾ 2, ಮಂಡ್ಯ, ಕೊಪ್ಪಳ, ಬೀದರ್ 1 ಕೇಸ್ ಪತ್ತೆಯಾದ ಬಗ್ಗೆ ವರದಿಯಾಗಿದೆ.
ದ.ಕ. ಜಿಲ್ಲೆಯಲ್ಲಿ ಪತ್ತೆಯಾದ 5 ಪ್ರಕರಣಗಳಿಗೆ ಸೋಂಕಿನ ಮೂಲ ಪತ್ತೆಯಾಗಿಲ್ಲ. ಜಿಲ್ಲೆಯ ಪ್ರಕರಣಗಳಲ್ಲಿ 4 ಪ್ರಕರಣಗಳು ಬೆಳ್ತಂಗಡಿ ತಾಲೂಕಿನದ್ದು ಎಂಬ ಮಾಹಿತಿ ಇದೆ. ಜಿಲ್ಲೆಯ ಒಟ್ಟು ಸೋಂಕಿತರ ಸಂಖ್ಯೆ 167 ಕ್ಕೆ ಏರಿಕೆಯಾಗಿದೆ.
ಇಂದು ರಾಜ್ಯದಲ್ಲಿ 280 ಮಂದಿ ಕೋವಿಡ್ ಮುಕ್ತರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ರಾಜ್ಯದಲ್ಲಿ ಒಟ್ಟು 1968 ಮಂದಿ ಗುಣಮುಖರಾದ ಬಗ್ಗೆ ವರದಿಯಾಗಿದೆ.
ಕೋವಿಡ್ ಸೋಂಕಿಗೆ ರಾಜ್ಯದಲ್ಲಿ ಇಂದು 2 ಬಲಿಯಾಗಿದ್ದು, ವಿಜಯಪುರದ 81 ವರ್ಷದ ಹಾಗೂ ಬೀದರ್ ನ 59 ವರ್ಷದ ವೃದ್ಧೆಯರು ಸಾವಿಗೀಡಾಗಿದ್ದಾರೆ. ಸಾವಿನ ಸಂಖ್ಯೆ 59ಕ್ಕೆ ಏರಿದೆ.

