Wednesday, January 28, 2026

ಜಾಗತಿಕ ಮಟ್ಟದಲ್ಲಿ ಕೊರೊನಾ ಸೋಂಕಿತ ದೇಶಗಳ ಪಟ್ಟಿಯಲ್ಲಿ ಮೂರನೇ ಸ್ಥಾನಕ್ಕೇರಿದ ಭಾರತ

ನವದಹೆಲಿ : ದೇಶದಲ್ಲಿ ಕೊರೊನಾ ಸೋಂಕು ದಿನಕ್ಕೆ ಹೆಚ್ಚಾಗುತ್ತಿದೆ. ಅತೀ ಹೆಚ್ಚು ಸೋಂಕಿತರಿರುವ ದೇಶಗಳ ಪಟ್ಟಿಯಲ್ಲಿ ಭಾರತ ರಷ್ಯಾವನ್ನು ಹಿಂದಿಕ್ಕಿ ಮೂರನೇ ಸ್ಥಾನಕ್ಕೇರಿದೆ.
ನಿನ್ನೆ ಒಂದೇ ದಿನ ಭಾರತದಲ್ಲಿ ಸುಮಾರು 25 ಸಾವಿರ ಸೋಂಕು ಪ್ರಕರಣಗಳು ವರದಿಯಾಗಿದ್ದು, ಒಂದೇ ದಿನ 421 ಸೋಂಕಿತರು ಮೃತಪಟ್ಟಿದ್ದಾರೆ. ಜುಲೈ ತಿಂಗಳ ಮೊದಲ ಐದು ದಿನದಲ್ಲೇ 2300 ಮಂದಿ ಕೋವಿಡ್ ಸೋಂಕಿನಿಂದ ಸಾವನ್ನಪ್ಪಿದ್ದಾರೆ.
ದೇಶದಲ್ಲಿ ಒಂದೇ ದಿನ 24,912 ಹೊಸ ಕೋವಿಡ್-19 ಸೋಂಕು ಪ್ರಕರಣಗಳು ದೃಢವಾಗಿದೆ. ಜೂನ್ ತಿಂಗಳಲ್ಲಿ ಒಟ್ಟು ನಾಲ್ಕು ಲಕ್ಷ ಹೊಸ ಪ್ರಕರಣಗಳು ಪತ್ತೆಯಾಗಿತ್ತು. ಆದರೆ ಜುಲೈ ತಿಂಗಳ ಮೊದಲ ಐದು ದಿನದಲ್ಲೇ ಒಂದು ಲಕ್ಷಕ್ಕಿಂತ ಹೆಚ್ಚಿನ ಸೋಂಕು ಪ್ರಕರಣಗಳು ಪತ್ತೆಯಾಗಿದೆ. ಹೀಗಾಗಿ ಸೋಂಕಿನ ವೇಗ ಏರಿಕೆ ಕಾಣುತ್ತಿದ್ದು, ಜನರಲ್ಲಿ ಆತಂಕ ಮನೆ ಮಾಡಿದೆ.
ಸೋಂಕಿತರ ಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿದ್ದ ರಷ್ಯಾ ನಾಲ್ಕನೇ ಸ್ಥಾನಕ್ಕೆ ಇಳಿದಿದ್ದು, ಭಾರತ ಮೂರನೇ ಸ್ಥಾನಕ್ಕೇರಿದೆ. ಅಮೇರಿಕಾ ಮತ್ತು ಬ್ರೆಜಿಲ್ ಕ್ರಮವಾಗಿ ಮೊದಲೆರಡು ಸ್ಥಾನಗಳಲ್ಲಿದೆ.

More from the blog

ವಿದ್ಯುತ್ ಸಮಸ್ಯೆಗೆ ಸ್ಪಂದಿಸಿದ ಗ್ರಾ.ಪಂ.ಸದಸ್ಯ ಹಾಶೀರ್ ಪೆರಿಮಾರ್ ಅವರಿಗೆ ಗ್ರಾಮಸ್ಥರಿಂದ ಅಭಿನಂದನೆ

ಬಂಟ್ವಾಳ: ವಿದ್ಯುತ್ ಸಮಸ್ಯೆಯಿಂದ ಬೇಸೆತ್ತ ಗ್ರಾಮಸ್ಥರ ಸಮಸ್ಯೆಗೆ ಸಕಾಲದಲ್ಲಿ ಸ್ಪಂದಿಸಿದ ಪುದು ಗ್ರಾಮಪಂಚಾಯತ್ ಸದಸ್ಯನಿಗೆ ಗ್ರಾಮಸ್ಥರು ಅಭಿನಂದನೆ ಸಲ್ಲಿಸಿದ್ದಾರೆ. ಪುದು ಗ್ರಾಮದ ಪೇರಿಮಾರ್ ವಾರ್ಡಿನ ರಾಷ್ಟ್ರೀಯ ಹೆದ್ದಾರಿ ಬದಿಯಿಂದ ದೇವಸ್ಯ, ಜಲಾಲಿಯ ನಗರ, ಮಾರಿಪಳ್ಳ...

Bantwal : ಸೌತ್ ಕೆನರಾ ಫೋಟೋ ಗ್ರಾಫರ್ಸ್ ಅಸೋಸಿಯೇಷನ್ – ಪದಾಧಿಕಾರಿಗಳ ಪದಾಪ್ರಧಾನ, ರಜತ ಸಂಭ್ರಮ ಸಮಾರೋಪ

ಬಂಟ್ವಾಳ :ಸೌತ್ ಕೆನರಾ ಫೋಟೋ ಗ್ರಾಫರ್ಸ್ ಅಸೋಸಿಯೇಷನ್ ರಿ, ಬಂಟ್ವಾಳ ವಲಯದ ನೂತನ ಪದಾಧಿಕಾರಿಗಳ ಪದಾಪ್ರಧಾನ ಸಮಾರಂಭ ಹಾಗು ರಜತ ಸಂಭ್ರಮದ ಸಮಾರೋಪ ಸಮಾರಂಭ ವು ಬಿಸಿ ರೋಡ್ ನ ಲಯನ್ಸ್ ಸೇವಾ...

B.C. Road : ಮಾಜಿ ಸಚಿವ ಬಿ.ರಮಾನಾಥ ರೈ ನೇತೃತ್ವದಲ್ಲಿ ನರೇಗಾ ಬಚಾವೋ ಸಂಗ್ರಾಮ ಕಾರ್ಯಕ್ರಮ

ಬಂಟ್ವಾಳ: ಬಂಟ್ವಾಳ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಪಾಣೆಮಂಗಳೂರು ಹಾಗೂ ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ಮಾಜಿ ಸಚಿವ ಬಿ.ರಮಾನಾಥ ರೈ ನೇತೃತ್ವದಲ್ಲಿ ನರೇಗಾ ಬಚಾವೋ ಸಂಗ್ರಾಮ ಕಾರ್ಯಕ್ರಮ ಬಿಸಿರೋಡಿನ ರಕ್ತೇಶ್ವರಿ...

ಕಟೀಲು 7 ಮೇಳಗಳ ಜ.28ರ ಸೇವೆಯಾಟಗಳ ವಿವರ ಇಲ್ಲಿದೆ..

ಮಂಗಳೂರು: ಕಟೀಲು ಶ್ರೀ ದುರ್ಗಾಪರಮೇಶ್ವರೀ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿ ಇದರ 7 ಮೇಳಗಳ ಜ.28ರ ಸೇವೆಯಾಟಗಳ ವಿವರ ಈ ಕೆಳಗಿನಂತಿವೆ.. ಜ.28ರ ಸೇವೆಯಾಟಗಳ ವಿವರ : ಆನಂದ ಎಂ. ಶೆಟ್ಟಿ, ಏಳಿಂಜೆ ಅಂಗಡಿಗುತ್ತು,...