Friday, July 11, 2025

ದೇಶದಲ್ಲಿ 3,95,048 ಕ್ಕೇರಿದ ಕೊವಿಡ್-19 ಸೋಂಕು ಪ್ರಕರಣ: ಒಂದೇ ದಿನದಲ್ಲಿ 14,516 ಪಾಸಿಟಿವ್‌ ಕೇಸ್

ನವದೆಹಲಿ : ದೇಶದಲ್ಲಿ ಕೊವಿಡ್-೧೯ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದ್ದು, ಕಳೆದ ೨೪ ಗಂಟೆಗಳಲ್ಲಿ 14,516 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದೆ. 375 ಜನರು ಸೋಂಕಿನಿಂದ ಸಾವನ್ನಪ್ಪಿದ್ದಾರೆ. ದೇಶದಲ್ಲಿ ಒಟ್ಟು 3,95,048 ಕೊರೊನಾ ಪ್ರಕರಣ ವರದಿಯಾಗಿದ್ದು, ಸೋಂಕಿಗೆ ಬಲಿಯಾದವರ ಸಂಖ್ಯೆ 12,948 ಕ್ಕೆ ಏರಿಕೆಯಾಗಿದೆ.

ದೇಶದಲ್ಲಿ ಸೋಂಕು ಪ್ರಕಣಗಳು ಹೆಚ್ಚುತ್ತಿರುವ ನಡುವೆ ಕೊವಿಡ್ ನಿಂದ ಗುಣಮುಖರಾಗುತ್ತಿರುವವರ ಸಂಖ್ಯೆಯೂ ಹೆಚ್ಚು. ಈವರೆಗೆ 2,13,831 ಮಂದಿ ಕೊವಿಡ್ ಮುಕ್ತರಾಗಿ ‌ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.
ದೇಶದಲ್ಲಿ ಒಟ್ಟು 1,68,269 ಸಕ್ರಿಯ ಪ್ರಕರಣಗಳಿವೆ. ಶೇ.54.1 ರಷ್ಟು ಸೋಂಕಿತರು ಕೊರೊನಾದಿಂದಾಗಿ ಗುಣಮುಖರಾಗಿದ್ದಾರೆ. ದೇಶದಲ್ಲಿ ಅಧಿಕ ಕೊರೊನಾ ಪ್ರಕರಣಗಳು ದೃಢಪಟ್ಟಿರುವ ಮಹಾರಾಷ್ಟ್ರದಲ್ಲಿ 1,24,331 ಜನರಿಗೆ ಸೋಂಕು ತಗುಲಿದ್ದು, 5,893 ಮಂದಿ ಕೊರೊನಾಗೆ ಬಲಿಯಾಗಿದ್ದಾರೆ. 62,773 ಮಂದಿ ಗುಣಮುಖರಾಗಿದ್ದು 55,665 ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ. ಕರ್ನಾಟಕದಲ್ಲಿ 8281 ಮಂದಿಗೆ ಸೋಂಕು ದೃಢಪಟ್ಟಿದ್ದು 124 ಮಂದಿ ಸಾವನ್ನಪ್ಪಿದ್ದಾರೆ. 2947 ಸಕ್ರಿಯ ಪ್ರಕರಣಗಳಾಗಿದ್ದು 5210 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಇನ್ನುಳಿದಂತೆ

ತಮಿಳುನಾಡಿನಲ್ಲಿ 54,449, ದೆಹಲಿಯಲ್ಲಿ 53,116, ಗುಜರಾತ್‌ನಲ್ಲಿ 26,141 , ಉತ್ತರ ಪ್ರದೇಶದಲ್ಲಿ 15785, ರಾಜಸ್ತಾನದಲ್ಲಿ 14156, ಮಧ್ಯಪ್ರದೇಶದಲ್ಲಿ 11582, ಪಶ್ಚಿಮ ಬಂಗಾಳದಲ್ಲಿ 13090 ಕೊರೊನಾ ಪ್ರಕರಣಗಳು ದಾಖಲಾಗಿರುವ ಬಗ್ಗೆ ವರದಿಯಗಿದೆ.

More from the blog

ಕುಂಜರ್ಕಳದ ತಡೆಗೋಡೆ, ಬಸ್ಸು ತಂಗುದಾಣ, ಹೈಮಾಸ್ಟ್ ದೀಪ ಉದ್ಘಾಟಿಸಿದ ಯು.ಟಿ.ಖಾದರ್..

ಬಂಟ್ವಾಳ: ಶಾಸಕರ ಅನುದಾನದಿಂದ ನಿರ್ಮಾಣಗೊಂಡ ಪುದು ಗ್ರಾಮದ ಕುಂಜರ್ಕಳದ ತಡೆಗೋಡೆ, ೧೦ನೇ ಮೈಲುಕಲ್ಲು ಬಳಿ ಬಸ್ಸು ತಂಗುದಾಣ ಹಾಗೂ ತ್ವಾಹಾ ಜುಮಾ ಮಸೀದಿ ಬಳಿ ಅನುಷ್ಠಾನಗೊಂಡ ಹೈಮಾಸ್ಟ್ ದೀಪವನ್ನು ಸ್ಪೀಕರ್ ಯು.ಟಿ.ಖಾದರ್ ಅವರು...

ಗುರು ಪೂರ್ಣಿಮೆಯ ಪ್ರಯುಕ್ತ ನಿವೃತ ಶಿಕ್ಷಕಿ ಲಕ್ಷ್ಮೀ ಅವರಿಗೆ ಗೌರವರ್ಪಣೆ 

ಬಂಟ್ವಾಳ : ಗುರು ಪೂರ್ಣಿಮೆಯ ಪ್ರಯುಕ್ತ ಸಜೀಪ ಮುನ್ನೂರು ಬಿಜೆಪಿ ಗ್ರಾಮ ಸಮಿತಿಯ 4ನೇ ವಾರ್ಡಿನ ಬೊಕ್ಕಸ ನಿವಾಸಿಯಾದ ನಿವೃತ ಶಿಕ್ಷಕಿಯಾದ ಮಾತೃ ವಾತ್ಸಲ್ಯದ ಲಕ್ಷ್ಮೀ ಟೀಚರ್ ಇವರಿಗೆ ಬಿಜೆಪಿ ಮುಖಂಡರು ಮಾಜಿ...

ಕೆಂಪುಕಲ್ಲು, ಮರಳು ಸಮಸ್ಯೆ : ಜು.14ಕ್ಕೆ ಬಂಟ್ವಾಳ ತಾಲೂಕು ಕೇಂದ್ರದಲ್ಲಿ ಪ್ರತಿಭಟನೆ..

ಬಂಟ್ವಾಳ :ಕಾಂಗ್ರೆಸ್ ನೇತೃತ್ವದ ಕರ್ನಾಟಕ ರಾಜ್ಯ ಸರ್ಕಾರದ ದುರಡಳಿತ ನೀತಿಯಿಂದಾಗಿ ದಕ್ಷಿಣ ಕನ್ನಡ ಜೆಲ್ಲೆಯಲ್ಲಿ ಕೆಂಪು ಕಲ್ಲು ಮತ್ತು ಮರಳು ಕ್ರತಕ ಅಭಾವ ಸ್ರಷ್ಟಿಸಿರುವುದರಿಂದ ತೀವ್ರ ಸಮಸ್ಯೆಯಿಂದ ಬಡವರು ನಿರ್ಮಿಸುತ್ತಿರುವ ಸಾವಿರಾರು ಮನೆಗಳು...

ಬ್ರಹ್ಮ ಶ್ರೀ ನಾರಾಯಣ ಗುರು ವಸತಿ ಶಾಲೆ : ನೂತನ ಕಟ್ಟಡಕ್ಕೆ ವಿದ್ಯಾರ್ಥಿಗಳನ್ನು ಸ್ಥಳಾಂತರಿಸಲು ಶಾಸಕ ರಾಜೇಶ್ ನಾಯ್ಕ್ ನಿರ್ದೇಶನ..

ಬಂಟ್ವಾಳ: ದ.ಕ.ಜಿಲ್ಲೆಗೆ ಮಂಜೂರಾಗಿರುವ ಏಕೈಕ ಬ್ರಹ್ಮ ಶ್ರೀ ನಾರಾಯಣ ಗುರು ವಸತಿ ಶಾಲೆಗೆ ನೂತನ ಸುಸಜ್ಜಿತ ‌ಕಟ್ಟಡ ನಿರ್ಮಾಣ ಕಾಮಗಾರಿ ಬಹುತೇಕ ಪೂರ್ಣಗೊಂಡಿದ್ದು,ವಿದ್ಯಾರ್ಥಿಗಳ ಅನುಕೂಲತೆಯ ದೃಷ್ಟಿಯಿಂದ ಶೀಘ್ರ ಹೊಸ ಕಟ್ಟಡಕ್ಕೆ ಸ್ಥಳಾಂತರಿಸುವಂತೆ ಬಂಟ್ವಾಳ...