ಬೆಂಗಳೂರು: ಕೊರೊನಾ ವಾರಿಯರ್ಸ್ ಗಳಾಗಿ ಕರ್ತವ್ಯದಲ್ಲಿರುವ ರಾಜ್ಯ ಸರ್ಕಾರದ ಯಾವುದೇ ಇಲಾಖೆಯ ನೌಕರರು ಕೋವಿಡ್ನಿಂದ ಮೃತಪಟ್ಟರೆ ಅವರ ಕುಟುಂಬಕ್ಕೆ 30 ಲಕ್ಷ ವಿಮಾ ಪರಿಹಾರ ನೀಡುವುದಾಗಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಕೊರೊನಾ ನಿಯಂತ್ರಣಕ್ಕಾಗಿ ಕರ್ತವ್ಯ ನಿರ್ವಹಿಸುವ ಸಂದರ್ಭ ಕೊರೊನಾ ಸೋಂಕಿಗೆ ಒಳಗಾದರೆ ಅವರ ಸಂಪೂರ್ಣ ವೆಚ್ಚವನ್ನೂ ಕೂಡಾ ಸರ್ಕಾರವೇ ಭರಿಸಲಿದೆ ಎಂದು ವರದಿಯಾಗಿದೆ.
ಈ ಸೌಲಭ್ಯವು ಈವರೆಗೆ ಕೊರೊನಾ ಸೇನಾನಿಗಳಿಗೆ ಮಾತ್ರವೇ ಅನ್ವಯಿಸಿತ್ತು. ಆದರೆ ಇನ್ನು ಮುಂದೆ ಕೊರೊನಾ ನಿಯಂತ್ರಣದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಎಲ್ಲಾ ಇಲಾಖೆಗಳ ನೌಕರರಿಗೂ ಇದು ಅನ್ವಯವಾಗಲಿದೆ. ಈ ಬಗ್ಗೆ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್. ಷಡಾಕ್ಷರಿ ಅವರು, ಚಿಕಿತ್ಸಾ ವೆಚ್ಚ ಹಾಗೂ ವಿಮಾ ಮೊತ್ತದ ಸೌಲಭ್ಯವನ್ನು ಎಲ್ಲರಿಗೂ ಕಲ್ಪಿಸುವಂತೆ ಸಿಎಂ ಬಿ.ಎಸ್.ಯಡಿಯೂರಪ್ಪ ಅವರಿಗೆ ಮನವಿ ಸಲ್ಲಿಸಿದ್ದರು.


