Friday, June 27, 2025

ಅನುಮತಿ ಪಡೆಯದೆ ಪ್ರತಿಭಟನೆ: ಆರೋಪಿಗಳ ವಿರುದ್ದ ಪ್ರಕರಣ ದಾಖಲು

ಬಂಟ್ವಾಳ: ಬಂಟ್ವಾಳ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಸಜೀಪಮುನ್ನೂರು ಗ್ರಾಮದ ನಂದಾವರ ಜುಮಾ ಮಸೀದಿಯ ಬಳಿ(ಪಾಣೆಮಂಗಳೂರು-ಮಾರ್ನಬೆÊಲು ರಸ್ತೆ) ಅನುಮತಿ ಪಡೆಯದೆ ಪ್ರತಿಭಟನೆ ಮಾಡಿದ ಆರೋಪಿಗಳ ವಿರುದ್ಧ ಪ್ರಕರಣ ದಾಖಲಾದ ಘಟನೆ ನಡೆದಿದೆ.
ನಂದಾವರ ಮಸೀದಿ ಬಳಿ ಶುಕ್ರವಾರ ಮಧ್ಯಾಹ್ನ ೧.೪೫ರ ವೇಳೆಗೆ ಮಸೀದಿಯ ಅಧ್ಯಕ್ಷ ಬಶೀರ್, ಮಸೀದಿಯ ಖತೀಬರಾದ ಅಬ್ದುಲ್ ಮಜೀದ್, ಅರೀಫ್ ನಂದಾವರ, ಸಜೀಪಮುನ್ನೂರು ಗ್ರಾ.ಪಂ.ಅಧ್ಯಕ್ಷ ಶರೀಫ್, ಮುಸ್ತಾಫ, ಮಸೀದಿ ಮಾಜಿ ಅಧ್ಯಕ್ಷ ಮಜೀದ್, ಅಬೂಬುಕ್ಕರ್ ಮತ್ತು ಇತರರು ಸೇರಿಕೊಂಡು ಧ್ವನಿವರ್ಧಕ ಬಳಸಿಕೊಂಡು ಸಾರ್ವಜನಿಕರಿಗೆ ಮತ್ತು ರಸ್ತೆಯಲ್ಲಿ ಓಡಾಡುವ ವಾಹನಗಳಿಗೆ ತೊಂದರೆ ನೀಡುವಂತೆ ಪ್ರತಿಭಟನೆ ಮಾಡಿದ್ದರು.
ಪ್ರತಿಭಟನೆ ಮಾಡದಂತೆ ಬಂಟ್ವಾಳ ನಗರ ಠಾಣಾ ಪಿಎಸ್‌ಐ ಅವರ ಸೂಚನೆಯನ್ನು ಲೆಕ್ಕಿಸದೇ ಧ್ವನಿವರ್ಧಕ ಬಳಕೆ ಮಾಡಿ ಅಕ್ರಮ ಕೂಟ ಸೇರಿ ಪ್ರತಿಭಟನೆ ಮಾಡಿದ್ದು, ಆರೋಪಿಗಳ ವಿರುದ್ಧ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

More from the blog

5 ವರ್ಷದ ಮಗುವಿನ ಚಿಕಿತ್ಸೆಗೆ ಸಂಗಬೆಟ್ಟು ಗ್ರಾ. ಪಂ ವತಿಯಿಂದ ಸಹಾಯಧನದ ಚೆಕ್ ಹಸ್ತಾಂತರ.. 

ಬಂಟ್ವಾಳ : ತಾಲೂಕಿನ ಕರ್ಪೆ ಗ್ರಾಮದ ಕುಟ್ಟಿಕಳ ನಿವಾಸಿ ಹಿರಣ್ಯಾಕ್ಷ ಶಾಂತಿ ಹಾಗೂ ಸೌಮ್ಯ ದಂಪತಿಗಳ 5 ವರ್ಷದ ಪುಟ್ಟ ಹೆಣ್ಣು ಮಗು ಮನಸ್ವಿಳಿಗೆ ಅರೋಗ್ಯದಲ್ಲಿ ರಕ್ತದ ಕ್ಯಾನ್ಸರ್ ಇರುವುದರಿಂದ ಅರೋಗ್ಯದ ವೆಚ್ಚಕ್ಕಾಗಿ...

Old Bridge : ಮಂಗಳೂರು ಎನ್.ಐ.ಟಿ.ಕೆ ಸಂಸ್ಥೆ ಅಧಿಕಾರಿಗಳಿಂದ ಪಾಣೆಮಂಗಳೂರು ಹಳೆ ಸೇತುವೆಯ ಸಾಮರ್ಥ್ಯ ಪರೀಕ್ಷೆ

ಬಂಟ್ವಾಳ: ಬ್ರಿಟಿಷ್ ಕಾಲದ ಪಾಣೆಮಂಗಳೂರು ಸೇತುವೆಯ ಸಾಮರ್ಥ್ಯ ಪರೀಕ್ಷೆ ನಡೆಸುವ ಉದ್ದೇಶದಿಂದ ಮಂಗಳೂರು ಎನ್.ಐ.ಟಿ.ಕೆ ಸಂಸ್ಥೆಯಿಂದ ಇಬ್ಬರು ಅಧಿಕಾರಿಗಳು ಆಗಮಿಸಿ, ಜಿಲ್ಲಾಧಿಕಾರಿ ಅವರಿಗೆ ವರದಿ ನೀಡಿದ್ದಾರೆ. ಹಳೆ ಸೇತುವೆ ಬಗ್ಗೆ ಸ್ಥಳ ವೀಕ್ಷಣೆಗೆ ಏನ್...

ಕುದ್ರೋಳಿಯಲ್ಲಿ ವಿಶ್ವಶಾಂತಿಗಾಗಿ ಶತ ಸೀಯಾಳಾಭಿಷೇಕ..

ಮಂಗಳೂರು: ಜಗತ್ತಿನಾದ್ಯಂತ ಯುದ್ಧದ ಕಾರ್ಮೋಡ ಆವರಿಸಿರುವುದರಿಂದ ವಿಶ್ವ ಶಾಂತಿಗಾಗಿ ಶ್ರೀ ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನ ಆಡಳಿತ ಮತ್ತು ಅಭಿವೃದ್ಧಿ ಸಮಿತಿ ನೇತೃತ್ವದಲ್ಲಿ ಗುರುವಾರ ಬೆಳಗ್ಗೆ ಶತ ಸೀಯಾಳಾಭಿಷೇಕ, ಮಹಾರುದ್ರಾಭಿಷೇಕ ಮತ್ತು ವಿಶೇಷ...

Bantwal : ಮಾದಕ ದ್ರವ್ಯ ಮುಕ್ತ ಸಮಾಜಕ್ಕಾಗಿ” ಅಭಿಯಾನ – 2025 ಕಾರ್ಯಕ್ರಮ..

ಬಂಟ್ವಾಳ: ದ.ಕ.ಜಿಲ್ಲಾ ಪೋಲೀಸ್ ಇಲಾಖೆ, ಬಂಟ್ವಾಳ ವೃತ್ತದ ಪೋಲೀಸ್ ಠಾಣೆಯ ಹಾಗೂ ಶಿಕ್ಷಣ ಇಲಾಖೆ, ರೋಟರಿ ಕ್ಲಬ್ ಬಂಟ್ವಾಳ ಲೊರೆಟ್ಟೊ ಹಿಲ್ಸ್, ಬಂಟ್ವಾಳ ಟೌನ್ ಮೊಡಂಕಾಪು ಇವರ ಸಂಯುಕ್ತ ಆಶ್ರಯದಲ್ಲಿ " ಮಾದಕ...