Sunday, February 9, 2025

ತಸ್ಲೀಮ್ ಕೊಲೆ ಪ್ರಕರಣ ಪತ್ತೆಗೆ ಬಂಟ್ವಾಳ ಪೋಲೀಸರ ಸಹಕಾರ: ಟಿ.ಡಿ.ನಾಗರಾಜ್

ಬಂಟ್ವಾಳ: ಬಂಟ್ವಾಳ ಪೊಲೀಸ್ ಸರ್ಕಲ್ ವ್ಯಾಪ್ತಿಯ ಸಜೀಪಮೂಡ ಗ್ರಾಮದ ನಗ್ರಿ ಶಾಂತಿನಗರದಲ್ಲಿ ತಸ್ಲೀಮ್ ಯಾನೆ ಮುತಾಸಿಮ್‌ನ ಮೃತದೇಹವು ಪತ್ತೆಯಾಗಿದ್ದು, ಈ ಪ್ರಕರಣದ ತನಿಖಾ ಕಾರ್ಯವನ್ನು ಗುಲ್ಬಾರ್ಗಾ ಪೊಲೀಸರೇ ನಡೆಸಲಿದ್ದಾರೆ.

ತಸ್ಲೀಮ್ ಗುಲ್ಬರ್ಗಾ ಜಿಲ್ಲೆಯಲ್ಲಿ ಜೈಲಿನಿಂದ ಬಿಡುಗಡೆಯಾಗುತ್ತಿದ್ದಂತೆ ಆತನನ್ನು ವಿರೋಧಿ ಗ್ಯಾಂಗ್ ಅಪಹರಣ ನಡೆಸಿತ್ತು. ಇದಕ್ಕೆ ಸಂಬಧಿಸಿಸಂಬಂಧಿಸಿ ಜ. ೩೧ರಂದು ಜೇವರ್ಗಿ ಪೊಲೀಸ್ ಸರ್ಕಲ್ ವ್ಯಾಪ್ತಿಯ ನೇಲೊಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಜತೆಗೆ ಇದೇ ವಿಚಾರದಲ್ಲಿ ಅಲ್ಲಿನ ಪೊಲೀಸರು ಕೆಲವರನ್ನು ವಶಕ್ಕೆ ಕೂಡ ಪಡೆದಿತ್ತು.
ಅಪಹರಣ ನಡೆಸಿದ ತಂಡವನ್ನು ಅಲ್ಲಿನ ತನಿಖಾಧಿಕಾರಿ ಬೆನ್ನಟ್ಟಿ ಬರುತ್ತಿದ್ದು, ಹೀಗಾಗಿ ಕೊಲೆ ಪ್ರಕರಣವನ್ನೂ ಅವರೇ ತನಿಖೆ ನಡೆಸಲಿದ್ದಾರೆ. ಆರೋಪಿಗಳು ಮೃತದೇಹವನ್ನು ನಗ್ರಿ ಶಾಂತಿನಗರದಲ್ಲಿ ಬಿಟ್ಟು ಪರಾರಿಯಾಗಿರುವುದರಿಂದ ಗುಲ್ಬಾರ್ಗಾ ಪೊಲೀಸರಿಗೆ ಸಹಕಾರ ನೀಡುವ ಕಾರ್ಯವನ್ನು ಬಂಟ್ವಾಳ ಪೊಲೀಸರು ನಡೆಸಲಿದ್ದಾರೆ ಎಂದು ಬಂಟ್ವಾಳ ಪೊಲೀಸ್ ಸರ್ಕಲ್ ಇನ್ಸ್ಪೆಕ್ಟರ್ ಟಿ.ಡಿ.ನಾಗರಾಜ್ ತಿಳಿಸಿದ್ದಾರೆ.

 

More from the blog

ದೆಹಲಿಯಲ್ಲಿ ಬಿಜೆಪಿ ಭರ್ಜರಿ ಜಯಭೇರಿ…. ಸಿದ್ದಕಟ್ಟೆ ಪೇಟೆಯಲ್ಲಿ ಬಿಜೆಪಿ ಕಾರ್ಯಕರ್ತರಿಂದ ಪಟಾಕಿ ಸಿಡಿಸಿ ಸಂಭ್ರಮಾಚರಣೆ*

  ದೆಹಲಿ ವಿಧಾನ ಸಭೆಗೆ ನಡೆದ ಚುನಾವಣೆ ಯಲ್ಲಿ ಭಾರತೀಯ ಜನತಾ ಪಕ್ಷ 70 ಸ್ಥಾನ ಗಳಲ್ಲಿ ಬರೋಬ್ಬರಿ 48 ಸ್ಥಾನ ಗಳನ್ನು ಗೆಲ್ಲುವ ಮೂಲಕ ಭರ್ಜರಿ ಜಯಭೇರಿ ಗಳಿಸುವುದರೊಂದಿಗೆ ಪ್ರಧಾನಿ ನರೇಂದ್ರ ಮೋದಿಯವರ...

ಜುಗಾರಿ ಅಡ್ಡೆಗೆ ದಾಳಿ: ಹತ್ತು ಜನರ ಬಂಧನ

ಬಂಟ್ವಾಳ: ಹಣ ಪಣಕ್ಕಿಟ್ಟು ಜುಗಾರಿ ಆಟ ಆಡುತ್ತಿದ್ದ ಅಡ್ಡೆಗೆ ದಾಳಿ ನಡೆಸಿದ ಬಂಟ್ವಾಳ ಗ್ರಾಮಾಂತರ ಪೋಲೀಸ್ ಇನ್ಸ್ ಪೆಕ್ಟರ್ ಶಿವಕುಮಾರ್ ನೇತ್ರತ್ವದ ತಂಡ ಆಟದಲ್ಲಿ ನಿರತರಾಗಿದ್ದ 10 ಮಂದಿ ಆರೋಪಿಗಳನ್ನು ಹಾಗೂ ಸಾವಿರಾರು...

ಮಾರ್ಬಲ್ ಲಾರಿ ಪಲ್ಟಿ

ಬಂಟ್ವಾಳ: ಮಾರ್ಬಲ್ ಲೋಡ್ ಲಾರಿಯೊಂದು ತಾಂತ್ರಿಕ ದೋಷದಿಂದ ರಸ್ತೆಯ ವಿಭಾಜಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾದ ಘಟನೆ ರಾಷ್ಟ್ರೀಯ ಮಂಗಳೂರು- ಬೆಂಗಳೂರು ರಸ್ತೆಯ ತುಂಬೆ ಸಮೀಪದ ರಾಮಲ್ ಕಟ್ಟೆ ಎಂಬಲ್ಲಿ ಪಲ್ಟಿಯಾಗಿದೆ. ಘಟನೆಯಿಂದ ಯಾವುದೇ ಅಪಾಯ...

ಗಣಿ ಇಲಾಖೆ ಅಧಿಕಾರಿ ವಿರುದ್ಧ ಕ್ರಮಕ್ಕೆ ಸೂಚನೆ

ಬಂಟ್ವಾಳ : ಬಂಟ್ವಾಳದಲ್ಲಿ ಫೆ. 5 ರಂದು ನಡೆದ ಜನತಾದರ್ಶನಕ್ಕೆ ಗೈರು ಹಾಜರಾದ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅಧಿಕಾರಿ ವಿರುದ್ಧ ಕ್ರಮ ಕೈಗೊಳ್ಳಲು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್...