Friday, June 27, 2025

ತಸ್ಲೀಮ್ ಕೊಲೆ ಪ್ರಕರಣ ಪತ್ತೆಗೆ ಬಂಟ್ವಾಳ ಪೋಲೀಸರ ಸಹಕಾರ: ಟಿ.ಡಿ.ನಾಗರಾಜ್

ಬಂಟ್ವಾಳ: ಬಂಟ್ವಾಳ ಪೊಲೀಸ್ ಸರ್ಕಲ್ ವ್ಯಾಪ್ತಿಯ ಸಜೀಪಮೂಡ ಗ್ರಾಮದ ನಗ್ರಿ ಶಾಂತಿನಗರದಲ್ಲಿ ತಸ್ಲೀಮ್ ಯಾನೆ ಮುತಾಸಿಮ್‌ನ ಮೃತದೇಹವು ಪತ್ತೆಯಾಗಿದ್ದು, ಈ ಪ್ರಕರಣದ ತನಿಖಾ ಕಾರ್ಯವನ್ನು ಗುಲ್ಬಾರ್ಗಾ ಪೊಲೀಸರೇ ನಡೆಸಲಿದ್ದಾರೆ.

ತಸ್ಲೀಮ್ ಗುಲ್ಬರ್ಗಾ ಜಿಲ್ಲೆಯಲ್ಲಿ ಜೈಲಿನಿಂದ ಬಿಡುಗಡೆಯಾಗುತ್ತಿದ್ದಂತೆ ಆತನನ್ನು ವಿರೋಧಿ ಗ್ಯಾಂಗ್ ಅಪಹರಣ ನಡೆಸಿತ್ತು. ಇದಕ್ಕೆ ಸಂಬಧಿಸಿಸಂಬಂಧಿಸಿ ಜ. ೩೧ರಂದು ಜೇವರ್ಗಿ ಪೊಲೀಸ್ ಸರ್ಕಲ್ ವ್ಯಾಪ್ತಿಯ ನೇಲೊಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಜತೆಗೆ ಇದೇ ವಿಚಾರದಲ್ಲಿ ಅಲ್ಲಿನ ಪೊಲೀಸರು ಕೆಲವರನ್ನು ವಶಕ್ಕೆ ಕೂಡ ಪಡೆದಿತ್ತು.
ಅಪಹರಣ ನಡೆಸಿದ ತಂಡವನ್ನು ಅಲ್ಲಿನ ತನಿಖಾಧಿಕಾರಿ ಬೆನ್ನಟ್ಟಿ ಬರುತ್ತಿದ್ದು, ಹೀಗಾಗಿ ಕೊಲೆ ಪ್ರಕರಣವನ್ನೂ ಅವರೇ ತನಿಖೆ ನಡೆಸಲಿದ್ದಾರೆ. ಆರೋಪಿಗಳು ಮೃತದೇಹವನ್ನು ನಗ್ರಿ ಶಾಂತಿನಗರದಲ್ಲಿ ಬಿಟ್ಟು ಪರಾರಿಯಾಗಿರುವುದರಿಂದ ಗುಲ್ಬಾರ್ಗಾ ಪೊಲೀಸರಿಗೆ ಸಹಕಾರ ನೀಡುವ ಕಾರ್ಯವನ್ನು ಬಂಟ್ವಾಳ ಪೊಲೀಸರು ನಡೆಸಲಿದ್ದಾರೆ ಎಂದು ಬಂಟ್ವಾಳ ಪೊಲೀಸ್ ಸರ್ಕಲ್ ಇನ್ಸ್ಪೆಕ್ಟರ್ ಟಿ.ಡಿ.ನಾಗರಾಜ್ ತಿಳಿಸಿದ್ದಾರೆ.

 

More from the blog

5 ವರ್ಷದ ಮಗುವಿನ ಚಿಕಿತ್ಸೆಗೆ ಸಂಗಬೆಟ್ಟು ಗ್ರಾ. ಪಂ ವತಿಯಿಂದ ಸಹಾಯಧನದ ಚೆಕ್ ಹಸ್ತಾಂತರ.. 

ಬಂಟ್ವಾಳ : ತಾಲೂಕಿನ ಕರ್ಪೆ ಗ್ರಾಮದ ಕುಟ್ಟಿಕಳ ನಿವಾಸಿ ಹಿರಣ್ಯಾಕ್ಷ ಶಾಂತಿ ಹಾಗೂ ಸೌಮ್ಯ ದಂಪತಿಗಳ 5 ವರ್ಷದ ಪುಟ್ಟ ಹೆಣ್ಣು ಮಗು ಮನಸ್ವಿಳಿಗೆ ಅರೋಗ್ಯದಲ್ಲಿ ರಕ್ತದ ಕ್ಯಾನ್ಸರ್ ಇರುವುದರಿಂದ ಅರೋಗ್ಯದ ವೆಚ್ಚಕ್ಕಾಗಿ...

Old Bridge : ಮಂಗಳೂರು ಎನ್.ಐ.ಟಿ.ಕೆ ಸಂಸ್ಥೆ ಅಧಿಕಾರಿಗಳಿಂದ ಪಾಣೆಮಂಗಳೂರು ಹಳೆ ಸೇತುವೆಯ ಸಾಮರ್ಥ್ಯ ಪರೀಕ್ಷೆ

ಬಂಟ್ವಾಳ: ಬ್ರಿಟಿಷ್ ಕಾಲದ ಪಾಣೆಮಂಗಳೂರು ಸೇತುವೆಯ ಸಾಮರ್ಥ್ಯ ಪರೀಕ್ಷೆ ನಡೆಸುವ ಉದ್ದೇಶದಿಂದ ಮಂಗಳೂರು ಎನ್.ಐ.ಟಿ.ಕೆ ಸಂಸ್ಥೆಯಿಂದ ಇಬ್ಬರು ಅಧಿಕಾರಿಗಳು ಆಗಮಿಸಿ, ಜಿಲ್ಲಾಧಿಕಾರಿ ಅವರಿಗೆ ವರದಿ ನೀಡಿದ್ದಾರೆ. ಹಳೆ ಸೇತುವೆ ಬಗ್ಗೆ ಸ್ಥಳ ವೀಕ್ಷಣೆಗೆ ಏನ್...

ಕುದ್ರೋಳಿಯಲ್ಲಿ ವಿಶ್ವಶಾಂತಿಗಾಗಿ ಶತ ಸೀಯಾಳಾಭಿಷೇಕ..

ಮಂಗಳೂರು: ಜಗತ್ತಿನಾದ್ಯಂತ ಯುದ್ಧದ ಕಾರ್ಮೋಡ ಆವರಿಸಿರುವುದರಿಂದ ವಿಶ್ವ ಶಾಂತಿಗಾಗಿ ಶ್ರೀ ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನ ಆಡಳಿತ ಮತ್ತು ಅಭಿವೃದ್ಧಿ ಸಮಿತಿ ನೇತೃತ್ವದಲ್ಲಿ ಗುರುವಾರ ಬೆಳಗ್ಗೆ ಶತ ಸೀಯಾಳಾಭಿಷೇಕ, ಮಹಾರುದ್ರಾಭಿಷೇಕ ಮತ್ತು ವಿಶೇಷ...

Bantwal : ಮಾದಕ ದ್ರವ್ಯ ಮುಕ್ತ ಸಮಾಜಕ್ಕಾಗಿ” ಅಭಿಯಾನ – 2025 ಕಾರ್ಯಕ್ರಮ..

ಬಂಟ್ವಾಳ: ದ.ಕ.ಜಿಲ್ಲಾ ಪೋಲೀಸ್ ಇಲಾಖೆ, ಬಂಟ್ವಾಳ ವೃತ್ತದ ಪೋಲೀಸ್ ಠಾಣೆಯ ಹಾಗೂ ಶಿಕ್ಷಣ ಇಲಾಖೆ, ರೋಟರಿ ಕ್ಲಬ್ ಬಂಟ್ವಾಳ ಲೊರೆಟ್ಟೊ ಹಿಲ್ಸ್, ಬಂಟ್ವಾಳ ಟೌನ್ ಮೊಡಂಕಾಪು ಇವರ ಸಂಯುಕ್ತ ಆಶ್ರಯದಲ್ಲಿ " ಮಾದಕ...