Monday, February 10, 2025

ಫರಂಗಿಪೇಟೆ ಗ್ರಾ.ಪಂ. ಸದಸ್ಯನ ಮೇಲೆ ತಲವಾರು ದಾಳಿ

ಬಂಟ್ವಾಳ: ಫರಂಗಿಪೇಟೆ ಗ್ರಾ.ಪಂ. ಸದಸ್ಯ ನ ಮೇಲೆ ತಲವಾರು ದಾಳಿ ನಡೆಸಿದ ಪರಿಣಾಮ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ಇಂದು ಮುಂಜಾನೆ ಮಲ್ಪೆ ಯಲ್ಲಿ ನಡೆದಿದೆ.

ಬಂಟ್ವಾಳ ತಾಲೂಕಿನ ಫರಂಗಿಪೇಟೆ ಎಂಬಲ್ಲಿನ ಮೀನು ವ್ಯಾಪಾರಿಯೊಬ್ಬರ ಮೇಲೆ ಮಲ್ಪೆ ಮೀನುಗಾರಿಕಾ ಬಂದರ್ ನಲ್ಲಿ ತಲವಾರು ದಾಳಿ ನಡೆದ ಘಟನೆ ಇಂದು ಮುಂಜಾನೆ ಉಡುಪಿಯ ಮಲ್ಪೆಯಲ್ಲಿ ನಡೆದಿದೆ. ಫರಂಗಿಪೇಟೆ ನಿವಾಸಿ ರಿಯಾಜ್ ಎಂಬವರು ತಲವಾರಿನ ಏಟಿಗೆ ಗಾಯಗೊಂಡವರು.

ಫರಂಗಿಪೇಟೆಯ ಹಂಝಾ ಎಂಬವರ ಮಗ ಮೀನು ವ್ಯಾಪಾರಿ ಹಾಗೂ ಫರಂಗಿಪೇಟೆ ಗ್ರಾಮ ಪಂಚಾಯತ್ ಸದಸ್ಯರಾಗಿರುವ ರಿಯಾಝ್ ಫರಂಗಿಪೇಟೆ (36) ಎಂಬವರ ಮೇಲೆ ಆಪರಿಚಿತ ನಾಲ್ವರು ತಲವಾರು ದಾಳಿ ನಡೆದಿದೆ.
ರಿಯಾಜ್ ಅವರು ಎಂದಿನಂತೆ ಮೀನು ಖರೀದಿಸಿ ಮಾರಾಟ ಮಾಡಲು ಇಂದು ಮುಂಜಾನೆ 4:30 ರ ಸಮಯದಲ್ಲಿ ಇತರ ಮೂವರೊಂದಿಗೆ ಎಂದಿನಂತೆ ತನ್ನ ಪಿಕಪ್ ವಾಹನದಲ್ಲಿ ಮಲ್ಪೆ ಮೀನುಗಾರಿಕಾ ಬಂದರಿಗೆ ಮಲ್ಪೆ ಪಿಶ್ಚಿಂಗ್ ಪೋರ್ಟ್ ಆಗಮಿಸಿದ್ದರು.

ಬಂದರಿನೊಳಗೆ ತಮ್ಮ ವಾಹನ ನಿಲ್ಲಿಸಿ, ಇತರ ಮೂವರು ಚಾಹ ಕುಡಿಯಲು ಇಳಿದು ಹೋಗಿದ್ದರು. ಆದರೆ ರಿಯಾಝ್ ರವರು ಅದೇ ಪಿಕಪ್ ವಾಹನದಲ್ಲಿ ನಿದ್ರೆಗೆ ಜಾರಿದ್ದರು. ಇದೇ ಸಮಯದಲ್ಲಿ ಅವರ ವಾಹನವನ್ನು ಹಿಂಬಾಲಿಕೊಂಡು ಬಿಳಿ ಬಣ್ಣದ (KA 05 9184) ಕಾರಿನಲ್ಲಿ ಬಂದಿದ್ದ ನಾಲ್ವರು ರಿಯಾಝ್ ಮೇಲೆ ತಲವಾರು ದಾಳಿ ನಡೆಸಿದ್ದಾರೆ.
ದಾಳಿಗೊಳಗಾದ ರಿಯಾಜ್ ರವರ ಕೈ ತೂಳು, ಕಾಲಿನ ಬೆರಳು, ತಲೆಯ ಹಿಂಬಾಗಕ್ಕೆ ಗಾಯವಾಗಿರುವುದಲ್ಲದೆ, ಕಿರು ಬೆರಳು ತುಂಡಾಗಿ ಬಿದ್ದಿದೆ. ತುಂಡಾದ ಬೆರಳನ್ನು ಶಸ್ತ್ರ ಚಿಕಿತ್ಸೆಯ ಮೂಲಕ ಮರು ಜೋಡಣೆಯ ಕಾರ್ಯ ನಡೆಯುತ್ತಿದೆ.
ಸಧ್ಯ ಪ್ರಾಣಾಪಾಯದಿಂದ ಪಾರಾಗಿರುವ ರಿಯಾಝ್ ರವರು ಮಣಿಪಾಲದ ಕೆ.ಎಂ.ಸಿ ಕೆ.ಎಂ.ಸಿ.ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ದಾಳಿಯ ರಭಸಕ್ಕೆ ವಾಹನದ ಒಳಗೆಲ್ಲಾ ರಕ್ತ ಚಿಮ್ಮಿದೆ. ಮಲ್ಪೆ ಪೊಲೀಸರು ಪ್ರಕರಣ ದಾಖಲಿಕೊಂಡಿದ್ದಾರೆ.

More from the blog

ನೇತ್ರಾವತಿ ನದಿಗೆ ಅಡ್ಡಲಾಗಿ ನಿರ್ಮಿಸಿದ 3ನೇ ಬ್ರಿಡ್ಜ್ ನಲ್ಲೂ ನೀರು ಸಂಗ್ರಹ ಆರಂಭ

ಬಂಟ್ವಾಳ: ಬಂಟ್ವಾಳದ ಜಕ್ರಿಬೆಟ್ಟುನಲ್ಲಿ ಜೀವನದಿ ನೇತ್ರಾವತಿ ನದಿಗೆ ಅಡ್ಡಲಾಗಿ ಸಣ್ಣ ನೀರಾವರಿ ಇಲಾಖೆಯ ಮೂಲಕ ಸುಮಾರು 135 ಕೋ.ರೂ.ವೆಚ್ಚದಲ್ಲಿ ನಿರ್ಮಾಣಗೊಂಡ ಸೇತುವೆ ಸಹಿತ ಕಿಂಡಿ ಅಣೆಕಟ್ಟು(ಬ್ರಿಡ್ಜ್ ಕಂ ಬ್ಯಾರೇಜ್)ಗೆ ಇದೇ ಮೊದಲ ಬಾರಿಗೆ...

ಬಂಟ್ವಾಳ : ಸಮಾಜ ಸೇವಾ ಸಹಕಾರಿ ಸಂಘ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳಿಗೆ ಜಯ

ಬಂಟ್ವಾಳ : ಪ್ರತಿಷ್ಠಿತ ಸಮಾಜ ಸೇವಾ ಸಹಕಾರಿ ಸಂಘ ನಿಯಮಿತ ಬಂಟ್ವಾಳ ಇದರ ಮುಂದಿನ 5 ವರ್ಷಗಳ ಅವಧಿಯ ಆಡಳಿತ ಮಂಡಳಿಗೆ‌ ಭಾನುವಾರ‌ ಚುನಾವಣೆ ನಡೆದಿದ್ದು, ಸಹಕಾರ ಭಾರತಿಯ 17 ಮಂದಿ‌ ಅಭ್ಯರ್ಥಿಗಳು...

ಕೊಳ್ನಾಡು : ಬಾರೆಬೆಟ್ಟು ಮಂಟಮೆಯಲ್ಲಿ ಕಾಲಾವಧಿ ಜಾತ್ರೆ

ವಿಟ್ಲ : ಕೊಳ್ನಾಡು ಗ್ರಾಮದ ಕಾರಣಿಕದ ಪ್ರಸಿದ್ಧ ದೈವಕ್ಷೇತ್ರ 'ಬಾರೆಬೆಟ್ಟು ಮಂಟಮೆ'ಯ ಕಾಲಾವಧಿ ಜಾತ್ರೆಯು ವಿಜೃಂಭಣೆಯಿಂದ ಜರಗಿತು. ಶ್ರೀ ಮಲರಾಯಿ ಮತ್ತು ಬಂಟ ದೈವದ ದೈವದ ಕೊಟ್ಯದಾಯನ ನೇಮೋತ್ಸವ ನಡೆಯಿತು. ಇದೇ ಸಂದರ್ಭದಲ್ಲಿ ಶ್ರೀ ಮಲರಾಯಿ...

ಪಣೋಲಿಬೈಲು ಕ್ಷೇತ್ರದಲ್ಲಿ ಫೆ.12ರಿಂದ ಫೆ.16ರವರೆಗೆ ಅಗೇಲು ಸೇವೆ & ಕೋಲ ಸೇವೆ ಇಲ್ಲ

ಬಂಟ್ವಾಳ: ಸಜೀಪಮೂಡ ಗ್ರಾಮದ ಕಾರಣಿಕ ಕ್ಷೇತ್ರ ಪಣೋಲಿಬೈಲು ಶ್ರೀ ಕಲ್ಲುರ್ಟಿ ದೈವಸ್ಥಾನದಲ್ಲಿ ಫೆ.12ರಿಂದ ಫೆ.16ರವರೆಗೆ ಅಗೇಲು ಸೇವೆ ಮತ್ತು ಕೋಲ ಸೇವೆ” ಇರುವುದಿಲ್ಲ ಎಂದು ಕ್ಷೇತ್ರದ ಪ್ರಕಟಣೆ ತಿಳಿಸಿದೆ. ನಂದಾವರ ಶ್ರೀ ವಿನಾಯಕ ಶಂಕರ...