ಬಂಟ್ವಾಳ : ಕೊರೋನ ಪ್ರಕರಣ ಹೆಚ್ಚುತ್ತಿರುವ ಹಿನ್ನೆಲೆ ದ.ಕ. ಜಿಲ್ಲೆ ಶನಿವಾರ ಮಾ.28 ರಂದು ಸಂಪೂರ್ಣ ಬಂದ್ ಆಗಲಿದೆ ಎಂದು ದ.ಕ. ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ್ ಪೂಜಾರಿ ತಿಳಿಸಿದ್ದಾರೆ.

ಶುಕ್ರವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಉನ್ನತ ಮಟ್ಟದ ಸಭೆಯಲ್ಲಿ ಈ ಬಗ್ಗೆ ನಿರ್ಧಾರಿಸಲಾಯಿತು.
ಜಿಲ್ಲೆಯಲ್ಲಿ ಈವರೆಗೆ 7 ಪ್ರಕರಣಗಳು ದೃಢಪಟ್ಟಿವೆ. ಸಾರ್ವಜನಿಕರ ಆರೋಗ್ಯ ಹಿತ ದೃಷ್ಟಿಯಿಂದ ಪ್ರತಿಯೊಬ್ಬರು ಮನೆಯೊಳಗೆ ಕುಳಿತು ಸಾಮಾಜಿಕ ಅಂತರ ಕಾಪಾಡಿಕೊಳ್ಳಬೇಕು.
ಹಾಗಾಗಿ ಶನಿವಾರ ವಾಣಿಜ್ಯ ವ್ಯವಹಾರಗಳನ್ನು, ಅಂಗಡಿ ಮುಂಗಟ್ಟುಗಳನ್ನು ಸಂಪೂರ್ಣವಾಗಿ ಮುಚ್ಚಲು ಸಭೆಯಲ್ಲಿ ನಿರ್ಧರಿಸಲಾಗಿದೆ ಎಂದು ತಿಳಿಸಿದ್ದಾರೆ

