Wednesday, June 25, 2025

ಕಬಕ : ಮಾರ್ಚ್ 15ಕ್ಕೆ ಮೌಲಾನ ಹಲ್ಕಾ ದ್ಸಿಕ್ರ್, ದಫ್ ಸ್ಪರ್ಧೆ

ವಿಟ್ಲ: ಕಬಕ ಮೌಲಾನ ಹಲ್ಕಾ ದ್ಸಿಕ್ರ್ 19 ನೇ ವಾರ್ಷಿಕ ಮಹಾ ಸಮ್ಮೇಳನ ಹಾಗೂ ರಾಜ್ಯ ಮಟ್ಟದ ಹೊನಲು ಬೆಳಕಿನ ದಫ್ ಸ್ಪರ್ಧಾ ಕಾರ್ಯಕ್ರಮ ಮಾರ್ಚ್ 15 ರಂದು ಕಬಕ ಮೌಲಾನ ಕಾಟೇಜ್ ನ ಮರ್ಹೂಮ್ ಪುತ್ತೂರು ತಂಙಲ್ ವೇದಿಕೆಯಲ್ಲಿ ನಡೆಯಲಿರುವುದು.
ಸಮಸ್ತ ಕೇರಳ ಜಂ ಇಯ್ಯತುಲ್ ಉಲಮಾ ಕಾಸರಗೋಡು ಜಿಲ್ಲಾ ಕಾರ್ಯದರ್ಶಿ ಹಾಜಿ ಅಬ್ದುಲ್ಲಾ ಫೈಝಿ ಚೆಂಗಳ ಉದ್ಘಾಟಿಸಲಿದ್ದು ಮೌಲಾನ ಹಾಜಿ ಅಬ್ದುಲ್ ರಝಾಕ್ ಮಲೇಶಿಯಾ ಅಧ್ಯಕ್ಷತೆ ವಹಿಸುವವರು.
ಪೋಳ್ಯ ಜುಮಾ ಮಸೀದಿ ಮುದರ್ರಿಸ್ ಸೈಯದ್ ಯಹ್ಯಾ ತಂಙಲ್ ದುಹಾ ನೆರವೇರಿಸಲಿದ್ದು, ಮಿತ್ತೂರು ಸಿರಾಜುಲ್ ಹುದಾ ಜುಮಾ ಮಸೀದಿ ಖತೀಬರಾದ ಆಸಿಫ್ ಅಝ್ಅರಿ ಮೌಲಾನ ಹಲ್ಕಾ ದ್ಸಿಕ್ರ್ ನ ನೇತ್ರತ್ವ ವಹಿಸುವವರು. ಖಲೀಲ್ ರಹ್ಮಾನ್ ಖಾಷಿಫಿ ಶಾರ್ಜಾ ಮುಖ್ಯ ಬಾಷಣಗೈಯುವರು. ಹಾಗೂ ಹಲವಾರು ಧಾರ್ಮಿಕ, ಸಾಮಾಜಿಕ ಮುಖಂಡರು ಬಾಗವಹಿಸುವರು. ಬಳಿಕ ರಾಜ್ಯದ ವಿವಿಧ ತಂಡಗಳಿಂದ ದಫ್ ಸ್ಪರ್ಧಾ ಕಾರ್ಯಕ್ರಮ ನಡೆಯಲಿರುವುದು ಎಂದು ಪ್ರಕಟನೆ ತಿಳಿಸಿದೆ.

More from the blog

Kalladka : ಕಲ್ಲಡ್ಕ ಪ್ಲೈ ಓವರ್ ಸಂಪೂರ್ಣವಾಗಿ ಸಂಚಾರಕ್ಕೆ ಮುಕ್ತ..

ಬಂಟ್ವಾಳ : ಬಂಟ್ವಾಳ ತಾಲೂಕಿನ ಕಲ್ಲಡ್ಕದ ಪ್ಲೈ ಓವರ್ ಚತುಷ್ಪಥ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಬಿಸಿರೋಡು - ಅಡ್ಡಹೊಳೆ ಅತೀ ಉದ್ದದ ಪ್ಲೈ ಓವರ್ ಸಂಪೂರ್ಣವಾಗಿ ಸಂಚಾರಕ್ಕೆ ಮುಕ್ತವಾಗಿದೆ. ಕಳೆದ 25 ದಿನಗಳ ಹಿಂದೆ...

ಇಡ್ಕಿದು ಗ್ರಾ. ಪಂ ಸಭಾಂಗಣದಲ್ಲಿ ರಾಜಕೀಯ ಸಭೆ ನಡೆಸಲು ಅನುಮತಿ ವಿಚಾರ : ಪಿಡಿಒ ಅಮಾನತು

ವಿಟ್ಲ: ಬಂಟ್ವಾಳ ತಾಲೂಕು ಇಡ್ಕಿದು ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ರಾಜಕೀಯ ಸಭೆ ನಡೆಸಲು ಅವಕಾಶ ನೀಡಿದ‌ ಆರೋಪದ ಹಿನ್ನೆಲೆ ಯಲ್ಲಿ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಗೋಕುಲ್ ದಾಸ್ ಭಕ್ತ ರವರನ್ನು ಅಮಾನತು...

ವೀರಕಂಭ ಗ್ರಾಮದ ರೈತರಿಗೆ ಕೃಷಿ ಬಗ್ಗೆ ಅರಿವು ಮೂಡಿಸುವ ಕಾರ್ಯಕ್ರಮ..

ಬಂಟ್ವಾಳ : ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಕೃಷಿ ಇಲಾಖೆ ಬಂಟ್ವಾಳ ತಾಲೂಕು 2025-26 ನೇ ಸಾಲಿನ ರಾಷ್ಟ್ರೀಯ ನೈಸರ್ಗಿಕ ಕೃಷಿ ಅಭಿಯಾನ ಯೋಜನೆಯಡಿ ರೈತರಿಗೆ ಕೃಷಿ ಬಗ್ಗೆ ಅರಿವು ಮೂಡಿಸುವ ಕಾರ್ಯಕ್ರಮ...

ಆಕ್ಸಿಯಂ-4 ಉಡಾವಣೆ ಯಶಸ್ವಿ – ಭಾರತೀಯ ಗಗನಯಾತ್ರಿ ಶುಭಾಂಶು ಶುಕ್ಲಾ ಅಂತರಿಕ್ಷಯಾನ ಶುರು..

ಆಕ್ಸಿಯಮ್ 4 ಮಿಷನ್ ಬುಧವಾರ ಫ್ಲೋರಿಡಾದ ಕೆನಡಿ ಬಾಹ್ಯಾಕಾಶ ಕೇಂದ್ರದಿಂದ ಯಶಸ್ವಿಯಾಗಿ ಉಡಾವಣೆಯಾಗಿದೆ. ಮಧ್ಯಾಹ್ನ ಭಾರತೀಯ ಕಾಲಮಾನ 12.01ಕ್ಕೆ ಆಕ್ಸಿಯಮ್-4 ಬಾಹ್ಯಾಕಾಶ ಯೋಜನೆಯ ಗಗನಯಾತ್ರಿಗಳನ್ನು ಹೊತ್ತ ಸ್ಪೇಸ್ಎಕ್ಸ್ ಫಾಲ್ಕನ್-9 ನೌಕೆ, ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣ...