Saturday, July 12, 2025

ದಫ್ ಸ್ಪರ್ಧೆ ಬಿಸಿರೋಡ್ ತಂಡಕ್ಕೆ ಪ್ರಶಸ್ತಿ

*ತುಂಬೆ : ದಪ್ ಸ್ಪರ್ಧೆ ಬಿ.ಸಿ.ರೋಡ್ ತಂಡಕ್ಕೆ ಪ್ರಶಸ್ತಿ*
ಬಂಟ್ವಾಳ : ತುಂಬೆ ಮುಹಿಯುದ್ದೀನ್ ಜುಮಾ ಮಸೀದಿ ವತಿಯಿಂದ 7ನೇ ಸ್ವಲಾತ್ ವಾರ್ಷಿಕ ಹಾಗೂ 3ನೇ ಮಜ್ಲಿಸುನ್ನೂರು ವಾರ್ಷಿಕದ ಪ್ರಯುಕ್ತ ದ.ಕ.ಜಿಲ್ಲಾ ಮಟ್ಟದ ದಫ್ ಸ್ಪರ್ಧಾ ಕಾರ್ಯಕ್ರಮವು ಇಲ್ಲಿನ ಬಿ.ಎ.ಮೈದಾನದಲ್ಲಿ ಶುಕ್ರವಾರ ನಡೆಯಿತು.
ಕಾರ್ಯಕ್ರಮವನ್ನು ಉದ್ಘಾಟಿಸಿದ ತುಂಬೆ ಹಿದಾಯತುಲ್ ಇಸ್ಲಾಂ ಮದ್ರಸ ಮುಖ್ಯ ಶಿಕ್ಷಕ ಯೂಸುಫ್ ಮುಸ್ಲಿಯಾರ್ ಮಾತನಾಡಿ ಇಂದಿನ ಮಕ್ಕಳಿಗೆ ಲೌಕಿಕ, ಧಾರ್ಮಿಕ ಶಿಕ್ಷಣದ ಜೊತೆಗೆ ಇಸ್ಲಾಮಿನ ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವಂತೆ ಮಾಡಲು ದಫ್ ಕಾರ್ಯಕ್ರಮ ಪ್ರೇರಣೆಯಾಗಿದೆ ಎಂದರು.


ತುಂಬೆ ಎಂ.ಜೆ.ಎಂ.ಅದ್ಯಕ್ಷ ಅಬ್ದುರ್ರಹ್ಮಾನ್ ಹದ್ದಾದಿ ಅಧ್ಯಕ್ಷತೆ ವಹಿಸಿದ್ದರು. ಸ್ಥಳೀಯ ಖತೀಬರಾದ ಅಬ್ದುಲ್ ಲತೀಫ್ ಫೈಝಿ ದುಃಹಾ ನೆರವೇರಿಸಿದರು. ದಫ್ ಎಸೋಸಿಯೇಶನ್ ದ.ಕ.ಮತ್ತು ಉಡುಪಿ ಜಿಲ್ಲಾದ್ಯಕ್ಷ ಅಬ್ದುಲ್ ಲತೀಫ್ ನೇರಳಕಟ್ಟೆ ಮುಖ್ಯ ಅತಿಥಿಗಳಾಗಿ ಬಾಗವಹಿಸಿದ್ದರು.
ತುಂಬೆ ಮದ್ರಸ ಶಿಕ್ಷಕರುಗಳಾದ ಅಬ್ದುಲ್ ರಹೀಂ ಅಝ್ ಅರಿ, ಇಸ್ಮಾಯಿಲ್ ಮುಸ್ಲಿಯಾರ್, ಇಮ್ತಿಯಾಝ್ ಅಝ್ ಅರಿ, ಮುಹಮ್ಮದ್ ಬಶೀರ್ ಮುಸ್ಲಿಯಾರ್ ಮೊದಲಾದವರು ಉಪಸ್ಥಿತರಿದ್ದರು.
ತುಂಬೆ ಎಂ.ಜೆ.ಎಂ.ಪ್ರದಾನ ಕಾರ್ಯದರ್ಶಿ ಟಿ.ಎಂ.ಮೂಸಬ್ಬ ಸ್ವಾಗತಿಸಿ ವಂದಿಸಿದರು. ಮುಹಮ್ಮದ್ ಖಲಂದರ್ ತುಂಬೆ ಕಾರ್ಯಕ್ರಮ ನಿರೂಪಿಸಿದರು.

*ಕೈಕಂಬ – ಬಿ.ಸಿ.ರೋಡ್ ತಂಡಕ್ಕೆ ಪ್ರಶಸ್ತಿ*
ದ.ಕ.ಜಿಲ್ಲಾ ಮಟ್ಟದ ದಫ್ ಸ್ಪರ್ಧೆಯಲ್ಲಿ ಕೈಕಂಬ – ಬಿ.ಸಿ.ರೋಡ್ ನ ರಿಫಾಯಿಯ ದಫ್ ಕಮಿಟಿ ಪ್ರಥಮ ಹಾಗೂ ಪುತ್ತೂರಿನ ಕರವಡ್ತ ವಲಿಯುಲ್ಲಾಹಿ ದಫ್ ತಂಡ ದ್ವಿತೀಯ ಸ್ಥಾನವನ್ನು ಪಡೆದುಕೊಂಡಿತು. ಆರ್.ಕೆ.ಮದನಿ ಅಮ್ಮೆಂಬಳ, ಅಬುಲ್ ಉವೈಸ್, ಅಬ್ದುಲ್ ರಹಮಾನ್ ತೀರ್ಪುಗಾರರಾಗಿ ಸಹಕರಿಸಿದರು.

More from the blog

ಕುಂಜರ್ಕಳದ ತಡೆಗೋಡೆ, ಬಸ್ಸು ತಂಗುದಾಣ, ಹೈಮಾಸ್ಟ್ ದೀಪ ಉದ್ಘಾಟಿಸಿದ ಯು.ಟಿ.ಖಾದರ್..

ಬಂಟ್ವಾಳ: ಶಾಸಕರ ಅನುದಾನದಿಂದ ನಿರ್ಮಾಣಗೊಂಡ ಪುದು ಗ್ರಾಮದ ಕುಂಜರ್ಕಳದ ತಡೆಗೋಡೆ, ೧೦ನೇ ಮೈಲುಕಲ್ಲು ಬಳಿ ಬಸ್ಸು ತಂಗುದಾಣ ಹಾಗೂ ತ್ವಾಹಾ ಜುಮಾ ಮಸೀದಿ ಬಳಿ ಅನುಷ್ಠಾನಗೊಂಡ ಹೈಮಾಸ್ಟ್ ದೀಪವನ್ನು ಸ್ಪೀಕರ್ ಯು.ಟಿ.ಖಾದರ್ ಅವರು...

ಗುರು ಪೂರ್ಣಿಮೆಯ ಪ್ರಯುಕ್ತ ನಿವೃತ ಶಿಕ್ಷಕಿ ಲಕ್ಷ್ಮೀ ಅವರಿಗೆ ಗೌರವರ್ಪಣೆ 

ಬಂಟ್ವಾಳ : ಗುರು ಪೂರ್ಣಿಮೆಯ ಪ್ರಯುಕ್ತ ಸಜೀಪ ಮುನ್ನೂರು ಬಿಜೆಪಿ ಗ್ರಾಮ ಸಮಿತಿಯ 4ನೇ ವಾರ್ಡಿನ ಬೊಕ್ಕಸ ನಿವಾಸಿಯಾದ ನಿವೃತ ಶಿಕ್ಷಕಿಯಾದ ಮಾತೃ ವಾತ್ಸಲ್ಯದ ಲಕ್ಷ್ಮೀ ಟೀಚರ್ ಇವರಿಗೆ ಬಿಜೆಪಿ ಮುಖಂಡರು ಮಾಜಿ...

ಕೆಂಪುಕಲ್ಲು, ಮರಳು ಸಮಸ್ಯೆ : ಜು.14ಕ್ಕೆ ಬಂಟ್ವಾಳ ತಾಲೂಕು ಕೇಂದ್ರದಲ್ಲಿ ಪ್ರತಿಭಟನೆ..

ಬಂಟ್ವಾಳ :ಕಾಂಗ್ರೆಸ್ ನೇತೃತ್ವದ ಕರ್ನಾಟಕ ರಾಜ್ಯ ಸರ್ಕಾರದ ದುರಡಳಿತ ನೀತಿಯಿಂದಾಗಿ ದಕ್ಷಿಣ ಕನ್ನಡ ಜೆಲ್ಲೆಯಲ್ಲಿ ಕೆಂಪು ಕಲ್ಲು ಮತ್ತು ಮರಳು ಕ್ರತಕ ಅಭಾವ ಸ್ರಷ್ಟಿಸಿರುವುದರಿಂದ ತೀವ್ರ ಸಮಸ್ಯೆಯಿಂದ ಬಡವರು ನಿರ್ಮಿಸುತ್ತಿರುವ ಸಾವಿರಾರು ಮನೆಗಳು...

ಬ್ರಹ್ಮ ಶ್ರೀ ನಾರಾಯಣ ಗುರು ವಸತಿ ಶಾಲೆ : ನೂತನ ಕಟ್ಟಡಕ್ಕೆ ವಿದ್ಯಾರ್ಥಿಗಳನ್ನು ಸ್ಥಳಾಂತರಿಸಲು ಶಾಸಕ ರಾಜೇಶ್ ನಾಯ್ಕ್ ನಿರ್ದೇಶನ..

ಬಂಟ್ವಾಳ: ದ.ಕ.ಜಿಲ್ಲೆಗೆ ಮಂಜೂರಾಗಿರುವ ಏಕೈಕ ಬ್ರಹ್ಮ ಶ್ರೀ ನಾರಾಯಣ ಗುರು ವಸತಿ ಶಾಲೆಗೆ ನೂತನ ಸುಸಜ್ಜಿತ ‌ಕಟ್ಟಡ ನಿರ್ಮಾಣ ಕಾಮಗಾರಿ ಬಹುತೇಕ ಪೂರ್ಣಗೊಂಡಿದ್ದು,ವಿದ್ಯಾರ್ಥಿಗಳ ಅನುಕೂಲತೆಯ ದೃಷ್ಟಿಯಿಂದ ಶೀಘ್ರ ಹೊಸ ಕಟ್ಟಡಕ್ಕೆ ಸ್ಥಳಾಂತರಿಸುವಂತೆ ಬಂಟ್ವಾಳ...