Friday, June 27, 2025

ಜೂನ್ 8 ರಿಂದ ನದಿ ಬದಿಯ ನಿವಾಸಿಗಳು ಎಚ್ಚರಿಕೆಯನ್ನು ವಹಿಸಿ ಎಂದ ಎ‌.ಎಂ.ಆರ್ ಡ್ಯಾಂ ಸಂಸ್ಥೆ

ಬಂಟ್ವಾಳ: ಶಂಭೂರಿನ ಎಎಂಆರ್ ಡ್ಯಾಂ ನಿಂದ ಶೇಖರಿಸಿ ಬಳಿಕ ನೀರನ್ನು ನಿಧಾನವಾಗಿ ನದಿಯ ಕೆಳಗೆ ಬಿಡಲಾಗುತ್ತಿದ್ದು, ನದಿ ತೀರ ವಾಸಿಗಳು ಮುಂಜಾಗರೂಕತೆ ಕ್ರಮ ಕೈಗೊಳ್ಳಬೇಕು ಎಂದು ಎಎಂಆರ್ ನ ಕಚೇರಿಯ ಪ್ರಕಟನೆ ತಿಳಿಸಿದೆ.

ಶಂಭೂರಿನಲ್ಲಿರುವ ಎಎಂಆರ್ ಪವರ್ ಪ್ರೈವೇಟ್ ಲಿ. ಅಣೆಕಟ್ಟಿನ ಗೇಟಿನ ಹಾಗೂ ವಿದ್ಯುತ್ ಸ್ಥಾವರದ ವಾರ್ಷಿಕ ನಿರ್ವಹಣೆಗಾಗಿ ಜೂನ್ 8 ರಿಂದ ಅಣೆಕಟ್ಟಿನಲ್ಲಿ ಶೇಖರಿಸಲಾದ ನೀರನ್ನು ನಿಧಾನವಾಗಿ ನದಿಯ ಕೆಳಗಡೆ ಬಿಡಲಾಗುತ್ತಿದೆ. ಆದ್ದರಿಂದ ಅಣೆಕಟ್ಟಿನ ಕೆಳಭಾಗದ ನೇತ್ರಾವತಿ ನದಿಯ ನೀರಿನ ಮಟ್ಟದಲ್ಲಿ ಅಲ್ಪಪ್ರಮಾಣದಲ್ಲಿ ಏರಿಳಿತವಾಗುವುದರಿಂದ ನದಿಯ ಇಕ್ಕೆಲಗಳಲ್ಲಿ ವಾಸಿಸುವ ಜನರಿಗೆ ಹಾಗೂ ಸಾಕುಪ್ರಾಣಿಗಳಿಗೆ ಮುಂಜಾಗರೂಕತಾ ಕ್ರಮವನ್ನು ವಹಿಸಿಕೊಳ್ಳಲು ಅಲ್ಲದೆ, ಅಣೆಕಟ್ಟಿನ ಮೇಲ್ಭಾಗದಲ್ಲಿ ನೀರಿನ ಮಟ್ಟ ಕೆಳಗಿಳಿಯುವುದರಿಂದ ಇಕ್ಕೆಲಗಳಲ್ಲಿ ಪಂಪು ಬಳಕೆದಾರರು ಮುಂಜಾಗ್ರತೆಯನ್ನು ಕೈಗೊಳ್ಳಲು ವಿನಂತಿಸಲಾಗಿದೆ.

ನರಿಕೊಂಬು, ಬಾಳ್ತಿಲ, ಸರಪಾಡಿ, ಕಡೇಶಿವಾಲಯ, ನಾವೂರ, ಸಜಿಪಮುನ್ನೂರು, ತುಂಬೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನದಿ ತೀರದ ಬಳಕೆದಾರರು ಈ ಕುರಿತು ಗಮನಹರಿಸಬೇಕು ಎಂದು ಎಎಂಆರ್ ಪ್ರಕಟಣೆ ತಿಳಿಸಿದೆ.

More from the blog

5 ವರ್ಷದ ಮಗುವಿನ ಚಿಕಿತ್ಸೆಗೆ ಸಂಗಬೆಟ್ಟು ಗ್ರಾ. ಪಂ ವತಿಯಿಂದ ಸಹಾಯಧನದ ಚೆಕ್ ಹಸ್ತಾಂತರ.. 

ಬಂಟ್ವಾಳ : ತಾಲೂಕಿನ ಕರ್ಪೆ ಗ್ರಾಮದ ಕುಟ್ಟಿಕಳ ನಿವಾಸಿ ಹಿರಣ್ಯಾಕ್ಷ ಶಾಂತಿ ಹಾಗೂ ಸೌಮ್ಯ ದಂಪತಿಗಳ 5 ವರ್ಷದ ಪುಟ್ಟ ಹೆಣ್ಣು ಮಗು ಮನಸ್ವಿಳಿಗೆ ಅರೋಗ್ಯದಲ್ಲಿ ರಕ್ತದ ಕ್ಯಾನ್ಸರ್ ಇರುವುದರಿಂದ ಅರೋಗ್ಯದ ವೆಚ್ಚಕ್ಕಾಗಿ...

Old Bridge : ಮಂಗಳೂರು ಎನ್.ಐ.ಟಿ.ಕೆ ಸಂಸ್ಥೆ ಅಧಿಕಾರಿಗಳಿಂದ ಪಾಣೆಮಂಗಳೂರು ಹಳೆ ಸೇತುವೆಯ ಸಾಮರ್ಥ್ಯ ಪರೀಕ್ಷೆ

ಬಂಟ್ವಾಳ: ಬ್ರಿಟಿಷ್ ಕಾಲದ ಪಾಣೆಮಂಗಳೂರು ಸೇತುವೆಯ ಸಾಮರ್ಥ್ಯ ಪರೀಕ್ಷೆ ನಡೆಸುವ ಉದ್ದೇಶದಿಂದ ಮಂಗಳೂರು ಎನ್.ಐ.ಟಿ.ಕೆ ಸಂಸ್ಥೆಯಿಂದ ಇಬ್ಬರು ಅಧಿಕಾರಿಗಳು ಆಗಮಿಸಿ, ಜಿಲ್ಲಾಧಿಕಾರಿ ಅವರಿಗೆ ವರದಿ ನೀಡಿದ್ದಾರೆ. ಹಳೆ ಸೇತುವೆ ಬಗ್ಗೆ ಸ್ಥಳ ವೀಕ್ಷಣೆಗೆ ಏನ್...

ಕುದ್ರೋಳಿಯಲ್ಲಿ ವಿಶ್ವಶಾಂತಿಗಾಗಿ ಶತ ಸೀಯಾಳಾಭಿಷೇಕ..

ಮಂಗಳೂರು: ಜಗತ್ತಿನಾದ್ಯಂತ ಯುದ್ಧದ ಕಾರ್ಮೋಡ ಆವರಿಸಿರುವುದರಿಂದ ವಿಶ್ವ ಶಾಂತಿಗಾಗಿ ಶ್ರೀ ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನ ಆಡಳಿತ ಮತ್ತು ಅಭಿವೃದ್ಧಿ ಸಮಿತಿ ನೇತೃತ್ವದಲ್ಲಿ ಗುರುವಾರ ಬೆಳಗ್ಗೆ ಶತ ಸೀಯಾಳಾಭಿಷೇಕ, ಮಹಾರುದ್ರಾಭಿಷೇಕ ಮತ್ತು ವಿಶೇಷ...

Bantwal : ಮಾದಕ ದ್ರವ್ಯ ಮುಕ್ತ ಸಮಾಜಕ್ಕಾಗಿ” ಅಭಿಯಾನ – 2025 ಕಾರ್ಯಕ್ರಮ..

ಬಂಟ್ವಾಳ: ದ.ಕ.ಜಿಲ್ಲಾ ಪೋಲೀಸ್ ಇಲಾಖೆ, ಬಂಟ್ವಾಳ ವೃತ್ತದ ಪೋಲೀಸ್ ಠಾಣೆಯ ಹಾಗೂ ಶಿಕ್ಷಣ ಇಲಾಖೆ, ರೋಟರಿ ಕ್ಲಬ್ ಬಂಟ್ವಾಳ ಲೊರೆಟ್ಟೊ ಹಿಲ್ಸ್, ಬಂಟ್ವಾಳ ಟೌನ್ ಮೊಡಂಕಾಪು ಇವರ ಸಂಯುಕ್ತ ಆಶ್ರಯದಲ್ಲಿ " ಮಾದಕ...