Thursday, February 13, 2025

ಸಜೀಪದಲ್ಲಿ ಹಟ್ಟಿಯಿಂದ ದನ ಕಳವು

ಬಂಟ್ವಾಳ: ಸಾಕು ದನಗಳನ್ನು ಹಟ್ಟಿಯಿಂದ ಕಳ್ಳತನ ಮಾಡಿದ ಘಟನೆ ಸಜೀಪ ಪಡು ಗ್ರಾಮದಲ್ಲಿ ನಿನ್ನೆ ರಾತ್ರಿ ನಡೆದಿದೆ.
ಬಂಟ್ವಾಳ ತಾಲೂಕಿನ ಸಜೀಪ ಪಡು ಗ್ರಾಮದ ಮಿತ್ತಪಡ್ಪು ನಿವಾಸಿ ಧರ್ಣಪ್ಪ ಸಪಲ್ಯ ಎಂಬವರ ಮನೆಯಲ್ಲಿ ಸಾಕುತ್ತಿದ್ದ ಹಟ್ಟಿಯಿಂದ ಎರಡು ದನಗಳನ್ನು ಮದ್ಯ ರಾತ್ರಿ ವೇಳೆ ಕಳ್ಳತನ ಮಾಡಿದ್ದಾರೆ.


ಅದರಲ್ಲಿ ಒಂದು ‌ತುಂಬುಗರ್ಭಿಣಿ ಹಸು. ಗರ್ಭಿಣಿ ಹಸುವನ್ನು ಕೂಡಾ ಅವರು ಕಳ್ಳತನ ಮಾಡಿರುವುದು ಮನೆಯವರಲ್ಲಿ ಬೇಸರ ತಂದಿದೆ.
ಕಳೆದ ಎರಡು ವರ್ಷದ ಹಿಂದೆ ನೆರೆ ಮನೆಯ ಸುಬ್ರಹ್ಮಣ್ಯ ಎಂಬವರ ಹಟ್ಟಿಯಿಂದ ಒಂದು ದನ ಕಳವು ಮಾಡಿದ್ದರು.
ಒಂದು ತಿಂಗಳ ಹಿಂದೆ ಮನೆಯ ನಾಯಿಗೆ ವಿಷ ಹಾಕಿ ಕೊಂದಿದ್ದರು. ವಾರದ ಹಿಂದೆ ಧರ್ಣಪ್ಪ ಅವರ ಮನೆಗೆ ಇಬ್ಬರು ಬಂದಿದ್ದು ದನ‌ಮಾರಟ ಮಾಡುತ್ತೀರಾ ಎಂದಿದ್ದಾರೆ. ಇಲ್ಲ ಎಂದು ಹೇಳಿದ್ದ ಕ್ಕೆ ವಾಪಾಸು ಹೋಗಿದ್ದರು.
ಚುನಾವಣಾ ಸಂದರ್ಭದಲ್ಲಿ ಬಿಗಿ ಬಂದೋ ಬಸ್ತ್ ಇದ್ದರೆ ಕಳ್ಳತನ ಹೇಗೆ ನಡೆಯುತ್ತದೆ, ಈ ಘಟನೆಯನ್ನು ವಿಶ್ವ ಹಿಂದೂ ಪರಿಷತ್ ಭಜರಂಗದಳ ವಿಟ್ಲ ಪ್ರಖಂಡ ಖಂಡಿಸುತ್ತದೆ ಎಂದು ಹೇಳಿದ್ದಾರೆ.

More from the blog

ಗ್ರಾಮ ಆಡಳಿತ ಅಧಿಕಾರಿಗಳ ಮುಷ್ಕರಕ್ಕೆ ಶಾಸಕ ರಾಜೇಶ್ ನಾಯ್ಕ್ ಬೆಂಬಲ

ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಅವರು ಗ್ರಾಮ ಆಡಳಿತ ಅಧಿಕಾರಿಗಳು ಸತತ ಮೂರನೇ ದಿನ ನಡೆಸುತ್ತಿರುವ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಬೆಂಬಲ ಸೂಚಿಸಿದ್ದಾರೆ. ಬಂಟ್ವಾಳ ತಾಲೂಕು ಆಡಳಿತ ಸೌಧದ ಮುಂಭಾಗ ಮುಷ್ಕರದ ಸ್ಥಳಕ್ಕೆ ಭೇಟಿ ನೀಡಿದ...

ಫೆ.15 ರಂದು ಕಮಲಾಶ್ರಯ ಮನೆಯ ಹಸ್ತಾಂತರ ಹಾಗೂ ಗೃಹಪ್ರವೇಶ

ಬಂಟ್ವಾಳ: ಬಿಜೆಪಿ ಮಹಾಶಕ್ತಿ ಕೇಂದ್ರ ಮಾಣಿ ಮತ್ತು ಬಿಜೆಪಿ ಶಕ್ತಿ ಕೇಂದ್ರ ಅನಂತಾಡಿ ಇದರ ಸಹಕಾರದಿಂದ ಅನಂತಾಡಿ ಗ್ರಾಮದ ಬಾಬನಕಟ್ಟೆ ಎಂಬಲ್ಲಿ ಬಲ್ಲು ಕೊರಗ ಇವರ ಕುಟುಂಬಕ್ಕೆ ನಿರ್ಮಿಸಲಾದ ನೂತನ ಮನೆಯನ್ನು ಫೆ.15...

ಬೇಲಿ ವಿವಾದ : ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಶಾಸಕ ರಾಜೇಶ್ ನಾಯ್ಕ್

ಬಂಟ್ವಾಳ: ತಾ.ಪಂ.ಅಧಿಕಾರಿ ವರ್ಗ ಕಚೇರಿ ಮುಂಭಾಗದ ಜಾಗಕ್ಕೆ ಕಬ್ಬಿಣದ ರಾಡ್ ಅಳವಡಿಸಿ ಬೇಲಿ ಹಾಕಿದ ವಿಚಾರಕ್ಕೆ ಸಂಬಂಧಿಸಿದಂತೆ ಸಾರ್ವಜನಿಕ ದೂರಿನ ಹಿನ್ನೆಲೆಯಲ್ಲಿ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ತಾ.ಪಂ.ಗೆ ಹಠಾತ್...

ವಿಟ್ಲ ಪಿಎಂ ಶ್ರೀ ಸರಕಾರಿ ಪ್ರೌಢ ಶಾಲೆಯಲ್ಲಿ ಮೆಟ್ರಿಕ್ ಮೇಳ

ವಿಟ್ಲ: ವಿಟ್ಲ ಪಿ ಎಂ ಶ್ರೀ ಸರಕಾರಿ ಪ್ರೌಢ ಶಾಲೆ (ಆರ್ ಎಂ ಎಸ್ ಎಂ)ವಿಟ್ಲ ಇದರ ಪ್ರಾಥಮಿಕ ಶಾಲಾ ವಿಭಾಗದಲ್ಲಿ ಬುಧವಾರ ಮೆಟ್ರಿಕ್ ಮೇಳ ಕಾರ್ಯಕ್ರಮ ನಡೆಯಿತು. ಮೆಟ್ರಿಕ್ ಮೇಳವನ್ನು ವಿಟ್ಲ ಪಟ್ಟಣ...