Wednesday, July 9, 2025

ಧರ್ಮಸ್ಥಳದಲ್ಲಿರುವ ಅಯೋಧ್ಯೆಯಲ್ಲಿ ನಾಮಕರಣ, ಬಾಲಲೀಲೋತ್ಸವ ಸಂಭ್ರಮ, ಸಡಗರ

ಉಜಿರೆ: ಧರ್ಮಸ್ಥಳದಲ್ಲಿ ಸೋಮವಾರ ಸಂಜೆ ಪಂಚಮಹಾ ವೈಭವ ಮಂಟಪದಲ್ಲಿ ನಾಮಕರಣ, ಬಾಲಲೀಲೋತ್ಸವ ಸಂಭ್ರಮ, ಸಡಗರ. ನೃತ್ಯದೊಂದಿಗೆರಾಜ-ರಾಣಿಯರ ಪ್ರವೇಶ (ವೃಷಭದೇವ ಹಾಗೂ ಪತ್ನಿಯರಾದ ಸುನಂದೆ ಮತ್ತು ಯಸ್ವತಿಯೊಂದಿಗೆ). ಎಲ್ಲೆಲ್ಲೂ ನಾಮಕರಣದ ಸಂಭ್ರಮ. ಎಲ್ಲರೂ ಉತ್ಸಾಹದಿಂದ ವೇದಿಕೆಯಲ್ಲಿ ಓಡಾಡುತ್ತಿದ್ದರು. ಬಂದವರನ್ನು ಆದರದಿಂದ ಸತ್ಕರಿಸಿದರು.

ಮಕ್ಕಳಿಗೆ ಭರತ, ಬಾಹುಬಲಿ, ಬ್ರಾಹ್ಮಿ, ಸುಂದರಿ ಮೊದಲಾಗಿ ನಾಮಕರಣ ಮಾಡಿಎಲ್ಲರಿಗೂ ಸಿಹಿ ತಿಂಡಿ ಹಂಚಲಾಯಿತು. ಅರಮನೆಗೆ ಜ್ಯೋತಿಷಿಗಳನ್ನು ಕರೆಸಿ ಮಕ್ಕಳ ಜಾತಕ ಪರಿಶೀಲನೆ ನಡೆಸಲಾಯಿತು. ಜಾತಕಗಳನ್ನು ಪರಿಶೀಲಿಸಿದ ಜ್ಯೋತಿಷಿಗಳು ಭರತ ಮಹಾಪರಾಕ್ರಮಿಯಾಗಿ ಚಕ್ರವರ್ತಿಯಾಗಿ ಮೆರೆಯುತ್ತಾನೆ ಎಂದು ಹೇಳಿದರು.
ಬಾಹುಬಲಿ ರತ್ನತ್ರಯಧರ್ಮ ಪಾಲನೆಯೊಂದಿಗೆ ಅನೇಕಾಂತವಾದ ದೃಷ್ಟಿಯಿಂದ ಸಕಲ ಸುಖ-ಭೋಗತೆರೆದು ಮೋಕ್ಷ ಪ್ರಾಪ್ತಿ ಮಾಡಿಕೊಳ್ಳುತ್ತಾನೆ ಎಂದು ಭವಿಷ್ಯ ನುಡಿದರು.
ಮುಂದೆ ಎಲ್ಲಾ ಮಕ್ಕಳಿಗೂ ಉತ್ತಮ ಆಟ-ಪಾಠ ಹಾಗೂ ಧಾರ್ಮಿಕ ಶಿಕ್ಷಣ ನೀಡಲಾಗುತ್ತದೆ. ರತ್ನತ್ರಯ ಧರ್ಮ (ಸಮ್ಯಕ್‌ ದರ್ಶನ, ಸಮ್ಯಕ್‌ ಜ್ಞಾನ ಮತ್ತು ಸಮ್ಯಕ್‌ ಚಾರಿತ್ರ್ಯ) ಪಾಲನೆ, ಅಹಿಂಸೆ, ಸತ್ಯ, ತ್ಯಾಗ, ಸೇವೆ ಹಾಗೂ ಆತ್ಮಕಲ್ಯಾಣದ ಮಹತ್ವವನ್ನು ತಿಳಿಸಲಾಗುತ್ತದೆ. ಉತ್ತಮ ಗುಣಮಟ್ಟದ ಆಟ-ಪಾಠಗಳೊಂದಿಗೆ ಮಕ್ಕಳನ್ನು ಸಭ್ಯ, ಸುಸಂಸ್ಕತ ನಾಗರಿಕರನ್ನಾಗಿ ರೂಪಿಸಲಾಗುತ್ತದೆ.

ಪ್ರೌಢಅಭಿನಯ, ಸುಶ್ರಾವ್ಯ ಹಿನ್ನೆಲೆಗಾಯನ ಸಮರ್ಪಕಧ್ವನಿ ಮತ್ತು ಬೆಳಕಿನ ಸಂಯೋಜನೆಯೊಂದಿಗೆ ರೂಪಕ ಪ್ರದರ್ಶನ ಪ್ರೇಕ್ಷಕರೆಲ್ಲರ ಮೆಚ್ಚುಗೆಗೆ ಪಾತ್ರವಾಯಿತು. ಆಯ್ಯಯ್ಯಾ ಎಂಚ ಪೊರ್ಲಾಂಡ್ ಎಂದು ಪ್ರೇಕ್ಷಕರೆಲ್ಲ ಅಚ್ಚರಿ ವ್ಯಕ್ತಪಡಿಸಿದರು.

More from the blog

ಭಾರೀ ಮಳೆ ಮುನ್ಸೂಚನೆ : ಒಂದು ವಾರ ಕರ್ನಾಟಕದ ಕರಾವಳಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್..

ಮಂಗಳೂರು : ರಾಜ್ಯದ ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ಇಂದಿನಿಂದ ಜುಲೈ 14ರವರೆಗೆ ಭಾರಿ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ, ಚಿಕ್ಕಮಗಳೂರು,...

ಕುಡ್ತಮುಗೇರು: ಬಸ್ಸಿನಿಂದ ರಸ್ತೆಗೆ ಬಿದ್ದ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೆ ಸಾವು 

ವಿಟ್ಲ: ಖಾಸಗಿ ಬಸ್ಸಿನಿಂದ ಬಿದ್ದ ವ್ಯಕ್ತಿಯೋರ್ವರು ಚಿಕಿತ್ಸೆಗೆ ಸ್ಪಂಧಿಸದೆ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ಕುಡ್ತಮುಗೇರು ಎಂಬಲ್ಲಿ ನಡೆದಿದೆ. ಬಂಟ್ವಾಳ ತಾಲೂಕು ಕೊಳ್ನಾಡು ಗ್ರಾಮದ ಕೊಡಂಗೆ ನಿವಾಸಿ ಚಿದಾನಂದ ರೈ (43 ವ.) ಮೃತಪಟ್ಟವರು. ಜು.7ರಂದು ಬೆಳಗ್ಗೆ...

ನಾಯಕತ್ವ ಬೆಳವಣಿಗೆಗೆ ಶ್ರಮದೊಂದಿಗೆ ನಿಷ್ಠೆ, ತಾಳ್ಮೆ ರೂಡಿಸಿಕೊಂಡಾಗ ಯಶಸ್ಸು ಸಾಧ್ಯ : ರೋ. ರಾಘವೇಂದ್ರ ಭಟ್

ಬಂಟ್ವಾಳ : ನಾಯಕತ್ವದ ಬೆಳವಣಿಗೆಗೆ ಶ್ರಮದೊಂದಿಗೆ ನಿಷ್ಠೆ ಮತ್ತು ತಾಳ್ಮೆ ರೂಡಿಸಿಕೊಳ್ಳಬೇಕು ಈ ನಿಟ್ಟಿನಲ್ಲಿ ಅವಕಾಶ ಗಳನ್ನು ಹುಡುಕಿಕೊಂಡು, ದೇಶದ ಇತಿಹಾಸದಲ್ಲಿ ಕಾಣುವ ವಿವಿಧ ಕ್ಷೆತ್ರದಲ್ಲಿ ಗಣನೀಯ ಸೇವೆ ಗೈದರವರ ಆದರ್ಶ ಗಳನ್ನು...

ಜು.10ರಂದು ಹಿಂದೂ ಜನಜಾಗೃತಿ ಸಮಿತಿಯಿಂದ ಗುರುಪೂರ್ಣಿಮಾ ಮಹೋತ್ಸವ ಆಯೋಜನೆ

ಬಿ.ಸಿ. ರೋಡ್ : ಸಮಸ್ತ ಜಗತ್ತು ಯುದ್ಧದತ್ತ ಸಾಗುತ್ತಿದೆ. ಭಾರತದಲ್ಲಿಯೂ ಜಿಹಾದಿ ಭಯೋತ್ಪಾದಕರು ಹಿಂದೂಗಳನ್ನು ಹತ್ಯೆ ಮಾಡಿ, ಭಾರತವನ್ನು ಯುದ್ಧಕ್ಕೆ ಪ್ರೇರೇಪಿಸುತ್ತಿದ್ದಾರೆ. ಶ್ರೀರಾಮ, ಶ್ರೀಕೃಷ್ಣನಂತಹ ಅವತಾರಗಳಿಂದ ಹಿಡಿದು ಛತ್ರಪತಿ ಶಿವಾಜಿ ಮಹಾರಾಜ, ಮಹಾರಾಣಾ...