Sunday, June 29, 2025

ಧರ್ಮಸ್ಥಳದಲ್ಲಿ ಕ್ಷುಲ್ಲಕ ದೀಕ್ಷಾ ಸಮಾರಂಭ

ಉಜಿರೆ: ಧರ್ಮಸ್ಥಳದಲ್ಲಿ ನಡೆಯುತ್ತಿರುವ ಭಗವಾನ್ ಬಾಹುಬಲಿ ಮಹಾಮಸ್ತಕಾಭಿಷೇಕದ ಸಂದರ್ಭದಲ್ಲಿ ಭಾನುವಾರರತ್ನಗಿರಿಯಲ್ಲಿ ಬಾಹುಬಲಿಯ ಪದತಲದಲ್ಲಿಧಾರ್ಮಿಕ ವಿಧಿ-ವಿಧಾನಗಳು ನಡೆದರೆ, ಇತ್ತಅಮೃತವರ್ಷಿಣಿ ಸಭಾ ಭವನದಲ್ಲಿ ಮೋಕ್ಷ ಸಾಧನೆಗಾಗಿಕ್ಷುಲ್ಲಕ ದೀಕ್ಷಾ ಮಹೋತ್ಸವದ ಸಂಭ್ರಮ-ಸಡಗರ.
ಆಚಾರ್ಯ ಶ್ರೀ 108 ವರ್ಧಮಾನ ಸಾಗರ್‌ಜಿ ಮುನಿಮಹಾರಾಜರು, ಆಚಾರ್ಯ ಶ್ರೀ 108 ಪುಷ್ಪದಂತ ಸಾಗರ ಮುನಿ ಮಹಾರಾಜರು ಹಾಗೂ ಮುನಿ ಸಂಘದವರು ಮತ್ತು ಮಾತಾಜಿಯವರ ನೇತೃತ್ವದಲ್ಲಿ ಐದು ಮಂದಿಗೆ ಕ್ಷುಲ್ಲಕ ದೀಕ್ಷೆ ನೀಡುವ ಮಹೋತ್ಸವ ನಡೆಯಿತು.
ಮಧ್ಯಪ್ರದೇಶದ 24 ವರ್ಷ ಪ್ರಾಯದ ಸತೀಶ್ ಬೈಯ್ಯಾಜಿ, ಹೈದ್ರಾಬಾದ್‌ನ ಪೂರನ್ ಬೈಯ್ಯಾಜಿ, ಉತ್ತರ ಪ್ರದೇಶದ ಶ್ರೀ ಪ್ರಭು ಬೈಯ್ಯಾಜಿ, ಸಂಯಮ ಮತ್ತು ಸವಿತಾ ಕ್ಷುಲ್ಲಕ ದೀಕ್ಷೆ ಪಡೆದರು.


ಬೆಳಿಗ್ಗೆ ಭಗವಾನ್‌ ಚಂದ್ರನಾಥ ಸ್ವಾಮಿ ಬಸದಿಯಲ್ಲಿ ವಿಶೇಷ ಪೂಜೆ ಬಳಿಕ ದೀಕ್ಷೆ ಪಡೆಯುವ ಐದು ಮಂದಿಯನ್ನು ಹಾಗೂ ಮುನಿ ಸಂಘದವರನ್ನು ಭವ್ಯ ಮೆರವಣಿಗೆಯಲ್ಲಿ ಅಮೃತ ವರ್ಷಿಣಿ ಸಭಾ ಭವನಕ್ಕೆ ಕರೆತರಲಾಯಿತು.
ದೀಕ್ಷೆ ಪಡೆಯುವವರನ್ನು ಉತ್ತಮ ವಸ್ತ್ರಾಭರಣ ತೊಡಿಸಿ ಸಿಂಗರಿಸಲಾಗಿತ್ತು. ಧರ್ಮಸ್ಥಳದ ಅನಿತಾ ಸುರೇಂದ್ರ ಕುಮಾರ್‌ ಅಕ್ಕಿಯಿಂದ ಸ್ವಸ್ತಿಕವನ್ನು ರಚಿಸಿದರು. ದೀಕ್ಷಾರ್ಥಿಗಳನ್ನು ಮುನಿಗಳು ಯಾಕೆ ದೀಕ್ಷೆ ಪಡೆಯುವುದು ಎಂದು ಪ್ರಶ್ನಿಸಿದರು.
ಎಲ್ಲರೂ ಆತ್ಮಕಲ್ಯಾಣಕ್ಕಾಗಿ ಹಾಗೂ ಮೋಕ್ಷಪ್ರಾಪ್ತಿಗಾಗಿ ದೀಕ್ಷೆ ಪಡೆಯುವುದಾಗಿ ತಮ್ಮ ಅಭಿಪ್ರಾಯ ತಿಳಿಸಿದರು.ಅವರ ಮಾತಾ-ಪಿತರಲ್ಲಿಯೂ ಒಪ್ಪಿಗೆ ಪಡೆದ ಬಳಿಕ ದೀಕ್ಷಾಕಾರ್ಯಕ್ರಮ ನಡೆಯಿತು.
ದೀಕ್ಷಾರ್ಥಿಗಳ ಎಲ್ಲಾ ಆಭರಣಗಳನ್ನು ಒಂದೊಂದಾಗಿ ಕಳಚಲಾಯಿತು. ಅಂಗಿ ಮತ್ತು ಬಟ್ಟೆಯನ್ನೂ ಕಳಚಿ ಧಾರ್ಮಿಕ ವಿಧಿ-ವಿಧಾನಗಳೊಂದಿಗೆ ಕೇಶಲೋಚನ ಮಾಡಲಾಯಿತು. ತಲೆಯಕೂದಲನ್ನು ಮುನಿಗಳು ಕೈಯಿಂದ ಎಳೆದು ತೆಗೆಯುವುದಕ್ಕೆ ಕೇಶಲೋಚನ ಎನ್ನುತ್ತಾರೆ.
ಸಂಯಮ ಮತ್ತು ಸವಿತಾಗೆ ಬಿಳಿ ಸೀರೆ ಉಡಿಸಿದರು. ಪಂಚ ನಮಸ್ಕಾರ ಮಂತ್ರ ಪಠಣ ಹಾಗೂ ಶ್ಲೋಕಗಳ ಪಠಣದೊಂದಿಗೆ ಮುನಿ ಸಂಘದವರು ಕ್ಷುಲ್ಲಕ ದೀಕ್ಷೆ ನೀಡಿದರು.
ಐದು ಮಂದಿಗೂ ಪಿಂಛಿ ಮತ್ತು ಮಂಡಲ ಹಾಗೂ ಸ್ವಾಧ್ಯಾಯಕ್ಕಾಗಿ ಶಾಸ್ತ್ರ ಗ್ರಂಥಗಳನ್ನು ನೀಡಲಾಯಿತು.

ನಾಮಕರಣ: ಸತೀಶ್ ಬೈಯ್ಯಾಜಿ ಅವರನ್ನು ಪರಮಸಾಗರ್ ಮಹಾರಾಜ್, ಪೂರನ್ ಬೈಯ್ಯಾಜಿ ಅವರನ್ನು ಪರಮಾತ್ಮ ಸಾಗರ್‌ ಎಂದು, ಶ್ರೀ ಪ್ರಭು ಬೈಯ್ಯಾಜಿ ಅವರನ್ನು ಪ್ರಭಾಕರ್ ಸಾಗರ್ ಮಹಾರಾಜ್‌ ಎಂದು ಸಂಯಮ ಅವರನ್ನು ಅಮರಜ್ಯೋತಿ ಮಾತಾಜಿ ಎಂದು ಹಾಗೂ ಸವಿತಾ ಅವರನ್ನು ಅಮೃತಜ್ಯೋತಿ ಮಾತಾಜಿ ಎಂದು ಆಚಾರ್ಯ ಪುಷ್ಪದಂತ ಸಾಗರ ಮುನಿಮಹಾರಜರು ನಾಮಕರಣ ಮಾಡಿದರು.

ದೀಕ್ಷೆಯಿಂದ ಆತ್ಮಕಲ್ಯಾಣ, ಮೋಕ್ಷ ಪ್ರಾಪ್ತಿ: ಸುಖ-ಭೋಗಗಳನ್ನು ತ್ಯಾಗ ಮಾಡಿ ವೈರಾಗ್ಯ ಭಾವನೆಯಿಂದಯೋಗ ಸಾಧನೆ ಮಾಡಿದರೆ ಮೋಕ್ಷ ಪ್ರಾಪ್ತಿಯಾಗುತ್ತದೆ. ಆತ್ಮನೇ ಪರಮಾತ್ಮನಾಗಬಲ್ಲ ಎಂದುಆಚಾರ್ಯ ಶ್ರೀ 108 ವರ್ಧಮಾನ ಸಾಗರ ಮುನಿಮಹಾರಾಜರು ಹೇಳಿದರು.
ಐದು ಮಂದಿಗೆ ಕ್ಷುಲ್ಲಕ ದೀಕ್ಷೆ ನೀಡಿದ ಬಳಿಕ ಅವರು ಮಂಗಲ ಪ್ರವಚನ ಮಾಡಿದರು. ರಾಗದ ಪರಿತ್ಯಾಗವೇ ವೈರಾಗ್ಯ. ದೀಕ್ಷೆಯು ಶಾಶ್ವತ ಸುಖಕ್ಕೆ ಕಾರಣವಾಗಿದೆ. ಮೋಕ್ಷಪ್ರಾಪ್ತಿಗೆ ಮನುಷ್ಯಜನ್ಮವೇ ಶ್ರೇಷ್ಠವಾಗಿದೆ ಎಂದು ಮುನಿಗಳು ಹೇಳಿದರು.
ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು, ಹೇಮಾವತಿ ಹೆಗ್ಗಡೆಯವರು, ಡಿ. ಸುರೇಂದ್ರಕುಮಾರ್, ಅನಿತಾ ಸುರೇಂದ್ರಕುಮಾರ್, ಹರ್ಷೆಂದ್ರಕುಮಾರ್, ಸುಪ್ರಿಯಾ ಹರ್ಷೇಂದ್ರಕುಮಾರ್ ಮತ್ತು ಶ್ರದ್ಧಾಅಮಿತ್ ಹಾಗೂ ಮಾನ್ಯ ಉಪಸ್ಥಿತರಿದ್ದರು.

More from the blog

ತುಂಬೆ ಕಾಲೇಜಿನಲ್ಲಿ ಸಂಸ್ಥಾಪಕರ ದಿನಾಚರಣೆ ಮತ್ತು ಕಂಪ್ಯೂಟರ್ ಲ್ಯಾಬ್ ಉದ್ಘಾಟನೆ..

ಬಂಟ್ವಾಳ : ಡಾ.ಬಿ.ಅಹಮದ್ ಹಾಜಿ ಅವರ ಸಾಧನಾ ಗಾಥೆಯನ್ನು ಹಾಗೂ ಅವರ ಜೀವನದ ಬಗ್ಗೆ ಕೇಳಿದಾಗ ಅವರು ಎಷ್ಟೊಂದು ಉದಾತ್ತ ವ್ಯಕ್ತಿತ್ವದವರು ಮತ್ತು ಶಿಸ್ತು ಮತ್ತು ಬದ್ಧತೆಯಲ್ಲಿ ಬಾಳಿದವರು ಎನ್ನುವುದು ಅರ್ಥವಾಗುತ್ತದೆ. ಅಂಥವರನ್ನು...

Pneumonia : ನ್ಯುಮೋನಿಯಾ ಜ್ವರದಿಂದ ಬಳಲುತ್ತಿದ್ದ ಬಿಜೆಪಿ ಕಾರ್ಯಕರ್ತ ಚಿಕಿತ್ಸೆ ಫಲಕಾರಿಯಾಗದೆ ಮೃತ್ಯು..

ಬಂಟ್ವಾಳ: ನ್ಯುಮೋನಿಯಾ ಜ್ವರದಿಂದ ಬಳಲುತ್ತಿದ್ದ ಕುಕ್ಕಾಜೆ ಬಿಜೆಪಿ ಕಾರ್ಯಕರ್ತನೊರ್ವ ಚಿಕಿತ್ಸೆ ಫಲಕಾರಿಯಾಗದೆ ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದ ಘಟನೆ ನಡೆದಿದೆ. ಬಂಟ್ವಾಳ ತಾಲೂಕಿನ ಮಂಚಿ ಸಮೀಪದ ಕುಕ್ಕಾಜೆ ನಿವಾಸಿ ಬಿಜೆಪಿ ಯುವ ಕಾರ್ಯಕರ್ತ ,ಸಾಮಾಜಿಕ...

ಸರಕಾರಿ ಹಿ. ಪ್ರಾ. ಶಾಲೆ ಕೆಮ್ಮಾನುಪಲ್ಕೆ : ಶಾಲಾ ಮಂತ್ರಿಮಂಡಲ ಪ್ರಮಾಣವಚನ..

ಬಂಟ್ವಾಳ : ಬಂಟ್ವಾಳ ತಾಲೂಕಿನ ಕಡೇಶಿವಾಲಯ ಗ್ರಾಮದ ಸರಕಾರಿ ಹಿ ಪ್ರಾ ಶಾಲೆ ಕೆಮ್ಮಾನುಪಲ್ಕೆ ಇಲ್ಲಿ 2025-26 ನೇ ಸಾಲಿನ ಶಾಲಾ ಮಂತ್ರಿಮಂಡಲದ ಮಂತ್ರಿಗಳಿಗೆ ಪ್ರಮಾಣವಚನ ವನ್ನು ಶಾಲಾ ಮುಖ್ಯ ಶಿಕ್ಷಕ ಉದಯಕುಮಾರ್...

ಪಂತಡ್ಕ : ಎಸ್.ಕೆ.ಎಸ್.ಬಿ.ವಿ ವತಿಯಿಂದ ಸಮಸ್ತ ನೂರನೇ ಸ್ಥಾಪಕ ದಿನಾಚರಣೆ..

ಬಂಟ್ವಾಳ : ನೆಟ್ಲಮುಡ್ನೂರು ಗ್ರಾಮದ ತರ್ಬಿಯತುಲ್ ಇಸ್ಲಾಂ ಮದ್ರಸ ಪಂತಡ್ಕ ಇದರ ವಿದ್ಯಾರ್ಥಿ ಸಂಘಟನೆ ಎಸ್.ಕೆ.ಎಸ್.ಬಿ.ವಿ ವತಿಯಿಂದ ಸಮಸ್ತ ನೂರನೇ ಸ್ಥಾಪಕ ದಿನಾಚರಣೆ ಕಾರ್ಯಕ್ರಮ ಮದ್ರಸ ವಠಾರದಲ್ಲಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಸ್ಥಳೀಯ...