Monday, February 10, 2025

ಧರ್ಮಸ್ಥಳದಲ್ಲಿ ಕ್ಷುಲ್ಲಕ ದೀಕ್ಷಾ ಸಮಾರಂಭ

ಉಜಿರೆ: ಧರ್ಮಸ್ಥಳದಲ್ಲಿ ನಡೆಯುತ್ತಿರುವ ಭಗವಾನ್ ಬಾಹುಬಲಿ ಮಹಾಮಸ್ತಕಾಭಿಷೇಕದ ಸಂದರ್ಭದಲ್ಲಿ ಭಾನುವಾರರತ್ನಗಿರಿಯಲ್ಲಿ ಬಾಹುಬಲಿಯ ಪದತಲದಲ್ಲಿಧಾರ್ಮಿಕ ವಿಧಿ-ವಿಧಾನಗಳು ನಡೆದರೆ, ಇತ್ತಅಮೃತವರ್ಷಿಣಿ ಸಭಾ ಭವನದಲ್ಲಿ ಮೋಕ್ಷ ಸಾಧನೆಗಾಗಿಕ್ಷುಲ್ಲಕ ದೀಕ್ಷಾ ಮಹೋತ್ಸವದ ಸಂಭ್ರಮ-ಸಡಗರ.
ಆಚಾರ್ಯ ಶ್ರೀ 108 ವರ್ಧಮಾನ ಸಾಗರ್‌ಜಿ ಮುನಿಮಹಾರಾಜರು, ಆಚಾರ್ಯ ಶ್ರೀ 108 ಪುಷ್ಪದಂತ ಸಾಗರ ಮುನಿ ಮಹಾರಾಜರು ಹಾಗೂ ಮುನಿ ಸಂಘದವರು ಮತ್ತು ಮಾತಾಜಿಯವರ ನೇತೃತ್ವದಲ್ಲಿ ಐದು ಮಂದಿಗೆ ಕ್ಷುಲ್ಲಕ ದೀಕ್ಷೆ ನೀಡುವ ಮಹೋತ್ಸವ ನಡೆಯಿತು.
ಮಧ್ಯಪ್ರದೇಶದ 24 ವರ್ಷ ಪ್ರಾಯದ ಸತೀಶ್ ಬೈಯ್ಯಾಜಿ, ಹೈದ್ರಾಬಾದ್‌ನ ಪೂರನ್ ಬೈಯ್ಯಾಜಿ, ಉತ್ತರ ಪ್ರದೇಶದ ಶ್ರೀ ಪ್ರಭು ಬೈಯ್ಯಾಜಿ, ಸಂಯಮ ಮತ್ತು ಸವಿತಾ ಕ್ಷುಲ್ಲಕ ದೀಕ್ಷೆ ಪಡೆದರು.


ಬೆಳಿಗ್ಗೆ ಭಗವಾನ್‌ ಚಂದ್ರನಾಥ ಸ್ವಾಮಿ ಬಸದಿಯಲ್ಲಿ ವಿಶೇಷ ಪೂಜೆ ಬಳಿಕ ದೀಕ್ಷೆ ಪಡೆಯುವ ಐದು ಮಂದಿಯನ್ನು ಹಾಗೂ ಮುನಿ ಸಂಘದವರನ್ನು ಭವ್ಯ ಮೆರವಣಿಗೆಯಲ್ಲಿ ಅಮೃತ ವರ್ಷಿಣಿ ಸಭಾ ಭವನಕ್ಕೆ ಕರೆತರಲಾಯಿತು.
ದೀಕ್ಷೆ ಪಡೆಯುವವರನ್ನು ಉತ್ತಮ ವಸ್ತ್ರಾಭರಣ ತೊಡಿಸಿ ಸಿಂಗರಿಸಲಾಗಿತ್ತು. ಧರ್ಮಸ್ಥಳದ ಅನಿತಾ ಸುರೇಂದ್ರ ಕುಮಾರ್‌ ಅಕ್ಕಿಯಿಂದ ಸ್ವಸ್ತಿಕವನ್ನು ರಚಿಸಿದರು. ದೀಕ್ಷಾರ್ಥಿಗಳನ್ನು ಮುನಿಗಳು ಯಾಕೆ ದೀಕ್ಷೆ ಪಡೆಯುವುದು ಎಂದು ಪ್ರಶ್ನಿಸಿದರು.
ಎಲ್ಲರೂ ಆತ್ಮಕಲ್ಯಾಣಕ್ಕಾಗಿ ಹಾಗೂ ಮೋಕ್ಷಪ್ರಾಪ್ತಿಗಾಗಿ ದೀಕ್ಷೆ ಪಡೆಯುವುದಾಗಿ ತಮ್ಮ ಅಭಿಪ್ರಾಯ ತಿಳಿಸಿದರು.ಅವರ ಮಾತಾ-ಪಿತರಲ್ಲಿಯೂ ಒಪ್ಪಿಗೆ ಪಡೆದ ಬಳಿಕ ದೀಕ್ಷಾಕಾರ್ಯಕ್ರಮ ನಡೆಯಿತು.
ದೀಕ್ಷಾರ್ಥಿಗಳ ಎಲ್ಲಾ ಆಭರಣಗಳನ್ನು ಒಂದೊಂದಾಗಿ ಕಳಚಲಾಯಿತು. ಅಂಗಿ ಮತ್ತು ಬಟ್ಟೆಯನ್ನೂ ಕಳಚಿ ಧಾರ್ಮಿಕ ವಿಧಿ-ವಿಧಾನಗಳೊಂದಿಗೆ ಕೇಶಲೋಚನ ಮಾಡಲಾಯಿತು. ತಲೆಯಕೂದಲನ್ನು ಮುನಿಗಳು ಕೈಯಿಂದ ಎಳೆದು ತೆಗೆಯುವುದಕ್ಕೆ ಕೇಶಲೋಚನ ಎನ್ನುತ್ತಾರೆ.
ಸಂಯಮ ಮತ್ತು ಸವಿತಾಗೆ ಬಿಳಿ ಸೀರೆ ಉಡಿಸಿದರು. ಪಂಚ ನಮಸ್ಕಾರ ಮಂತ್ರ ಪಠಣ ಹಾಗೂ ಶ್ಲೋಕಗಳ ಪಠಣದೊಂದಿಗೆ ಮುನಿ ಸಂಘದವರು ಕ್ಷುಲ್ಲಕ ದೀಕ್ಷೆ ನೀಡಿದರು.
ಐದು ಮಂದಿಗೂ ಪಿಂಛಿ ಮತ್ತು ಮಂಡಲ ಹಾಗೂ ಸ್ವಾಧ್ಯಾಯಕ್ಕಾಗಿ ಶಾಸ್ತ್ರ ಗ್ರಂಥಗಳನ್ನು ನೀಡಲಾಯಿತು.

ನಾಮಕರಣ: ಸತೀಶ್ ಬೈಯ್ಯಾಜಿ ಅವರನ್ನು ಪರಮಸಾಗರ್ ಮಹಾರಾಜ್, ಪೂರನ್ ಬೈಯ್ಯಾಜಿ ಅವರನ್ನು ಪರಮಾತ್ಮ ಸಾಗರ್‌ ಎಂದು, ಶ್ರೀ ಪ್ರಭು ಬೈಯ್ಯಾಜಿ ಅವರನ್ನು ಪ್ರಭಾಕರ್ ಸಾಗರ್ ಮಹಾರಾಜ್‌ ಎಂದು ಸಂಯಮ ಅವರನ್ನು ಅಮರಜ್ಯೋತಿ ಮಾತಾಜಿ ಎಂದು ಹಾಗೂ ಸವಿತಾ ಅವರನ್ನು ಅಮೃತಜ್ಯೋತಿ ಮಾತಾಜಿ ಎಂದು ಆಚಾರ್ಯ ಪುಷ್ಪದಂತ ಸಾಗರ ಮುನಿಮಹಾರಜರು ನಾಮಕರಣ ಮಾಡಿದರು.

ದೀಕ್ಷೆಯಿಂದ ಆತ್ಮಕಲ್ಯಾಣ, ಮೋಕ್ಷ ಪ್ರಾಪ್ತಿ: ಸುಖ-ಭೋಗಗಳನ್ನು ತ್ಯಾಗ ಮಾಡಿ ವೈರಾಗ್ಯ ಭಾವನೆಯಿಂದಯೋಗ ಸಾಧನೆ ಮಾಡಿದರೆ ಮೋಕ್ಷ ಪ್ರಾಪ್ತಿಯಾಗುತ್ತದೆ. ಆತ್ಮನೇ ಪರಮಾತ್ಮನಾಗಬಲ್ಲ ಎಂದುಆಚಾರ್ಯ ಶ್ರೀ 108 ವರ್ಧಮಾನ ಸಾಗರ ಮುನಿಮಹಾರಾಜರು ಹೇಳಿದರು.
ಐದು ಮಂದಿಗೆ ಕ್ಷುಲ್ಲಕ ದೀಕ್ಷೆ ನೀಡಿದ ಬಳಿಕ ಅವರು ಮಂಗಲ ಪ್ರವಚನ ಮಾಡಿದರು. ರಾಗದ ಪರಿತ್ಯಾಗವೇ ವೈರಾಗ್ಯ. ದೀಕ್ಷೆಯು ಶಾಶ್ವತ ಸುಖಕ್ಕೆ ಕಾರಣವಾಗಿದೆ. ಮೋಕ್ಷಪ್ರಾಪ್ತಿಗೆ ಮನುಷ್ಯಜನ್ಮವೇ ಶ್ರೇಷ್ಠವಾಗಿದೆ ಎಂದು ಮುನಿಗಳು ಹೇಳಿದರು.
ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು, ಹೇಮಾವತಿ ಹೆಗ್ಗಡೆಯವರು, ಡಿ. ಸುರೇಂದ್ರಕುಮಾರ್, ಅನಿತಾ ಸುರೇಂದ್ರಕುಮಾರ್, ಹರ್ಷೆಂದ್ರಕುಮಾರ್, ಸುಪ್ರಿಯಾ ಹರ್ಷೇಂದ್ರಕುಮಾರ್ ಮತ್ತು ಶ್ರದ್ಧಾಅಮಿತ್ ಹಾಗೂ ಮಾನ್ಯ ಉಪಸ್ಥಿತರಿದ್ದರು.

More from the blog

ಯುವ ಸಂಗೀತೋತ್ಸವಕ್ಕೆ ಚಾಲನೆ

ಮಂಗಳೂರು: ಸಾಮಾಜಿಕ ಸ್ವಾಸ್ಥ್ಯ ಕ್ಕಾಗಿ ಮಾನಸಿಕ ನೆಮ್ಮದಿ ನೀಡುವಂತಹ ಸಂಗೀತ ಸಾಂಸ್ಕೃತಿಕ ಕಾರ್ಯಕ್ರಮಗಳು ಅಗತ್ಯವಿದೆ ಎಂದು ಕ್ಯಾ.ಬ್ರಿಜೇಶ್ ಚೌಟ ತಿಳಿಸಿದ್ದಾರೆ. ಅವರು ಮಂಗಳೂರಿನ ಕಲಾ ಸಾಧನ ಸಂಸ್ಥೆ ವತಿಯಿಂದ ನಗರದ ಟಿಎಂಎ ಪೈ ಇಂಟರ್‌ನ್ಯಾಶನಲ್...

ದೆಹಲಿಯಲ್ಲಿ ಬಿಜೆಪಿ ಭರ್ಜರಿ ಜಯಭೇರಿ…. ಸಿದ್ದಕಟ್ಟೆ ಪೇಟೆಯಲ್ಲಿ ಬಿಜೆಪಿ ಕಾರ್ಯಕರ್ತರಿಂದ ಪಟಾಕಿ ಸಿಡಿಸಿ ಸಂಭ್ರಮಾಚರಣೆ*

  ದೆಹಲಿ ವಿಧಾನ ಸಭೆಗೆ ನಡೆದ ಚುನಾವಣೆ ಯಲ್ಲಿ ಭಾರತೀಯ ಜನತಾ ಪಕ್ಷ 70 ಸ್ಥಾನ ಗಳಲ್ಲಿ ಬರೋಬ್ಬರಿ 48 ಸ್ಥಾನ ಗಳನ್ನು ಗೆಲ್ಲುವ ಮೂಲಕ ಭರ್ಜರಿ ಜಯಭೇರಿ ಗಳಿಸುವುದರೊಂದಿಗೆ ಪ್ರಧಾನಿ ನರೇಂದ್ರ ಮೋದಿಯವರ...

ಜುಗಾರಿ ಅಡ್ಡೆಗೆ ದಾಳಿ: ಹತ್ತು ಜನರ ಬಂಧನ

ಬಂಟ್ವಾಳ: ಹಣ ಪಣಕ್ಕಿಟ್ಟು ಜುಗಾರಿ ಆಟ ಆಡುತ್ತಿದ್ದ ಅಡ್ಡೆಗೆ ದಾಳಿ ನಡೆಸಿದ ಬಂಟ್ವಾಳ ಗ್ರಾಮಾಂತರ ಪೋಲೀಸ್ ಇನ್ಸ್ ಪೆಕ್ಟರ್ ಶಿವಕುಮಾರ್ ನೇತ್ರತ್ವದ ತಂಡ ಆಟದಲ್ಲಿ ನಿರತರಾಗಿದ್ದ 10 ಮಂದಿ ಆರೋಪಿಗಳನ್ನು ಹಾಗೂ ಸಾವಿರಾರು...

ಮಾರ್ಬಲ್ ಲಾರಿ ಪಲ್ಟಿ

ಬಂಟ್ವಾಳ: ಮಾರ್ಬಲ್ ಲೋಡ್ ಲಾರಿಯೊಂದು ತಾಂತ್ರಿಕ ದೋಷದಿಂದ ರಸ್ತೆಯ ವಿಭಾಜಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾದ ಘಟನೆ ರಾಷ್ಟ್ರೀಯ ಮಂಗಳೂರು- ಬೆಂಗಳೂರು ರಸ್ತೆಯ ತುಂಬೆ ಸಮೀಪದ ರಾಮಲ್ ಕಟ್ಟೆ ಎಂಬಲ್ಲಿ ಪಲ್ಟಿಯಾಗಿದೆ. ಘಟನೆಯಿಂದ ಯಾವುದೇ ಅಪಾಯ...