Thursday, January 29, 2026

ಧರ್ಮಸ್ಥಳದಲ್ಲಿ ಕ್ಷುಲ್ಲಕ ದೀಕ್ಷಾ ಸಮಾರಂಭ

ಉಜಿರೆ: ಧರ್ಮಸ್ಥಳದಲ್ಲಿ ನಡೆಯುತ್ತಿರುವ ಭಗವಾನ್ ಬಾಹುಬಲಿ ಮಹಾಮಸ್ತಕಾಭಿಷೇಕದ ಸಂದರ್ಭದಲ್ಲಿ ಭಾನುವಾರರತ್ನಗಿರಿಯಲ್ಲಿ ಬಾಹುಬಲಿಯ ಪದತಲದಲ್ಲಿಧಾರ್ಮಿಕ ವಿಧಿ-ವಿಧಾನಗಳು ನಡೆದರೆ, ಇತ್ತಅಮೃತವರ್ಷಿಣಿ ಸಭಾ ಭವನದಲ್ಲಿ ಮೋಕ್ಷ ಸಾಧನೆಗಾಗಿಕ್ಷುಲ್ಲಕ ದೀಕ್ಷಾ ಮಹೋತ್ಸವದ ಸಂಭ್ರಮ-ಸಡಗರ.
ಆಚಾರ್ಯ ಶ್ರೀ 108 ವರ್ಧಮಾನ ಸಾಗರ್‌ಜಿ ಮುನಿಮಹಾರಾಜರು, ಆಚಾರ್ಯ ಶ್ರೀ 108 ಪುಷ್ಪದಂತ ಸಾಗರ ಮುನಿ ಮಹಾರಾಜರು ಹಾಗೂ ಮುನಿ ಸಂಘದವರು ಮತ್ತು ಮಾತಾಜಿಯವರ ನೇತೃತ್ವದಲ್ಲಿ ಐದು ಮಂದಿಗೆ ಕ್ಷುಲ್ಲಕ ದೀಕ್ಷೆ ನೀಡುವ ಮಹೋತ್ಸವ ನಡೆಯಿತು.
ಮಧ್ಯಪ್ರದೇಶದ 24 ವರ್ಷ ಪ್ರಾಯದ ಸತೀಶ್ ಬೈಯ್ಯಾಜಿ, ಹೈದ್ರಾಬಾದ್‌ನ ಪೂರನ್ ಬೈಯ್ಯಾಜಿ, ಉತ್ತರ ಪ್ರದೇಶದ ಶ್ರೀ ಪ್ರಭು ಬೈಯ್ಯಾಜಿ, ಸಂಯಮ ಮತ್ತು ಸವಿತಾ ಕ್ಷುಲ್ಲಕ ದೀಕ್ಷೆ ಪಡೆದರು.


ಬೆಳಿಗ್ಗೆ ಭಗವಾನ್‌ ಚಂದ್ರನಾಥ ಸ್ವಾಮಿ ಬಸದಿಯಲ್ಲಿ ವಿಶೇಷ ಪೂಜೆ ಬಳಿಕ ದೀಕ್ಷೆ ಪಡೆಯುವ ಐದು ಮಂದಿಯನ್ನು ಹಾಗೂ ಮುನಿ ಸಂಘದವರನ್ನು ಭವ್ಯ ಮೆರವಣಿಗೆಯಲ್ಲಿ ಅಮೃತ ವರ್ಷಿಣಿ ಸಭಾ ಭವನಕ್ಕೆ ಕರೆತರಲಾಯಿತು.
ದೀಕ್ಷೆ ಪಡೆಯುವವರನ್ನು ಉತ್ತಮ ವಸ್ತ್ರಾಭರಣ ತೊಡಿಸಿ ಸಿಂಗರಿಸಲಾಗಿತ್ತು. ಧರ್ಮಸ್ಥಳದ ಅನಿತಾ ಸುರೇಂದ್ರ ಕುಮಾರ್‌ ಅಕ್ಕಿಯಿಂದ ಸ್ವಸ್ತಿಕವನ್ನು ರಚಿಸಿದರು. ದೀಕ್ಷಾರ್ಥಿಗಳನ್ನು ಮುನಿಗಳು ಯಾಕೆ ದೀಕ್ಷೆ ಪಡೆಯುವುದು ಎಂದು ಪ್ರಶ್ನಿಸಿದರು.
ಎಲ್ಲರೂ ಆತ್ಮಕಲ್ಯಾಣಕ್ಕಾಗಿ ಹಾಗೂ ಮೋಕ್ಷಪ್ರಾಪ್ತಿಗಾಗಿ ದೀಕ್ಷೆ ಪಡೆಯುವುದಾಗಿ ತಮ್ಮ ಅಭಿಪ್ರಾಯ ತಿಳಿಸಿದರು.ಅವರ ಮಾತಾ-ಪಿತರಲ್ಲಿಯೂ ಒಪ್ಪಿಗೆ ಪಡೆದ ಬಳಿಕ ದೀಕ್ಷಾಕಾರ್ಯಕ್ರಮ ನಡೆಯಿತು.
ದೀಕ್ಷಾರ್ಥಿಗಳ ಎಲ್ಲಾ ಆಭರಣಗಳನ್ನು ಒಂದೊಂದಾಗಿ ಕಳಚಲಾಯಿತು. ಅಂಗಿ ಮತ್ತು ಬಟ್ಟೆಯನ್ನೂ ಕಳಚಿ ಧಾರ್ಮಿಕ ವಿಧಿ-ವಿಧಾನಗಳೊಂದಿಗೆ ಕೇಶಲೋಚನ ಮಾಡಲಾಯಿತು. ತಲೆಯಕೂದಲನ್ನು ಮುನಿಗಳು ಕೈಯಿಂದ ಎಳೆದು ತೆಗೆಯುವುದಕ್ಕೆ ಕೇಶಲೋಚನ ಎನ್ನುತ್ತಾರೆ.
ಸಂಯಮ ಮತ್ತು ಸವಿತಾಗೆ ಬಿಳಿ ಸೀರೆ ಉಡಿಸಿದರು. ಪಂಚ ನಮಸ್ಕಾರ ಮಂತ್ರ ಪಠಣ ಹಾಗೂ ಶ್ಲೋಕಗಳ ಪಠಣದೊಂದಿಗೆ ಮುನಿ ಸಂಘದವರು ಕ್ಷುಲ್ಲಕ ದೀಕ್ಷೆ ನೀಡಿದರು.
ಐದು ಮಂದಿಗೂ ಪಿಂಛಿ ಮತ್ತು ಮಂಡಲ ಹಾಗೂ ಸ್ವಾಧ್ಯಾಯಕ್ಕಾಗಿ ಶಾಸ್ತ್ರ ಗ್ರಂಥಗಳನ್ನು ನೀಡಲಾಯಿತು.

ನಾಮಕರಣ: ಸತೀಶ್ ಬೈಯ್ಯಾಜಿ ಅವರನ್ನು ಪರಮಸಾಗರ್ ಮಹಾರಾಜ್, ಪೂರನ್ ಬೈಯ್ಯಾಜಿ ಅವರನ್ನು ಪರಮಾತ್ಮ ಸಾಗರ್‌ ಎಂದು, ಶ್ರೀ ಪ್ರಭು ಬೈಯ್ಯಾಜಿ ಅವರನ್ನು ಪ್ರಭಾಕರ್ ಸಾಗರ್ ಮಹಾರಾಜ್‌ ಎಂದು ಸಂಯಮ ಅವರನ್ನು ಅಮರಜ್ಯೋತಿ ಮಾತಾಜಿ ಎಂದು ಹಾಗೂ ಸವಿತಾ ಅವರನ್ನು ಅಮೃತಜ್ಯೋತಿ ಮಾತಾಜಿ ಎಂದು ಆಚಾರ್ಯ ಪುಷ್ಪದಂತ ಸಾಗರ ಮುನಿಮಹಾರಜರು ನಾಮಕರಣ ಮಾಡಿದರು.

ದೀಕ್ಷೆಯಿಂದ ಆತ್ಮಕಲ್ಯಾಣ, ಮೋಕ್ಷ ಪ್ರಾಪ್ತಿ: ಸುಖ-ಭೋಗಗಳನ್ನು ತ್ಯಾಗ ಮಾಡಿ ವೈರಾಗ್ಯ ಭಾವನೆಯಿಂದಯೋಗ ಸಾಧನೆ ಮಾಡಿದರೆ ಮೋಕ್ಷ ಪ್ರಾಪ್ತಿಯಾಗುತ್ತದೆ. ಆತ್ಮನೇ ಪರಮಾತ್ಮನಾಗಬಲ್ಲ ಎಂದುಆಚಾರ್ಯ ಶ್ರೀ 108 ವರ್ಧಮಾನ ಸಾಗರ ಮುನಿಮಹಾರಾಜರು ಹೇಳಿದರು.
ಐದು ಮಂದಿಗೆ ಕ್ಷುಲ್ಲಕ ದೀಕ್ಷೆ ನೀಡಿದ ಬಳಿಕ ಅವರು ಮಂಗಲ ಪ್ರವಚನ ಮಾಡಿದರು. ರಾಗದ ಪರಿತ್ಯಾಗವೇ ವೈರಾಗ್ಯ. ದೀಕ್ಷೆಯು ಶಾಶ್ವತ ಸುಖಕ್ಕೆ ಕಾರಣವಾಗಿದೆ. ಮೋಕ್ಷಪ್ರಾಪ್ತಿಗೆ ಮನುಷ್ಯಜನ್ಮವೇ ಶ್ರೇಷ್ಠವಾಗಿದೆ ಎಂದು ಮುನಿಗಳು ಹೇಳಿದರು.
ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು, ಹೇಮಾವತಿ ಹೆಗ್ಗಡೆಯವರು, ಡಿ. ಸುರೇಂದ್ರಕುಮಾರ್, ಅನಿತಾ ಸುರೇಂದ್ರಕುಮಾರ್, ಹರ್ಷೆಂದ್ರಕುಮಾರ್, ಸುಪ್ರಿಯಾ ಹರ್ಷೇಂದ್ರಕುಮಾರ್ ಮತ್ತು ಶ್ರದ್ಧಾಅಮಿತ್ ಹಾಗೂ ಮಾನ್ಯ ಉಪಸ್ಥಿತರಿದ್ದರು.

More from the blog

ವಿದ್ಯುತ್ ಸಮಸ್ಯೆಗೆ ಸ್ಪಂದಿಸಿದ ಗ್ರಾ.ಪಂ.ಸದಸ್ಯ ಹಾಶೀರ್ ಪೆರಿಮಾರ್ ಅವರಿಗೆ ಗ್ರಾಮಸ್ಥರಿಂದ ಅಭಿನಂದನೆ

ಬಂಟ್ವಾಳ: ವಿದ್ಯುತ್ ಸಮಸ್ಯೆಯಿಂದ ಬೇಸೆತ್ತ ಗ್ರಾಮಸ್ಥರ ಸಮಸ್ಯೆಗೆ ಸಕಾಲದಲ್ಲಿ ಸ್ಪಂದಿಸಿದ ಪುದು ಗ್ರಾಮಪಂಚಾಯತ್ ಸದಸ್ಯನಿಗೆ ಗ್ರಾಮಸ್ಥರು ಅಭಿನಂದನೆ ಸಲ್ಲಿಸಿದ್ದಾರೆ. ಪುದು ಗ್ರಾಮದ ಪೇರಿಮಾರ್ ವಾರ್ಡಿನ ರಾಷ್ಟ್ರೀಯ ಹೆದ್ದಾರಿ ಬದಿಯಿಂದ ದೇವಸ್ಯ, ಜಲಾಲಿಯ ನಗರ, ಮಾರಿಪಳ್ಳ...

Bantwal : ಸೌತ್ ಕೆನರಾ ಫೋಟೋ ಗ್ರಾಫರ್ಸ್ ಅಸೋಸಿಯೇಷನ್ – ಪದಾಧಿಕಾರಿಗಳ ಪದಾಪ್ರಧಾನ, ರಜತ ಸಂಭ್ರಮ ಸಮಾರೋಪ

ಬಂಟ್ವಾಳ :ಸೌತ್ ಕೆನರಾ ಫೋಟೋ ಗ್ರಾಫರ್ಸ್ ಅಸೋಸಿಯೇಷನ್ ರಿ, ಬಂಟ್ವಾಳ ವಲಯದ ನೂತನ ಪದಾಧಿಕಾರಿಗಳ ಪದಾಪ್ರಧಾನ ಸಮಾರಂಭ ಹಾಗು ರಜತ ಸಂಭ್ರಮದ ಸಮಾರೋಪ ಸಮಾರಂಭ ವು ಬಿಸಿ ರೋಡ್ ನ ಲಯನ್ಸ್ ಸೇವಾ...

B.C. Road : ಮಾಜಿ ಸಚಿವ ಬಿ.ರಮಾನಾಥ ರೈ ನೇತೃತ್ವದಲ್ಲಿ ನರೇಗಾ ಬಚಾವೋ ಸಂಗ್ರಾಮ ಕಾರ್ಯಕ್ರಮ

ಬಂಟ್ವಾಳ: ಬಂಟ್ವಾಳ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಪಾಣೆಮಂಗಳೂರು ಹಾಗೂ ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ಮಾಜಿ ಸಚಿವ ಬಿ.ರಮಾನಾಥ ರೈ ನೇತೃತ್ವದಲ್ಲಿ ನರೇಗಾ ಬಚಾವೋ ಸಂಗ್ರಾಮ ಕಾರ್ಯಕ್ರಮ ಬಿಸಿರೋಡಿನ ರಕ್ತೇಶ್ವರಿ...

ಕಟೀಲು 7 ಮೇಳಗಳ ಜ.28ರ ಸೇವೆಯಾಟಗಳ ವಿವರ ಇಲ್ಲಿದೆ..

ಮಂಗಳೂರು: ಕಟೀಲು ಶ್ರೀ ದುರ್ಗಾಪರಮೇಶ್ವರೀ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿ ಇದರ 7 ಮೇಳಗಳ ಜ.28ರ ಸೇವೆಯಾಟಗಳ ವಿವರ ಈ ಕೆಳಗಿನಂತಿವೆ.. ಜ.28ರ ಸೇವೆಯಾಟಗಳ ವಿವರ : ಆನಂದ ಎಂ. ಶೆಟ್ಟಿ, ಏಳಿಂಜೆ ಅಂಗಡಿಗುತ್ತು,...